AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಸೂಪರ್-8 ಹಂತಕ್ಕೇರಲು ಪಾಕಿಸ್ತಾನ್ ತಂಡಕ್ಕೆ ಇನ್ನೂ ಇದೆ ಚಾನ್ಸ್​

T20 World Cup 2024: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯುತ್ತಿದೆ. ಈ ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ಗ್ರೂಪ್​ಗಳಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಸೂಪರ್-8 ಹಂತಕ್ಕೇರಲಿದೆ. ಅದರಂತೆ ಇದೀಗ ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಭಾರತ ಅಗ್ರಸ್ಥಾನದಲ್ಲಿದ್ದರೆ, ಯುಎಸ್​ಎ ತಂಡ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಪಾಕಿಸ್ತಾನ್ ತಂಡ 4ನೇ ಸ್ಥಾನದಲ್ಲಿದೆ.

ಝಾಹಿರ್ ಯೂಸುಫ್
|

Updated on:Jun 10, 2024 | 11:05 AM

Share
T20 World Cup 2024: ಈ ಬಾರಿಯ ವಿಶ್ವಕಪ್​ನಲ್ಲಿ ಕಪ್ ಗೆದ್ದೇ ಗೆಲ್ಲುತ್ತೇವೆ ಎಂಬ ಧ್ಯೇಯ ವಾಕ್ಯದೊಂದಿಗೆ ಆಗಮಿಸಿದ ಪಾಕಿಸ್ತಾನ್ (Pakistan) ತಂಡ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಹೀನಾಯವಾಗಿ ಸೋತಿದ್ದ ಪಾಕ್ ಪಡೆ ಇದೀಗ ಭಾರತದ ವಿರುದ್ಧ ಕೂಡ ಮಂಡಿಯೂರಿದೆ.

T20 World Cup 2024: ಈ ಬಾರಿಯ ವಿಶ್ವಕಪ್​ನಲ್ಲಿ ಕಪ್ ಗೆದ್ದೇ ಗೆಲ್ಲುತ್ತೇವೆ ಎಂಬ ಧ್ಯೇಯ ವಾಕ್ಯದೊಂದಿಗೆ ಆಗಮಿಸಿದ ಪಾಕಿಸ್ತಾನ್ (Pakistan) ತಂಡ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಹೀನಾಯವಾಗಿ ಸೋತಿದ್ದ ಪಾಕ್ ಪಡೆ ಇದೀಗ ಭಾರತದ ವಿರುದ್ಧ ಕೂಡ ಮಂಡಿಯೂರಿದೆ.

1 / 6
ಈ ಎರಡು ಸೋಲುಗಳೊಂದಿಗೆ ಸೂಪರ್-8 ಹಂತಕ್ಕೇರುವ ಪಾಕಿಸ್ತಾನ್ ತಂಡದ ಹಾದಿ ಮತ್ತಷ್ಟು ಕ್ಲಿಷ್ಟಕರವಾಗಿದೆ. ಇದಾಗ್ಯೂ ಟಿ20 ವಿಶ್ವಕಪ್​ನಿಂದ ಹೊರಬಿದ್ದಿಲ್ಲ. ಅಂದರೆ ಪಾಕ್ ತಂಡಕ್ಕೆ ಇನ್ನೂ ಎರಡು ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಪಾಕಿಸ್ತಾನ್ ತಂಡ ಗೆಲ್ಲಲೇಬೇಕು.

ಈ ಎರಡು ಸೋಲುಗಳೊಂದಿಗೆ ಸೂಪರ್-8 ಹಂತಕ್ಕೇರುವ ಪಾಕಿಸ್ತಾನ್ ತಂಡದ ಹಾದಿ ಮತ್ತಷ್ಟು ಕ್ಲಿಷ್ಟಕರವಾಗಿದೆ. ಇದಾಗ್ಯೂ ಟಿ20 ವಿಶ್ವಕಪ್​ನಿಂದ ಹೊರಬಿದ್ದಿಲ್ಲ. ಅಂದರೆ ಪಾಕ್ ತಂಡಕ್ಕೆ ಇನ್ನೂ ಎರಡು ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಪಾಕಿಸ್ತಾನ್ ತಂಡ ಗೆಲ್ಲಲೇಬೇಕು.

2 / 6
ಆದರೆ ಈ ಮ್ಯಾಚ್​ಗಳಲ್ಲಿ ಗೆದ್ದರೆ ಮಾತ್ರ ಸಾಲಲ್ಲ. ಬದಲಾಗಿ ಉಳಿದ ತಂಡಗಳ ಫಲಿತಾಂಶವನ್ನು ಸಹ ಎದುರು ನೋಡಬೇಕು. ಅಂದರೆ ಮುಂದಿನ ಪಂದ್ಯಗಳಲ್ಲಿ ಯುಎಸ್​ಎ ತಂಡ ಗೆಲ್ಲಬಾರದು. ಒಂದು ವೇಳೆ ಯುಎಸ್​ಎ ಹಾಗೂ ಭಾರತ ಮುಂದಿನ ಪಂದ್ಯಗಳಲ್ಲಿ ಒಂದು ಜಯ ಸಾಧಿಸಿದರೆ ಪಾಕಿಸ್ತಾನ್ ತಂಡ ಅಧಿಕೃತವಾಗಿ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

ಆದರೆ ಈ ಮ್ಯಾಚ್​ಗಳಲ್ಲಿ ಗೆದ್ದರೆ ಮಾತ್ರ ಸಾಲಲ್ಲ. ಬದಲಾಗಿ ಉಳಿದ ತಂಡಗಳ ಫಲಿತಾಂಶವನ್ನು ಸಹ ಎದುರು ನೋಡಬೇಕು. ಅಂದರೆ ಮುಂದಿನ ಪಂದ್ಯಗಳಲ್ಲಿ ಯುಎಸ್​ಎ ತಂಡ ಗೆಲ್ಲಬಾರದು. ಒಂದು ವೇಳೆ ಯುಎಸ್​ಎ ಹಾಗೂ ಭಾರತ ಮುಂದಿನ ಪಂದ್ಯಗಳಲ್ಲಿ ಒಂದು ಜಯ ಸಾಧಿಸಿದರೆ ಪಾಕಿಸ್ತಾನ್ ತಂಡ ಅಧಿಕೃತವಾಗಿ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

3 / 6
ಭಾರತ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ ಸೂಪರ್-8 ಹಂತಕ್ಕೇರಲಿದೆ. ಇನ್ನು ಯುಎಸ್​ಎ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದು, ಈ ಮ್ಯಾಚ್​​ನಲ್ಲಿ ಸೋತರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೂಪರ್-8 ಹಂತಕ್ಕೇರಲು ಅವಕಾಶ ಇರಲಿದೆ.

ಭಾರತ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ ಸೂಪರ್-8 ಹಂತಕ್ಕೇರಲಿದೆ. ಇನ್ನು ಯುಎಸ್​ಎ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದು, ಈ ಮ್ಯಾಚ್​​ನಲ್ಲಿ ಸೋತರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೂಪರ್-8 ಹಂತಕ್ಕೇರಲು ಅವಕಾಶ ಇರಲಿದೆ.

4 / 6
ಅಂದರೆ ಇಲ್ಲಿ ಐರ್ಲೆಂಡ್ ವಿರುದ್ಧ ಯುಎಸ್​ಎ ತಂಡ ಸೋತರೆ ಮಾತ್ರ ಪಾಕ್​ ತಂಡಕ್ಕೆ ಅವಕಾಶ ಇರಲಿದೆ. ಅದರಂತೆ ಕೆನಡಾ ಮತ್ತು ಐರ್ಲೆಂಡ್ ವಿರುದ್ಧದ ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡವು ಭರ್ಜರಿ ಜಯ ಸಾಧಿಸುವ ಮೂಲಕ 4 ಅಂಕಗಳೊಂದಿಗೆ ಉತ್ತಮ ನೆಟ್ ರನ್ ರೇಟ್​ ನೆರವಿನಿಂದ ಸೂಪರ್-8 ಹಂತಕ್ಕೇರಬಹುದು.

ಅಂದರೆ ಇಲ್ಲಿ ಐರ್ಲೆಂಡ್ ವಿರುದ್ಧ ಯುಎಸ್​ಎ ತಂಡ ಸೋತರೆ ಮಾತ್ರ ಪಾಕ್​ ತಂಡಕ್ಕೆ ಅವಕಾಶ ಇರಲಿದೆ. ಅದರಂತೆ ಕೆನಡಾ ಮತ್ತು ಐರ್ಲೆಂಡ್ ವಿರುದ್ಧದ ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡವು ಭರ್ಜರಿ ಜಯ ಸಾಧಿಸುವ ಮೂಲಕ 4 ಅಂಕಗಳೊಂದಿಗೆ ಉತ್ತಮ ನೆಟ್ ರನ್ ರೇಟ್​ ನೆರವಿನಿಂದ ಸೂಪರ್-8 ಹಂತಕ್ಕೇರಬಹುದು.

5 / 6
ಹೀಗಾಗಿ ಪಾಕಿಸ್ತಾನ್ ತಂಡದ ಟಿ20 ವಿಶ್ವಕಪ್ ಭವಿಷ್ಯ ಈಗ ಯುಎಸ್​ಎ ತಂಡದ ಕೈಯಲ್ಲಿದೆ ಎನ್ನಬಹುದು. ಏಕೆಂದರೆ ಭಾರತ ತಂಡ ಯುಎಸ್​​ಎ ವಿರುದ್ಧ ಜಯ ಸಾಧಿಸುವುದು ಬಹುತೇಕ ಖಚಿತ. ಇನ್ನು ಐರ್ಲೆಂಡ್ ಮತ್ತು ಯುಎಸ್​ಎ ನಡುವಣ ಪಂದ್ಯದಲ್ಲಿ ಐರ್ಲೆಂಡ್ ಗೆಲುವು ದಾಖಲಿಸಿದರೆ, ಮಾತ್ರ ಪಾಕಿಸ್ತಾನ್ ತಂಡಕ್ಕೆ ಮುಂದಿನ ಹಂತಕ್ಕೇರಲು ಅವಕಾಶ ಇರಲಿದೆ. ಹೀಗಾಗಿ ಜೂನ್ 14 ರಂದು ಪಾಕ್ ತಂಡದ ಟಿ20 ವಿಶ್ವಕಪ್​ ಭವಿಷ್ಯ ನಿರ್ಧಾರವಾಗಲಿದೆ ಎನ್ನಬಹುದು.

ಹೀಗಾಗಿ ಪಾಕಿಸ್ತಾನ್ ತಂಡದ ಟಿ20 ವಿಶ್ವಕಪ್ ಭವಿಷ್ಯ ಈಗ ಯುಎಸ್​ಎ ತಂಡದ ಕೈಯಲ್ಲಿದೆ ಎನ್ನಬಹುದು. ಏಕೆಂದರೆ ಭಾರತ ತಂಡ ಯುಎಸ್​​ಎ ವಿರುದ್ಧ ಜಯ ಸಾಧಿಸುವುದು ಬಹುತೇಕ ಖಚಿತ. ಇನ್ನು ಐರ್ಲೆಂಡ್ ಮತ್ತು ಯುಎಸ್​ಎ ನಡುವಣ ಪಂದ್ಯದಲ್ಲಿ ಐರ್ಲೆಂಡ್ ಗೆಲುವು ದಾಖಲಿಸಿದರೆ, ಮಾತ್ರ ಪಾಕಿಸ್ತಾನ್ ತಂಡಕ್ಕೆ ಮುಂದಿನ ಹಂತಕ್ಕೇರಲು ಅವಕಾಶ ಇರಲಿದೆ. ಹೀಗಾಗಿ ಜೂನ್ 14 ರಂದು ಪಾಕ್ ತಂಡದ ಟಿ20 ವಿಶ್ವಕಪ್​ ಭವಿಷ್ಯ ನಿರ್ಧಾರವಾಗಲಿದೆ ಎನ್ನಬಹುದು.

6 / 6

Published On - 11:04 am, Mon, 10 June 24

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್