AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್​ನಿಂದ 2 ತಂಡಗಳು ಔಟ್

T20 World Cup 2024: ಟಿ20 ವಿಶ್ವಕಪ್​ನ 25ನೇ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಟೀಮ್ ಇಂಡಿಯಾ ಜಯಗಳಿಸಿದರೆ ಸೂಪರ್-8 ಹಂತಕ್ಕೇರುವುದು ಖಚಿತವಾಗಲಿದೆ. ಅತ್ತ 2 ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಯುಎಸ್​ಎ ತಂಡಕ್ಕೂ ಮುಂದಿನ ಹಂತಕ್ಕೇರಲು ಉತ್ತಮ ಅವಕಾಶವಿದೆ. ಹೀಗಾಗಿ ಬುಧವಾರ ನಡೆಯಲಿರುವ ಪಂದ್ಯದಲ್ಲಿ ಉತ್ತಮ ಪೈಪೋಟಿ ನಿರೀಕ್ಷಿಸಬಹುದು.

ಝಾಹಿರ್ ಯೂಸುಫ್
|

Updated on:Jun 12, 2024 | 8:14 AM

Share
T20 World Cup 2024: 20 ವಿಶ್ವಕಪ್​​ನ 24 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಸೂಪರ್-8 ಹಂತಕ್ಕೇರಿದರೆ, ಮತ್ತೆರಡು ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ಲೀಗ್ ಹಂತದ ಪಂದ್ಯಗಳ ಮುಕ್ತಾಯಕ್ಕೂ ಮುನ್ನ ಟಿ20 ವಿಶ್ವಕಪ್​ನಿಂದ ಹೊರಬಿದ್ದ ತಂಡಗಳಾವುವು, ಮುಂದಿನ ಹಂತಕ್ಕೇರಿದ ಟೀಮ್​ಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

T20 World Cup 2024: 20 ವಿಶ್ವಕಪ್​​ನ 24 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಸೂಪರ್-8 ಹಂತಕ್ಕೇರಿದರೆ, ಮತ್ತೆರಡು ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ಲೀಗ್ ಹಂತದ ಪಂದ್ಯಗಳ ಮುಕ್ತಾಯಕ್ಕೂ ಮುನ್ನ ಟಿ20 ವಿಶ್ವಕಪ್​ನಿಂದ ಹೊರಬಿದ್ದ ತಂಡಗಳಾವುವು, ಮುಂದಿನ ಹಂತಕ್ಕೇರಿದ ಟೀಮ್​ಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

1 / 5
ಗ್ರೂಪ್-ಬಿ ನಲ್ಲಿ ಕಾಣಿಸಿಕೊಂಡಿದ್ದ ಒಮಾನ್ ತಂಡವು ಆಡಿರುವ ಮೂರು ಪಂದ್ಯಗಳಲ್ಲೂ ಸೋಲನುಭವಿಸಿದೆ. ಈ ಸೋಲುಗಳೊಂದಿಗೆ ಒಮಾನ್ ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ತನ್ನ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದೊಂದಿಗೆ ಒಮಾನ್ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯವಾಗಲಿದೆ.

ಗ್ರೂಪ್-ಬಿ ನಲ್ಲಿ ಕಾಣಿಸಿಕೊಂಡಿದ್ದ ಒಮಾನ್ ತಂಡವು ಆಡಿರುವ ಮೂರು ಪಂದ್ಯಗಳಲ್ಲೂ ಸೋಲನುಭವಿಸಿದೆ. ಈ ಸೋಲುಗಳೊಂದಿಗೆ ಒಮಾನ್ ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ತನ್ನ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದೊಂದಿಗೆ ಒಮಾನ್ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯವಾಗಲಿದೆ.

2 / 5
ಮತ್ತೊಂದೆಡೆ ಗ್ರೂಪ್-ಡಿ ನಲ್ಲಿರುವ ಶ್ರೀಲಂಕಾ ತಂಡದ ವಿಶ್ವಕಪ್ ಅಭಿಯಾನ ಕೂಡ ಮುಂದಿನ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಲಂಕಾ ತಂಡವು ಆಡಿರುವ 3 ಪಂದ್ಯಗಳಲ್ಲಿ 2 ಸೋಲನುಭವಿಸಿದೆ. ಇನ್ನು ನೇಪಾಳ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದು, ಹೀಗಾಗಿ ಕೇವಲ 1 ಅಂಕ ಪಡೆದುಕೊಂಡಿದೆ. ಅತ್ತ ತಲಾ 2 ಅಂಕಗಳನ್ನು ಹೊಂದಿರುವ ಬಾಂಗ್ಲಾದೇಶ್ ಮತ್ತು ನೆದರ್​ಲೆಂಡ್ಸ್ ತಂಡಗಳು ಮುಂದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಈ ಮ್ಯಾಚ್​ನಲ್ಲಿ ಯಾವುದೇ ತಂಡ ಗೆದ್ದರೂ ಶ್ರೀಲಂಕಾ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

ಮತ್ತೊಂದೆಡೆ ಗ್ರೂಪ್-ಡಿ ನಲ್ಲಿರುವ ಶ್ರೀಲಂಕಾ ತಂಡದ ವಿಶ್ವಕಪ್ ಅಭಿಯಾನ ಕೂಡ ಮುಂದಿನ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಲಂಕಾ ತಂಡವು ಆಡಿರುವ 3 ಪಂದ್ಯಗಳಲ್ಲಿ 2 ಸೋಲನುಭವಿಸಿದೆ. ಇನ್ನು ನೇಪಾಳ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದು, ಹೀಗಾಗಿ ಕೇವಲ 1 ಅಂಕ ಪಡೆದುಕೊಂಡಿದೆ. ಅತ್ತ ತಲಾ 2 ಅಂಕಗಳನ್ನು ಹೊಂದಿರುವ ಬಾಂಗ್ಲಾದೇಶ್ ಮತ್ತು ನೆದರ್​ಲೆಂಡ್ಸ್ ತಂಡಗಳು ಮುಂದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಈ ಮ್ಯಾಚ್​ನಲ್ಲಿ ಯಾವುದೇ ತಂಡ ಗೆದ್ದರೂ ಶ್ರೀಲಂಕಾ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

3 / 5
ಗ್ರೂಪ್-ಡಿ ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿರುವ ಸೌತ್ ಆಫ್ರಿಕಾ ತಂಡ ಸೂಪರ್-8 ಹಂತಕ್ಕೇರಿದೆ. ಇನ್ನು ಸೌತ್ ಆಫ್ರಿಕಾ ತಂಡ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಲಿದ್ದು, ಈ ಮ್ಯಾಚ್​ನಲ್ಲಿ ಸೋತರೂ ಐಡೆನ್ ಮಾರ್ಕ್ರಾಮ್ ಪಡೆ ಮುಂದಿನ ಹಂತದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.

ಗ್ರೂಪ್-ಡಿ ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿರುವ ಸೌತ್ ಆಫ್ರಿಕಾ ತಂಡ ಸೂಪರ್-8 ಹಂತಕ್ಕೇರಿದೆ. ಇನ್ನು ಸೌತ್ ಆಫ್ರಿಕಾ ತಂಡ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಲಿದ್ದು, ಈ ಮ್ಯಾಚ್​ನಲ್ಲಿ ಸೋತರೂ ಐಡೆನ್ ಮಾರ್ಕ್ರಾಮ್ ಪಡೆ ಮುಂದಿನ ಹಂತದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.

4 / 5
ಗ್ರೂಪ್​-ಬಿ ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ ತಂಡ ಕೂಡ ಸೂಪರ್-8 ರಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ. ಆಡಿರುವ ಮೂರು ಮ್ಯಾಚ್​ಗಳಲ್ಲೂ ಆಸೀಸ್ ಪಡೆ ಜಯ ಸಾಧಿಸಿದ್ದು, ಈ ಮೂಲಕ ಸ್ಕಾಟ್ಲೆಂಡ್ ವಿರುದ್ಧದ ತನ್ನ ಕೊನೆಯ ಪಂದ್ಯಕ್ಕೂ ಮುನ್ನವೇ ಮುಂದಿನ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ.

ಗ್ರೂಪ್​-ಬಿ ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ ತಂಡ ಕೂಡ ಸೂಪರ್-8 ರಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ. ಆಡಿರುವ ಮೂರು ಮ್ಯಾಚ್​ಗಳಲ್ಲೂ ಆಸೀಸ್ ಪಡೆ ಜಯ ಸಾಧಿಸಿದ್ದು, ಈ ಮೂಲಕ ಸ್ಕಾಟ್ಲೆಂಡ್ ವಿರುದ್ಧದ ತನ್ನ ಕೊನೆಯ ಪಂದ್ಯಕ್ಕೂ ಮುನ್ನವೇ ಮುಂದಿನ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ.

5 / 5

Published On - 8:12 am, Wed, 12 June 24

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ