AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ರಿಷಬ್ ಪಂತ್ ಪಾಲಿಗೆ ವರವಾಗ್ತಾರಾ ಕಿಂಗ್ ಕೊಹ್ಲಿ?

T20 World Cup 2024: ಟೀಂ ಇಂಡಿಯಾದಲ್ಲಾಗುತ್ತಿರುವ ಪ್ರಮುಖ ಬದಲಾವಣೆಯೆಂದರೆ ಅದು ಬ್ಯಾಟಿಂಗ್ ಕ್ರಮಾಂಕದಲ್ಲಿ ನೂತನ ಪ್ರಯೋಗ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ವಿರಾಟ್ ಕೊಹ್ಲಿ ರೋಹಿತ್ ಶರ್ಮಾ ಅವರೊಂದಿಗೆ ಓಪನಿಂಗ್ ಮಾಡಬಹುದು ಎಂದು ಹೇಳಲಾಗುತ್ತಿದೆ. ಒಂದು ವೇಳೆ ಈ ವರದಿ ನಿಜವಾದರೆ, ಇದು ಖಂಡಿತವಾಗಿಯೂ ತಂಡದ ವಿಕೆಟ್​ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್​ಗೆ ಭರ್ಜರಿ ಲಾಭವಾಗಲಿದೆ.

ಪೃಥ್ವಿಶಂಕರ
|

Updated on: Jun 05, 2024 | 5:25 PM

Share
2024ರ ಟಿ20 ವಿಶ್ವಕಪ್‌ನಲ್ಲಿ ಐರ್ಲೆಂಡ್ ವಿರುದ್ಧ ಇಂದು ನಡೆಯಲ್ಲಿರುವ ಪಂದ್ಯದೊಂದಿಗೆ ಟೀಂ ಇಂಡಿಯಾ ತನ್ನ ಅಭಿಯಾನ ಆರಂಭಿಸುತ್ತಿದೆ. ನ್ಯೂಯಾರ್ಕ್‌ನ ನಸ್ಸೌ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾ ಪ್ರಮುಖ ಬದಲಾವಣೆಯೊಂದಿಗೆ ಅಖಾಡಕ್ಕಿಳಿಯುವ ಮುನ್ಸೂಚನೆಗಳು ಈಗಾಗಲೇ ಸಿಕ್ಕಿವೆ.

2024ರ ಟಿ20 ವಿಶ್ವಕಪ್‌ನಲ್ಲಿ ಐರ್ಲೆಂಡ್ ವಿರುದ್ಧ ಇಂದು ನಡೆಯಲ್ಲಿರುವ ಪಂದ್ಯದೊಂದಿಗೆ ಟೀಂ ಇಂಡಿಯಾ ತನ್ನ ಅಭಿಯಾನ ಆರಂಭಿಸುತ್ತಿದೆ. ನ್ಯೂಯಾರ್ಕ್‌ನ ನಸ್ಸೌ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾ ಪ್ರಮುಖ ಬದಲಾವಣೆಯೊಂದಿಗೆ ಅಖಾಡಕ್ಕಿಳಿಯುವ ಮುನ್ಸೂಚನೆಗಳು ಈಗಾಗಲೇ ಸಿಕ್ಕಿವೆ.

1 / 7
ಟೀಂ ಇಂಡಿಯಾದಲ್ಲಾಗುತ್ತಿರುವ ಪ್ರಮುಖ ಬದಲಾವಣೆಯೆಂದರೆ ಅದು ಬ್ಯಾಟಿಂಗ್ ಕ್ರಮಾಂಕದಲ್ಲಿ ನೂತನ ಪ್ರಯೋಗ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ವಿರಾಟ್ ಕೊಹ್ಲಿ ರೋಹಿತ್ ಶರ್ಮಾ ಅವರೊಂದಿಗೆ ಓಪನಿಂಗ್ ಮಾಡಬಹುದು ಎಂದು ಹೇಳಲಾಗುತ್ತಿದೆ. ಒಂದು ವೇಳೆ ಈ ವರದಿ ನಿಜವಾದರೆ, ಇದು ಖಂಡಿತವಾಗಿಯೂ ತಂಡದ ವಿಕೆಟ್​ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್​ಗೆ ಭರ್ಜರಿ ಲಾಭವಾಗಲಿದೆ.

ಟೀಂ ಇಂಡಿಯಾದಲ್ಲಾಗುತ್ತಿರುವ ಪ್ರಮುಖ ಬದಲಾವಣೆಯೆಂದರೆ ಅದು ಬ್ಯಾಟಿಂಗ್ ಕ್ರಮಾಂಕದಲ್ಲಿ ನೂತನ ಪ್ರಯೋಗ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ವಿರಾಟ್ ಕೊಹ್ಲಿ ರೋಹಿತ್ ಶರ್ಮಾ ಅವರೊಂದಿಗೆ ಓಪನಿಂಗ್ ಮಾಡಬಹುದು ಎಂದು ಹೇಳಲಾಗುತ್ತಿದೆ. ಒಂದು ವೇಳೆ ಈ ವರದಿ ನಿಜವಾದರೆ, ಇದು ಖಂಡಿತವಾಗಿಯೂ ತಂಡದ ವಿಕೆಟ್​ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್​ಗೆ ಭರ್ಜರಿ ಲಾಭವಾಗಲಿದೆ.

2 / 7
ಅದು ಹೇಗೆಂದರೆ? ಒಂದು ವೇಳೆ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದರೆ, ಅವರು ಈಗ ಆಡುತ್ತಿರುವ ಮೂರನೇ ಕ್ರಮಾಂಕ ರಿಷಬ್ ಪಂತ್​ಗೆ ಸಿಗಲಿದೆ. ಇದರಿಂದ ಈ ಹಿಂದೆ ಗೇಮ್ ಫಿನಿಶರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಪಂತ್​ಗೆ ಮೂರನೇ ಕ್ರಮಾಂಕದಲ್ಲಿ ಮುಕ್ತವಾಗಿ ಆಡುವ ಅವಕಾಶ ಸಿಗಲಿದೆ.

ಅದು ಹೇಗೆಂದರೆ? ಒಂದು ವೇಳೆ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದರೆ, ಅವರು ಈಗ ಆಡುತ್ತಿರುವ ಮೂರನೇ ಕ್ರಮಾಂಕ ರಿಷಬ್ ಪಂತ್​ಗೆ ಸಿಗಲಿದೆ. ಇದರಿಂದ ಈ ಹಿಂದೆ ಗೇಮ್ ಫಿನಿಶರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಪಂತ್​ಗೆ ಮೂರನೇ ಕ್ರಮಾಂಕದಲ್ಲಿ ಮುಕ್ತವಾಗಿ ಆಡುವ ಅವಕಾಶ ಸಿಗಲಿದೆ.

3 / 7
ರಿಷಬ್ ಪಂತ್ 3ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಯಶಸ್ವಿ ಜೈಸ್ವಾಲ್ ಅವರನ್ನು ಪ್ಲೇಯಿಂಗ್ 11 ನಿಂದ ಹೊರಗಿಟ್ಟಿರುವುದು ಒಂದು ಕಾರಣ. ಟೀಂ ಇಂಡಿಯಾ ವಿರಾಟ್‌ಗೆ ಮುಕ್ತ ಅವಕಾಶ ನೀಡಿದರೆ, ಪಂತ್ 3 ನೇ ಸ್ಥಾನಕ್ಕೆ ಉತ್ತಮ ಆಯ್ಕೆಯಾಗುತ್ತಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವಾಗಿ ಅಭ್ಯಾಸ ಪಂದ್ಯದಲ್ಲೂ ಪಂತ್ ಮೂರನೇ ಕ್ರಮಾಂದಲ್ಲಿ ಬ್ಯಾಟ್ ಬೀಸಿದ್ದರು.

ರಿಷಬ್ ಪಂತ್ 3ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಯಶಸ್ವಿ ಜೈಸ್ವಾಲ್ ಅವರನ್ನು ಪ್ಲೇಯಿಂಗ್ 11 ನಿಂದ ಹೊರಗಿಟ್ಟಿರುವುದು ಒಂದು ಕಾರಣ. ಟೀಂ ಇಂಡಿಯಾ ವಿರಾಟ್‌ಗೆ ಮುಕ್ತ ಅವಕಾಶ ನೀಡಿದರೆ, ಪಂತ್ 3 ನೇ ಸ್ಥಾನಕ್ಕೆ ಉತ್ತಮ ಆಯ್ಕೆಯಾಗುತ್ತಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವಾಗಿ ಅಭ್ಯಾಸ ಪಂದ್ಯದಲ್ಲೂ ಪಂತ್ ಮೂರನೇ ಕ್ರಮಾಂದಲ್ಲಿ ಬ್ಯಾಟ್ ಬೀಸಿದ್ದರು.

4 / 7
ನ್ಯೂಯಾರ್ಕ್ ಪಿಚ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದ ಪಂತ್ ಗೆಲುವಿನ ಅರ್ಧಶತಕ ಸಿಡಿಸಿದ್ದರು. ಈ ಕ್ರಮಾಂಕದಲ್ಲಿ ನಿರ್ಭೀತಿಯಿಂದ ಬ್ಯಾಟ್ ಬೀಸಿದ್ದ ಪಂತ್ ಅವರ ಗುಣ ಅವರಿಗೆ 3ನೇ ಕ್ರಮಾಂಕದಲ್ಲಿ ಅವಕಾಶ ನೀಡುವುದಕ್ಕೆ ಪುಷ್ಠಿ ನೀಡಿತ್ತಿದೆ.

ನ್ಯೂಯಾರ್ಕ್ ಪಿಚ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದ ಪಂತ್ ಗೆಲುವಿನ ಅರ್ಧಶತಕ ಸಿಡಿಸಿದ್ದರು. ಈ ಕ್ರಮಾಂಕದಲ್ಲಿ ನಿರ್ಭೀತಿಯಿಂದ ಬ್ಯಾಟ್ ಬೀಸಿದ್ದ ಪಂತ್ ಅವರ ಗುಣ ಅವರಿಗೆ 3ನೇ ಕ್ರಮಾಂಕದಲ್ಲಿ ಅವಕಾಶ ನೀಡುವುದಕ್ಕೆ ಪುಷ್ಠಿ ನೀಡಿತ್ತಿದೆ.

5 / 7
ಅರ್ಥಾತ್ ಟೀಂ ಇಂಡಿಯಾ ಆರಂಭದಲ್ಲೇ ಮೊದಲ ವಿಕೆಟ್ ಕಳೆದುಕೊಂಡರೂ ಪಂತ್ ವೇಗದ ಬ್ಯಾಟಿಂಗ್ ಮೂಲಕ ರನ್ ರೇಟ್ ಹೆಚ್ಚಿಸಬಲ್ಲರು. ಪಂತ್ ನಂತರ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಅವರಂತಹ ಬ್ಯಾಟ್ಸ್‌ಮನ್‌ಗಳೂ ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ. ಹೀಗಾಗಿ ಇದೊಂದು ಬದಲಾವಣೆ ತಂಡದ ಫಲಿತಾಂಶದ ಮೇಲೆ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆಗಳಿವೆ.

ಅರ್ಥಾತ್ ಟೀಂ ಇಂಡಿಯಾ ಆರಂಭದಲ್ಲೇ ಮೊದಲ ವಿಕೆಟ್ ಕಳೆದುಕೊಂಡರೂ ಪಂತ್ ವೇಗದ ಬ್ಯಾಟಿಂಗ್ ಮೂಲಕ ರನ್ ರೇಟ್ ಹೆಚ್ಚಿಸಬಲ್ಲರು. ಪಂತ್ ನಂತರ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಅವರಂತಹ ಬ್ಯಾಟ್ಸ್‌ಮನ್‌ಗಳೂ ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ. ಹೀಗಾಗಿ ಇದೊಂದು ಬದಲಾವಣೆ ತಂಡದ ಫಲಿತಾಂಶದ ಮೇಲೆ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆಗಳಿವೆ.

6 / 7
ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!