T20 World Cup 2024: ಎರಡು ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ರೂಬೆನ್

T20 World Cup 2024: ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 2634 ಪಂದ್ಯಗಳನ್ನಾಡಲಾಗಿದೆ. ಆದರೆ ಈವರೆಗೆ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯೊಂದನ್ನು ನಮೀಬಿಯಾ ಬೌಲರ್ ನಿರ್ಮಿಸಿದ್ದಾರೆ. ಅದು ಕೂಡ ಮೊದಲ ಓವರ್​ನ ಮೊದಲೆರಡು ಎಸೆತಗಳ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

|

Updated on:Jun 03, 2024 | 8:03 AM

T20 World Cup 2024: ಟಿ20 ವಿಶ್ವಕಪ್​ನ 3ನೇ ಪಂದ್ಯದಲ್ಲಿ ರೂಬೆನ್ ಟ್ರಂಪೆಲ್ಮನ್ (Ruben Trumpelmann) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಯಾರಿಂದಲೂ ಸಾಧ್ಯವಾಗದ ಹೊಸ ವಿಶ್ವ ದಾಖಲೆಯನ್ನು ಬರೆಯುವ ಮೂಲಕ ಎಂಬುದು ವಿಶೇಷ.

T20 World Cup 2024: ಟಿ20 ವಿಶ್ವಕಪ್​ನ 3ನೇ ಪಂದ್ಯದಲ್ಲಿ ರೂಬೆನ್ ಟ್ರಂಪೆಲ್ಮನ್ (Ruben Trumpelmann) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಯಾರಿಂದಲೂ ಸಾಧ್ಯವಾಗದ ಹೊಸ ವಿಶ್ವ ದಾಖಲೆಯನ್ನು ಬರೆಯುವ ಮೂಲಕ ಎಂಬುದು ವಿಶೇಷ.

1 / 5
ಬಾರ್ಬಡೋಸ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ 3ನೇ ಪಂದ್ಯದಲ್ಲಿ ಒಮಾನ್ ಮತ್ತು ನಮೀಬಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಟಾಸ್ ಗೆದ್ದ ನಮೀಬಿಯಾ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲ ಓವರ್​ ಎಸೆದ ರೂಬೆನ್ ಟ್ರಂಪೆಲ್ಮನ್ ಮೊದಲ ಎರಡು ಎಸೆತಗಳಲ್ಲೇ ಒಮಾನ್ ತಂಡಕ್ಕೆ ಬ್ಯಾಕ್ ಟು ಬ್ಯಾಕ್ ಆಘಾತ ನೀಡಿದರು.

ಬಾರ್ಬಡೋಸ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ 3ನೇ ಪಂದ್ಯದಲ್ಲಿ ಒಮಾನ್ ಮತ್ತು ನಮೀಬಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಟಾಸ್ ಗೆದ್ದ ನಮೀಬಿಯಾ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲ ಓವರ್​ ಎಸೆದ ರೂಬೆನ್ ಟ್ರಂಪೆಲ್ಮನ್ ಮೊದಲ ಎರಡು ಎಸೆತಗಳಲ್ಲೇ ಒಮಾನ್ ತಂಡಕ್ಕೆ ಬ್ಯಾಕ್ ಟು ಬ್ಯಾಕ್ ಆಘಾತ ನೀಡಿದರು.

2 / 5
ಮೊದಲ ಓವರ್​ನ ಮೊದಲ ಎಸೆತದಲ್ಲಿ ಆರಂಭಿಕ ಆಟಗಾರ ಕಶ್ಯಪ್ ಪ್ರಜಾಪತಿ (0) ಯನ್ನು ಎಲ್​ಬಿಡಬ್ಲ್ಯೂ ಮಾಡಿದ ರೂಬೆನ್ ಟ್ರಂಪೆಲ್ಮನ್, 2ನೇ ಎಸೆತದಲ್ಲಿ ಒಮಾನ್ ತಂಡದ ನಾಯಕ ಅಖಿಬ್ ಇಲ್ಯಾಸ್ (0) ವಿಕೆಟ್ ಪಡೆದರು. ಅಂದರೆ ಶೂನ್ಯಕ್ಕೆ 2 ವಿಕೆಟ್ ಉರುಳಿಸಿದರು.

ಮೊದಲ ಓವರ್​ನ ಮೊದಲ ಎಸೆತದಲ್ಲಿ ಆರಂಭಿಕ ಆಟಗಾರ ಕಶ್ಯಪ್ ಪ್ರಜಾಪತಿ (0) ಯನ್ನು ಎಲ್​ಬಿಡಬ್ಲ್ಯೂ ಮಾಡಿದ ರೂಬೆನ್ ಟ್ರಂಪೆಲ್ಮನ್, 2ನೇ ಎಸೆತದಲ್ಲಿ ಒಮಾನ್ ತಂಡದ ನಾಯಕ ಅಖಿಬ್ ಇಲ್ಯಾಸ್ (0) ವಿಕೆಟ್ ಪಡೆದರು. ಅಂದರೆ ಶೂನ್ಯಕ್ಕೆ 2 ವಿಕೆಟ್ ಉರುಳಿಸಿದರು.

3 / 5
ಇದರೊಂದಿಗೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಮೊದಲ ಓವರ್​ನ ಮೊದಲೆರಡು ಎಸೆತಗಳಲ್ಲಿ ಎರಡು ವಿಕೆಟ್ ಕಬಳಿಸಿದ ಮೊದಲ ಬೌಲರ್ ಎಂಬ ವಿಶ್ವ ದಾಖಲೆ ರೂಬೆನ್ ಟ್ರಂಪೆಲ್ಮನ್ ಪಾಲಾಯಿತು. ಈ ಮೂಲಕ ಚುಟುಕು ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯನ್ನು ರೂಬೆನ್ ತಮ್ಮದಾಗಿಸಿಕೊಂಡರು.

ಇದರೊಂದಿಗೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಮೊದಲ ಓವರ್​ನ ಮೊದಲೆರಡು ಎಸೆತಗಳಲ್ಲಿ ಎರಡು ವಿಕೆಟ್ ಕಬಳಿಸಿದ ಮೊದಲ ಬೌಲರ್ ಎಂಬ ವಿಶ್ವ ದಾಖಲೆ ರೂಬೆನ್ ಟ್ರಂಪೆಲ್ಮನ್ ಪಾಲಾಯಿತು. ಈ ಮೂಲಕ ಚುಟುಕು ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯನ್ನು ರೂಬೆನ್ ತಮ್ಮದಾಗಿಸಿಕೊಂಡರು.

4 / 5
ಇನ್ನು ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ರೂಬೆನ್ ಟ್ರಂಪೆಲ್ಮನ್ 21 ರನ್​ಗಳನ್ನು ನೀಡುವ ಮೂಲಕ 4 ವಿಕೆಟ್ ಕಬಳಿಸಿದರು. ಹಾಗೆಯೇ ಡೇವಿಡ್ ವೀಝ 3.4 ಓವರ್​ಗಳಲ್ಲಿ 28 ರನ್ ನೀಡಿ 3 ವಿಕೆಟ್ ಪಡೆದರು. ನಮೀಬಿಯಾ ಬೌಲರ್​ಗಳ ಈ ಕರಾರುವಾಕ್ ದಾಳಿ ಪರಿಣಾಮ ಒಮಾನ್ ತಂಡವು 19.4 ಓವರ್​ಗಳಲ್ಲಿ 109 ರನ್​ಗಳಿಸಿ ಆಲೌಟ್ ಆಗಿದೆ. (All PC: getty images)

ಇನ್ನು ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ರೂಬೆನ್ ಟ್ರಂಪೆಲ್ಮನ್ 21 ರನ್​ಗಳನ್ನು ನೀಡುವ ಮೂಲಕ 4 ವಿಕೆಟ್ ಕಬಳಿಸಿದರು. ಹಾಗೆಯೇ ಡೇವಿಡ್ ವೀಝ 3.4 ಓವರ್​ಗಳಲ್ಲಿ 28 ರನ್ ನೀಡಿ 3 ವಿಕೆಟ್ ಪಡೆದರು. ನಮೀಬಿಯಾ ಬೌಲರ್​ಗಳ ಈ ಕರಾರುವಾಕ್ ದಾಳಿ ಪರಿಣಾಮ ಒಮಾನ್ ತಂಡವು 19.4 ಓವರ್​ಗಳಲ್ಲಿ 109 ರನ್​ಗಳಿಸಿ ಆಲೌಟ್ ಆಗಿದೆ. (All PC: getty images)

5 / 5

Published On - 7:58 am, Mon, 3 June 24

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್