Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: 12 ವರ್ಷಗಳ ಕನಸು: ವಿರಾಟ್ ಕೊಹ್ಲಿಗೆ ಇದುವೇ ಕೊನೆಯ ಚಾನ್ಸ್​

T20 World Cup 2024: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟಿ20 ವಿಶ್ವಕಪ್​ ಟ್ರೋಫಿ ಎತ್ತಿ ಹಿಡಿಯುವ ವಿಶ್ವಾಸದಲ್ಲಿದ್ದಾರೆ ವಿರಾಟ್ ಕೊಹ್ಲಿ. 2011 ರಲ್ಲಿ ವಿರಾಟ್ ಕೊಹ್ಲಿ ಏಕದಿನ ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದರು. ಆದರೆ ಈವರೆಗೆ ಟಿ20 ವಿಶ್ವಕಪ್ ಮಾತ್ರ ಗೆದ್ದಿಲ್ಲ.

ಝಾಹಿರ್ ಯೂಸುಫ್
|

Updated on: Jun 29, 2024 | 8:04 AM

T20 World Cup 2024: ಟಿ20 ವಿಶ್ವಕಪ್​ನ ಮಹಾಸಮರಕ್ಕೆ ವೇದಿಕೆ ಸಿದ್ಧವಾಗಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ (India vs South Africa) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಟೀಮ್ ಇಂಡಿಯಾದ ಇಬ್ಬರು ದಿಗ್ಗಜರಿಗೆ ಕೊನೆಯ ವಿಶ್ವಕಪ್ ಪಂದ್ಯವಾಗಿರಲಿದೆ. ಅಂದರೆ ಈ ಬಾರಿಯ ಟಿ20 ವಿಶ್ವಕಪ್​ನೊಂದಿಗೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಕೊನೆಗೊಳ್ಳುವುದು ಬಹುತೇಕ ಖಚಿತ.

T20 World Cup 2024: ಟಿ20 ವಿಶ್ವಕಪ್​ನ ಮಹಾಸಮರಕ್ಕೆ ವೇದಿಕೆ ಸಿದ್ಧವಾಗಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ (India vs South Africa) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಟೀಮ್ ಇಂಡಿಯಾದ ಇಬ್ಬರು ದಿಗ್ಗಜರಿಗೆ ಕೊನೆಯ ವಿಶ್ವಕಪ್ ಪಂದ್ಯವಾಗಿರಲಿದೆ. ಅಂದರೆ ಈ ಬಾರಿಯ ಟಿ20 ವಿಶ್ವಕಪ್​ನೊಂದಿಗೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಕೊನೆಗೊಳ್ಳುವುದು ಬಹುತೇಕ ಖಚಿತ.

1 / 5
ಹೀಗಾಗಿ ಟಿ20 ವಿಶ್ವಕಪ್​ ಟ್ರೋಫಿ ಎತ್ತಿ ಹಿಡಿಯಲು ವಿರಾಟ್ ಕೊಹ್ಲಿ ಪಾಲಿಗೆ ಇದುವೇ ಕೊನೆಯ ಚಾನ್ಸ್. ರೋಹಿತ್ ಶರ್ಮಾ 2007 ರಲ್ಲಿ ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾದ ಭಾಗವಾಗಿದ್ದರು. ಆದರೆ ಕಳೆದ 5 ಆವೃತ್ತಿಗಳಲ್ಲಿ ಕಣಕ್ಕಿಳಿದರೂ ಕೊಹ್ಲಿ ಪಾಲಿಗೆ ಟಿ20 ವಿಶ್ವಕಪ್ ಎಂಬುದು ಮರೀಚಿಕೆಯಾಗಿಯೇ ಉಳಿದಿದೆ.

ಹೀಗಾಗಿ ಟಿ20 ವಿಶ್ವಕಪ್​ ಟ್ರೋಫಿ ಎತ್ತಿ ಹಿಡಿಯಲು ವಿರಾಟ್ ಕೊಹ್ಲಿ ಪಾಲಿಗೆ ಇದುವೇ ಕೊನೆಯ ಚಾನ್ಸ್. ರೋಹಿತ್ ಶರ್ಮಾ 2007 ರಲ್ಲಿ ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾದ ಭಾಗವಾಗಿದ್ದರು. ಆದರೆ ಕಳೆದ 5 ಆವೃತ್ತಿಗಳಲ್ಲಿ ಕಣಕ್ಕಿಳಿದರೂ ಕೊಹ್ಲಿ ಪಾಲಿಗೆ ಟಿ20 ವಿಶ್ವಕಪ್ ಎಂಬುದು ಮರೀಚಿಕೆಯಾಗಿಯೇ ಉಳಿದಿದೆ.

2 / 5
2012 ರಲ್ಲಿ ಶುರುವಾರ ವಿರಾಟ್ ಕೊಹ್ಲಿಯ ಟಿ20 ವಿಶ್ವಕಪ್​ ಕನಸು, 2014 ರಲ್ಲಿ ಅಂತಿಮ ಹಂತಕ್ಕೆ ಬಂದಿತ್ತು. ಆದರೆ ಫೈನಲ್​ನಲ್ಲಿ ಟೀಮ್ ಇಂಡಿಯಾ ಮುಗ್ಗರಿಸಿದ ಕಾರಣ ಟ್ರೋಫಿ ಎತ್ತಿ ಹಿಡಿಯುವ ಕೊಹ್ಲಿಯ ಕನಸು ಕನಸಾಗಿಯೇ ಉಳಿಯಿತು. ಇದಾದ ಬಳಿಕ 2016, 2021 ಮತ್ತು 2022 ರ ಟಿ20 ವಿಶ್ವಕಪ್​ಗಳಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡರೂ, ಭಾರತ ತಂಡ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಲು ವಿಫಲವಾಗಿದೆ.

2012 ರಲ್ಲಿ ಶುರುವಾರ ವಿರಾಟ್ ಕೊಹ್ಲಿಯ ಟಿ20 ವಿಶ್ವಕಪ್​ ಕನಸು, 2014 ರಲ್ಲಿ ಅಂತಿಮ ಹಂತಕ್ಕೆ ಬಂದಿತ್ತು. ಆದರೆ ಫೈನಲ್​ನಲ್ಲಿ ಟೀಮ್ ಇಂಡಿಯಾ ಮುಗ್ಗರಿಸಿದ ಕಾರಣ ಟ್ರೋಫಿ ಎತ್ತಿ ಹಿಡಿಯುವ ಕೊಹ್ಲಿಯ ಕನಸು ಕನಸಾಗಿಯೇ ಉಳಿಯಿತು. ಇದಾದ ಬಳಿಕ 2016, 2021 ಮತ್ತು 2022 ರ ಟಿ20 ವಿಶ್ವಕಪ್​ಗಳಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡರೂ, ಭಾರತ ತಂಡ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಲು ವಿಫಲವಾಗಿದೆ.

3 / 5
ಇದೀಗ 10 ವರ್ಷಗಳ ಬಳಿಕ ಟೀಮ್ ಇಂಡಿಯಾ ಅಂತಿಮ ಸುತ್ತಿಗೆ ಪ್ರವೇಶಿಸಿದೆ. ಅಲ್ಲದೆ ಟಿ20 ವಿಶ್ವಕಪ್​ ಎತ್ತಿ ಹಿಡಿಯಲು ವಿರಾಟ್ ಕೊಹ್ಲಿಗೆ ಇದುವೇ ಕೊನೆಯ ಚಾನ್ಸ್ ಎಂದು ವಿಶ್ಲೇಷಿಸಲಾಗುತ್ತಿದೆ. ಹೀಗಾಗಿ ಈ ಬಾರಿಯಾದರೂ ಭಾರತ ತಂಡ ಟಿ20 ವಿಶ್ವಕಪ್ ಎತ್ತಿ ಹಿಡಿಯಲಿ ಎಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿಯ 12 ವರ್ಷಗಳ ಕನಸು ಕೊನೆಗೊಳ್ಳಲಿ ಎಂದು ಬಯಸುತ್ತಿದ್ದಾರೆ.

ಇದೀಗ 10 ವರ್ಷಗಳ ಬಳಿಕ ಟೀಮ್ ಇಂಡಿಯಾ ಅಂತಿಮ ಸುತ್ತಿಗೆ ಪ್ರವೇಶಿಸಿದೆ. ಅಲ್ಲದೆ ಟಿ20 ವಿಶ್ವಕಪ್​ ಎತ್ತಿ ಹಿಡಿಯಲು ವಿರಾಟ್ ಕೊಹ್ಲಿಗೆ ಇದುವೇ ಕೊನೆಯ ಚಾನ್ಸ್ ಎಂದು ವಿಶ್ಲೇಷಿಸಲಾಗುತ್ತಿದೆ. ಹೀಗಾಗಿ ಈ ಬಾರಿಯಾದರೂ ಭಾರತ ತಂಡ ಟಿ20 ವಿಶ್ವಕಪ್ ಎತ್ತಿ ಹಿಡಿಯಲಿ ಎಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿಯ 12 ವರ್ಷಗಳ ಕನಸು ಕೊನೆಗೊಳ್ಳಲಿ ಎಂದು ಬಯಸುತ್ತಿದ್ದಾರೆ.

4 / 5
ಅದರಂತೆ ಬಾರ್ಬಡೋಸ್​ನಲ್ಲಿ ಇಂದು (ಜೂ.29) ನಡೆಯಲಿರುವ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಆಟಗಾರರು ವಿರಾಟ್ ಕೊಹ್ಲಿಯ ಅತೀ ದೊಡ್ಡ ಕನಸನ್ನು ಈಡೇರಿಸಲಿದ್ದಾರಾ ಕಾದು ನೋಡಬೇಕಿದೆ.

ಅದರಂತೆ ಬಾರ್ಬಡೋಸ್​ನಲ್ಲಿ ಇಂದು (ಜೂ.29) ನಡೆಯಲಿರುವ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಆಟಗಾರರು ವಿರಾಟ್ ಕೊಹ್ಲಿಯ ಅತೀ ದೊಡ್ಡ ಕನಸನ್ನು ಈಡೇರಿಸಲಿದ್ದಾರಾ ಕಾದು ನೋಡಬೇಕಿದೆ.

5 / 5
Follow us
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ