India vs Pakistan: ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಚಿಂತೆ ದೂರ

T20 World Cup 2024: ಟಿ20 ವಿಶ್ವಕಪ್​ನ ತನ್ನ 2ನೇ ಪಂದ್ಯದಲ್ಲಿ ಕಣಕ್ಕಿಳಿಯಲು ಟೀಮ್ ಇಂಡಿಯಾ ಸಜ್ಜಾಗಿ ನಿಂತಿದೆ. ಭಾನುವಾರ (ಜೂ.9) ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದ್ದು, ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

|

Updated on: Jun 08, 2024 | 8:59 AM

T20 World Cup 2024: ಭಾರತ ಮತ್ತು ಪಾಕಿಸ್ತಾನ್ (IND vs PAK) ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಭಾನುವಾರ (ಜೂ.9) ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದಾರೆ. ಈ ಮಹತ್ವದ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರಾ ಎಂಬ ಚಿಂತೆಯೊಂದು ಶುರುವಾಗಿತ್ತು.

T20 World Cup 2024: ಭಾರತ ಮತ್ತು ಪಾಕಿಸ್ತಾನ್ (IND vs PAK) ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಭಾನುವಾರ (ಜೂ.9) ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದಾರೆ. ಈ ಮಹತ್ವದ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರಾ ಎಂಬ ಚಿಂತೆಯೊಂದು ಶುರುವಾಗಿತ್ತು.

1 / 6
ಏಕೆಂದರೆ ಐರ್ಲೆಂಡ್ ವಿರುದ್ಧದ ಪಂದ್ಯದ ವೇಳೆ ರೋಹಿತ್ ಶರ್ಮಾ ಗಾಯಗೊಂಡಿದ್ದರು. ಬ್ಯಾಟಿಂಗ್​ ವೇಳೆ ಭುಜ ಭಾಗಕ್ಕೆ ಚೆಂಡು ಬಡಿದಿದ್ದರಿಂದ ಹಿಟ್​ಮ್ಯಾನ್ ಅರ್ಧದಲ್ಲೇ ಮೈದಾನ ತೊರೆದಿದ್ದರು. ಈ ಪಂದ್ಯದ ಬಳಿಕ ಅವರು ಅಭ್ಯಾಸದಲ್ಲೂ ಕಾಣಿಸಿಕೊಂಡಿರಲಿಲ್ಲ.

ಏಕೆಂದರೆ ಐರ್ಲೆಂಡ್ ವಿರುದ್ಧದ ಪಂದ್ಯದ ವೇಳೆ ರೋಹಿತ್ ಶರ್ಮಾ ಗಾಯಗೊಂಡಿದ್ದರು. ಬ್ಯಾಟಿಂಗ್​ ವೇಳೆ ಭುಜ ಭಾಗಕ್ಕೆ ಚೆಂಡು ಬಡಿದಿದ್ದರಿಂದ ಹಿಟ್​ಮ್ಯಾನ್ ಅರ್ಧದಲ್ಲೇ ಮೈದಾನ ತೊರೆದಿದ್ದರು. ಈ ಪಂದ್ಯದ ಬಳಿಕ ಅವರು ಅಭ್ಯಾಸದಲ್ಲೂ ಕಾಣಿಸಿಕೊಂಡಿರಲಿಲ್ಲ.

2 / 6
ಆದರೆ ಶುಕ್ರವಾರ ನಡೆದ ಅಭ್ಯಾಸ ಶಿಬಿರದಲ್ಲಿ ಹಿಟ್​ಮ್ಯಾನ್ ಮತ್ತೆ ಕಾಣಿಸಿಕೊಂಡಿದ್ದಾರೆ. ಅಲ್ಲದೆ ನೆಟ್ಸ್​​ನಲ್ಲೂ ಬ್ಯಾಟಿಂಗ್​ ಪ್ರಾಕ್ಟೀಸ್ ಮಾಡಿದ್ದಾರೆ. ಇದರೊಂದಿಗೆ ರೋಹಿತ್ ಶರ್ಮಾ ಚೇತರಿಸಿಕೊಂಡಿರುವುದು ಖಚಿತವಾಗಿದೆ. ಹೀಗಾಗಿ ಪಾಕಿಸ್ತಾನ್ ವಿರುದ್ಧ ಹಿಟ್​ಮ್ಯಾನ್ ಕಣಕ್ಕಿಳಿಯುವುದು ಕನ್ಫರ್ಮ್ ಎನ್ನಬಹುದು.

ಆದರೆ ಶುಕ್ರವಾರ ನಡೆದ ಅಭ್ಯಾಸ ಶಿಬಿರದಲ್ಲಿ ಹಿಟ್​ಮ್ಯಾನ್ ಮತ್ತೆ ಕಾಣಿಸಿಕೊಂಡಿದ್ದಾರೆ. ಅಲ್ಲದೆ ನೆಟ್ಸ್​​ನಲ್ಲೂ ಬ್ಯಾಟಿಂಗ್​ ಪ್ರಾಕ್ಟೀಸ್ ಮಾಡಿದ್ದಾರೆ. ಇದರೊಂದಿಗೆ ರೋಹಿತ್ ಶರ್ಮಾ ಚೇತರಿಸಿಕೊಂಡಿರುವುದು ಖಚಿತವಾಗಿದೆ. ಹೀಗಾಗಿ ಪಾಕಿಸ್ತಾನ್ ವಿರುದ್ಧ ಹಿಟ್​ಮ್ಯಾನ್ ಕಣಕ್ಕಿಳಿಯುವುದು ಕನ್ಫರ್ಮ್ ಎನ್ನಬಹುದು.

3 / 6
ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಪಂದ್ಯ ಶುರುವಾಗಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, ಸೂಪರ್-8 ಹಂತಕ್ಕೇರುವುದನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ.

ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಪಂದ್ಯ ಶುರುವಾಗಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, ಸೂಪರ್-8 ಹಂತಕ್ಕೇರುವುದನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ.

4 / 6
ಏಕೆಂದರೆ ಭಾರತ ತಂಡದ ಮುಂದಿನ ಪಂದ್ಯಗಳಿರುವುದು ಯುಎಸ್​ಎ ಮತ್ತು ಕೆನಡಾ ತಂಡಗಳ ವಿರುದ್ಧ. ಈ ಪಂದ್ಯಗಳಲ್ಲಿ ಭಾರತ ತಂಡದ ಗೆಲುವನ್ನು ಎದುರು ನೋಡಬಹುದು. ಹೀಗಾಗಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಭಾರತ ಟಿ20 ವಿಶ್ವಕಪ್​ನ ಮುಂದಿನ ಹಂತಕ್ಕೇರುವುದನ್ನು ಖಚಿತಪಡಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಏಕೆಂದರೆ ಭಾರತ ತಂಡದ ಮುಂದಿನ ಪಂದ್ಯಗಳಿರುವುದು ಯುಎಸ್​ಎ ಮತ್ತು ಕೆನಡಾ ತಂಡಗಳ ವಿರುದ್ಧ. ಈ ಪಂದ್ಯಗಳಲ್ಲಿ ಭಾರತ ತಂಡದ ಗೆಲುವನ್ನು ಎದುರು ನೋಡಬಹುದು. ಹೀಗಾಗಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಭಾರತ ಟಿ20 ವಿಶ್ವಕಪ್​ನ ಮುಂದಿನ ಹಂತಕ್ಕೇರುವುದನ್ನು ಖಚಿತಪಡಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

5 / 6
ಭಾರತ ಟಿ20​ ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.||| ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

ಭಾರತ ಟಿ20​ ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.||| ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

6 / 6
Follow us
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್