T20 World Cup 2024: ಭಾರತ ತಂಡ ಮೋಸದಿಂದ ಗೆದ್ದಿದೆ: ಪಾಕ್ ಮಾಜಿ ನಾಯಕನ ಗಂಭೀರ ಆರೋಪ

Updated on: Jun 25, 2024 | 10:18 PM

T20 World Cup 2024: ಜೂನ್ 24 ರಂದು ನಡೆದ ಟಿ20 ವಿಶ್ವಕಪ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 205 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡ 181 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 24 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಇದೀಗ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಮೋಸದಾಟವಾಡಿದೆ ಎಂದು ಪಾಕ್ ಕ್ರಿಕೆಟಿಗ ಆರೋಪಿಸಿದ್ದಾರೆ.

1 / 6
T20 World Cup 2024: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು ಮೋಸದಿಂದ ಜಯಗಳಿಸಿದೆ ಎಂದು ಪಾಕಿಸ್ತಾನ್ ತಂಡದ ಮಾಜಿ ನಾಯಕ ಇಂಝಮಾಮ್ ಉಲ್ ಹಕ್ ಆರೋಪಿಸಿದ್ದಾರೆ. ಪಂದ್ಯದ 15ನೇ ಓವರ್​ನಲ್ಲೇ ಚೆಂಡು ರಿವರ್ಸ್​ ಸ್ವಿಂಗ್ ಆಗುತ್ತಿದ್ದದ್ದು ಇದಕ್ಕೆ ಸಾಕ್ಷಿ ಎಂದು ಇಂಝಮಾಮ್ ಹೇಳಿದ್ದಾರೆ.

T20 World Cup 2024: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು ಮೋಸದಿಂದ ಜಯಗಳಿಸಿದೆ ಎಂದು ಪಾಕಿಸ್ತಾನ್ ತಂಡದ ಮಾಜಿ ನಾಯಕ ಇಂಝಮಾಮ್ ಉಲ್ ಹಕ್ ಆರೋಪಿಸಿದ್ದಾರೆ. ಪಂದ್ಯದ 15ನೇ ಓವರ್​ನಲ್ಲೇ ಚೆಂಡು ರಿವರ್ಸ್​ ಸ್ವಿಂಗ್ ಆಗುತ್ತಿದ್ದದ್ದು ಇದಕ್ಕೆ ಸಾಕ್ಷಿ ಎಂದು ಇಂಝಮಾಮ್ ಹೇಳಿದ್ದಾರೆ.

2 / 6
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಪಂದ್ಯದ ವೇಳೆ ನ್ಯೂಸ್ 24 ಚಾನೆಲ್​ನ ಚರ್ಚೆಯಲ್ಲಿ ಭಾಗವಹಿಸಿದ್ದ ಇಂಝಮಾಮ್ ಉಲ್ ಹಕ್, ಭಾರತ ತಂಡದ ಗೆಲುವಿನಲ್ಲಿ ಸಂಶಯ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ತಂಡವು ಉತ್ತಮ ಬೌಲಿಂಗ್ ಮಾಡಲು ಸಾಧ್ಯವಾಗದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಉತ್ತಮ ದಾಳಿ ಸಂಘಟಿಸಿದ್ದರು.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಪಂದ್ಯದ ವೇಳೆ ನ್ಯೂಸ್ 24 ಚಾನೆಲ್​ನ ಚರ್ಚೆಯಲ್ಲಿ ಭಾಗವಹಿಸಿದ್ದ ಇಂಝಮಾಮ್ ಉಲ್ ಹಕ್, ಭಾರತ ತಂಡದ ಗೆಲುವಿನಲ್ಲಿ ಸಂಶಯ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ತಂಡವು ಉತ್ತಮ ಬೌಲಿಂಗ್ ಮಾಡಲು ಸಾಧ್ಯವಾಗದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಉತ್ತಮ ದಾಳಿ ಸಂಘಟಿಸಿದ್ದರು.

3 / 6
ಬಾಲ್ ಟ್ಯಾಂಪರಿಂಗ್ ಮಾಡಿರುವ ಕಾರಣ ಇದು ಸಾಧ್ಯವಾಗಿದೆ ಎಂದು ಇಂಝಮಾಮ್ ಆರೋಪಿಸಿದ್ದಾರೆ. ಅರ್ಷದೀಪ್ ಸಿಂಗ್ ಎಸೆದ 15ನೇ ಓವರ್​ನಲ್ಲೇ ಚೆಂಡು ರಿವರ್ಸ್ ಸ್ವಿಂಗ್ ಪಡೆಯುತ್ತಿತ್ತು. 15ನೇ ಓವರ್​ನಲ್ಲಿ ಚೆಂಡು ರಿವರ್ಸ್ ಸ್ವಿಂಗ್ ಆಗಬೇಕಿದ್ದರೆ, 12ನೇ 13ನೇ ಓವರ್​ ವೇಳೆಯೇ ಚೆಂಡನ್ನು ಇದಕ್ಕಾಗಿ ಸಿದ್ಧಪಡಿಸಬೇಕಾಗಿರುತ್ತದೆ.

ಬಾಲ್ ಟ್ಯಾಂಪರಿಂಗ್ ಮಾಡಿರುವ ಕಾರಣ ಇದು ಸಾಧ್ಯವಾಗಿದೆ ಎಂದು ಇಂಝಮಾಮ್ ಆರೋಪಿಸಿದ್ದಾರೆ. ಅರ್ಷದೀಪ್ ಸಿಂಗ್ ಎಸೆದ 15ನೇ ಓವರ್​ನಲ್ಲೇ ಚೆಂಡು ರಿವರ್ಸ್ ಸ್ವಿಂಗ್ ಪಡೆಯುತ್ತಿತ್ತು. 15ನೇ ಓವರ್​ನಲ್ಲಿ ಚೆಂಡು ರಿವರ್ಸ್ ಸ್ವಿಂಗ್ ಆಗಬೇಕಿದ್ದರೆ, 12ನೇ 13ನೇ ಓವರ್​ ವೇಳೆಯೇ ಚೆಂಡನ್ನು ಇದಕ್ಕಾಗಿ ಸಿದ್ಧಪಡಿಸಬೇಕಾಗಿರುತ್ತದೆ.

4 / 6
ಹೀಗೆ ಚೆಂಡನ್ನು ಯಾವುದಾರೂ ರೀತಿಯಲ್ಲಿ ವಿರೂಪಗೊಳಿಸಿದರೆ ಮಾತ್ರ ರಿವರ್ಸ್ ಸ್ವಿಂಗ್ ಆಗುತ್ತದೆ. ಹೀಗಾಗಿ ಭಾರತೀಯ ಬೌಲರ್​ಗಳು ಚೆಂಡನ್ನು ಟ್ಯಾಂಪರಿಂಗ್ ಮಾಡಿರುವ ಸಾಧ್ಯತೆಯಿದೆ. ಇದನ್ನೆಲ್ಲಾ ಅಂಪೈರ್ ಕಣ್ಣು ಬಿಟ್ಟು ಗಮನಿಸಬೇಕು ಎಂದು ಇಂಝಮಾಮ್ ಉಲ್ ಹಕ್ ಹೇಳಿದ್ದಾರೆ.

ಹೀಗೆ ಚೆಂಡನ್ನು ಯಾವುದಾರೂ ರೀತಿಯಲ್ಲಿ ವಿರೂಪಗೊಳಿಸಿದರೆ ಮಾತ್ರ ರಿವರ್ಸ್ ಸ್ವಿಂಗ್ ಆಗುತ್ತದೆ. ಹೀಗಾಗಿ ಭಾರತೀಯ ಬೌಲರ್​ಗಳು ಚೆಂಡನ್ನು ಟ್ಯಾಂಪರಿಂಗ್ ಮಾಡಿರುವ ಸಾಧ್ಯತೆಯಿದೆ. ಇದನ್ನೆಲ್ಲಾ ಅಂಪೈರ್ ಕಣ್ಣು ಬಿಟ್ಟು ಗಮನಿಸಬೇಕು ಎಂದು ಇಂಝಮಾಮ್ ಉಲ್ ಹಕ್ ಹೇಳಿದ್ದಾರೆ.

5 / 6
ಇಂಝಮಾಮ್ ಉಲ್ ಹಕ್ ಅವರ ಈ ಆರೋಪಕ್ಕೆ ಮಾಜಿ ಕ್ರಿಕೆಟಿಗ ಸಲೀಮ್ ಮಲಿಕ್ ಕೂಡ ಧ್ವನಿಗೂಡಿಸಿದ್ದಾರೆ. ಕೆಲವು ಉನ್ನತ ತಂಡಗಳ ವಿಷಯಕ್ಕೆ ಬಂದಾಗ ಅಧಿಕಾರಿಗಳು ಕಣ್ಣು ಮುಚ್ಚಿರುತ್ತಾರೆ. ಅಂತಹ ತಂಡಗಳಲ್ಲಿ ಭಾರತ ಕೂಡ ಒಂದು. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧ ಭಾರತೀಯ ಬೌಲರ್​ಗಳು ಬಾಲ್ ಟ್ಯಾಂಪರಿಂಗ್ ಮಾಡಿರುವ ಸಾಧ್ಯತೆಯಿದೆ ಎಂದು ಮಲಿಕ್ ಕೂಡ ಆರೋಪಿಸಿದ್ದಾರೆ.

ಇಂಝಮಾಮ್ ಉಲ್ ಹಕ್ ಅವರ ಈ ಆರೋಪಕ್ಕೆ ಮಾಜಿ ಕ್ರಿಕೆಟಿಗ ಸಲೀಮ್ ಮಲಿಕ್ ಕೂಡ ಧ್ವನಿಗೂಡಿಸಿದ್ದಾರೆ. ಕೆಲವು ಉನ್ನತ ತಂಡಗಳ ವಿಷಯಕ್ಕೆ ಬಂದಾಗ ಅಧಿಕಾರಿಗಳು ಕಣ್ಣು ಮುಚ್ಚಿರುತ್ತಾರೆ. ಅಂತಹ ತಂಡಗಳಲ್ಲಿ ಭಾರತ ಕೂಡ ಒಂದು. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧ ಭಾರತೀಯ ಬೌಲರ್​ಗಳು ಬಾಲ್ ಟ್ಯಾಂಪರಿಂಗ್ ಮಾಡಿರುವ ಸಾಧ್ಯತೆಯಿದೆ ಎಂದು ಮಲಿಕ್ ಕೂಡ ಆರೋಪಿಸಿದ್ದಾರೆ.

6 / 6
ಇದೀಗ ಇಂಝಮಾಮ್ ಉಲ್ ಹಾಗೂ ಸಲೀಮ್ ಮಲಿಕ್ ಅವರ ಹೇಳಿಕೆಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಪರ ವಿರೋಧ ಚರ್ಚೆಗಳು ಶುರುವಾಗಿದೆ. ಈ ಚರ್ಚೆಗಳ ನಡುವೆ ಪಾಕ್ ತಂಡದ ಕಳ್ಳಾಟವನ್ನು ಪ್ರಸ್ತಾಪಿಸುವ ಮೂಲಕ ಭಾರತೀಯ ಕ್ರಿಕೆಟ್ ಪ್ರೇಮಿಗಳು ಖಡಕ್ ತಿರುಗೇಟು ನೀಡುತ್ತಿದ್ದಾರೆ.

ಇದೀಗ ಇಂಝಮಾಮ್ ಉಲ್ ಹಾಗೂ ಸಲೀಮ್ ಮಲಿಕ್ ಅವರ ಹೇಳಿಕೆಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಪರ ವಿರೋಧ ಚರ್ಚೆಗಳು ಶುರುವಾಗಿದೆ. ಈ ಚರ್ಚೆಗಳ ನಡುವೆ ಪಾಕ್ ತಂಡದ ಕಳ್ಳಾಟವನ್ನು ಪ್ರಸ್ತಾಪಿಸುವ ಮೂಲಕ ಭಾರತೀಯ ಕ್ರಿಕೆಟ್ ಪ್ರೇಮಿಗಳು ಖಡಕ್ ತಿರುಗೇಟು ನೀಡುತ್ತಿದ್ದಾರೆ.

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us