AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ವಿಶ್ವ ದಾಖಲೆಯ ವಿಜಯ ಸಾಧಿಸಿದ ಇಂಗ್ಲೆಂಡ್

T20 World Cup 2024: ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತೀ ಹೆಚ್ಚು ಎಸೆತಗಳನ್ನು ಬಾಕಿಯಿರಿಸಿ ಗೆದ್ದ ತಂಡವೆಂಬ ವಿಶ್ವ ದಾಖಲೆಯನ್ನು ಇಂಗ್ಲೆಂಡ್ ತಂಡ ತನ್ನದಾಗಿಸಿಕೊಂಡಿದೆ. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾ ತಂಡದ ಹೆಸರಿನಲ್ಲಿತ್ತು. ಇದೀಗ ಈ ದಾಖಲೆಯನ್ನು ಮುರಿದು ಹೊಸ ಇತಿಹಾಸ ಬರೆಯುವಲ್ಲಿ ಆಂಗ್ಲರು ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 15, 2024 | 10:08 AM

Share
T20 World Cup 2024: ಟಿ20 ವಿಶ್ವಕಪ್​ನ 28ನೇ ಪಂದ್ಯದಲ್ಲಿ ಇಂಗ್ಲೆಂಡ್ (England) ತಂಡವು ಭರ್ಜರಿ ಜಯ ಸಾಧಿಸಿದೆ. ಆದರೆ ಅದು ಅಂತಿಂಥ ಗೆಲುವಲ್ಲ ಎಂಬುದು ವಿಶೇಷ. ಓಮಾನ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡಿದ್ದರು.

T20 World Cup 2024: ಟಿ20 ವಿಶ್ವಕಪ್​ನ 28ನೇ ಪಂದ್ಯದಲ್ಲಿ ಇಂಗ್ಲೆಂಡ್ (England) ತಂಡವು ಭರ್ಜರಿ ಜಯ ಸಾಧಿಸಿದೆ. ಆದರೆ ಅದು ಅಂತಿಂಥ ಗೆಲುವಲ್ಲ ಎಂಬುದು ವಿಶೇಷ. ಓಮಾನ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 6
ಅದರಂತೆ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು ಇಂಗ್ಲೆಂಡ್ ಬೌಲರ್​ಗಳ ಕರಾರುವಾಕ್ ದಾಳಿಗೆ ಕಕ್ಕಾಬಿಕ್ಕಿಯಾಗಿದ್ದರು. ಪರಿಣಾಮ 13.2 ಓವರ್​ಗಳಲ್ಲಿ ಕೇವಲ 47 ರನ್​ಗಳಿಸಿ ಒಮಾನ್ ತಂಡವು ಆಲೌಟ್ ಆಯಿತು.

ಅದರಂತೆ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು ಇಂಗ್ಲೆಂಡ್ ಬೌಲರ್​ಗಳ ಕರಾರುವಾಕ್ ದಾಳಿಗೆ ಕಕ್ಕಾಬಿಕ್ಕಿಯಾಗಿದ್ದರು. ಪರಿಣಾಮ 13.2 ಓವರ್​ಗಳಲ್ಲಿ ಕೇವಲ 47 ರನ್​ಗಳಿಸಿ ಒಮಾನ್ ತಂಡವು ಆಲೌಟ್ ಆಯಿತು.

2 / 6
48 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡಕ್ಕೆ ಆರಂಭಿಕ ಫಿಲ್ ಸಾಲ್ಟ್ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್​ನ ಮೊದಲೆರಡು ಎಸೆತಗಳಲ್ಲಿ ಭರ್ಜರಿ ಸಿಕ್ಸ್ ಸಿಡಿಸಿ ಸಾಲ್ಟ್ ಅಬ್ಬರಿಸಿ ಔಟಾದರು. ಇನ್ನು ಜೋಸ್ ಬಟ್ಲರ್ 8 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 24 ರನ್ ಚಚ್ಚಿದರು. ಈ ಮೂಲಕ ಇಂಗ್ಲೆಂಡ್ ತಂಡವು 3.1 ಓವರ್​ಗಳಲ್ಲಿ 50 ರನ್ ಗಳಿಸಿ ಭರ್ಜರಿ ಜಯ ಸಾಧಿಸಿತು.

48 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡಕ್ಕೆ ಆರಂಭಿಕ ಫಿಲ್ ಸಾಲ್ಟ್ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್​ನ ಮೊದಲೆರಡು ಎಸೆತಗಳಲ್ಲಿ ಭರ್ಜರಿ ಸಿಕ್ಸ್ ಸಿಡಿಸಿ ಸಾಲ್ಟ್ ಅಬ್ಬರಿಸಿ ಔಟಾದರು. ಇನ್ನು ಜೋಸ್ ಬಟ್ಲರ್ 8 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 24 ರನ್ ಚಚ್ಚಿದರು. ಈ ಮೂಲಕ ಇಂಗ್ಲೆಂಡ್ ತಂಡವು 3.1 ಓವರ್​ಗಳಲ್ಲಿ 50 ರನ್ ಗಳಿಸಿ ಭರ್ಜರಿ ಜಯ ಸಾಧಿಸಿತು.

3 / 6
ಅಂದರೆ ಇಂಗ್ಲೆಂಡ್ ತಂಡವು ಈ ಪಂದ್ಯವನ್ನು ಕೇವಲ 19 ಎಸೆತಗಳಲ್ಲಿ ಮುಗಿಸಿದ್ದರು. ಇದರೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅಮೋಘ ಗೆಲುವು ದಾಖಲಿಸಿದ ವಿಶೇಷ ದಾಖಲೆಯೊಂದು ಇಂಗ್ಲೆಂಡ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾ ತಂಡದ ಹೆಸರಿನಲ್ಲಿತ್ತು.

ಅಂದರೆ ಇಂಗ್ಲೆಂಡ್ ತಂಡವು ಈ ಪಂದ್ಯವನ್ನು ಕೇವಲ 19 ಎಸೆತಗಳಲ್ಲಿ ಮುಗಿಸಿದ್ದರು. ಇದರೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅಮೋಘ ಗೆಲುವು ದಾಖಲಿಸಿದ ವಿಶೇಷ ದಾಖಲೆಯೊಂದು ಇಂಗ್ಲೆಂಡ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾ ತಂಡದ ಹೆಸರಿನಲ್ಲಿತ್ತು.

4 / 6
2014 ರ ಟಿ20 ವಿಶ್ವಕಪ್​ನಲ್ಲಿ ಶ್ರೀಲಂಕಾ ವಿರುದ್ಧ ನೆದರ್​ಲೆಂಡ್ಸ್ ತಂಡವು ಕೇವಲ 39 ರನ್​ಗಳಿಗೆ ಆಲೌಟ್ ಆಗಿತ್ತು. ಈ ಗುರಿಯನ್ನು ಕೇವಲ 5 ಓವರ್​ಗಳಲ್ಲಿ (30 ಎಸೆತಗಳು) ಚೇಸ್​ ಮಾಡಿ ಶ್ರೀಲಂಕಾ ಭರ್ಜರಿ ಜಯ ಸಾಧಿಸಿತ್ತು. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಅತೀ ಹೆಚ್ಚು ಬಾಲ್ ಬಾಕಿ ಉಳಿಸಿ ಗೆದ್ದ ವಿಶ್ವ ದಾಖಲೆಯನ್ನು ಶ್ರೀಲಂಕಾ ತಂಡ ನಿರ್ಮಿಸಿದ್ದರು.

2014 ರ ಟಿ20 ವಿಶ್ವಕಪ್​ನಲ್ಲಿ ಶ್ರೀಲಂಕಾ ವಿರುದ್ಧ ನೆದರ್​ಲೆಂಡ್ಸ್ ತಂಡವು ಕೇವಲ 39 ರನ್​ಗಳಿಗೆ ಆಲೌಟ್ ಆಗಿತ್ತು. ಈ ಗುರಿಯನ್ನು ಕೇವಲ 5 ಓವರ್​ಗಳಲ್ಲಿ (30 ಎಸೆತಗಳು) ಚೇಸ್​ ಮಾಡಿ ಶ್ರೀಲಂಕಾ ಭರ್ಜರಿ ಜಯ ಸಾಧಿಸಿತ್ತು. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಅತೀ ಹೆಚ್ಚು ಬಾಲ್ ಬಾಕಿ ಉಳಿಸಿ ಗೆದ್ದ ವಿಶ್ವ ದಾಖಲೆಯನ್ನು ಶ್ರೀಲಂಕಾ ತಂಡ ನಿರ್ಮಿಸಿದ್ದರು.

5 / 6
ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಇಂಗ್ಲೆಂಡ್ ಬ್ಯಾಟರ್​ಗಳು ಯಶಸ್ವಿಯಾಗಿದ್ದಾರೆ. ಕೇವಲ 3.1 ಓವರ್​ಗಳಲ್ಲಿ 48 ರನ್​ಗಳ ಗುರಿಯನ್ನು ಚೇಸ್ ಮಾಡಿ ಇಂಗ್ಲೆಂಡ್ ಬ್ಯಾಟರ್​ಗಳು 101 ಎಸೆತಗಳನ್ನು ಬಾಕಿ ಉಳಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಅಮೋಘ ಗೆಲುವು ದಾಖಲಿಸಿ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಇಂಗ್ಲೆಂಡ್ ಬ್ಯಾಟರ್​ಗಳು ಯಶಸ್ವಿಯಾಗಿದ್ದಾರೆ. ಕೇವಲ 3.1 ಓವರ್​ಗಳಲ್ಲಿ 48 ರನ್​ಗಳ ಗುರಿಯನ್ನು ಚೇಸ್ ಮಾಡಿ ಇಂಗ್ಲೆಂಡ್ ಬ್ಯಾಟರ್​ಗಳು 101 ಎಸೆತಗಳನ್ನು ಬಾಕಿ ಉಳಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಅಮೋಘ ಗೆಲುವು ದಾಖಲಿಸಿ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 6
Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ