T20 World Cup 2024: ಟಿ20 ವಿಶ್ವಕಪ್​ನಿಂದ 2 ತಂಡಗಳು ಔಟ್

T20 World Cup 2024: ಟಿ20 ವಿಶ್ವಕಪ್​ನ 25ನೇ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಟೀಮ್ ಇಂಡಿಯಾ ಜಯಗಳಿಸಿದರೆ ಸೂಪರ್-8 ಹಂತಕ್ಕೇರುವುದು ಖಚಿತವಾಗಲಿದೆ. ಅತ್ತ 2 ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಯುಎಸ್​ಎ ತಂಡಕ್ಕೂ ಮುಂದಿನ ಹಂತಕ್ಕೇರಲು ಉತ್ತಮ ಅವಕಾಶವಿದೆ. ಹೀಗಾಗಿ ಬುಧವಾರ ನಡೆಯಲಿರುವ ಪಂದ್ಯದಲ್ಲಿ ಉತ್ತಮ ಪೈಪೋಟಿ ನಿರೀಕ್ಷಿಸಬಹುದು.

|

Updated on:Jun 12, 2024 | 8:14 AM

T20 World Cup 2024: 20 ವಿಶ್ವಕಪ್​​ನ 24 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಸೂಪರ್-8 ಹಂತಕ್ಕೇರಿದರೆ, ಮತ್ತೆರಡು ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ಲೀಗ್ ಹಂತದ ಪಂದ್ಯಗಳ ಮುಕ್ತಾಯಕ್ಕೂ ಮುನ್ನ ಟಿ20 ವಿಶ್ವಕಪ್​ನಿಂದ ಹೊರಬಿದ್ದ ತಂಡಗಳಾವುವು, ಮುಂದಿನ ಹಂತಕ್ಕೇರಿದ ಟೀಮ್​ಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

T20 World Cup 2024: 20 ವಿಶ್ವಕಪ್​​ನ 24 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಸೂಪರ್-8 ಹಂತಕ್ಕೇರಿದರೆ, ಮತ್ತೆರಡು ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ಲೀಗ್ ಹಂತದ ಪಂದ್ಯಗಳ ಮುಕ್ತಾಯಕ್ಕೂ ಮುನ್ನ ಟಿ20 ವಿಶ್ವಕಪ್​ನಿಂದ ಹೊರಬಿದ್ದ ತಂಡಗಳಾವುವು, ಮುಂದಿನ ಹಂತಕ್ಕೇರಿದ ಟೀಮ್​ಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

1 / 5
ಗ್ರೂಪ್-ಬಿ ನಲ್ಲಿ ಕಾಣಿಸಿಕೊಂಡಿದ್ದ ಒಮಾನ್ ತಂಡವು ಆಡಿರುವ ಮೂರು ಪಂದ್ಯಗಳಲ್ಲೂ ಸೋಲನುಭವಿಸಿದೆ. ಈ ಸೋಲುಗಳೊಂದಿಗೆ ಒಮಾನ್ ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ತನ್ನ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದೊಂದಿಗೆ ಒಮಾನ್ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯವಾಗಲಿದೆ.

ಗ್ರೂಪ್-ಬಿ ನಲ್ಲಿ ಕಾಣಿಸಿಕೊಂಡಿದ್ದ ಒಮಾನ್ ತಂಡವು ಆಡಿರುವ ಮೂರು ಪಂದ್ಯಗಳಲ್ಲೂ ಸೋಲನುಭವಿಸಿದೆ. ಈ ಸೋಲುಗಳೊಂದಿಗೆ ಒಮಾನ್ ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ತನ್ನ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದೊಂದಿಗೆ ಒಮಾನ್ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯವಾಗಲಿದೆ.

2 / 5
ಮತ್ತೊಂದೆಡೆ ಗ್ರೂಪ್-ಡಿ ನಲ್ಲಿರುವ ಶ್ರೀಲಂಕಾ ತಂಡದ ವಿಶ್ವಕಪ್ ಅಭಿಯಾನ ಕೂಡ ಮುಂದಿನ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಲಂಕಾ ತಂಡವು ಆಡಿರುವ 3 ಪಂದ್ಯಗಳಲ್ಲಿ 2 ಸೋಲನುಭವಿಸಿದೆ. ಇನ್ನು ನೇಪಾಳ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದು, ಹೀಗಾಗಿ ಕೇವಲ 1 ಅಂಕ ಪಡೆದುಕೊಂಡಿದೆ. ಅತ್ತ ತಲಾ 2 ಅಂಕಗಳನ್ನು ಹೊಂದಿರುವ ಬಾಂಗ್ಲಾದೇಶ್ ಮತ್ತು ನೆದರ್​ಲೆಂಡ್ಸ್ ತಂಡಗಳು ಮುಂದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಈ ಮ್ಯಾಚ್​ನಲ್ಲಿ ಯಾವುದೇ ತಂಡ ಗೆದ್ದರೂ ಶ್ರೀಲಂಕಾ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

ಮತ್ತೊಂದೆಡೆ ಗ್ರೂಪ್-ಡಿ ನಲ್ಲಿರುವ ಶ್ರೀಲಂಕಾ ತಂಡದ ವಿಶ್ವಕಪ್ ಅಭಿಯಾನ ಕೂಡ ಮುಂದಿನ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಲಂಕಾ ತಂಡವು ಆಡಿರುವ 3 ಪಂದ್ಯಗಳಲ್ಲಿ 2 ಸೋಲನುಭವಿಸಿದೆ. ಇನ್ನು ನೇಪಾಳ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದು, ಹೀಗಾಗಿ ಕೇವಲ 1 ಅಂಕ ಪಡೆದುಕೊಂಡಿದೆ. ಅತ್ತ ತಲಾ 2 ಅಂಕಗಳನ್ನು ಹೊಂದಿರುವ ಬಾಂಗ್ಲಾದೇಶ್ ಮತ್ತು ನೆದರ್​ಲೆಂಡ್ಸ್ ತಂಡಗಳು ಮುಂದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಈ ಮ್ಯಾಚ್​ನಲ್ಲಿ ಯಾವುದೇ ತಂಡ ಗೆದ್ದರೂ ಶ್ರೀಲಂಕಾ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

3 / 5
ಗ್ರೂಪ್-ಡಿ ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿರುವ ಸೌತ್ ಆಫ್ರಿಕಾ ತಂಡ ಸೂಪರ್-8 ಹಂತಕ್ಕೇರಿದೆ. ಇನ್ನು ಸೌತ್ ಆಫ್ರಿಕಾ ತಂಡ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಲಿದ್ದು, ಈ ಮ್ಯಾಚ್​ನಲ್ಲಿ ಸೋತರೂ ಐಡೆನ್ ಮಾರ್ಕ್ರಾಮ್ ಪಡೆ ಮುಂದಿನ ಹಂತದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.

ಗ್ರೂಪ್-ಡಿ ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿರುವ ಸೌತ್ ಆಫ್ರಿಕಾ ತಂಡ ಸೂಪರ್-8 ಹಂತಕ್ಕೇರಿದೆ. ಇನ್ನು ಸೌತ್ ಆಫ್ರಿಕಾ ತಂಡ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಲಿದ್ದು, ಈ ಮ್ಯಾಚ್​ನಲ್ಲಿ ಸೋತರೂ ಐಡೆನ್ ಮಾರ್ಕ್ರಾಮ್ ಪಡೆ ಮುಂದಿನ ಹಂತದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.

4 / 5
ಗ್ರೂಪ್​-ಬಿ ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ ತಂಡ ಕೂಡ ಸೂಪರ್-8 ರಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ. ಆಡಿರುವ ಮೂರು ಮ್ಯಾಚ್​ಗಳಲ್ಲೂ ಆಸೀಸ್ ಪಡೆ ಜಯ ಸಾಧಿಸಿದ್ದು, ಈ ಮೂಲಕ ಸ್ಕಾಟ್ಲೆಂಡ್ ವಿರುದ್ಧದ ತನ್ನ ಕೊನೆಯ ಪಂದ್ಯಕ್ಕೂ ಮುನ್ನವೇ ಮುಂದಿನ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ.

ಗ್ರೂಪ್​-ಬಿ ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ ತಂಡ ಕೂಡ ಸೂಪರ್-8 ರಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ. ಆಡಿರುವ ಮೂರು ಮ್ಯಾಚ್​ಗಳಲ್ಲೂ ಆಸೀಸ್ ಪಡೆ ಜಯ ಸಾಧಿಸಿದ್ದು, ಈ ಮೂಲಕ ಸ್ಕಾಟ್ಲೆಂಡ್ ವಿರುದ್ಧದ ತನ್ನ ಕೊನೆಯ ಪಂದ್ಯಕ್ಕೂ ಮುನ್ನವೇ ಮುಂದಿನ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ.

5 / 5

Published On - 8:12 am, Wed, 12 June 24

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್