Virat Kohli: 12 ವರ್ಷಗಳ ಕನಸು: ವಿರಾಟ್ ಕೊಹ್ಲಿಗೆ ಇದುವೇ ಕೊನೆಯ ಚಾನ್ಸ್​

T20 World Cup 2024: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟಿ20 ವಿಶ್ವಕಪ್​ ಟ್ರೋಫಿ ಎತ್ತಿ ಹಿಡಿಯುವ ವಿಶ್ವಾಸದಲ್ಲಿದ್ದಾರೆ ವಿರಾಟ್ ಕೊಹ್ಲಿ. 2011 ರಲ್ಲಿ ವಿರಾಟ್ ಕೊಹ್ಲಿ ಏಕದಿನ ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದರು. ಆದರೆ ಈವರೆಗೆ ಟಿ20 ವಿಶ್ವಕಪ್ ಮಾತ್ರ ಗೆದ್ದಿಲ್ಲ.

|

Updated on: Jun 29, 2024 | 8:04 AM

T20 World Cup 2024: ಟಿ20 ವಿಶ್ವಕಪ್​ನ ಮಹಾಸಮರಕ್ಕೆ ವೇದಿಕೆ ಸಿದ್ಧವಾಗಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ (India vs South Africa) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಟೀಮ್ ಇಂಡಿಯಾದ ಇಬ್ಬರು ದಿಗ್ಗಜರಿಗೆ ಕೊನೆಯ ವಿಶ್ವಕಪ್ ಪಂದ್ಯವಾಗಿರಲಿದೆ. ಅಂದರೆ ಈ ಬಾರಿಯ ಟಿ20 ವಿಶ್ವಕಪ್​ನೊಂದಿಗೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಕೊನೆಗೊಳ್ಳುವುದು ಬಹುತೇಕ ಖಚಿತ.

T20 World Cup 2024: ಟಿ20 ವಿಶ್ವಕಪ್​ನ ಮಹಾಸಮರಕ್ಕೆ ವೇದಿಕೆ ಸಿದ್ಧವಾಗಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ (India vs South Africa) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಟೀಮ್ ಇಂಡಿಯಾದ ಇಬ್ಬರು ದಿಗ್ಗಜರಿಗೆ ಕೊನೆಯ ವಿಶ್ವಕಪ್ ಪಂದ್ಯವಾಗಿರಲಿದೆ. ಅಂದರೆ ಈ ಬಾರಿಯ ಟಿ20 ವಿಶ್ವಕಪ್​ನೊಂದಿಗೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಕೊನೆಗೊಳ್ಳುವುದು ಬಹುತೇಕ ಖಚಿತ.

1 / 5
ಹೀಗಾಗಿ ಟಿ20 ವಿಶ್ವಕಪ್​ ಟ್ರೋಫಿ ಎತ್ತಿ ಹಿಡಿಯಲು ವಿರಾಟ್ ಕೊಹ್ಲಿ ಪಾಲಿಗೆ ಇದುವೇ ಕೊನೆಯ ಚಾನ್ಸ್. ರೋಹಿತ್ ಶರ್ಮಾ 2007 ರಲ್ಲಿ ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾದ ಭಾಗವಾಗಿದ್ದರು. ಆದರೆ ಕಳೆದ 5 ಆವೃತ್ತಿಗಳಲ್ಲಿ ಕಣಕ್ಕಿಳಿದರೂ ಕೊಹ್ಲಿ ಪಾಲಿಗೆ ಟಿ20 ವಿಶ್ವಕಪ್ ಎಂಬುದು ಮರೀಚಿಕೆಯಾಗಿಯೇ ಉಳಿದಿದೆ.

ಹೀಗಾಗಿ ಟಿ20 ವಿಶ್ವಕಪ್​ ಟ್ರೋಫಿ ಎತ್ತಿ ಹಿಡಿಯಲು ವಿರಾಟ್ ಕೊಹ್ಲಿ ಪಾಲಿಗೆ ಇದುವೇ ಕೊನೆಯ ಚಾನ್ಸ್. ರೋಹಿತ್ ಶರ್ಮಾ 2007 ರಲ್ಲಿ ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾದ ಭಾಗವಾಗಿದ್ದರು. ಆದರೆ ಕಳೆದ 5 ಆವೃತ್ತಿಗಳಲ್ಲಿ ಕಣಕ್ಕಿಳಿದರೂ ಕೊಹ್ಲಿ ಪಾಲಿಗೆ ಟಿ20 ವಿಶ್ವಕಪ್ ಎಂಬುದು ಮರೀಚಿಕೆಯಾಗಿಯೇ ಉಳಿದಿದೆ.

2 / 5
2012 ರಲ್ಲಿ ಶುರುವಾರ ವಿರಾಟ್ ಕೊಹ್ಲಿಯ ಟಿ20 ವಿಶ್ವಕಪ್​ ಕನಸು, 2014 ರಲ್ಲಿ ಅಂತಿಮ ಹಂತಕ್ಕೆ ಬಂದಿತ್ತು. ಆದರೆ ಫೈನಲ್​ನಲ್ಲಿ ಟೀಮ್ ಇಂಡಿಯಾ ಮುಗ್ಗರಿಸಿದ ಕಾರಣ ಟ್ರೋಫಿ ಎತ್ತಿ ಹಿಡಿಯುವ ಕೊಹ್ಲಿಯ ಕನಸು ಕನಸಾಗಿಯೇ ಉಳಿಯಿತು. ಇದಾದ ಬಳಿಕ 2016, 2021 ಮತ್ತು 2022 ರ ಟಿ20 ವಿಶ್ವಕಪ್​ಗಳಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡರೂ, ಭಾರತ ತಂಡ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಲು ವಿಫಲವಾಗಿದೆ.

2012 ರಲ್ಲಿ ಶುರುವಾರ ವಿರಾಟ್ ಕೊಹ್ಲಿಯ ಟಿ20 ವಿಶ್ವಕಪ್​ ಕನಸು, 2014 ರಲ್ಲಿ ಅಂತಿಮ ಹಂತಕ್ಕೆ ಬಂದಿತ್ತು. ಆದರೆ ಫೈನಲ್​ನಲ್ಲಿ ಟೀಮ್ ಇಂಡಿಯಾ ಮುಗ್ಗರಿಸಿದ ಕಾರಣ ಟ್ರೋಫಿ ಎತ್ತಿ ಹಿಡಿಯುವ ಕೊಹ್ಲಿಯ ಕನಸು ಕನಸಾಗಿಯೇ ಉಳಿಯಿತು. ಇದಾದ ಬಳಿಕ 2016, 2021 ಮತ್ತು 2022 ರ ಟಿ20 ವಿಶ್ವಕಪ್​ಗಳಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡರೂ, ಭಾರತ ತಂಡ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಲು ವಿಫಲವಾಗಿದೆ.

3 / 5
ಇದೀಗ 10 ವರ್ಷಗಳ ಬಳಿಕ ಟೀಮ್ ಇಂಡಿಯಾ ಅಂತಿಮ ಸುತ್ತಿಗೆ ಪ್ರವೇಶಿಸಿದೆ. ಅಲ್ಲದೆ ಟಿ20 ವಿಶ್ವಕಪ್​ ಎತ್ತಿ ಹಿಡಿಯಲು ವಿರಾಟ್ ಕೊಹ್ಲಿಗೆ ಇದುವೇ ಕೊನೆಯ ಚಾನ್ಸ್ ಎಂದು ವಿಶ್ಲೇಷಿಸಲಾಗುತ್ತಿದೆ. ಹೀಗಾಗಿ ಈ ಬಾರಿಯಾದರೂ ಭಾರತ ತಂಡ ಟಿ20 ವಿಶ್ವಕಪ್ ಎತ್ತಿ ಹಿಡಿಯಲಿ ಎಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿಯ 12 ವರ್ಷಗಳ ಕನಸು ಕೊನೆಗೊಳ್ಳಲಿ ಎಂದು ಬಯಸುತ್ತಿದ್ದಾರೆ.

ಇದೀಗ 10 ವರ್ಷಗಳ ಬಳಿಕ ಟೀಮ್ ಇಂಡಿಯಾ ಅಂತಿಮ ಸುತ್ತಿಗೆ ಪ್ರವೇಶಿಸಿದೆ. ಅಲ್ಲದೆ ಟಿ20 ವಿಶ್ವಕಪ್​ ಎತ್ತಿ ಹಿಡಿಯಲು ವಿರಾಟ್ ಕೊಹ್ಲಿಗೆ ಇದುವೇ ಕೊನೆಯ ಚಾನ್ಸ್ ಎಂದು ವಿಶ್ಲೇಷಿಸಲಾಗುತ್ತಿದೆ. ಹೀಗಾಗಿ ಈ ಬಾರಿಯಾದರೂ ಭಾರತ ತಂಡ ಟಿ20 ವಿಶ್ವಕಪ್ ಎತ್ತಿ ಹಿಡಿಯಲಿ ಎಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿಯ 12 ವರ್ಷಗಳ ಕನಸು ಕೊನೆಗೊಳ್ಳಲಿ ಎಂದು ಬಯಸುತ್ತಿದ್ದಾರೆ.

4 / 5
ಅದರಂತೆ ಬಾರ್ಬಡೋಸ್​ನಲ್ಲಿ ಇಂದು (ಜೂ.29) ನಡೆಯಲಿರುವ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಆಟಗಾರರು ವಿರಾಟ್ ಕೊಹ್ಲಿಯ ಅತೀ ದೊಡ್ಡ ಕನಸನ್ನು ಈಡೇರಿಸಲಿದ್ದಾರಾ ಕಾದು ನೋಡಬೇಕಿದೆ.

ಅದರಂತೆ ಬಾರ್ಬಡೋಸ್​ನಲ್ಲಿ ಇಂದು (ಜೂ.29) ನಡೆಯಲಿರುವ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಆಟಗಾರರು ವಿರಾಟ್ ಕೊಹ್ಲಿಯ ಅತೀ ದೊಡ್ಡ ಕನಸನ್ನು ಈಡೇರಿಸಲಿದ್ದಾರಾ ಕಾದು ನೋಡಬೇಕಿದೆ.

5 / 5
Follow us
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ