T20 World Cup 2024: 15 ವರ್ಷಗಳಿಂದ ಇದೇ ಕಥೆ; ಟಿ20 ವಿಶ್ವಕಪ್​ನಲ್ಲಿ ಜಡೇಜಾ ಫೇಲ್..!

Ravindra Jadeja: ಜಡೇಜಾ ಅವರ ಬ್ಯಾಟಿಂಗ್ ವೈಫಲ್ಯದ ಕಥೆ ಹೊಸದಲ್ಲ. ಬದಲಿಗೆ ಅವರು ಯಾವಾಗಲೂ ಈ ವಿಚಾರದಲ್ಲಿ ವಿಫಲರಾಗಿದ್ದಾರೆ. ಜಡೇಜಾ 2009 ರಿಂದ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಭಾಗವಾಗಿದ್ದಾರೆ ಮತ್ತು 2022 ರ ವಿಶ್ವಕಪ್ ಹೊರತುಪಡಿಸಿ ಪ್ರತಿ ಬಾರಿ ಆಡಿದ್ದಾರೆ. ಈ ಎಲ್ಲಾ ಆವೃತ್ತಿಗಳಲ್ಲಿ ಜಡೇಜಾ ಬ್ಯಾಟಿಂಗ್​ನಲ್ಲಿ ವಿಫಲರಾಗಿದ್ದಾರೆ.

|

Updated on: Jun 10, 2024 | 5:51 PM

ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಮತ್ತೊಮ್ಮೆ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. ನ್ಯೂಯಾರ್ಕ್‌ನ ನಸ್ಸೌ ಕೌಂಟಿಯಲ್ಲಿ ಕೇವಲ 119 ರನ್ ಗಳಿಸಿದ ಹೊರತಾಗಿಯೂ ಟೀಂ ಇಂಡಿಯಾ ಪಾಕಿಸ್ತಾನವನ್ನು 6 ರನ್‌ಗಳಿಂದ ಸೋಲಿಸಿತು.

ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಮತ್ತೊಮ್ಮೆ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. ನ್ಯೂಯಾರ್ಕ್‌ನ ನಸ್ಸೌ ಕೌಂಟಿಯಲ್ಲಿ ಕೇವಲ 119 ರನ್ ಗಳಿಸಿದ ಹೊರತಾಗಿಯೂ ಟೀಂ ಇಂಡಿಯಾ ಪಾಕಿಸ್ತಾನವನ್ನು 6 ರನ್‌ಗಳಿಂದ ಸೋಲಿಸಿತು.

1 / 9
ತಂಡದ ಈ ಗೆಲುವಿನ ಶ್ರೇಯ ವೇಗಿಗಳಿಗೆ ಸಲ್ಲಬೇಕು. ಇನ್ನು ಬ್ಯಾಟಿಂಗ್ ವಿಚಾರದಲ್ಲಿ ರಿಷಬ್ ಪಂತ್ ಹೊರತುಪಡಿಸಿ ಟೀಂ ಇಂಡಿಯಾದ ಉಳಿದ ಬ್ಯಾಟ್ಸ್‌ಮನ್‌ಗಳು ವಿಫಲರಾದರು. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಸೇರಿದಂತೆ ಸ್ಟಾರ್ ಬ್ಯಾಟರ್​​ಗಳು ಸಪ್ಪೆ ಪ್ರದರ್ಶನ ನೀಡಿದರು.

ತಂಡದ ಈ ಗೆಲುವಿನ ಶ್ರೇಯ ವೇಗಿಗಳಿಗೆ ಸಲ್ಲಬೇಕು. ಇನ್ನು ಬ್ಯಾಟಿಂಗ್ ವಿಚಾರದಲ್ಲಿ ರಿಷಬ್ ಪಂತ್ ಹೊರತುಪಡಿಸಿ ಟೀಂ ಇಂಡಿಯಾದ ಉಳಿದ ಬ್ಯಾಟ್ಸ್‌ಮನ್‌ಗಳು ವಿಫಲರಾದರು. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಸೇರಿದಂತೆ ಸ್ಟಾರ್ ಬ್ಯಾಟರ್​​ಗಳು ಸಪ್ಪೆ ಪ್ರದರ್ಶನ ನೀಡಿದರು.

2 / 9
ಇವರೆಲ್ಲರ ನಡುವೆ ತಂಡದ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರ ಸತತ ವೈಫಲ್ಯ ತಂಡವನ್ನು ಚಿಂತೆಗೀಡುಮಾಡಿದೆ ಇದು ಇಂದು ನಿನ್ನೆಯ ಕಥೆಯಲ್ಲಿ ಬರೋಬ್ಬರಿ ಕಳೆದ 15 ವರ್ಷಗಳಿಂದಲ್ಲೂ ಟಿ20 ವಿಶ್ವಕಪ್​ನಲ್ಲಿ ರವೀಂದ್ರ ಜಡೇಜಾ ಬ್ಯಾಟಿಂಗ್​ನಲ್ಲಿ ತಂಡಕ್ಕೆ ನೀಡಿದ ಕೊಡುಗೆ ಅಷ್ಟಕಷ್ಟೆ.

ಇವರೆಲ್ಲರ ನಡುವೆ ತಂಡದ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರ ಸತತ ವೈಫಲ್ಯ ತಂಡವನ್ನು ಚಿಂತೆಗೀಡುಮಾಡಿದೆ ಇದು ಇಂದು ನಿನ್ನೆಯ ಕಥೆಯಲ್ಲಿ ಬರೋಬ್ಬರಿ ಕಳೆದ 15 ವರ್ಷಗಳಿಂದಲ್ಲೂ ಟಿ20 ವಿಶ್ವಕಪ್​ನಲ್ಲಿ ರವೀಂದ್ರ ಜಡೇಜಾ ಬ್ಯಾಟಿಂಗ್​ನಲ್ಲಿ ತಂಡಕ್ಕೆ ನೀಡಿದ ಕೊಡುಗೆ ಅಷ್ಟಕಷ್ಟೆ.

3 / 9
ವಾಸ್ತವವಾಗಿ ನ್ಯೂಯಾರ್ಕ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಪಿಚ್‌ ಬ್ಯಾಟಿಂಗ್‌ಗೆ ಅನುಕೂಲವಾಗುವುದಿಲ್ಲ ಎಂಬ ಆತಂಕ ಮೊದಲಿನಿಂದಲೂ ಇತ್ತು. ಅದಕ್ಕಿಂತ ಹೆಚ್ಚಾಗಿ, ಮಳೆಯಿಂದಾಗಿ ಬದಲಾದ ಪರಿಸ್ಥಿತಿಯಲ್ಲಿ ಮೊದಲು ಬ್ಯಾಟಿಂಗ್ ಮಾಡುವುದು ಇನ್ನಷ್ಟು ಕಷ್ಟಕರವಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾಗೆ ತನ್ನ ಪ್ರತಿಯೊಬ್ಬ ಬ್ಯಾಟ್ಸ್‌ಮನ್‌ಗಳ ಕೊಡುಗೆಯ ಅಗತ್ಯವಿತ್ತು.

ವಾಸ್ತವವಾಗಿ ನ್ಯೂಯಾರ್ಕ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಪಿಚ್‌ ಬ್ಯಾಟಿಂಗ್‌ಗೆ ಅನುಕೂಲವಾಗುವುದಿಲ್ಲ ಎಂಬ ಆತಂಕ ಮೊದಲಿನಿಂದಲೂ ಇತ್ತು. ಅದಕ್ಕಿಂತ ಹೆಚ್ಚಾಗಿ, ಮಳೆಯಿಂದಾಗಿ ಬದಲಾದ ಪರಿಸ್ಥಿತಿಯಲ್ಲಿ ಮೊದಲು ಬ್ಯಾಟಿಂಗ್ ಮಾಡುವುದು ಇನ್ನಷ್ಟು ಕಷ್ಟಕರವಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾಗೆ ತನ್ನ ಪ್ರತಿಯೊಬ್ಬ ಬ್ಯಾಟ್ಸ್‌ಮನ್‌ಗಳ ಕೊಡುಗೆಯ ಅಗತ್ಯವಿತ್ತು.

4 / 9
ಇದರಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಅವರಂತಹ ಬ್ಯಾಟ್ಸ್‌ಮನ್‌ಗಳು ಬೇಗನೆ ಔಟಾದರು. ಅಂತಹ ಪರಿಸ್ಥಿತಿಯಲ್ಲಿ ತಂಡದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರ ಕೊಡುಗೆ ಅತ್ಯಗತ್ಯವಾಗಿತ್ತು. ಆದರೆ ಜಡೇಜಾಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

ಇದರಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಅವರಂತಹ ಬ್ಯಾಟ್ಸ್‌ಮನ್‌ಗಳು ಬೇಗನೆ ಔಟಾದರು. ಅಂತಹ ಪರಿಸ್ಥಿತಿಯಲ್ಲಿ ತಂಡದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರ ಕೊಡುಗೆ ಅತ್ಯಗತ್ಯವಾಗಿತ್ತು. ಆದರೆ ಜಡೇಜಾಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

5 / 9
ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 15 ಓವರ್​ಗಳಲ್ಲಿ ಕೇವಲ 96 ರನ್​ಗಳಿಗೆ ಆರ್ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿಕೊಂಡಿತ್ತು. ಈ ವೇಳೆ ಜಡೇಜಾ ಕ್ರೀಸ್​ಗೆ ಕಾಲಿಟ್ಟಿದ್ದರು. ಭಾರತದ ಇನ್ನಿಂಗ್ಸ್‌ನಲ್ಲಿ ಇನ್ನೂ 35 ಎಸೆತಗಳು ಬಾಕಿ ಇದ್ದಿದ್ದರಿಂದ ಜಡೇಜಾಗೆ ಉತ್ತಮ ಇನ್ನಿಂಗ್ಸ್ ಕಟ್ಟುವ ಅವಕಾಶವಿತ್ತು. ಆದರೆ ಜಡೇಜಾ ಮೊದಲ ಎಸೆತದಲ್ಲೇ ಖಾತೆ ತೆರೆಯದೆ ಔಟಾದರು. ಈ ಮೂಲಕ ಮತ್ತೊಮ್ಮೆ ಜಡೇಜಾ ಟಿ20 ವಿಶ್ವಕಪ್‌ನಲ್ಲಿ ಅಗತ್ಯದ ಸಮಯದಲ್ಲಿ ತಮ್ಮ ಬ್ಯಾಟಿಂಗ್‌ನಲ್ಲಿ ನಿರಾಸೆ ಮೂಡಿಸಿದರು.

ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 15 ಓವರ್​ಗಳಲ್ಲಿ ಕೇವಲ 96 ರನ್​ಗಳಿಗೆ ಆರ್ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿಕೊಂಡಿತ್ತು. ಈ ವೇಳೆ ಜಡೇಜಾ ಕ್ರೀಸ್​ಗೆ ಕಾಲಿಟ್ಟಿದ್ದರು. ಭಾರತದ ಇನ್ನಿಂಗ್ಸ್‌ನಲ್ಲಿ ಇನ್ನೂ 35 ಎಸೆತಗಳು ಬಾಕಿ ಇದ್ದಿದ್ದರಿಂದ ಜಡೇಜಾಗೆ ಉತ್ತಮ ಇನ್ನಿಂಗ್ಸ್ ಕಟ್ಟುವ ಅವಕಾಶವಿತ್ತು. ಆದರೆ ಜಡೇಜಾ ಮೊದಲ ಎಸೆತದಲ್ಲೇ ಖಾತೆ ತೆರೆಯದೆ ಔಟಾದರು. ಈ ಮೂಲಕ ಮತ್ತೊಮ್ಮೆ ಜಡೇಜಾ ಟಿ20 ವಿಶ್ವಕಪ್‌ನಲ್ಲಿ ಅಗತ್ಯದ ಸಮಯದಲ್ಲಿ ತಮ್ಮ ಬ್ಯಾಟಿಂಗ್‌ನಲ್ಲಿ ನಿರಾಸೆ ಮೂಡಿಸಿದರು.

6 / 9
ಜಡೇಜಾ ಅವರ ಬ್ಯಾಟಿಂಗ್ ವೈಫಲ್ಯದ ಕಥೆ ಹೊಸದಲ್ಲ. ಬದಲಿಗೆ ಅವರು ಯಾವಾಗಲೂ ಈ ವಿಚಾರದಲ್ಲಿ ವಿಫಲರಾಗಿದ್ದಾರೆ. ಜಡೇಜಾ 2009 ರಿಂದ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಭಾಗವಾಗಿದ್ದಾರೆ ಮತ್ತು 2022 ರ ವಿಶ್ವಕಪ್ ಹೊರತುಪಡಿಸಿ ಪ್ರತಿ ಬಾರಿ ಆಡಿದ್ದಾರೆ.

ಜಡೇಜಾ ಅವರ ಬ್ಯಾಟಿಂಗ್ ವೈಫಲ್ಯದ ಕಥೆ ಹೊಸದಲ್ಲ. ಬದಲಿಗೆ ಅವರು ಯಾವಾಗಲೂ ಈ ವಿಚಾರದಲ್ಲಿ ವಿಫಲರಾಗಿದ್ದಾರೆ. ಜಡೇಜಾ 2009 ರಿಂದ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಭಾಗವಾಗಿದ್ದಾರೆ ಮತ್ತು 2022 ರ ವಿಶ್ವಕಪ್ ಹೊರತುಪಡಿಸಿ ಪ್ರತಿ ಬಾರಿ ಆಡಿದ್ದಾರೆ.

7 / 9
ಈ ಎಲ್ಲಾ ಆವೃತ್ತಿಗಳಲ್ಲಿ ಜಡೇಜಾಗೆ ಯಾವಾಗಲೂ ಬ್ಯಾಟಿಂಗ್ ಮಾಡುವ ಅವಕಾಶ ಸಿಗುತ್ತಿರಲಿಲ್ಲ. ಆದರೆ ಅವಕಾಶ ಸಿಕ್ಕಾಗಲೂ ಜಡೇಜಾಗೆ ಕೊಡುಗೆ ನೀಡಲು ಸಾಧ್ಯವಾಗಿಲ್ಲ. ಟಿ20 ವಿಶ್ವಕಪ್‌ನಲ್ಲಿ ಇದುವರೆಗೆ 10 ಇನ್ನಿಂಗ್ಸ್‌ಗಳನ್ನು ಆಡಿರುವ ಜಡೇಜಾ 99 ಎಸೆತಗಳನ್ನು ಆಡಿದ್ದರೂ 95 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಇದರಲ್ಲಿ ಕೇವಲ 6 ಬೌಂಡರಿ ಮತ್ತು 1 ಸಿಕ್ಸರ್ ಮಾತ್ರ ಸೇರಿವೆ.

ಈ ಎಲ್ಲಾ ಆವೃತ್ತಿಗಳಲ್ಲಿ ಜಡೇಜಾಗೆ ಯಾವಾಗಲೂ ಬ್ಯಾಟಿಂಗ್ ಮಾಡುವ ಅವಕಾಶ ಸಿಗುತ್ತಿರಲಿಲ್ಲ. ಆದರೆ ಅವಕಾಶ ಸಿಕ್ಕಾಗಲೂ ಜಡೇಜಾಗೆ ಕೊಡುಗೆ ನೀಡಲು ಸಾಧ್ಯವಾಗಿಲ್ಲ. ಟಿ20 ವಿಶ್ವಕಪ್‌ನಲ್ಲಿ ಇದುವರೆಗೆ 10 ಇನ್ನಿಂಗ್ಸ್‌ಗಳನ್ನು ಆಡಿರುವ ಜಡೇಜಾ 99 ಎಸೆತಗಳನ್ನು ಆಡಿದ್ದರೂ 95 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಇದರಲ್ಲಿ ಕೇವಲ 6 ಬೌಂಡರಿ ಮತ್ತು 1 ಸಿಕ್ಸರ್ ಮಾತ್ರ ಸೇರಿವೆ.

8 / 9
ಬ್ಯಾಟಿಂಗ್​ನಲ್ಲಿ ಜಡೇಜಾ ಸಪ್ಪೆ ಪ್ರದರ್ಶನ ನೀಡಿದ್ದರೂ, ಬೌಲಿಂಗ್​ನಲ್ಲಿ ತಮ್ಮ ಕೊಡುಗೆ ನೀಡಿದ್ದಾರೆ. ವಿಶ್ವಕಪ್ ಇತಿಹಾಸದಲ್ಲಿ ಭಾರತದ ಅತ್ಯಂತ ಯಶಸ್ವಿ ಬೌಲರ್‌ಗಳಲ್ಲಿ ಒಬ್ಬರಾಗಿರುವ ಅವರು 21 ವಿಕೆಟ್ ಪಡೆದಿದ್ದಾರೆ ಆದರೆ ಬ್ಯಾಟಿಂಗ್‌ನಲ್ಲಿಯೂ ಅವರಿಂದ ದೊಡ್ಡ ನಿರೀಕ್ಷೆಗಳಿವೆ. ಆದರೆ ಇದುವರೆಗೂ ಜಡೇಜಾ ಬ್ಯಾಟಿಂಗ್ ಮೂಲಕ ಯಾವುದೇ ಗಮನಾರ್ಹ ಪ್ರದರ್ಶನ ನೀಡಿಲ್ಲ.

ಬ್ಯಾಟಿಂಗ್​ನಲ್ಲಿ ಜಡೇಜಾ ಸಪ್ಪೆ ಪ್ರದರ್ಶನ ನೀಡಿದ್ದರೂ, ಬೌಲಿಂಗ್​ನಲ್ಲಿ ತಮ್ಮ ಕೊಡುಗೆ ನೀಡಿದ್ದಾರೆ. ವಿಶ್ವಕಪ್ ಇತಿಹಾಸದಲ್ಲಿ ಭಾರತದ ಅತ್ಯಂತ ಯಶಸ್ವಿ ಬೌಲರ್‌ಗಳಲ್ಲಿ ಒಬ್ಬರಾಗಿರುವ ಅವರು 21 ವಿಕೆಟ್ ಪಡೆದಿದ್ದಾರೆ ಆದರೆ ಬ್ಯಾಟಿಂಗ್‌ನಲ್ಲಿಯೂ ಅವರಿಂದ ದೊಡ್ಡ ನಿರೀಕ್ಷೆಗಳಿವೆ. ಆದರೆ ಇದುವರೆಗೂ ಜಡೇಜಾ ಬ್ಯಾಟಿಂಗ್ ಮೂಲಕ ಯಾವುದೇ ಗಮನಾರ್ಹ ಪ್ರದರ್ಶನ ನೀಡಿಲ್ಲ.

9 / 9
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್