T20 World Cup 2024: ಸೂಪರ್-8 ಹಂತಕ್ಕೇರಲು ಪಾಕಿಸ್ತಾನ್ ತಂಡಕ್ಕೆ ಇನ್ನೂ ಇದೆ ಚಾನ್ಸ್​

T20 World Cup 2024: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯುತ್ತಿದೆ. ಈ ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ಗ್ರೂಪ್​ಗಳಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಸೂಪರ್-8 ಹಂತಕ್ಕೇರಲಿದೆ. ಅದರಂತೆ ಇದೀಗ ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಭಾರತ ಅಗ್ರಸ್ಥಾನದಲ್ಲಿದ್ದರೆ, ಯುಎಸ್​ಎ ತಂಡ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಪಾಕಿಸ್ತಾನ್ ತಂಡ 4ನೇ ಸ್ಥಾನದಲ್ಲಿದೆ.

|

Updated on:Jun 10, 2024 | 11:05 AM

T20 World Cup 2024: ಈ ಬಾರಿಯ ವಿಶ್ವಕಪ್​ನಲ್ಲಿ ಕಪ್ ಗೆದ್ದೇ ಗೆಲ್ಲುತ್ತೇವೆ ಎಂಬ ಧ್ಯೇಯ ವಾಕ್ಯದೊಂದಿಗೆ ಆಗಮಿಸಿದ ಪಾಕಿಸ್ತಾನ್ (Pakistan) ತಂಡ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಹೀನಾಯವಾಗಿ ಸೋತಿದ್ದ ಪಾಕ್ ಪಡೆ ಇದೀಗ ಭಾರತದ ವಿರುದ್ಧ ಕೂಡ ಮಂಡಿಯೂರಿದೆ.

T20 World Cup 2024: ಈ ಬಾರಿಯ ವಿಶ್ವಕಪ್​ನಲ್ಲಿ ಕಪ್ ಗೆದ್ದೇ ಗೆಲ್ಲುತ್ತೇವೆ ಎಂಬ ಧ್ಯೇಯ ವಾಕ್ಯದೊಂದಿಗೆ ಆಗಮಿಸಿದ ಪಾಕಿಸ್ತಾನ್ (Pakistan) ತಂಡ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಹೀನಾಯವಾಗಿ ಸೋತಿದ್ದ ಪಾಕ್ ಪಡೆ ಇದೀಗ ಭಾರತದ ವಿರುದ್ಧ ಕೂಡ ಮಂಡಿಯೂರಿದೆ.

1 / 6
ಈ ಎರಡು ಸೋಲುಗಳೊಂದಿಗೆ ಸೂಪರ್-8 ಹಂತಕ್ಕೇರುವ ಪಾಕಿಸ್ತಾನ್ ತಂಡದ ಹಾದಿ ಮತ್ತಷ್ಟು ಕ್ಲಿಷ್ಟಕರವಾಗಿದೆ. ಇದಾಗ್ಯೂ ಟಿ20 ವಿಶ್ವಕಪ್​ನಿಂದ ಹೊರಬಿದ್ದಿಲ್ಲ. ಅಂದರೆ ಪಾಕ್ ತಂಡಕ್ಕೆ ಇನ್ನೂ ಎರಡು ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಪಾಕಿಸ್ತಾನ್ ತಂಡ ಗೆಲ್ಲಲೇಬೇಕು.

ಈ ಎರಡು ಸೋಲುಗಳೊಂದಿಗೆ ಸೂಪರ್-8 ಹಂತಕ್ಕೇರುವ ಪಾಕಿಸ್ತಾನ್ ತಂಡದ ಹಾದಿ ಮತ್ತಷ್ಟು ಕ್ಲಿಷ್ಟಕರವಾಗಿದೆ. ಇದಾಗ್ಯೂ ಟಿ20 ವಿಶ್ವಕಪ್​ನಿಂದ ಹೊರಬಿದ್ದಿಲ್ಲ. ಅಂದರೆ ಪಾಕ್ ತಂಡಕ್ಕೆ ಇನ್ನೂ ಎರಡು ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಪಾಕಿಸ್ತಾನ್ ತಂಡ ಗೆಲ್ಲಲೇಬೇಕು.

2 / 6
ಆದರೆ ಈ ಮ್ಯಾಚ್​ಗಳಲ್ಲಿ ಗೆದ್ದರೆ ಮಾತ್ರ ಸಾಲಲ್ಲ. ಬದಲಾಗಿ ಉಳಿದ ತಂಡಗಳ ಫಲಿತಾಂಶವನ್ನು ಸಹ ಎದುರು ನೋಡಬೇಕು. ಅಂದರೆ ಮುಂದಿನ ಪಂದ್ಯಗಳಲ್ಲಿ ಯುಎಸ್​ಎ ತಂಡ ಗೆಲ್ಲಬಾರದು. ಒಂದು ವೇಳೆ ಯುಎಸ್​ಎ ಹಾಗೂ ಭಾರತ ಮುಂದಿನ ಪಂದ್ಯಗಳಲ್ಲಿ ಒಂದು ಜಯ ಸಾಧಿಸಿದರೆ ಪಾಕಿಸ್ತಾನ್ ತಂಡ ಅಧಿಕೃತವಾಗಿ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

ಆದರೆ ಈ ಮ್ಯಾಚ್​ಗಳಲ್ಲಿ ಗೆದ್ದರೆ ಮಾತ್ರ ಸಾಲಲ್ಲ. ಬದಲಾಗಿ ಉಳಿದ ತಂಡಗಳ ಫಲಿತಾಂಶವನ್ನು ಸಹ ಎದುರು ನೋಡಬೇಕು. ಅಂದರೆ ಮುಂದಿನ ಪಂದ್ಯಗಳಲ್ಲಿ ಯುಎಸ್​ಎ ತಂಡ ಗೆಲ್ಲಬಾರದು. ಒಂದು ವೇಳೆ ಯುಎಸ್​ಎ ಹಾಗೂ ಭಾರತ ಮುಂದಿನ ಪಂದ್ಯಗಳಲ್ಲಿ ಒಂದು ಜಯ ಸಾಧಿಸಿದರೆ ಪಾಕಿಸ್ತಾನ್ ತಂಡ ಅಧಿಕೃತವಾಗಿ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

3 / 6
ಭಾರತ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ ಸೂಪರ್-8 ಹಂತಕ್ಕೇರಲಿದೆ. ಇನ್ನು ಯುಎಸ್​ಎ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದು, ಈ ಮ್ಯಾಚ್​​ನಲ್ಲಿ ಸೋತರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೂಪರ್-8 ಹಂತಕ್ಕೇರಲು ಅವಕಾಶ ಇರಲಿದೆ.

ಭಾರತ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ ಸೂಪರ್-8 ಹಂತಕ್ಕೇರಲಿದೆ. ಇನ್ನು ಯುಎಸ್​ಎ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದು, ಈ ಮ್ಯಾಚ್​​ನಲ್ಲಿ ಸೋತರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೂಪರ್-8 ಹಂತಕ್ಕೇರಲು ಅವಕಾಶ ಇರಲಿದೆ.

4 / 6
ಅಂದರೆ ಇಲ್ಲಿ ಐರ್ಲೆಂಡ್ ವಿರುದ್ಧ ಯುಎಸ್​ಎ ತಂಡ ಸೋತರೆ ಮಾತ್ರ ಪಾಕ್​ ತಂಡಕ್ಕೆ ಅವಕಾಶ ಇರಲಿದೆ. ಅದರಂತೆ ಕೆನಡಾ ಮತ್ತು ಐರ್ಲೆಂಡ್ ವಿರುದ್ಧದ ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡವು ಭರ್ಜರಿ ಜಯ ಸಾಧಿಸುವ ಮೂಲಕ 4 ಅಂಕಗಳೊಂದಿಗೆ ಉತ್ತಮ ನೆಟ್ ರನ್ ರೇಟ್​ ನೆರವಿನಿಂದ ಸೂಪರ್-8 ಹಂತಕ್ಕೇರಬಹುದು.

ಅಂದರೆ ಇಲ್ಲಿ ಐರ್ಲೆಂಡ್ ವಿರುದ್ಧ ಯುಎಸ್​ಎ ತಂಡ ಸೋತರೆ ಮಾತ್ರ ಪಾಕ್​ ತಂಡಕ್ಕೆ ಅವಕಾಶ ಇರಲಿದೆ. ಅದರಂತೆ ಕೆನಡಾ ಮತ್ತು ಐರ್ಲೆಂಡ್ ವಿರುದ್ಧದ ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡವು ಭರ್ಜರಿ ಜಯ ಸಾಧಿಸುವ ಮೂಲಕ 4 ಅಂಕಗಳೊಂದಿಗೆ ಉತ್ತಮ ನೆಟ್ ರನ್ ರೇಟ್​ ನೆರವಿನಿಂದ ಸೂಪರ್-8 ಹಂತಕ್ಕೇರಬಹುದು.

5 / 6
ಹೀಗಾಗಿ ಪಾಕಿಸ್ತಾನ್ ತಂಡದ ಟಿ20 ವಿಶ್ವಕಪ್ ಭವಿಷ್ಯ ಈಗ ಯುಎಸ್​ಎ ತಂಡದ ಕೈಯಲ್ಲಿದೆ ಎನ್ನಬಹುದು. ಏಕೆಂದರೆ ಭಾರತ ತಂಡ ಯುಎಸ್​​ಎ ವಿರುದ್ಧ ಜಯ ಸಾಧಿಸುವುದು ಬಹುತೇಕ ಖಚಿತ. ಇನ್ನು ಐರ್ಲೆಂಡ್ ಮತ್ತು ಯುಎಸ್​ಎ ನಡುವಣ ಪಂದ್ಯದಲ್ಲಿ ಐರ್ಲೆಂಡ್ ಗೆಲುವು ದಾಖಲಿಸಿದರೆ, ಮಾತ್ರ ಪಾಕಿಸ್ತಾನ್ ತಂಡಕ್ಕೆ ಮುಂದಿನ ಹಂತಕ್ಕೇರಲು ಅವಕಾಶ ಇರಲಿದೆ. ಹೀಗಾಗಿ ಜೂನ್ 14 ರಂದು ಪಾಕ್ ತಂಡದ ಟಿ20 ವಿಶ್ವಕಪ್​ ಭವಿಷ್ಯ ನಿರ್ಧಾರವಾಗಲಿದೆ ಎನ್ನಬಹುದು.

ಹೀಗಾಗಿ ಪಾಕಿಸ್ತಾನ್ ತಂಡದ ಟಿ20 ವಿಶ್ವಕಪ್ ಭವಿಷ್ಯ ಈಗ ಯುಎಸ್​ಎ ತಂಡದ ಕೈಯಲ್ಲಿದೆ ಎನ್ನಬಹುದು. ಏಕೆಂದರೆ ಭಾರತ ತಂಡ ಯುಎಸ್​​ಎ ವಿರುದ್ಧ ಜಯ ಸಾಧಿಸುವುದು ಬಹುತೇಕ ಖಚಿತ. ಇನ್ನು ಐರ್ಲೆಂಡ್ ಮತ್ತು ಯುಎಸ್​ಎ ನಡುವಣ ಪಂದ್ಯದಲ್ಲಿ ಐರ್ಲೆಂಡ್ ಗೆಲುವು ದಾಖಲಿಸಿದರೆ, ಮಾತ್ರ ಪಾಕಿಸ್ತಾನ್ ತಂಡಕ್ಕೆ ಮುಂದಿನ ಹಂತಕ್ಕೇರಲು ಅವಕಾಶ ಇರಲಿದೆ. ಹೀಗಾಗಿ ಜೂನ್ 14 ರಂದು ಪಾಕ್ ತಂಡದ ಟಿ20 ವಿಶ್ವಕಪ್​ ಭವಿಷ್ಯ ನಿರ್ಧಾರವಾಗಲಿದೆ ಎನ್ನಬಹುದು.

6 / 6

Published On - 11:04 am, Mon, 10 June 24

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್