IND vs IRE: ಮೊದಲ ಪಂದ್ಯದಲ್ಲೇ ದಾಖಲೆಗಳ ಸರಮಾಲೆ ಕಟ್ಟಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ..!

T20 World Cup 2024 Rohit Sharma: ಈ ಪಂದ್ಯದಲ್ಲಿ 37 ಎಸೆತಗಳನ್ನು ಎದುರಿಸಿದ ರೋಹಿತ್ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 52 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಇದರೊಂದಿಗೆ ಈ ಪಂದ್ಯದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದರು. ಅದರಲ್ಲಿ ಪ್ರಮುಖ 3 ದಾಖಲೆಗಳ ಪಟ್ಟಿ ಇಲ್ಲಿದೆ.

|

Updated on: Jun 05, 2024 | 11:24 PM

ಇಂದು ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಟೀಂ ಇಂಡಿಯಾ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಐರ್ಲೆಂಡ್ ನೀಡಿದ 96 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ ಅಜೇಯ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಇಂದು ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಟೀಂ ಇಂಡಿಯಾ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಐರ್ಲೆಂಡ್ ನೀಡಿದ 96 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ ಅಜೇಯ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

1 / 6
ಈ ಪಂದ್ಯದಲ್ಲಿ 37 ಎಸೆತಗಳನ್ನು ಎದುರಿಸಿದ ರೋಹಿತ್ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 52 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಇದರೊಂದಿಗೆ ಈ ಪಂದ್ಯದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದರು. ಅದರಲ್ಲಿ ಪ್ರಮುಖ 3 ದಾಖಲೆಗಳ ಪಟ್ಟಿ ಇಲ್ಲಿದೆ.

ಈ ಪಂದ್ಯದಲ್ಲಿ 37 ಎಸೆತಗಳನ್ನು ಎದುರಿಸಿದ ರೋಹಿತ್ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 52 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಇದರೊಂದಿಗೆ ಈ ಪಂದ್ಯದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದರು. ಅದರಲ್ಲಿ ಪ್ರಮುಖ 3 ದಾಖಲೆಗಳ ಪಟ್ಟಿ ಇಲ್ಲಿದೆ.

2 / 6
ತಂಡದ ಪರ 52 ರನ್​​ಗಳ ಇನ್ನಿಂಗ್ಸ್ ಆಡಿದ ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದರು. ಇದರೊಂದಿಗೆ ಈ ಸಾಧನೆ ಮಾಡಿದ ವಿಶ್ವದ ಮೂರನೇ ಆಟಗಾರ ಎನಿಸಿಕೊಂಡಿರು. ಇದಕ್ಕೂ ಮುನ್ನ ಭಾರತದ ಆಟಗಾರ ವಿರಾಟ್ ಕೊಹ್ಲಿ ಮತ್ತು ಪಾಕಿಸ್ತಾನಿ ಆಟಗಾರ ಬಾಬರ್ ಆಝಂ ಈ ಸಾಧನೆ ಮಾಡಿದ್ದರು.

ತಂಡದ ಪರ 52 ರನ್​​ಗಳ ಇನ್ನಿಂಗ್ಸ್ ಆಡಿದ ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದರು. ಇದರೊಂದಿಗೆ ಈ ಸಾಧನೆ ಮಾಡಿದ ವಿಶ್ವದ ಮೂರನೇ ಆಟಗಾರ ಎನಿಸಿಕೊಂಡಿರು. ಇದಕ್ಕೂ ಮುನ್ನ ಭಾರತದ ಆಟಗಾರ ವಿರಾಟ್ ಕೊಹ್ಲಿ ಮತ್ತು ಪಾಕಿಸ್ತಾನಿ ಆಟಗಾರ ಬಾಬರ್ ಆಝಂ ಈ ಸಾಧನೆ ಮಾಡಿದ್ದರು.

3 / 6
ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 4038 ರನ್ ಗಳಿಸಿದ್ದರೆ, ಬಾಬರ್ ಆಝಂ ಟಿ20ಯಲ್ಲಿ ಒಟ್ಟು 4023 ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ ತಮ್ಮ 152ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದು, ಅತಿ ಕಡಿಮೆ ಎಸೆತಗಳಲ್ಲಿ ಅಂದರೆ 2861 ಎಸೆತಗಳಲ್ಲಿ 4000 ರನ್ ಪೂರೈಸಿದ ದಾಖಲೆ ಬರೆದಿದ್ದಾರೆ.

ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 4038 ರನ್ ಗಳಿಸಿದ್ದರೆ, ಬಾಬರ್ ಆಝಂ ಟಿ20ಯಲ್ಲಿ ಒಟ್ಟು 4023 ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ ತಮ್ಮ 152ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದು, ಅತಿ ಕಡಿಮೆ ಎಸೆತಗಳಲ್ಲಿ ಅಂದರೆ 2861 ಎಸೆತಗಳಲ್ಲಿ 4000 ರನ್ ಪೂರೈಸಿದ ದಾಖಲೆ ಬರೆದಿದ್ದಾರೆ.

4 / 6
ಹಾಗೆಯೇ ರೋಹಿತ್ ಶರ್ಮಾ ಟಿ20 ವಿಶ್ವಕಪ್‌ನಲ್ಲಿ 1000 ರನ್ ಗಳಿಸಿದ ದಾಖಲೆಯನ್ನೂ ಮಾಡಿದ್ದಾರೆ. ಇದಕ್ಕೂ ಮುನ್ನ ಭಾರತದ ಆಟಗಾರ ವಿರಾಟ್ ಕೊಹ್ಲಿ ಹಾಗೂ ಶ್ರೀಲಂಕಾ ಆಟಗಾರ ಮಹೇಲಾ ಜಯವರ್ಧನೆ ಈ ಸಾಧನೆ ಮಾಡಿದ್ದರು. ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಇಲ್ಲಿಯವರೆಗೆ 1142 ರನ್ ಗಳಿಸಿದ್ದರೆ, ಟಿ20 ವಿಶ್ವಕಪ್‌ನಲ್ಲಿ ಮಹೇಲಾ ಜಯವರ್ಧನೆ 1016 ರನ್ ಬಾರಿಸಿದ್ದಾರೆ.

ಹಾಗೆಯೇ ರೋಹಿತ್ ಶರ್ಮಾ ಟಿ20 ವಿಶ್ವಕಪ್‌ನಲ್ಲಿ 1000 ರನ್ ಗಳಿಸಿದ ದಾಖಲೆಯನ್ನೂ ಮಾಡಿದ್ದಾರೆ. ಇದಕ್ಕೂ ಮುನ್ನ ಭಾರತದ ಆಟಗಾರ ವಿರಾಟ್ ಕೊಹ್ಲಿ ಹಾಗೂ ಶ್ರೀಲಂಕಾ ಆಟಗಾರ ಮಹೇಲಾ ಜಯವರ್ಧನೆ ಈ ಸಾಧನೆ ಮಾಡಿದ್ದರು. ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಇಲ್ಲಿಯವರೆಗೆ 1142 ರನ್ ಗಳಿಸಿದ್ದರೆ, ಟಿ20 ವಿಶ್ವಕಪ್‌ನಲ್ಲಿ ಮಹೇಲಾ ಜಯವರ್ಧನೆ 1016 ರನ್ ಬಾರಿಸಿದ್ದಾರೆ.

5 / 6
ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಮೂರು ಸಿಕ್ಸರ್ ಬಾರಿಸಿದರು. ಇದರೊಂದಿಗೆ ಅವರು 600 ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ವೆಸ್ಟ್ ಇಂಡೀಸ್​ನ ಮಾಜಿ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಅವರು ಒಟ್ಟು 553 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಮೂರು ಸಿಕ್ಸರ್ ಬಾರಿಸಿದರು. ಇದರೊಂದಿಗೆ ಅವರು 600 ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ವೆಸ್ಟ್ ಇಂಡೀಸ್​ನ ಮಾಜಿ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಅವರು ಒಟ್ಟು 553 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

6 / 6
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್