AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಸೂಪರ್-8 ಹಂತಕ್ಕೇರಲು ಪಾಕಿಸ್ತಾನ್ ತಂಡಕ್ಕೆ ಇನ್ನೂ ಇದೆ ಚಾನ್ಸ್​

T20 World Cup 2024: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯುತ್ತಿದೆ. ಈ ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ಗ್ರೂಪ್​ಗಳಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಸೂಪರ್-8 ಹಂತಕ್ಕೇರಲಿದೆ. ಅದರಂತೆ ಇದೀಗ ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಭಾರತ ಅಗ್ರಸ್ಥಾನದಲ್ಲಿದ್ದರೆ, ಯುಎಸ್​ಎ ತಂಡ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಪಾಕಿಸ್ತಾನ್ ತಂಡ 4ನೇ ಸ್ಥಾನದಲ್ಲಿದೆ.

ಝಾಹಿರ್ ಯೂಸುಫ್
|

Updated on:Jun 10, 2024 | 11:05 AM

Share
T20 World Cup 2024: ಈ ಬಾರಿಯ ವಿಶ್ವಕಪ್​ನಲ್ಲಿ ಕಪ್ ಗೆದ್ದೇ ಗೆಲ್ಲುತ್ತೇವೆ ಎಂಬ ಧ್ಯೇಯ ವಾಕ್ಯದೊಂದಿಗೆ ಆಗಮಿಸಿದ ಪಾಕಿಸ್ತಾನ್ (Pakistan) ತಂಡ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಹೀನಾಯವಾಗಿ ಸೋತಿದ್ದ ಪಾಕ್ ಪಡೆ ಇದೀಗ ಭಾರತದ ವಿರುದ್ಧ ಕೂಡ ಮಂಡಿಯೂರಿದೆ.

T20 World Cup 2024: ಈ ಬಾರಿಯ ವಿಶ್ವಕಪ್​ನಲ್ಲಿ ಕಪ್ ಗೆದ್ದೇ ಗೆಲ್ಲುತ್ತೇವೆ ಎಂಬ ಧ್ಯೇಯ ವಾಕ್ಯದೊಂದಿಗೆ ಆಗಮಿಸಿದ ಪಾಕಿಸ್ತಾನ್ (Pakistan) ತಂಡ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಹೀನಾಯವಾಗಿ ಸೋತಿದ್ದ ಪಾಕ್ ಪಡೆ ಇದೀಗ ಭಾರತದ ವಿರುದ್ಧ ಕೂಡ ಮಂಡಿಯೂರಿದೆ.

1 / 6
ಈ ಎರಡು ಸೋಲುಗಳೊಂದಿಗೆ ಸೂಪರ್-8 ಹಂತಕ್ಕೇರುವ ಪಾಕಿಸ್ತಾನ್ ತಂಡದ ಹಾದಿ ಮತ್ತಷ್ಟು ಕ್ಲಿಷ್ಟಕರವಾಗಿದೆ. ಇದಾಗ್ಯೂ ಟಿ20 ವಿಶ್ವಕಪ್​ನಿಂದ ಹೊರಬಿದ್ದಿಲ್ಲ. ಅಂದರೆ ಪಾಕ್ ತಂಡಕ್ಕೆ ಇನ್ನೂ ಎರಡು ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಪಾಕಿಸ್ತಾನ್ ತಂಡ ಗೆಲ್ಲಲೇಬೇಕು.

ಈ ಎರಡು ಸೋಲುಗಳೊಂದಿಗೆ ಸೂಪರ್-8 ಹಂತಕ್ಕೇರುವ ಪಾಕಿಸ್ತಾನ್ ತಂಡದ ಹಾದಿ ಮತ್ತಷ್ಟು ಕ್ಲಿಷ್ಟಕರವಾಗಿದೆ. ಇದಾಗ್ಯೂ ಟಿ20 ವಿಶ್ವಕಪ್​ನಿಂದ ಹೊರಬಿದ್ದಿಲ್ಲ. ಅಂದರೆ ಪಾಕ್ ತಂಡಕ್ಕೆ ಇನ್ನೂ ಎರಡು ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಪಾಕಿಸ್ತಾನ್ ತಂಡ ಗೆಲ್ಲಲೇಬೇಕು.

2 / 6
ಆದರೆ ಈ ಮ್ಯಾಚ್​ಗಳಲ್ಲಿ ಗೆದ್ದರೆ ಮಾತ್ರ ಸಾಲಲ್ಲ. ಬದಲಾಗಿ ಉಳಿದ ತಂಡಗಳ ಫಲಿತಾಂಶವನ್ನು ಸಹ ಎದುರು ನೋಡಬೇಕು. ಅಂದರೆ ಮುಂದಿನ ಪಂದ್ಯಗಳಲ್ಲಿ ಯುಎಸ್​ಎ ತಂಡ ಗೆಲ್ಲಬಾರದು. ಒಂದು ವೇಳೆ ಯುಎಸ್​ಎ ಹಾಗೂ ಭಾರತ ಮುಂದಿನ ಪಂದ್ಯಗಳಲ್ಲಿ ಒಂದು ಜಯ ಸಾಧಿಸಿದರೆ ಪಾಕಿಸ್ತಾನ್ ತಂಡ ಅಧಿಕೃತವಾಗಿ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

ಆದರೆ ಈ ಮ್ಯಾಚ್​ಗಳಲ್ಲಿ ಗೆದ್ದರೆ ಮಾತ್ರ ಸಾಲಲ್ಲ. ಬದಲಾಗಿ ಉಳಿದ ತಂಡಗಳ ಫಲಿತಾಂಶವನ್ನು ಸಹ ಎದುರು ನೋಡಬೇಕು. ಅಂದರೆ ಮುಂದಿನ ಪಂದ್ಯಗಳಲ್ಲಿ ಯುಎಸ್​ಎ ತಂಡ ಗೆಲ್ಲಬಾರದು. ಒಂದು ವೇಳೆ ಯುಎಸ್​ಎ ಹಾಗೂ ಭಾರತ ಮುಂದಿನ ಪಂದ್ಯಗಳಲ್ಲಿ ಒಂದು ಜಯ ಸಾಧಿಸಿದರೆ ಪಾಕಿಸ್ತಾನ್ ತಂಡ ಅಧಿಕೃತವಾಗಿ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

3 / 6
ಭಾರತ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ ಸೂಪರ್-8 ಹಂತಕ್ಕೇರಲಿದೆ. ಇನ್ನು ಯುಎಸ್​ಎ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದು, ಈ ಮ್ಯಾಚ್​​ನಲ್ಲಿ ಸೋತರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೂಪರ್-8 ಹಂತಕ್ಕೇರಲು ಅವಕಾಶ ಇರಲಿದೆ.

ಭಾರತ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ ಸೂಪರ್-8 ಹಂತಕ್ಕೇರಲಿದೆ. ಇನ್ನು ಯುಎಸ್​ಎ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದು, ಈ ಮ್ಯಾಚ್​​ನಲ್ಲಿ ಸೋತರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೂಪರ್-8 ಹಂತಕ್ಕೇರಲು ಅವಕಾಶ ಇರಲಿದೆ.

4 / 6
ಅಂದರೆ ಇಲ್ಲಿ ಐರ್ಲೆಂಡ್ ವಿರುದ್ಧ ಯುಎಸ್​ಎ ತಂಡ ಸೋತರೆ ಮಾತ್ರ ಪಾಕ್​ ತಂಡಕ್ಕೆ ಅವಕಾಶ ಇರಲಿದೆ. ಅದರಂತೆ ಕೆನಡಾ ಮತ್ತು ಐರ್ಲೆಂಡ್ ವಿರುದ್ಧದ ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡವು ಭರ್ಜರಿ ಜಯ ಸಾಧಿಸುವ ಮೂಲಕ 4 ಅಂಕಗಳೊಂದಿಗೆ ಉತ್ತಮ ನೆಟ್ ರನ್ ರೇಟ್​ ನೆರವಿನಿಂದ ಸೂಪರ್-8 ಹಂತಕ್ಕೇರಬಹುದು.

ಅಂದರೆ ಇಲ್ಲಿ ಐರ್ಲೆಂಡ್ ವಿರುದ್ಧ ಯುಎಸ್​ಎ ತಂಡ ಸೋತರೆ ಮಾತ್ರ ಪಾಕ್​ ತಂಡಕ್ಕೆ ಅವಕಾಶ ಇರಲಿದೆ. ಅದರಂತೆ ಕೆನಡಾ ಮತ್ತು ಐರ್ಲೆಂಡ್ ವಿರುದ್ಧದ ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡವು ಭರ್ಜರಿ ಜಯ ಸಾಧಿಸುವ ಮೂಲಕ 4 ಅಂಕಗಳೊಂದಿಗೆ ಉತ್ತಮ ನೆಟ್ ರನ್ ರೇಟ್​ ನೆರವಿನಿಂದ ಸೂಪರ್-8 ಹಂತಕ್ಕೇರಬಹುದು.

5 / 6
ಹೀಗಾಗಿ ಪಾಕಿಸ್ತಾನ್ ತಂಡದ ಟಿ20 ವಿಶ್ವಕಪ್ ಭವಿಷ್ಯ ಈಗ ಯುಎಸ್​ಎ ತಂಡದ ಕೈಯಲ್ಲಿದೆ ಎನ್ನಬಹುದು. ಏಕೆಂದರೆ ಭಾರತ ತಂಡ ಯುಎಸ್​​ಎ ವಿರುದ್ಧ ಜಯ ಸಾಧಿಸುವುದು ಬಹುತೇಕ ಖಚಿತ. ಇನ್ನು ಐರ್ಲೆಂಡ್ ಮತ್ತು ಯುಎಸ್​ಎ ನಡುವಣ ಪಂದ್ಯದಲ್ಲಿ ಐರ್ಲೆಂಡ್ ಗೆಲುವು ದಾಖಲಿಸಿದರೆ, ಮಾತ್ರ ಪಾಕಿಸ್ತಾನ್ ತಂಡಕ್ಕೆ ಮುಂದಿನ ಹಂತಕ್ಕೇರಲು ಅವಕಾಶ ಇರಲಿದೆ. ಹೀಗಾಗಿ ಜೂನ್ 14 ರಂದು ಪಾಕ್ ತಂಡದ ಟಿ20 ವಿಶ್ವಕಪ್​ ಭವಿಷ್ಯ ನಿರ್ಧಾರವಾಗಲಿದೆ ಎನ್ನಬಹುದು.

ಹೀಗಾಗಿ ಪಾಕಿಸ್ತಾನ್ ತಂಡದ ಟಿ20 ವಿಶ್ವಕಪ್ ಭವಿಷ್ಯ ಈಗ ಯುಎಸ್​ಎ ತಂಡದ ಕೈಯಲ್ಲಿದೆ ಎನ್ನಬಹುದು. ಏಕೆಂದರೆ ಭಾರತ ತಂಡ ಯುಎಸ್​​ಎ ವಿರುದ್ಧ ಜಯ ಸಾಧಿಸುವುದು ಬಹುತೇಕ ಖಚಿತ. ಇನ್ನು ಐರ್ಲೆಂಡ್ ಮತ್ತು ಯುಎಸ್​ಎ ನಡುವಣ ಪಂದ್ಯದಲ್ಲಿ ಐರ್ಲೆಂಡ್ ಗೆಲುವು ದಾಖಲಿಸಿದರೆ, ಮಾತ್ರ ಪಾಕಿಸ್ತಾನ್ ತಂಡಕ್ಕೆ ಮುಂದಿನ ಹಂತಕ್ಕೇರಲು ಅವಕಾಶ ಇರಲಿದೆ. ಹೀಗಾಗಿ ಜೂನ್ 14 ರಂದು ಪಾಕ್ ತಂಡದ ಟಿ20 ವಿಶ್ವಕಪ್​ ಭವಿಷ್ಯ ನಿರ್ಧಾರವಾಗಲಿದೆ ಎನ್ನಬಹುದು.

6 / 6

Published On - 11:04 am, Mon, 10 June 24

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ