AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ವೆಸ್ಟ್ ಇಂಡೀಸ್ ಸ್ಕೋರ್​ ಕಾರ್ಡ್​ನಲ್ಲಿ ಹಾರ್ದಿಕ್ ಪಾಂಡ್ಯ..!

T20 World Cup 2024: ಟೀಮ್ ಇಂಡಿಯಾ ಟಿ20 ವಿಶ್ವಕಪ್ ಅಭಿಯಾನವನ್ನು ಬುಧವಾರ ಆರಂಭಿಸಲಿದೆ. ಜೂನ್ 5 ರಂದು ನ್ಯೂಯಾರ್ಕ್​ನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಹಾಗೆಯೇ ಜೂನ್ 9 ರಂದು ಪಾಕಿಸ್ತಾನ್, ಜೂನ್ 12 ರಂದು ಯುಎಸ್​ಎ ಮತ್ತು ಜೂನ್ 15 ರಂದು ಕೆನಡಾ ತಂಡಗಳ ವಿರುದ್ಧ ಸೆಣಸಲಿದೆ.

ಝಾಹಿರ್ ಯೂಸುಫ್
|

Updated on:Jun 04, 2024 | 12:53 PM

Share
T20 World Cup 2024: ಟಿ20 ವಿಶ್ವಕಪ್​ನ 2ನೇ ಪಂದ್ಯದ ಸ್ಕೋರ್​ ಕಾರ್ಡ್​ನಲ್ಲಿ ಟೀಮ್ ಇಂಡಿಯಾ (Team India) ಆಟಗಾರ ಹಾರ್ದಿಕ್ ಪಾಂಡ್ಯ (Hardik Pandya) ಅವರ ಫೋಟೋ ಕಾಣಿಸಿಕೊಂಡಿದೆ. ವೆಸ್ಟ್ ಇಂಡೀಸ್ ಮತ್ತು ಪಪುವಾ ನ್ಯೂ ಗಿನಿಯಾ ನಡುವಣ ಈ ಪಂದ್ಯದ ವೇಳೆ ತೋರಿಸಲಾದ ಸ್ಕೋರ್​ ಕಾರ್ಡ್​ನಲ್ಲಿ ಆಕಸ್ಮಿಕವಾಗಿ ಪಾಂಡ್ಯ ಚಿತ್ರವನ್ನು ಬಳಸಲಾಗಿದೆ.

T20 World Cup 2024: ಟಿ20 ವಿಶ್ವಕಪ್​ನ 2ನೇ ಪಂದ್ಯದ ಸ್ಕೋರ್​ ಕಾರ್ಡ್​ನಲ್ಲಿ ಟೀಮ್ ಇಂಡಿಯಾ (Team India) ಆಟಗಾರ ಹಾರ್ದಿಕ್ ಪಾಂಡ್ಯ (Hardik Pandya) ಅವರ ಫೋಟೋ ಕಾಣಿಸಿಕೊಂಡಿದೆ. ವೆಸ್ಟ್ ಇಂಡೀಸ್ ಮತ್ತು ಪಪುವಾ ನ್ಯೂ ಗಿನಿಯಾ ನಡುವಣ ಈ ಪಂದ್ಯದ ವೇಳೆ ತೋರಿಸಲಾದ ಸ್ಕೋರ್​ ಕಾರ್ಡ್​ನಲ್ಲಿ ಆಕಸ್ಮಿಕವಾಗಿ ಪಾಂಡ್ಯ ಚಿತ್ರವನ್ನು ಬಳಸಲಾಗಿದೆ.

1 / 5
ವೆಸ್ಟ್ ಇಂಡೀಸ್ ಬ್ಯಾಟರ್​ಗಳ ಪಟ್ಟಿಯಲ್ಲೂ ಮತ್ತು ಪಪುವಾ ನ್ಯೂ ಗಿನಿಯಾ ಬೌಲರ್​ಗಳ ಪಟ್ಟಿಯಲ್ಲೂ ಹಾರ್ದಿಕ್ ಪಾಂಡ್ಯ ಫೋಟೋ ಕಾಣಿಸಿಕೊಂಡಿರುವುದು ವಿಶೇಷ. ಹೀಗೆ ಐದು ಕಡೆ ಟೀಮ್ ಇಂಡಿಯಾ ಆಟಗಾರನ ಫೋಟೋ ಬಳಸಿ ಪಂದ್ಯಾವಳಿಯ ಪ್ರಸಾರಕರು ಎಡವಟ್ಟು ಮಾಡಿಕೊಂಡಿದ್ದಾರೆ.

ವೆಸ್ಟ್ ಇಂಡೀಸ್ ಬ್ಯಾಟರ್​ಗಳ ಪಟ್ಟಿಯಲ್ಲೂ ಮತ್ತು ಪಪುವಾ ನ್ಯೂ ಗಿನಿಯಾ ಬೌಲರ್​ಗಳ ಪಟ್ಟಿಯಲ್ಲೂ ಹಾರ್ದಿಕ್ ಪಾಂಡ್ಯ ಫೋಟೋ ಕಾಣಿಸಿಕೊಂಡಿರುವುದು ವಿಶೇಷ. ಹೀಗೆ ಐದು ಕಡೆ ಟೀಮ್ ಇಂಡಿಯಾ ಆಟಗಾರನ ಫೋಟೋ ಬಳಸಿ ಪಂದ್ಯಾವಳಿಯ ಪ್ರಸಾರಕರು ಎಡವಟ್ಟು ಮಾಡಿಕೊಂಡಿದ್ದಾರೆ.

2 / 5
ವಿಂಡೀಸ್​ ಬ್ಯಾಟರ್​ಗಳಾದ ರೋಸ್ಟನ್ ಚೇಸ್, ಬ್ರೆಂಡನ್ ಕಿಂಗ್ ಮತ್ತು ಆ್ಯಂಡ್ರೆ ರಸೆಲ್ ಫೋಟೋ ಬದಲು ಹಾರ್ದಿಕ್ ಪಾಂಡ್ಯ ಚಿತ್ರವನ್ನು ಪ್ರದರ್ಶಿಸಲಾಗಿತ್ತು. ಹಾಗೆಯೇ ಪಪುವಾ ನ್ಯೂ ಗಿನಿಯಾ ಬೌಲರ್​ಗಳಾದ ಸೆಸ ಬುವ ಹಾಗೂ ಅಸಾದ್ ವಾಲ್ ಚಿತ್ರಗಳ ಬದಲು ಪಾಂಡ್ಯ ಫೋಟೋ ರಾರಾಜಿಸಿದ್ದವು. ಇದೀಗ ಈ ಸ್ಕೋರ್​ ಕಾರ್ಡ್​ನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಂಡೀಸ್​ ಬ್ಯಾಟರ್​ಗಳಾದ ರೋಸ್ಟನ್ ಚೇಸ್, ಬ್ರೆಂಡನ್ ಕಿಂಗ್ ಮತ್ತು ಆ್ಯಂಡ್ರೆ ರಸೆಲ್ ಫೋಟೋ ಬದಲು ಹಾರ್ದಿಕ್ ಪಾಂಡ್ಯ ಚಿತ್ರವನ್ನು ಪ್ರದರ್ಶಿಸಲಾಗಿತ್ತು. ಹಾಗೆಯೇ ಪಪುವಾ ನ್ಯೂ ಗಿನಿಯಾ ಬೌಲರ್​ಗಳಾದ ಸೆಸ ಬುವ ಹಾಗೂ ಅಸಾದ್ ವಾಲ್ ಚಿತ್ರಗಳ ಬದಲು ಪಾಂಡ್ಯ ಫೋಟೋ ರಾರಾಜಿಸಿದ್ದವು. ಇದೀಗ ಈ ಸ್ಕೋರ್​ ಕಾರ್ಡ್​ನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 5
ಟಿ20 ವಿಶ್ವಕಪ್​ನಲ್ಲಿ ಈಗಾಗಲೇ 3 ಪಂದ್ಯಗಳು ಮುಗಿದಿದ್ದು, ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ನ್ಯೂಯಾರ್ಕ್​ನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ಟಿ20 ವಿಶ್ವಕಪ್​ನಲ್ಲಿ ಈಗಾಗಲೇ 3 ಪಂದ್ಯಗಳು ಮುಗಿದಿದ್ದು, ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ನ್ಯೂಯಾರ್ಕ್​ನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

4 / 5
ಇನ್ನು ಜೂನ್ 9 ರಂದು ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ನ್ಯೂಯಾರ್ಕ್​ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇದಾದ ಬಳಿಕ ಭಾರತ ತಂಡವು ಯುಎಸ್​ಎ ಮತ್ತು ಕೆನಡಾ ತಂಡಗಳ ವಿರುದ್ಧ ಪಂದ್ಯಗಳನ್ನಾಡಲಿದೆ. ಈ ಪಂದ್ಯಗಳ ಮುಕ್ತಾಯದೊಂದಿಗೆ ಸೂಪರ್-8 ಹಂತದ ಮ್ಯಾಚ್​ಗಳು ಶುರುವಾಗಲಿದೆ.

ಇನ್ನು ಜೂನ್ 9 ರಂದು ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ನ್ಯೂಯಾರ್ಕ್​ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇದಾದ ಬಳಿಕ ಭಾರತ ತಂಡವು ಯುಎಸ್​ಎ ಮತ್ತು ಕೆನಡಾ ತಂಡಗಳ ವಿರುದ್ಧ ಪಂದ್ಯಗಳನ್ನಾಡಲಿದೆ. ಈ ಪಂದ್ಯಗಳ ಮುಕ್ತಾಯದೊಂದಿಗೆ ಸೂಪರ್-8 ಹಂತದ ಮ್ಯಾಚ್​ಗಳು ಶುರುವಾಗಲಿದೆ.

5 / 5

Published On - 11:56 am, Mon, 3 June 24

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..