T20 World Cup 2024: ಪಾಕಿಸ್ತಾನ್ ವಿರುದ್ಧ ಸ್ಪೋಟಕ ಅರ್ಧಶತಕ ಸಿಡಿಸಿ ದಾಖಲೆ ಬರೆದ ಆರೋನ್ ಜಾನ್ಸನ್

Pakistan vs Canada: ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಕೆನಡಾ ತಂಡದ ಆರಂಭಿಕ ಬ್ಯಾಟ್ಸ್​ಮನ್ ಆರೋನ್ ಜಾನ್ಸನ್ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಇದು ನಸ್ಸೌ ಸ್ಟೇಡಿಯಂನಲ್ಲಿ ಆಡಲಾದ ಪಂದ್ಯಗಳಲ್ಲಿ ಪ್ರಥಮ ಇನಿಂಗ್ಸ್​ನಲ್ಲಿ ಮೂಡಿಬಂದ ಮೊದಲ ಅರ್ಧಶತಕ ಎಂಬುದು ವಿಶೇಷ.

|

Updated on: Jun 11, 2024 | 9:59 PM

T20 World Cup 2024: ಟಿ20 ವಿಶ್ವಕಪ್​ನ 22ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿ ಕೆನಡಾ ಬ್ಯಾಟರ್ ಆರೋನ್ ಜಾನ್ಸನ್ (Aaron Johnson) ವಿಶೇಷ ದಾಖಲೆ ಬರೆದಿದ್ದಾರೆ. ನ್ಯೂಯಾರ್ಕ್​​ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು.

T20 World Cup 2024: ಟಿ20 ವಿಶ್ವಕಪ್​ನ 22ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿ ಕೆನಡಾ ಬ್ಯಾಟರ್ ಆರೋನ್ ಜಾನ್ಸನ್ (Aaron Johnson) ವಿಶೇಷ ದಾಖಲೆ ಬರೆದಿದ್ದಾರೆ. ನ್ಯೂಯಾರ್ಕ್​​ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು.

1 / 6
ಅದರಂತೆ ಇನಿಂಗ್ಸ್ ಆರಂಭಿಸಿದ ಕೆನಡಾ ತಂಡಕ್ಕೆ ಆರಂಭಿಕ ಆಟಗಾರ ಆರೋನ್ ಜಾನ್ಸನ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್​​ಗೆ ಒತ್ತು ನೀಡಿದ ಜಾನ್ಸನ್ ಪಾಕ್ ಬೌಲರ್​ಗಳ ಬೆಂಡೆತ್ತಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಕೆನಡಾ ತಂಡಕ್ಕೆ ಆರಂಭಿಕ ಆಟಗಾರ ಆರೋನ್ ಜಾನ್ಸನ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್​​ಗೆ ಒತ್ತು ನೀಡಿದ ಜಾನ್ಸನ್ ಪಾಕ್ ಬೌಲರ್​ಗಳ ಬೆಂಡೆತ್ತಿದರು.

2 / 6
ಆದರೆ ಮತ್ತೊಂದು ಬದಿಯಲ್ಲಿ ಜಾನ್ಸನ್​ಗೆ ನಿರೀಕ್ಷಿತ ಸಾಥ್ ಸಿಕ್ಕಿರಲಿಲ್ಲ. ಒಂದೆಡೆ ಜಾನ್ಸನ್ ರನ್​ಗಳಿಸುತ್ತಿದ್ದರೆ, ಮತ್ತೊಂದೆಡೆ ಕೆನಡಾ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ನಡೆಸಿದ್ದರು. ಇದರಿಂದಾಗಿ ಪವರ್​ಪ್ಲೇ ಬಳಿಕ ಆರೋನ್ ಜಾನ್ಸನ್ ರಕ್ಷಣಾತ್ಮಕ ಆಟಕ್ಕೆ ಮುಂದಾಗಬೇಕಾಯಿತು.

ಆದರೆ ಮತ್ತೊಂದು ಬದಿಯಲ್ಲಿ ಜಾನ್ಸನ್​ಗೆ ನಿರೀಕ್ಷಿತ ಸಾಥ್ ಸಿಕ್ಕಿರಲಿಲ್ಲ. ಒಂದೆಡೆ ಜಾನ್ಸನ್ ರನ್​ಗಳಿಸುತ್ತಿದ್ದರೆ, ಮತ್ತೊಂದೆಡೆ ಕೆನಡಾ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ನಡೆಸಿದ್ದರು. ಇದರಿಂದಾಗಿ ಪವರ್​ಪ್ಲೇ ಬಳಿಕ ಆರೋನ್ ಜಾನ್ಸನ್ ರಕ್ಷಣಾತ್ಮಕ ಆಟಕ್ಕೆ ಮುಂದಾಗಬೇಕಾಯಿತು.

3 / 6
ಇದಾಗ್ಯೂ 38 ಎಸೆತಗಳಲ್ಲಿ ಅರ್ಧಶತಕ ಪೂರೈಸುವಲ್ಲಿ ಆರೋನ್ ಜಾನ್ಸನ್ ಯಶಸ್ವಿಯಾದರು. ಅಲ್ಲದೆ 44 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 52 ರನ್ ಬಾರಿಸಿ ನಸೀಮ್ ಶಾ ಎಸೆತದಲ್ಲಿ ಬೌಲ್ಡ್ ಆದರು.

ಇದಾಗ್ಯೂ 38 ಎಸೆತಗಳಲ್ಲಿ ಅರ್ಧಶತಕ ಪೂರೈಸುವಲ್ಲಿ ಆರೋನ್ ಜಾನ್ಸನ್ ಯಶಸ್ವಿಯಾದರು. ಅಲ್ಲದೆ 44 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 52 ರನ್ ಬಾರಿಸಿ ನಸೀಮ್ ಶಾ ಎಸೆತದಲ್ಲಿ ಬೌಲ್ಡ್ ಆದರು.

4 / 6
ಈ ಅರ್ಧಶತಕದೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕೆನಡಾ ಪರ ಅತ್ಯಧಿಕ ಬಾರಿ 50+ ಸ್ಕೋರ್ ಬಾರಿಸಿದ ಬ್ಯಾಟರ್ ಎಂಬ ದಾಖಲೆ ಆರೋನ್ ಜಾನ್ಸನ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ನವನೀತ್ ಧಲಿವಾಲ್ (7 ಬಾರಿ) ಹೆಸರಿನಲ್ಲಿತ್ತು. ಇದೀಗ 8ನೇ ಬಾರಿ 50+ ಸ್ಕೋರ್​ಗಳಿಸುವ ಮೂಲಕ ಆರೋನ್ ಜಾನ್ಸನ್ ಕೆನಡಾ ಪರ ಹೊಸ ಇತಿಹಾಸ ಬರೆದಿದ್ದಾರೆ.

ಈ ಅರ್ಧಶತಕದೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕೆನಡಾ ಪರ ಅತ್ಯಧಿಕ ಬಾರಿ 50+ ಸ್ಕೋರ್ ಬಾರಿಸಿದ ಬ್ಯಾಟರ್ ಎಂಬ ದಾಖಲೆ ಆರೋನ್ ಜಾನ್ಸನ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ನವನೀತ್ ಧಲಿವಾಲ್ (7 ಬಾರಿ) ಹೆಸರಿನಲ್ಲಿತ್ತು. ಇದೀಗ 8ನೇ ಬಾರಿ 50+ ಸ್ಕೋರ್​ಗಳಿಸುವ ಮೂಲಕ ಆರೋನ್ ಜಾನ್ಸನ್ ಕೆನಡಾ ಪರ ಹೊಸ ಇತಿಹಾಸ ಬರೆದಿದ್ದಾರೆ.

5 / 6
ಇನ್ನು ಆರೋನ್ ಜಾನ್ಸನ್ ಅವರ ಈ ಅರ್ಧಶತಕದ ನೆರವಿನಿಂದ ಕೆನಡಾ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 106 ರನ್ ಕಲೆಹಾಕಿದೆ. ಈ ಮೂಲಕ ಪಾಕಿಸ್ತಾನ್ ತಂಡಕ್ಕೆ 107 ರನ್​ಗಳ ಗುರಿ ನೀಡಿದೆ.

ಇನ್ನು ಆರೋನ್ ಜಾನ್ಸನ್ ಅವರ ಈ ಅರ್ಧಶತಕದ ನೆರವಿನಿಂದ ಕೆನಡಾ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 106 ರನ್ ಕಲೆಹಾಕಿದೆ. ಈ ಮೂಲಕ ಪಾಕಿಸ್ತಾನ್ ತಂಡಕ್ಕೆ 107 ರನ್​ಗಳ ಗುರಿ ನೀಡಿದೆ.

6 / 6
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್