AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಧೋನಿ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ಕ್ಯಾಪ್ಟನ್ ರೋಹಿತ್ ಶರ್ಮಾ

T20 World Cup 2024: ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 16 ಓವರ್​ಗಳಲ್ಲಿ 96 ರನ್​ ಬಾರಿಸಿ ಆಲೌಟ್ ಆಯಿತು. 97 ರನ್​ಗಳ ಗುರಿಯನ್ನು ಬೆನ್ನತ್ತಿದ ಭಾರತದ ಪರ ನಾಯಕ ರೋಹಿತ್ ಶರ್ಮಾ (52) ಆಕರ್ಷಕ ಅರ್ಧಶತಕ ಬಾರಿಸಿದರು. ಅಲ್ಲದೆ ಕೇವಲ 12.2 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 8 ವಿಕೆಟ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Jun 06, 2024 | 8:08 AM

Share
T20 World Cup 2024: ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ಭಾರತ ಟಿ20 ತಂಡದ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು.

T20 World Cup 2024: ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ಭಾರತ ಟಿ20 ತಂಡದ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು.

1 / 5
ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಮಹೇಂದ್ರ ಸಿಂಗ್ ಧೋನಿ 72 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಟೀಮ್ ಇಂಡಿಯಾ  41 ಮ್ಯಾಚ್​ಗಳಲ್ಲಿ ಗೆಲುವು ಸಾಧಿಸಿತ್ತು. ಈ ಗೆಲುವುಗಳೊಂದಿಗೆ ಭಾರತದ ಅತ್ಯಂತ ಯಶಸ್ವಿ ಟಿ20 ಕ್ಯಾಪ್ಟನ್ ಎಂಬ ದಾಖಲೆಯನ್ನು ಮಹೇಂದ್ರ ಸಿಂಗ್ ಧೋನಿ ಬರೆದಿದ್ದರು.

ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಮಹೇಂದ್ರ ಸಿಂಗ್ ಧೋನಿ 72 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಟೀಮ್ ಇಂಡಿಯಾ 41 ಮ್ಯಾಚ್​ಗಳಲ್ಲಿ ಗೆಲುವು ಸಾಧಿಸಿತ್ತು. ಈ ಗೆಲುವುಗಳೊಂದಿಗೆ ಭಾರತದ ಅತ್ಯಂತ ಯಶಸ್ವಿ ಟಿ20 ಕ್ಯಾಪ್ಟನ್ ಎಂಬ ದಾಖಲೆಯನ್ನು ಮಹೇಂದ್ರ ಸಿಂಗ್ ಧೋನಿ ಬರೆದಿದ್ದರು.

2 / 5
ಇದೀಗ ಈ ದಾಖಲೆಯನ್ನು ರೋಹಿತ್ ಶರ್ಮಾ ಅಳಿಸಿ ಹಾಕಿದ್ದಾರೆ. ಹಿಟ್​​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಈವರೆಗೆ 55	 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದೆ. ಈ ವೇಳೆ 42 ಪಂದ್ಯಗಳಲ್ಲಿ ಭಾರತ ತಂಡ ಜಯ ಸಾಧಿಸಿದೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡಕ್ಕೆ ಅತೀ ಹೆಚ್ಚು ಗೆಲುವು ತಂದುಕೊಟ್ಟ ನಾಯಕನೆಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.

ಇದೀಗ ಈ ದಾಖಲೆಯನ್ನು ರೋಹಿತ್ ಶರ್ಮಾ ಅಳಿಸಿ ಹಾಕಿದ್ದಾರೆ. ಹಿಟ್​​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಈವರೆಗೆ 55 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದೆ. ಈ ವೇಳೆ 42 ಪಂದ್ಯಗಳಲ್ಲಿ ಭಾರತ ತಂಡ ಜಯ ಸಾಧಿಸಿದೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡಕ್ಕೆ ಅತೀ ಹೆಚ್ಚು ಗೆಲುವು ತಂದುಕೊಟ್ಟ ನಾಯಕನೆಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.

3 / 5
ಇನ್ನು ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕ ಎಂಬ ವಿಶ್ವ ದಾಖಲೆ ಪಾಕಿಸ್ತಾನ್ ತಂಡದ ಕ್ಯಾಪ್ಟನ್ ಬಾಬರ್ ಆಝಂ ಹೆಸರಿನಲ್ಲಿದೆ. ಪಾಕ್ ತಂಡವನ್ನು 81 ಪಂದ್ಯಗಳಲ್ಲಿ ಮುನ್ನಡೆಸಿರುವ ಬಾಬರ್ 46 ಬಾರಿ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ.

ಇನ್ನು ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕ ಎಂಬ ವಿಶ್ವ ದಾಖಲೆ ಪಾಕಿಸ್ತಾನ್ ತಂಡದ ಕ್ಯಾಪ್ಟನ್ ಬಾಬರ್ ಆಝಂ ಹೆಸರಿನಲ್ಲಿದೆ. ಪಾಕ್ ತಂಡವನ್ನು 81 ಪಂದ್ಯಗಳಲ್ಲಿ ಮುನ್ನಡೆಸಿರುವ ಬಾಬರ್ 46 ಬಾರಿ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ.

4 / 5
ಇದೀಗ 42 ಪಂದ್ಯಗಳ ಜಯದೊಂದಿಗೆ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಮುನ್ನುಗ್ಗಿದ್ದಾರೆ. ಅಲ್ಲದೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ತನ್ನೆಲ್ಲಾ ಪಂದ್ಯಗಳನ್ನು ಗೆದ್ದುಕೊಂಡರೆ, ಬಾಬರ್ ಆಝಂ ಅವರನ್ನು ಹಿಂದಿಕ್ಕಿ ರೋಹಿತ್ ಶರ್ಮಾ ನಾಯಕತ್ವದಲ್ಲೂ ವಿಶ್ವ ದಾಖಲೆ ಬರೆಯಲಿದ್ದಾರೆ.

ಇದೀಗ 42 ಪಂದ್ಯಗಳ ಜಯದೊಂದಿಗೆ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಮುನ್ನುಗ್ಗಿದ್ದಾರೆ. ಅಲ್ಲದೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ತನ್ನೆಲ್ಲಾ ಪಂದ್ಯಗಳನ್ನು ಗೆದ್ದುಕೊಂಡರೆ, ಬಾಬರ್ ಆಝಂ ಅವರನ್ನು ಹಿಂದಿಕ್ಕಿ ರೋಹಿತ್ ಶರ್ಮಾ ನಾಯಕತ್ವದಲ್ಲೂ ವಿಶ್ವ ದಾಖಲೆ ಬರೆಯಲಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!