IND vs IRE: ಅತಿ ಹೆಚ್ಚು ಮೇಡನ್ ಓವರ್‌; ಇತಿಹಾಸ ಬರೆದ ಯಾರ್ಕರ್ ಕಿಂಗ್ ಬುಮ್ರಾ..!

T20 World Cup 2024, Jasprit Bumrah: ಐರ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ 6ನೇ ಓವರ್ ಎಸೆಯಲು ದಾಳಿಗಿಳಿದ ಬುಮ್ರಾ, ಈ ಓವರ್​ನಲ್ಲಿ ಒಂದೇ ಒಂದು ರನ್ ನೀಡಲಿಲ್ಲ. ಅಂದರೆ ಬುಮ್ರಾ ಎಸೆದ 6ನೇ ಓವರ್ ಮೇಡನ್ ಆಯಿತು. ಈ ಮೂಲಕ ಬುಮ್ರಾ ಅಂತಾರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ಮೇಡನ್ ಓವರ್ ಮಾಡಿದ ಮೊದಲ ಬೌಲರ್ ಎಂಬ ದಾಖಲೆ ಬರೆದರು.

|

Updated on:Jun 05, 2024 | 10:40 PM

2024 ರ ಟಿ20 ವಿಶ್ವಕಪ್​ನ 8 ನೇ ಪಂದ್ಯವು ಭಾರತ ಮತ್ತು ಐರ್ಲೆಂಡ್ ತಂಡಗಳ ನಡುವೆ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಟೀಂ ಇಂಡಿಯಾ ಪರ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮೊದಲ ಪಂದ್ಯದಲ್ಲೇ ದಾಖಲೆ ಬರೆದಿದ್ದಾರೆ.

2024 ರ ಟಿ20 ವಿಶ್ವಕಪ್​ನ 8 ನೇ ಪಂದ್ಯವು ಭಾರತ ಮತ್ತು ಐರ್ಲೆಂಡ್ ತಂಡಗಳ ನಡುವೆ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಟೀಂ ಇಂಡಿಯಾ ಪರ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮೊದಲ ಪಂದ್ಯದಲ್ಲೇ ದಾಖಲೆ ಬರೆದಿದ್ದಾರೆ.

1 / 7
ಐರ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ 6ನೇ ಓವರ್ ಎಸೆಯಲು ದಾಳಿಗಿಳಿದ ಬುಮ್ರಾ, ಈ ಓವರ್​ನಲ್ಲಿ ಒಂದೇ ಒಂದು ರನ್ ನೀಡಲಿಲ್ಲ. ಅಂದರೆ ಬುಮ್ರಾ ಎಸೆದ 6ನೇ ಓವರ್ ಮೇಡನ್ ಆಯಿತು. ಈ ಮೂಲಕ ಬುಮ್ರಾ ಅಂತಾರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ಮೇಡನ್ ಓವರ್ ಮಾಡಿದ ಮೊದಲ ಬೌಲರ್ ಎಂಬ ದಾಖಲೆ ಬರೆದರು.

ಐರ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ 6ನೇ ಓವರ್ ಎಸೆಯಲು ದಾಳಿಗಿಳಿದ ಬುಮ್ರಾ, ಈ ಓವರ್​ನಲ್ಲಿ ಒಂದೇ ಒಂದು ರನ್ ನೀಡಲಿಲ್ಲ. ಅಂದರೆ ಬುಮ್ರಾ ಎಸೆದ 6ನೇ ಓವರ್ ಮೇಡನ್ ಆಯಿತು. ಈ ಮೂಲಕ ಬುಮ್ರಾ ಅಂತಾರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ಮೇಡನ್ ಓವರ್ ಮಾಡಿದ ಮೊದಲ ಬೌಲರ್ ಎಂಬ ದಾಖಲೆ ಬರೆದರು.

2 / 7
ಇದು ಟಿ20 ಕ್ರಿಕೆಟ್‌ನಲ್ಲಿ ಜಸ್ಪ್ರೀತ್ ಬುಮ್ರಾ ಅವರ 11ನೇ ಮೇಡನ್ ಓವರ್ ಆಗಿತ್ತು. ಇದರೊಂದಿಗೆ ಟೆಸ್ಟ್ ಆಡುವ ರಾಷ್ಟ್ರದ ಬೌಲರ್‌ಗಳ ಪೈಕಿ ಅತಿ ಹೆಚ್ಚು ಮೇಡನ್ ಓವರ್‌ಗಳನ್ನು ಎಸೆದ ಬೌಲರ್ ಎಂಬ ಹೆಗ್ಗಳಿಕೆಗೆ ಬುಮ್ರಾ ಪಾತ್ರರಾಗಿದ್ದಾರೆ.

ಇದು ಟಿ20 ಕ್ರಿಕೆಟ್‌ನಲ್ಲಿ ಜಸ್ಪ್ರೀತ್ ಬುಮ್ರಾ ಅವರ 11ನೇ ಮೇಡನ್ ಓವರ್ ಆಗಿತ್ತು. ಇದರೊಂದಿಗೆ ಟೆಸ್ಟ್ ಆಡುವ ರಾಷ್ಟ್ರದ ಬೌಲರ್‌ಗಳ ಪೈಕಿ ಅತಿ ಹೆಚ್ಚು ಮೇಡನ್ ಓವರ್‌ಗಳನ್ನು ಎಸೆದ ಬೌಲರ್ ಎಂಬ ಹೆಗ್ಗಳಿಕೆಗೆ ಬುಮ್ರಾ ಪಾತ್ರರಾಗಿದ್ದಾರೆ.

3 / 7
ಇದರೊಂದಿಗೆ ಈ ಪಟ್ಟಿಯಲ್ಲಿ ಈ ಮೊದಲು ಬುಮ್ರಾ ಜೊತೆಗೆ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದ ಮಾಜಿ ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಅವರನ್ನು ಹಿಂದಿಕ್ಕಿದ್ದಾರೆ. ಭುವನೇಶ್ವರ್ ಕುಮಾರ್ ತಮ್ಮ ಅಂತಾರಾಷ್ಟ್ರೀಯ ಟಿ20 ವೃತ್ತಿಜೀವನದಲ್ಲಿ 10 ಮೇಡನ್ ಓವರ್‌ಗಳನ್ನು ಬೌಲ್ ಮಾಡಿದ್ದರು.

ಇದರೊಂದಿಗೆ ಈ ಪಟ್ಟಿಯಲ್ಲಿ ಈ ಮೊದಲು ಬುಮ್ರಾ ಜೊತೆಗೆ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದ ಮಾಜಿ ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಅವರನ್ನು ಹಿಂದಿಕ್ಕಿದ್ದಾರೆ. ಭುವನೇಶ್ವರ್ ಕುಮಾರ್ ತಮ್ಮ ಅಂತಾರಾಷ್ಟ್ರೀಯ ಟಿ20 ವೃತ್ತಿಜೀವನದಲ್ಲಿ 10 ಮೇಡನ್ ಓವರ್‌ಗಳನ್ನು ಬೌಲ್ ಮಾಡಿದ್ದರು.

4 / 7
ಬುಮ್ರಾ ಜೊತೆಗೆ ಈ ಪಂದ್ಯದಲ್ಲಿ 2 ವಿಕೆಟ್ ಪಡೆದ ಅರ್ಷದೀಪ್ ಸಿಂಗ್, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಪವರ್‌ಪ್ಲೇನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಇದರೊಂದಿಗೆ ಈ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿದ್ದಾರೆ.

ಬುಮ್ರಾ ಜೊತೆಗೆ ಈ ಪಂದ್ಯದಲ್ಲಿ 2 ವಿಕೆಟ್ ಪಡೆದ ಅರ್ಷದೀಪ್ ಸಿಂಗ್, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಪವರ್‌ಪ್ಲೇನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಇದರೊಂದಿಗೆ ಈ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿದ್ದಾರೆ.

5 / 7
ಜಸ್ಪ್ರೀತ್ ಬುಮ್ರಾ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನ ಪವರ್‌ಪ್ಲೇನಲ್ಲಿ ಇದುವರೆಗೆ 25 ವಿಕೆಟ್‌ಗಳನ್ನು ಉರುಳಿಸಿದ್ದಾರೆ. ಇದೀಗ ಬುಮ್ರಾರನ್ನು ಹಿಂದಿಕ್ಕಿರುವ ಅರ್ಷದೀಪ್ ಸಿಂಗ್ ಪವರ್ಪ್ಲೇನಲ್ಲಿ 26 ವಿಕೆಟ್​ಗಳನ್ನು ಪಡೆದಿದ್ದು, ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭುವನೇಶ್ವರ್ ಕುಮಾರ್ 47 ವಿಕೆಟ್‌ ಉರುಳಿಸಿದ್ದಾರೆ.

ಜಸ್ಪ್ರೀತ್ ಬುಮ್ರಾ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನ ಪವರ್‌ಪ್ಲೇನಲ್ಲಿ ಇದುವರೆಗೆ 25 ವಿಕೆಟ್‌ಗಳನ್ನು ಉರುಳಿಸಿದ್ದಾರೆ. ಇದೀಗ ಬುಮ್ರಾರನ್ನು ಹಿಂದಿಕ್ಕಿರುವ ಅರ್ಷದೀಪ್ ಸಿಂಗ್ ಪವರ್ಪ್ಲೇನಲ್ಲಿ 26 ವಿಕೆಟ್​ಗಳನ್ನು ಪಡೆದಿದ್ದು, ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭುವನೇಶ್ವರ್ ಕುಮಾರ್ 47 ವಿಕೆಟ್‌ ಉರುಳಿಸಿದ್ದಾರೆ.

6 / 7
ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡ ಭಾರತದ ವೇಗಿಗಳ ದಾಳಿಗೆ ನಲುಗಿ ಕೇವಲ 96 ರನ್​ಗಳಿಗೆ ಆಲೌಟ್ ಆಯಿತು. ತಂಡದ ಪರ ಉಪನಾಯಕ ಹಾರ್ದಿಕ್ ಪಾಂಡ್ಯ 3 ವಿಕೆಟ್ ಪಡೆದರು.

ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡ ಭಾರತದ ವೇಗಿಗಳ ದಾಳಿಗೆ ನಲುಗಿ ಕೇವಲ 96 ರನ್​ಗಳಿಗೆ ಆಲೌಟ್ ಆಯಿತು. ತಂಡದ ಪರ ಉಪನಾಯಕ ಹಾರ್ದಿಕ್ ಪಾಂಡ್ಯ 3 ವಿಕೆಟ್ ಪಡೆದರು.

7 / 7

Published On - 10:39 pm, Wed, 5 June 24

Follow us
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?