T20 World Cup 2024: ಟಿ20 ವಿಶ್ವಕಪ್​ನಿಂದ 2 ತಂಡಗಳು ಔಟ್

T20 World Cup 2024: ಟಿ20 ವಿಶ್ವಕಪ್​ನ 25ನೇ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಟೀಮ್ ಇಂಡಿಯಾ ಜಯಗಳಿಸಿದರೆ ಸೂಪರ್-8 ಹಂತಕ್ಕೇರುವುದು ಖಚಿತವಾಗಲಿದೆ. ಅತ್ತ 2 ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಯುಎಸ್​ಎ ತಂಡಕ್ಕೂ ಮುಂದಿನ ಹಂತಕ್ಕೇರಲು ಉತ್ತಮ ಅವಕಾಶವಿದೆ. ಹೀಗಾಗಿ ಬುಧವಾರ ನಡೆಯಲಿರುವ ಪಂದ್ಯದಲ್ಲಿ ಉತ್ತಮ ಪೈಪೋಟಿ ನಿರೀಕ್ಷಿಸಬಹುದು.

|

Updated on:Jun 12, 2024 | 8:14 AM

T20 World Cup 2024: 20 ವಿಶ್ವಕಪ್​​ನ 24 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಸೂಪರ್-8 ಹಂತಕ್ಕೇರಿದರೆ, ಮತ್ತೆರಡು ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ಲೀಗ್ ಹಂತದ ಪಂದ್ಯಗಳ ಮುಕ್ತಾಯಕ್ಕೂ ಮುನ್ನ ಟಿ20 ವಿಶ್ವಕಪ್​ನಿಂದ ಹೊರಬಿದ್ದ ತಂಡಗಳಾವುವು, ಮುಂದಿನ ಹಂತಕ್ಕೇರಿದ ಟೀಮ್​ಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

T20 World Cup 2024: 20 ವಿಶ್ವಕಪ್​​ನ 24 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಸೂಪರ್-8 ಹಂತಕ್ಕೇರಿದರೆ, ಮತ್ತೆರಡು ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ಲೀಗ್ ಹಂತದ ಪಂದ್ಯಗಳ ಮುಕ್ತಾಯಕ್ಕೂ ಮುನ್ನ ಟಿ20 ವಿಶ್ವಕಪ್​ನಿಂದ ಹೊರಬಿದ್ದ ತಂಡಗಳಾವುವು, ಮುಂದಿನ ಹಂತಕ್ಕೇರಿದ ಟೀಮ್​ಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

1 / 5
ಗ್ರೂಪ್-ಬಿ ನಲ್ಲಿ ಕಾಣಿಸಿಕೊಂಡಿದ್ದ ಒಮಾನ್ ತಂಡವು ಆಡಿರುವ ಮೂರು ಪಂದ್ಯಗಳಲ್ಲೂ ಸೋಲನುಭವಿಸಿದೆ. ಈ ಸೋಲುಗಳೊಂದಿಗೆ ಒಮಾನ್ ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ತನ್ನ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದೊಂದಿಗೆ ಒಮಾನ್ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯವಾಗಲಿದೆ.

ಗ್ರೂಪ್-ಬಿ ನಲ್ಲಿ ಕಾಣಿಸಿಕೊಂಡಿದ್ದ ಒಮಾನ್ ತಂಡವು ಆಡಿರುವ ಮೂರು ಪಂದ್ಯಗಳಲ್ಲೂ ಸೋಲನುಭವಿಸಿದೆ. ಈ ಸೋಲುಗಳೊಂದಿಗೆ ಒಮಾನ್ ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ತನ್ನ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದೊಂದಿಗೆ ಒಮಾನ್ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯವಾಗಲಿದೆ.

2 / 5
ಮತ್ತೊಂದೆಡೆ ಗ್ರೂಪ್-ಡಿ ನಲ್ಲಿರುವ ಶ್ರೀಲಂಕಾ ತಂಡದ ವಿಶ್ವಕಪ್ ಅಭಿಯಾನ ಕೂಡ ಮುಂದಿನ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಲಂಕಾ ತಂಡವು ಆಡಿರುವ 3 ಪಂದ್ಯಗಳಲ್ಲಿ 2 ಸೋಲನುಭವಿಸಿದೆ. ಇನ್ನು ನೇಪಾಳ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದು, ಹೀಗಾಗಿ ಕೇವಲ 1 ಅಂಕ ಪಡೆದುಕೊಂಡಿದೆ. ಅತ್ತ ತಲಾ 2 ಅಂಕಗಳನ್ನು ಹೊಂದಿರುವ ಬಾಂಗ್ಲಾದೇಶ್ ಮತ್ತು ನೆದರ್​ಲೆಂಡ್ಸ್ ತಂಡಗಳು ಮುಂದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಈ ಮ್ಯಾಚ್​ನಲ್ಲಿ ಯಾವುದೇ ತಂಡ ಗೆದ್ದರೂ ಶ್ರೀಲಂಕಾ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

ಮತ್ತೊಂದೆಡೆ ಗ್ರೂಪ್-ಡಿ ನಲ್ಲಿರುವ ಶ್ರೀಲಂಕಾ ತಂಡದ ವಿಶ್ವಕಪ್ ಅಭಿಯಾನ ಕೂಡ ಮುಂದಿನ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಲಂಕಾ ತಂಡವು ಆಡಿರುವ 3 ಪಂದ್ಯಗಳಲ್ಲಿ 2 ಸೋಲನುಭವಿಸಿದೆ. ಇನ್ನು ನೇಪಾಳ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದು, ಹೀಗಾಗಿ ಕೇವಲ 1 ಅಂಕ ಪಡೆದುಕೊಂಡಿದೆ. ಅತ್ತ ತಲಾ 2 ಅಂಕಗಳನ್ನು ಹೊಂದಿರುವ ಬಾಂಗ್ಲಾದೇಶ್ ಮತ್ತು ನೆದರ್​ಲೆಂಡ್ಸ್ ತಂಡಗಳು ಮುಂದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಈ ಮ್ಯಾಚ್​ನಲ್ಲಿ ಯಾವುದೇ ತಂಡ ಗೆದ್ದರೂ ಶ್ರೀಲಂಕಾ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

3 / 5
ಗ್ರೂಪ್-ಡಿ ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿರುವ ಸೌತ್ ಆಫ್ರಿಕಾ ತಂಡ ಸೂಪರ್-8 ಹಂತಕ್ಕೇರಿದೆ. ಇನ್ನು ಸೌತ್ ಆಫ್ರಿಕಾ ತಂಡ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಲಿದ್ದು, ಈ ಮ್ಯಾಚ್​ನಲ್ಲಿ ಸೋತರೂ ಐಡೆನ್ ಮಾರ್ಕ್ರಾಮ್ ಪಡೆ ಮುಂದಿನ ಹಂತದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.

ಗ್ರೂಪ್-ಡಿ ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿರುವ ಸೌತ್ ಆಫ್ರಿಕಾ ತಂಡ ಸೂಪರ್-8 ಹಂತಕ್ಕೇರಿದೆ. ಇನ್ನು ಸೌತ್ ಆಫ್ರಿಕಾ ತಂಡ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಲಿದ್ದು, ಈ ಮ್ಯಾಚ್​ನಲ್ಲಿ ಸೋತರೂ ಐಡೆನ್ ಮಾರ್ಕ್ರಾಮ್ ಪಡೆ ಮುಂದಿನ ಹಂತದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.

4 / 5
ಗ್ರೂಪ್​-ಬಿ ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ ತಂಡ ಕೂಡ ಸೂಪರ್-8 ರಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ. ಆಡಿರುವ ಮೂರು ಮ್ಯಾಚ್​ಗಳಲ್ಲೂ ಆಸೀಸ್ ಪಡೆ ಜಯ ಸಾಧಿಸಿದ್ದು, ಈ ಮೂಲಕ ಸ್ಕಾಟ್ಲೆಂಡ್ ವಿರುದ್ಧದ ತನ್ನ ಕೊನೆಯ ಪಂದ್ಯಕ್ಕೂ ಮುನ್ನವೇ ಮುಂದಿನ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ.

ಗ್ರೂಪ್​-ಬಿ ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ ತಂಡ ಕೂಡ ಸೂಪರ್-8 ರಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ. ಆಡಿರುವ ಮೂರು ಮ್ಯಾಚ್​ಗಳಲ್ಲೂ ಆಸೀಸ್ ಪಡೆ ಜಯ ಸಾಧಿಸಿದ್ದು, ಈ ಮೂಲಕ ಸ್ಕಾಟ್ಲೆಂಡ್ ವಿರುದ್ಧದ ತನ್ನ ಕೊನೆಯ ಪಂದ್ಯಕ್ಕೂ ಮುನ್ನವೇ ಮುಂದಿನ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ.

5 / 5

Published On - 8:12 am, Wed, 12 June 24

Follow us
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್