AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಎರಡು ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ರೂಬೆನ್

T20 World Cup 2024: ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 2634 ಪಂದ್ಯಗಳನ್ನಾಡಲಾಗಿದೆ. ಆದರೆ ಈವರೆಗೆ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯೊಂದನ್ನು ನಮೀಬಿಯಾ ಬೌಲರ್ ನಿರ್ಮಿಸಿದ್ದಾರೆ. ಅದು ಕೂಡ ಮೊದಲ ಓವರ್​ನ ಮೊದಲೆರಡು ಎಸೆತಗಳ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on:Jun 03, 2024 | 8:03 AM

Share
T20 World Cup 2024: ಟಿ20 ವಿಶ್ವಕಪ್​ನ 3ನೇ ಪಂದ್ಯದಲ್ಲಿ ರೂಬೆನ್ ಟ್ರಂಪೆಲ್ಮನ್ (Ruben Trumpelmann) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಯಾರಿಂದಲೂ ಸಾಧ್ಯವಾಗದ ಹೊಸ ವಿಶ್ವ ದಾಖಲೆಯನ್ನು ಬರೆಯುವ ಮೂಲಕ ಎಂಬುದು ವಿಶೇಷ.

T20 World Cup 2024: ಟಿ20 ವಿಶ್ವಕಪ್​ನ 3ನೇ ಪಂದ್ಯದಲ್ಲಿ ರೂಬೆನ್ ಟ್ರಂಪೆಲ್ಮನ್ (Ruben Trumpelmann) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಯಾರಿಂದಲೂ ಸಾಧ್ಯವಾಗದ ಹೊಸ ವಿಶ್ವ ದಾಖಲೆಯನ್ನು ಬರೆಯುವ ಮೂಲಕ ಎಂಬುದು ವಿಶೇಷ.

1 / 5
ಬಾರ್ಬಡೋಸ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ 3ನೇ ಪಂದ್ಯದಲ್ಲಿ ಒಮಾನ್ ಮತ್ತು ನಮೀಬಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಟಾಸ್ ಗೆದ್ದ ನಮೀಬಿಯಾ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲ ಓವರ್​ ಎಸೆದ ರೂಬೆನ್ ಟ್ರಂಪೆಲ್ಮನ್ ಮೊದಲ ಎರಡು ಎಸೆತಗಳಲ್ಲೇ ಒಮಾನ್ ತಂಡಕ್ಕೆ ಬ್ಯಾಕ್ ಟು ಬ್ಯಾಕ್ ಆಘಾತ ನೀಡಿದರು.

ಬಾರ್ಬಡೋಸ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ 3ನೇ ಪಂದ್ಯದಲ್ಲಿ ಒಮಾನ್ ಮತ್ತು ನಮೀಬಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಟಾಸ್ ಗೆದ್ದ ನಮೀಬಿಯಾ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲ ಓವರ್​ ಎಸೆದ ರೂಬೆನ್ ಟ್ರಂಪೆಲ್ಮನ್ ಮೊದಲ ಎರಡು ಎಸೆತಗಳಲ್ಲೇ ಒಮಾನ್ ತಂಡಕ್ಕೆ ಬ್ಯಾಕ್ ಟು ಬ್ಯಾಕ್ ಆಘಾತ ನೀಡಿದರು.

2 / 5
ಮೊದಲ ಓವರ್​ನ ಮೊದಲ ಎಸೆತದಲ್ಲಿ ಆರಂಭಿಕ ಆಟಗಾರ ಕಶ್ಯಪ್ ಪ್ರಜಾಪತಿ (0) ಯನ್ನು ಎಲ್​ಬಿಡಬ್ಲ್ಯೂ ಮಾಡಿದ ರೂಬೆನ್ ಟ್ರಂಪೆಲ್ಮನ್, 2ನೇ ಎಸೆತದಲ್ಲಿ ಒಮಾನ್ ತಂಡದ ನಾಯಕ ಅಖಿಬ್ ಇಲ್ಯಾಸ್ (0) ವಿಕೆಟ್ ಪಡೆದರು. ಅಂದರೆ ಶೂನ್ಯಕ್ಕೆ 2 ವಿಕೆಟ್ ಉರುಳಿಸಿದರು.

ಮೊದಲ ಓವರ್​ನ ಮೊದಲ ಎಸೆತದಲ್ಲಿ ಆರಂಭಿಕ ಆಟಗಾರ ಕಶ್ಯಪ್ ಪ್ರಜಾಪತಿ (0) ಯನ್ನು ಎಲ್​ಬಿಡಬ್ಲ್ಯೂ ಮಾಡಿದ ರೂಬೆನ್ ಟ್ರಂಪೆಲ್ಮನ್, 2ನೇ ಎಸೆತದಲ್ಲಿ ಒಮಾನ್ ತಂಡದ ನಾಯಕ ಅಖಿಬ್ ಇಲ್ಯಾಸ್ (0) ವಿಕೆಟ್ ಪಡೆದರು. ಅಂದರೆ ಶೂನ್ಯಕ್ಕೆ 2 ವಿಕೆಟ್ ಉರುಳಿಸಿದರು.

3 / 5
ಇದರೊಂದಿಗೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಮೊದಲ ಓವರ್​ನ ಮೊದಲೆರಡು ಎಸೆತಗಳಲ್ಲಿ ಎರಡು ವಿಕೆಟ್ ಕಬಳಿಸಿದ ಮೊದಲ ಬೌಲರ್ ಎಂಬ ವಿಶ್ವ ದಾಖಲೆ ರೂಬೆನ್ ಟ್ರಂಪೆಲ್ಮನ್ ಪಾಲಾಯಿತು. ಈ ಮೂಲಕ ಚುಟುಕು ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯನ್ನು ರೂಬೆನ್ ತಮ್ಮದಾಗಿಸಿಕೊಂಡರು.

ಇದರೊಂದಿಗೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಮೊದಲ ಓವರ್​ನ ಮೊದಲೆರಡು ಎಸೆತಗಳಲ್ಲಿ ಎರಡು ವಿಕೆಟ್ ಕಬಳಿಸಿದ ಮೊದಲ ಬೌಲರ್ ಎಂಬ ವಿಶ್ವ ದಾಖಲೆ ರೂಬೆನ್ ಟ್ರಂಪೆಲ್ಮನ್ ಪಾಲಾಯಿತು. ಈ ಮೂಲಕ ಚುಟುಕು ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯನ್ನು ರೂಬೆನ್ ತಮ್ಮದಾಗಿಸಿಕೊಂಡರು.

4 / 5
ಇನ್ನು ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ರೂಬೆನ್ ಟ್ರಂಪೆಲ್ಮನ್ 21 ರನ್​ಗಳನ್ನು ನೀಡುವ ಮೂಲಕ 4 ವಿಕೆಟ್ ಕಬಳಿಸಿದರು. ಹಾಗೆಯೇ ಡೇವಿಡ್ ವೀಝ 3.4 ಓವರ್​ಗಳಲ್ಲಿ 28 ರನ್ ನೀಡಿ 3 ವಿಕೆಟ್ ಪಡೆದರು. ನಮೀಬಿಯಾ ಬೌಲರ್​ಗಳ ಈ ಕರಾರುವಾಕ್ ದಾಳಿ ಪರಿಣಾಮ ಒಮಾನ್ ತಂಡವು 19.4 ಓವರ್​ಗಳಲ್ಲಿ 109 ರನ್​ಗಳಿಸಿ ಆಲೌಟ್ ಆಗಿದೆ. (All PC: getty images)

ಇನ್ನು ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ರೂಬೆನ್ ಟ್ರಂಪೆಲ್ಮನ್ 21 ರನ್​ಗಳನ್ನು ನೀಡುವ ಮೂಲಕ 4 ವಿಕೆಟ್ ಕಬಳಿಸಿದರು. ಹಾಗೆಯೇ ಡೇವಿಡ್ ವೀಝ 3.4 ಓವರ್​ಗಳಲ್ಲಿ 28 ರನ್ ನೀಡಿ 3 ವಿಕೆಟ್ ಪಡೆದರು. ನಮೀಬಿಯಾ ಬೌಲರ್​ಗಳ ಈ ಕರಾರುವಾಕ್ ದಾಳಿ ಪರಿಣಾಮ ಒಮಾನ್ ತಂಡವು 19.4 ಓವರ್​ಗಳಲ್ಲಿ 109 ರನ್​ಗಳಿಸಿ ಆಲೌಟ್ ಆಗಿದೆ. (All PC: getty images)

5 / 5

Published On - 7:58 am, Mon, 3 June 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ