T20 World Cup 2024: ಕೇವಲ 88 ರನ್​ಗಳಿಸಿದ ಆಟಗಾರನಿಗೆ ಪಾಕ್​ ತಂಡದಲ್ಲಿ ಸ್ಥಾನ..!

T20 World Cup 2024: ಪಾಕಿಸ್ತಾನ್ ತಂಡವು ಜೂನ್ 6 ರಂದು ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಕಣಕ್ಕಿಳಿಯಲಿರುವ ಪಾಕ್ ತಂಡವು ಜೂನ್ 9 ರಂದು ಟೀಮ್ ಇಂಡಿಯಾವನ್ನು ಎದುರಿಸಲಿದೆ. ಇದಲ್ಲದೆ ಪಾಕಿಸ್ತಾನ್ ತಂಡವು ಐರ್ಲೆಂಡ್ ಮತ್ತು ಕೆನಡಾ ತಂಡಗಳ ವಿರುದ್ಧ ಕಣಕ್ಕಿಳಿಯಲಿದೆ.

|

Updated on:Jun 04, 2024 | 12:52 PM

T20 World Cup 2024: ಒಂದೆಡೆ ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ಗಾಗಿ​ ಸಿದ್ಧತೆಯಲ್ಲಿದ್ದರೆ, ಮತ್ತೊಂದೆಡೆ ಆಝಂ ಖಾನ್ ಆಯ್ಕೆ ಬಗ್ಗೆ ಭಾರೀ ಟೀಕೆಗಳು ವ್ಯಕ್ತವಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಆಝಂ ಅವರ ಅತ್ಯಂತ ಕಳಪೆ ಪ್ರದರ್ಶನ. ಅಂದರೆ ಕಳೆದ 12 ಇನಿಂಗ್ಸ್​ಗಳಿಂದ ಆಝಂ ಖಾನ್ ಕಲೆಹಾಕಿರುವುದು ಎರಡಂಕಿ ಮೊತ್ತ ಎಂದರೆ ನಂಬಲೇಬೇಕು.

T20 World Cup 2024: ಒಂದೆಡೆ ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ಗಾಗಿ​ ಸಿದ್ಧತೆಯಲ್ಲಿದ್ದರೆ, ಮತ್ತೊಂದೆಡೆ ಆಝಂ ಖಾನ್ ಆಯ್ಕೆ ಬಗ್ಗೆ ಭಾರೀ ಟೀಕೆಗಳು ವ್ಯಕ್ತವಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಆಝಂ ಅವರ ಅತ್ಯಂತ ಕಳಪೆ ಪ್ರದರ್ಶನ. ಅಂದರೆ ಕಳೆದ 12 ಇನಿಂಗ್ಸ್​ಗಳಿಂದ ಆಝಂ ಖಾನ್ ಕಲೆಹಾಕಿರುವುದು ಎರಡಂಕಿ ಮೊತ್ತ ಎಂದರೆ ನಂಬಲೇಬೇಕು.

1 / 7
2021ರಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಟಿ20 ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ಆಝಂ ಖಾನ್ ಚೊಚ್ಚಲ ಪಂದ್ಯದಲ್ಲಿ ಕೇವಲ 5 ರನ್​ಗಳಿಸಿ ಔಟಾಗಿದ್ದರು. ಇನ್ನು 2ನೇ ಪಂದ್ಯದಲ್ಲಿ ಕಲೆಹಾಕಿದ್ದು ಕೇವಲ 1 ರನ್​ ಮಾತ್ರ.

2021ರಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಟಿ20 ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ಆಝಂ ಖಾನ್ ಚೊಚ್ಚಲ ಪಂದ್ಯದಲ್ಲಿ ಕೇವಲ 5 ರನ್​ಗಳಿಸಿ ಔಟಾಗಿದ್ದರು. ಇನ್ನು 2ನೇ ಪಂದ್ಯದಲ್ಲಿ ಕಲೆಹಾಕಿದ್ದು ಕೇವಲ 1 ರನ್​ ಮಾತ್ರ.

2 / 7
ಇದಾದ ಬಳಿಕ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಇನ್ನು ಅಫ್ಘಾನ್ ವಿರುದ್ಧದ 2ನೇ ಪಂದ್ಯದಲ್ಲಿ ಗಳಿಸಿದ್ದು ಕೇವಲ 1 ರನ್. ಅಲ್ಲದೆ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಆಝಂ ಖಾನ್ ಕೇವಲ 12 ರನ್​ ಮಾತ್ರ ಗಳಿಸಿದ್ದರು.

ಇದಾದ ಬಳಿಕ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಇನ್ನು ಅಫ್ಘಾನ್ ವಿರುದ್ಧದ 2ನೇ ಪಂದ್ಯದಲ್ಲಿ ಗಳಿಸಿದ್ದು ಕೇವಲ 1 ರನ್. ಅಲ್ಲದೆ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಆಝಂ ಖಾನ್ ಕೇವಲ 12 ರನ್​ ಮಾತ್ರ ಗಳಿಸಿದ್ದರು.

3 / 7
ಅಂದರೆ ತಮ್ಮ ಕೆರಿಯರ್​ನ ಮೊದಲ 7 ಪಂದ್ಯಗಳಲ್ಲಿ 3.8 ರ ಸರಾಸರಿಯಲ್ಲಿ ಮಾತ್ರ ಕಲೆಹಾಕಿದ್ದರು. ಇದಾಗ್ಯೂ ಅವರನ್ನು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾಗಿತ್ತು. ಆದರೆ ಈ ಸರಣಿಯಲ್ಲೂ ಆಝಂ ಕಳಪೆ ಪ್ರದರ್ಶನ ಮುಂದುವರೆಸಿದ್ದರು.

ಅಂದರೆ ತಮ್ಮ ಕೆರಿಯರ್​ನ ಮೊದಲ 7 ಪಂದ್ಯಗಳಲ್ಲಿ 3.8 ರ ಸರಾಸರಿಯಲ್ಲಿ ಮಾತ್ರ ಕಲೆಹಾಕಿದ್ದರು. ಇದಾಗ್ಯೂ ಅವರನ್ನು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾಗಿತ್ತು. ಆದರೆ ಈ ಸರಣಿಯಲ್ಲೂ ಆಝಂ ಕಳಪೆ ಪ್ರದರ್ಶನ ಮುಂದುವರೆಸಿದ್ದರು.

4 / 7
ಇದಾಗ್ಯೂ ಆಝಂ ಖಾನ್ ಅವರಿಗೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ನೀಡಲಾಗಿದೆ. ಈ ಆಯ್ಕೆ ಬಗ್ಗೆ ಇದೀಗ ಪಾಕ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಆಝಂ ಖಾನ್​ಗೆ ಮಾನದಂಡಗಳೇನು ಎಂದು ಪ್ರಶ್ನಿಸುತ್ತಿದ್ದಾರೆ.

ಇದಾಗ್ಯೂ ಆಝಂ ಖಾನ್ ಅವರಿಗೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ನೀಡಲಾಗಿದೆ. ಈ ಆಯ್ಕೆ ಬಗ್ಗೆ ಇದೀಗ ಪಾಕ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಆಝಂ ಖಾನ್​ಗೆ ಮಾನದಂಡಗಳೇನು ಎಂದು ಪ್ರಶ್ನಿಸುತ್ತಿದ್ದಾರೆ.

5 / 7
ಏಕೆಂದರೆ ಪಾಕಿಸ್ತಾನ್ ಪರ 12 ಟಿ20 ಇನಿಂಗ್ಸ್​ಗಳನ್ನು ಆಡಿರುವ ಆಝಂ ಖಾನ್ ಇದುವರೆಗೆ ಕೇವಲ 88 ರನ್​ ಮಾತ್ರ ಕಲೆಹಾಕಿದ್ದಾರೆ. ಅಂದರೆ ಪ್ರತಿ ಪಂದ್ಯಗಳಲ್ಲಿ ಅವರ ಸರಾಸರಿ ಕೇವಲ 9.78 ರನ್ ಅಷ್ಟೇ. ಇದಾಗ್ಯೂ ಟಿ20 ವಿಶ್ವಕಪ್​ನಂತಹ ಮಹತ್ವದ ಟೂರ್ನಿಗೆ ಆಝಂ ಖಾನ್ ಅವರನ್ನು ಆಯ್ಕೆ ಮಾಡಿರುವುದೇ ಅಚ್ಚರಿ.

ಏಕೆಂದರೆ ಪಾಕಿಸ್ತಾನ್ ಪರ 12 ಟಿ20 ಇನಿಂಗ್ಸ್​ಗಳನ್ನು ಆಡಿರುವ ಆಝಂ ಖಾನ್ ಇದುವರೆಗೆ ಕೇವಲ 88 ರನ್​ ಮಾತ್ರ ಕಲೆಹಾಕಿದ್ದಾರೆ. ಅಂದರೆ ಪ್ರತಿ ಪಂದ್ಯಗಳಲ್ಲಿ ಅವರ ಸರಾಸರಿ ಕೇವಲ 9.78 ರನ್ ಅಷ್ಟೇ. ಇದಾಗ್ಯೂ ಟಿ20 ವಿಶ್ವಕಪ್​ನಂತಹ ಮಹತ್ವದ ಟೂರ್ನಿಗೆ ಆಝಂ ಖಾನ್ ಅವರನ್ನು ಆಯ್ಕೆ ಮಾಡಿರುವುದೇ ಅಚ್ಚರಿ.

6 / 7
ಅಂದಹಾಗೆ ಆಝಂ ಖಾನ್ ಪಾಕಿಸ್ತಾನ್ ತಂಡದ ಮಾಜಿ ವಿಕೆಟ್ ಕೀಪರ್ ಮೊಯೀನ್ ಖಾನ್ ಅವರ ಪುತ್ರ. ಹೀಗಾಗಿಯೇ ಸತತ ವೈಫಲ್ಯದ ಹೊರತಾಗಿಯೂ ಆಝಂಗೆ ಪಾಕ್ ತಂಡದಲ್ಲಿ ಸ್ಥಾನ ನೀಡಲಾಗುತ್ತಿದೆ ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಆಕ್ರೋಶ ಮತ್ತು ಟೀಕೆಗಳ ನಡುವೆಯೂ ಆಝಂ ಖಾನ್ ತಮ್ಮ ಕಳಪೆ ಪ್ರದರ್ಶನವನ್ನು ಮುಂದುವರೆಸಿರುವುದು ವಿಶೇಷ.

ಅಂದಹಾಗೆ ಆಝಂ ಖಾನ್ ಪಾಕಿಸ್ತಾನ್ ತಂಡದ ಮಾಜಿ ವಿಕೆಟ್ ಕೀಪರ್ ಮೊಯೀನ್ ಖಾನ್ ಅವರ ಪುತ್ರ. ಹೀಗಾಗಿಯೇ ಸತತ ವೈಫಲ್ಯದ ಹೊರತಾಗಿಯೂ ಆಝಂಗೆ ಪಾಕ್ ತಂಡದಲ್ಲಿ ಸ್ಥಾನ ನೀಡಲಾಗುತ್ತಿದೆ ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಆಕ್ರೋಶ ಮತ್ತು ಟೀಕೆಗಳ ನಡುವೆಯೂ ಆಝಂ ಖಾನ್ ತಮ್ಮ ಕಳಪೆ ಪ್ರದರ್ಶನವನ್ನು ಮುಂದುವರೆಸಿರುವುದು ವಿಶೇಷ.

7 / 7

Published On - 8:59 am, Tue, 4 June 24

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್