AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashid Khan: ವಿಶೇಷ ವಿಶ್ವ ದಾಖಲೆ ಬರೆದ ರಶೀದ್ ಖಾನ್

T20 World Cup 2024: ಟಿ20 ವಿಶ್ವಕಪ್​ನ 14ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವು ಅಮೋಘ ಗೆಲುವು ಸಾಧಿಸಿದೆ. ಗಯಾನಾದಲ್ಲಿ ನಡೆದ ಈ ಪಂದ್ಯದಲ್ಲಿ ಅಫ್ಘಾನಿಸ್ತಾನ್ ನೀಡಿದ 160 ರನ್​ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು ಕೇವಲ 75 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಅಫ್ಘಾನಿಸ್ತಾನ್ ತಂಡ 84 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Jun 08, 2024 | 9:54 AM

Share
T20 World Cup 2024: ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದ ಮೂಲಕ ಅಫ್ಘಾನಿಸ್ತಾನ್ ತಂಡದ ನಾಯಕ ರಶೀದ್ ಖಾನ್ (Rashid Khan) ವಿಶೇಷ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ನ್ಯೂಝಿಲೆಂಡ್​ನ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.

T20 World Cup 2024: ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದ ಮೂಲಕ ಅಫ್ಘಾನಿಸ್ತಾನ್ ತಂಡದ ನಾಯಕ ರಶೀದ್ ಖಾನ್ (Rashid Khan) ವಿಶೇಷ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ನ್ಯೂಝಿಲೆಂಡ್​ನ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.

1 / 6
ಈ ಪಂದ್ಯದಲ್ಲಿ ಅಫ್ಘಾನಿಸ್ತಾನ್ ನೀಡಿದ 159 ರನ್​ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡಕ್ಕೆ ರಶೀದ್ ಖಾನ್ ಮಾರಕವಾಗಿ ಪರಿಣಮಿಸಿದ್ದರು. 4 ಓವರ್​ಗಳನ್ನು ಬೌಲಿಂಗ್ ಮಾಡಿದ್ದ ರಶೀದ್ ಕೇವಲ 17 ರನ್​ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.

ಈ ಪಂದ್ಯದಲ್ಲಿ ಅಫ್ಘಾನಿಸ್ತಾನ್ ನೀಡಿದ 159 ರನ್​ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡಕ್ಕೆ ರಶೀದ್ ಖಾನ್ ಮಾರಕವಾಗಿ ಪರಿಣಮಿಸಿದ್ದರು. 4 ಓವರ್​ಗಳನ್ನು ಬೌಲಿಂಗ್ ಮಾಡಿದ್ದ ರಶೀದ್ ಕೇವಲ 17 ರನ್​ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.

2 / 6
ಇದರೊಂದಿಗೆ ಟಿ20 ವಿಶ್ವಕಪ್​ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ನಾಯಕನೆಂಬ ವಿಶ್ವ ದಾಖಲೆ ರಶೀದ್ ಖಾನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಡೇನಿಯಲ್ ವೆಟ್ಟೋರಿ ಹೆಸರಿನಲ್ಲಿತ್ತು.

ಇದರೊಂದಿಗೆ ಟಿ20 ವಿಶ್ವಕಪ್​ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ನಾಯಕನೆಂಬ ವಿಶ್ವ ದಾಖಲೆ ರಶೀದ್ ಖಾನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಡೇನಿಯಲ್ ವೆಟ್ಟೋರಿ ಹೆಸರಿನಲ್ಲಿತ್ತು.

3 / 6
2007ರ ಟಿ20 ವಿಶ್ವಕಪ್​ನಲ್ಲಿ ನ್ಯೂಜಿಲೆಂಡ್ ನಾಯಕ ಡೇನಿಯಲ್ ವೆಟ್ಟೋರಿ ಟೀಮ್ ಇಂಡಿಯಾ ವಿರುದ್ಧ ಕೇವಲ 20 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಅತೀ ಕಡಿಮೆ ರನ್ ನೀಡಿ 4 ವಿಕೆಟ್ ಕಬಳಿಸಿದ ಕ್ಯಾಪ್ಟನ್ ಎಂಬ ದಾಖಲೆ ಬರೆದಿದ್ದರು.

2007ರ ಟಿ20 ವಿಶ್ವಕಪ್​ನಲ್ಲಿ ನ್ಯೂಜಿಲೆಂಡ್ ನಾಯಕ ಡೇನಿಯಲ್ ವೆಟ್ಟೋರಿ ಟೀಮ್ ಇಂಡಿಯಾ ವಿರುದ್ಧ ಕೇವಲ 20 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಅತೀ ಕಡಿಮೆ ರನ್ ನೀಡಿ 4 ವಿಕೆಟ್ ಕಬಳಿಸಿದ ಕ್ಯಾಪ್ಟನ್ ಎಂಬ ದಾಖಲೆ ಬರೆದಿದ್ದರು.

4 / 6
ಇದೀಗ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕೇವಲ 17 ರನ್ ನೀಡಿ 4 ವಿಕೆಟ್ ಕಬಳಿಸುವ ಮೂಲಕ ರಶೀದ್ ಖಾನ್ ಈ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್​ನಲ್ಲಿ ಅತೀ ಕಡಿಮೆ ರನ್ ನೀಡಿ 4 ವಿಕೆಟ್ ಉರುಳಿಸಿದ ಕ್ಯಾಪ್ಟನ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕೇವಲ 17 ರನ್ ನೀಡಿ 4 ವಿಕೆಟ್ ಕಬಳಿಸುವ ಮೂಲಕ ರಶೀದ್ ಖಾನ್ ಈ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್​ನಲ್ಲಿ ಅತೀ ಕಡಿಮೆ ರನ್ ನೀಡಿ 4 ವಿಕೆಟ್ ಉರುಳಿಸಿದ ಕ್ಯಾಪ್ಟನ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 159 ರನ್​ ಕಲೆಹಾಕಿತು. 160 ರನ್​ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 15.2 ಓವರ್​ಗಳಲ್ಲಿ ಕೇವಲ 75 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಅಫ್ಘಾನಿಸ್ತಾನ್ ತಂಡ 84 ರನ್​ಗಳ ಭರ್ಜರಿ ಜಯ ಸಾಧಿಸಿದೆ. (ALL PC: ICC/Getty Images)

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 159 ರನ್​ ಕಲೆಹಾಕಿತು. 160 ರನ್​ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 15.2 ಓವರ್​ಗಳಲ್ಲಿ ಕೇವಲ 75 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಅಫ್ಘಾನಿಸ್ತಾನ್ ತಂಡ 84 ರನ್​ಗಳ ಭರ್ಜರಿ ಜಯ ಸಾಧಿಸಿದೆ. (ALL PC: ICC/Getty Images)

6 / 6
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್