T20 World Cup 2024: ಟಿ20 ವಿಶ್ವಕಪ್​ಗಾಗಿ ಅಭ್ಯಾಸ ಶುರು ಮಾಡಿದ ಟೀಮ್ ಇಂಡಿಯಾ

T20 World Cup 2024: ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಭಾರತ ತಂಡವು ಐರ್ಲೆಂಡ್, ಪಾಕಿಸ್ತಾನ್, ಯುಎಸ್​ಎ ಮತ್ತು ಕೆನಡಾ ತಂಡಗಳ ವಿರುದ್ಧ ಕಣಕ್ಕಿಳಿಯಲಿದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಿದರೆ, ಜೂನ್ 9 ರಂದು ನಡೆಯಲಿರುವ ಮದಗಜಗಳ ಕಾಳಗದಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ್ ವಿರುದ್ಧ ಸೆಣಸಲಿದೆ.

|

Updated on: May 29, 2024 | 10:30 AM

T20 World Cup 2024: ಟಿ20 ವಿಶ್ವಕಪ್​ಗಾಗಿ ಭಾರತೀಯ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಜೂನ್ 1 ರಂದು ನಡೆಯುವ ಬಾಂಗ್ಲಾದೇಶ್ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ನ್ಯೂಯಾರ್ಕ್​ನಲ್ಲಿ ತಾಲೀಮು ಶುರು ಮಾಡಿದ್ದಾರೆ.

T20 World Cup 2024: ಟಿ20 ವಿಶ್ವಕಪ್​ಗಾಗಿ ಭಾರತೀಯ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಜೂನ್ 1 ರಂದು ನಡೆಯುವ ಬಾಂಗ್ಲಾದೇಶ್ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ನ್ಯೂಯಾರ್ಕ್​ನಲ್ಲಿ ತಾಲೀಮು ಶುರು ಮಾಡಿದ್ದಾರೆ.

1 / 7
ಮೇ 26 ರಂದು ಅಮೆರಿಕಗೆ ತೆರಳಿದ್ದ ಭಾರತೀಯ ಆಟಗಾರರು 2 ದಿನಗಳ ಕಾಲ ವಿಶ್ರಾಂತಿಯಲ್ಲಿದ್ದರು. ಅದರಂತೆ ಮಂಗಳವಾರದಿಂದ ಪ್ರಾಕ್ಟೀಸ್ ಆರಂಭಿಸಲಾಗಿದೆ. ಈ ಮೂಲಕ ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾ ಭರ್ಜರಿ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ.

ಮೇ 26 ರಂದು ಅಮೆರಿಕಗೆ ತೆರಳಿದ್ದ ಭಾರತೀಯ ಆಟಗಾರರು 2 ದಿನಗಳ ಕಾಲ ವಿಶ್ರಾಂತಿಯಲ್ಲಿದ್ದರು. ಅದರಂತೆ ಮಂಗಳವಾರದಿಂದ ಪ್ರಾಕ್ಟೀಸ್ ಆರಂಭಿಸಲಾಗಿದೆ. ಈ ಮೂಲಕ ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾ ಭರ್ಜರಿ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ.

2 / 7
ಇನ್ನು ಈ ಅಭ್ಯಾಸ ಕ್ಯಾಂಪ್​ನಲ್ಲಿ ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಕೂಡ ಕಾಣಿಸಿಕೊಂಡಿದ್ದಾರೆ. ಮೇ 26 ರಂದು ಭಾರತದಿಂದ ತೆರಳಿದ ಬಳಗದಲ್ಲಿ ಪಾಂಡ್ಯ ಕಾಣಿಸಿಕೊಂಡಿರಲಿಲ್ಲ. ಇದೀಗ ಹಾರ್ದಿಕ್ ಲಂಡನ್​ನಿಂದ ನೇರವಾಗಿ ನ್ಯೂಯಾರ್ಕ್​ಗೆ ಬಂದಿಳಿದಿದ್ದಾರೆ. ಅಲ್ಲದೆ ಭಾರತ ತಂಡದ ಅಭ್ಯಾಸ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.

ಇನ್ನು ಈ ಅಭ್ಯಾಸ ಕ್ಯಾಂಪ್​ನಲ್ಲಿ ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಕೂಡ ಕಾಣಿಸಿಕೊಂಡಿದ್ದಾರೆ. ಮೇ 26 ರಂದು ಭಾರತದಿಂದ ತೆರಳಿದ ಬಳಗದಲ್ಲಿ ಪಾಂಡ್ಯ ಕಾಣಿಸಿಕೊಂಡಿರಲಿಲ್ಲ. ಇದೀಗ ಹಾರ್ದಿಕ್ ಲಂಡನ್​ನಿಂದ ನೇರವಾಗಿ ನ್ಯೂಯಾರ್ಕ್​ಗೆ ಬಂದಿಳಿದಿದ್ದಾರೆ. ಅಲ್ಲದೆ ಭಾರತ ತಂಡದ ಅಭ್ಯಾಸ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.

3 / 7
ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಹಾಗೆಯೇ ಜೂನ್ 9 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಹಾಗೆಯೇ ಜೂನ್ 9 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

4 / 7
ಇದಾದ ಬಳಿಕ ಜೂನ್ 12 ರಂದು ಯುಎಸ್​ಎ ಮತ್ತು ಜೂನ್ 15 ರಂದು ಕೆನಡಾ ವಿರುದ್ಧ ಆಡಲಿದೆ. ಈ ಪಂದ್ಯಗಳೊಂದಿಗೆ ಲೀಗ್ ಹಂತ ಮುಗಿಯಲಿದ್ದು, ಆ ಬಳಿಕ ಸೂಪರ್-8 ಹಂತದ ಪಂದ್ಯಗಳು ಶುರುವಾಗಲಿದೆ. ಈ ಪಂದ್ಯಗಳಿಗಾಗಿ ಇದೀಗ ಟೀಮ್ ಇಂಡಿಯಾ ಆಟಗಾರರು ನ್ಯೂಯಾರ್ಕ್​ನಲ್ಲಿ ಕಠಿಣ ತಾಲೀಮಿನಲ್ಲಿ ನಿರತರಾಗಿದ್ದಾರೆ.

ಇದಾದ ಬಳಿಕ ಜೂನ್ 12 ರಂದು ಯುಎಸ್​ಎ ಮತ್ತು ಜೂನ್ 15 ರಂದು ಕೆನಡಾ ವಿರುದ್ಧ ಆಡಲಿದೆ. ಈ ಪಂದ್ಯಗಳೊಂದಿಗೆ ಲೀಗ್ ಹಂತ ಮುಗಿಯಲಿದ್ದು, ಆ ಬಳಿಕ ಸೂಪರ್-8 ಹಂತದ ಪಂದ್ಯಗಳು ಶುರುವಾಗಲಿದೆ. ಈ ಪಂದ್ಯಗಳಿಗಾಗಿ ಇದೀಗ ಟೀಮ್ ಇಂಡಿಯಾ ಆಟಗಾರರು ನ್ಯೂಯಾರ್ಕ್​ನಲ್ಲಿ ಕಠಿಣ ತಾಲೀಮಿನಲ್ಲಿ ನಿರತರಾಗಿದ್ದಾರೆ.

5 / 7
ಇನ್ನು ಭಾರತ ತಂಡವು ಅಭ್ಯಾಸವನ್ನು ಆರಂಭಿಸಿದರೂ ವಿರಾಟ್ ಕೊಹ್ಲಿ ಇನ್ನೂ ಕೂಡ ಟೀಮ್ ಇಂಡಿಯಾವನ್ನು ಕೂಡಿಕೊಂಡಿಲ್ಲ. ವೀಸಾ ಪೇಪರ್ ವರ್ಕ್​ಗಳ ವಿಳಂಬದಿಂದ ಕಿಂಗ್ ಕೊಹ್ಲಿ ಅಮೆರಿಕಕ್ಕೆ ತೆರಳುವುದು ತಡವಾಗಿದೆ. ಅಲ್ಲದೆ ಮೇ 30 ರಂದು ಅವರು ಭಾರತ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ.

ಇನ್ನು ಭಾರತ ತಂಡವು ಅಭ್ಯಾಸವನ್ನು ಆರಂಭಿಸಿದರೂ ವಿರಾಟ್ ಕೊಹ್ಲಿ ಇನ್ನೂ ಕೂಡ ಟೀಮ್ ಇಂಡಿಯಾವನ್ನು ಕೂಡಿಕೊಂಡಿಲ್ಲ. ವೀಸಾ ಪೇಪರ್ ವರ್ಕ್​ಗಳ ವಿಳಂಬದಿಂದ ಕಿಂಗ್ ಕೊಹ್ಲಿ ಅಮೆರಿಕಕ್ಕೆ ತೆರಳುವುದು ತಡವಾಗಿದೆ. ಅಲ್ಲದೆ ಮೇ 30 ರಂದು ಅವರು ಭಾರತ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ.

6 / 7
ಭಾರತ ಟಿ20​ ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.||| ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

ಭಾರತ ಟಿ20​ ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.||| ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

7 / 7
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್