AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: 8 ಸಿಕ್ಸರ್, 7 ಬೌಂಡರಿ, 92 ರನ್! ಕಾಂಗರೂಗಳ ಸೊಕ್ಕಡಗಿಸಿದ ರೋಹಿತ್ ಶರ್ಮಾ

IND vs AUS, T20 World Cup 2024: ಆರಂಭದಿಂದಲೂ ಸಿಡಿಲಬ್ಬರದ ಬ್ಯಾಟಿಂಗ್​ ಮಾಡಿದ ರೋಹಿತ್ ಶರ್ಮಾ, ಕ್ರೀಸ್​ನಲ್ಲಿರುವವರೆಗೂ ಕಾಂಗರೂ ಬೌಲರ್​ಗಳ ಸೊಕ್ಕಡಗಿಸುವ ಕೆಲಸ ಮಾಡಿದರು. ಅಂತಿಮವಾಗಿ ರೋಹಿತ್ 41 ಎಸೆತಗಳಲ್ಲಿ 7 ಬೌಂಡರಿ, 8 ಸಿಕ್ಸರ್‌ಗಳೊಂದಿಗೆ 224.38 ಸ್ಟ್ರೈಕ್ ರೇಟ್‌ನಲ್ಲಿ 92 ರನ್ ಗಳಿಸಿ ಔಟಾದರು.

ಪೃಥ್ವಿಶಂಕರ
|

Updated on: Jun 24, 2024 | 9:37 PM

Share
ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಸೂಪರ್ 8 ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ ತಂಡದ ಇನ್ನಿಂಗ್ಸ್​ಗೆ ಬಲ ತುಂಬಿದ್ದಾರೆ.

ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಸೂಪರ್ 8 ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ ತಂಡದ ಇನ್ನಿಂಗ್ಸ್​ಗೆ ಬಲ ತುಂಬಿದ್ದಾರೆ.

1 / 6
ಈ ಪಂದ್ಯದಲ್ಲಿ ಎಂದಿನಂತೆ ವಿರಾಟ್ ಕೊಹ್ಲಿ ಜೊತೆಗೆ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ, ಮೊದಲ ಓವರ್​ನ ಮೂರನೇ ಎಸೆತದಲ್ಲಿ ಬೌಂಡರಿ ಬಾರಿಸುವುದರೊಂದಿಗೆ ತಮ್ಮ ಖಾತೆ ತೆರೆದರು. ಇಲ್ಲಿಂದ ರೋಹಿತ್​ರನ್ನು ಕಟ್ಟಿಹಾಕಲು ಯಾವ ಆಸೀಸ್ ವೇಗಿಗೂ ಸಾಧ್ಯಾವಾಗಲಿಲ್ಲ.

ಈ ಪಂದ್ಯದಲ್ಲಿ ಎಂದಿನಂತೆ ವಿರಾಟ್ ಕೊಹ್ಲಿ ಜೊತೆಗೆ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ, ಮೊದಲ ಓವರ್​ನ ಮೂರನೇ ಎಸೆತದಲ್ಲಿ ಬೌಂಡರಿ ಬಾರಿಸುವುದರೊಂದಿಗೆ ತಮ್ಮ ಖಾತೆ ತೆರೆದರು. ಇಲ್ಲಿಂದ ರೋಹಿತ್​ರನ್ನು ಕಟ್ಟಿಹಾಕಲು ಯಾವ ಆಸೀಸ್ ವೇಗಿಗೂ ಸಾಧ್ಯಾವಾಗಲಿಲ್ಲ.

2 / 6
ಮಿಚೆಲ್ ಸ್ಟಾರ್ಕ್​ ಎಸೆದ ಮೂರನೇ ಓವರ್​ನಲ್ಲಿ ಬರೋಬ್ಬರಿ 4 ಸಿಕ್ಸರ್ ಹಾಗೂ 1 ಬೌಂಡರಿ ಸಹಿತ 28 ರನ್ ಸಿಡಿಸಿದ ರೋಹಿತ್ ಶರ್ಮಾ ಕೇವಲ 19 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಇಲ್ಲಿಗೆ ನಿಲ್ಲದ ರೋಹಿತ್ ಕಾಂಗರೂ ಬೌಲರ್​ಗಳ ಬೆವರಿಳಿಸಿದರು.

ಮಿಚೆಲ್ ಸ್ಟಾರ್ಕ್​ ಎಸೆದ ಮೂರನೇ ಓವರ್​ನಲ್ಲಿ ಬರೋಬ್ಬರಿ 4 ಸಿಕ್ಸರ್ ಹಾಗೂ 1 ಬೌಂಡರಿ ಸಹಿತ 28 ರನ್ ಸಿಡಿಸಿದ ರೋಹಿತ್ ಶರ್ಮಾ ಕೇವಲ 19 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಇಲ್ಲಿಗೆ ನಿಲ್ಲದ ರೋಹಿತ್ ಕಾಂಗರೂ ಬೌಲರ್​ಗಳ ಬೆವರಿಳಿಸಿದರು.

3 / 6
ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡವನ್ನು ಕೇವಲ 10 ಓವರ್​​ಗಳಲ್ಲಿ 100 ರನ್​ಗಳ ಗಡಿ ದಾಟಿಸಿದ ರೋಹಿತ್ ಶತಕದತ್ತ ದಾಪುಗಾಲಿಡುತ್ತಿದ್ದರು. ಅಲ್ಲದೆ ಸೂರ್ಯಕುಮಾರ್ ಜೊತೆಗೆ ಒಳ್ಳೇಯ ಜೊತೆಯಾಟವನ್ನು ಕಟ್ಟುತ್ತಿದ್ದರು. ಆದರೆ ಸ್ಟಾರ್ಕ್ ಓವರ್​ನಲ್ಲಿ ಸಿಕ್ಸರ್ ಸಿಡಿಸುವ ಯತ್ನದಲ್ಲಿ ಬೌಲ್ಡ್ ಆಗಿ ವಿಕೆಟ್ ಒಪ್ಪಿಸಿದರು.

ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡವನ್ನು ಕೇವಲ 10 ಓವರ್​​ಗಳಲ್ಲಿ 100 ರನ್​ಗಳ ಗಡಿ ದಾಟಿಸಿದ ರೋಹಿತ್ ಶತಕದತ್ತ ದಾಪುಗಾಲಿಡುತ್ತಿದ್ದರು. ಅಲ್ಲದೆ ಸೂರ್ಯಕುಮಾರ್ ಜೊತೆಗೆ ಒಳ್ಳೇಯ ಜೊತೆಯಾಟವನ್ನು ಕಟ್ಟುತ್ತಿದ್ದರು. ಆದರೆ ಸ್ಟಾರ್ಕ್ ಓವರ್​ನಲ್ಲಿ ಸಿಕ್ಸರ್ ಸಿಡಿಸುವ ಯತ್ನದಲ್ಲಿ ಬೌಲ್ಡ್ ಆಗಿ ವಿಕೆಟ್ ಒಪ್ಪಿಸಿದರು.

4 / 6
ಮೇಲೆ ಹೇಳಿದಂತೆ ಆರಂಭದಿಂದಲೂ ಸಿಡಿಲಬ್ಬರದ ಬ್ಯಾಟಿಂಗ್​ ಮಾಡಿದ ರೋಹಿತ್ ಶರ್ಮಾ, ಕ್ರೀಸ್​ನಲ್ಲಿರುವವರೆಗೂ ಕಾಂಗರೂ ಬೌಲರ್​ಗಳ ಸೊಕ್ಕಡಗಿಸುವ ಕೆಲಸ ಮಾಡಿದರು. ಅಂತಿಮವಾಗಿ ರೋಹಿತ್ 41 ಎಸೆತಗಳಲ್ಲಿ 7 ಬೌಂಡರಿ, 8 ಸಿಕ್ಸರ್‌ಗಳೊಂದಿಗೆ 224.38 ಸ್ಟ್ರೈಕ್ ರೇಟ್‌ನಲ್ಲಿ 92 ರನ್ ಗಳಿಸಿ ಔಟಾದರು.

ಮೇಲೆ ಹೇಳಿದಂತೆ ಆರಂಭದಿಂದಲೂ ಸಿಡಿಲಬ್ಬರದ ಬ್ಯಾಟಿಂಗ್​ ಮಾಡಿದ ರೋಹಿತ್ ಶರ್ಮಾ, ಕ್ರೀಸ್​ನಲ್ಲಿರುವವರೆಗೂ ಕಾಂಗರೂ ಬೌಲರ್​ಗಳ ಸೊಕ್ಕಡಗಿಸುವ ಕೆಲಸ ಮಾಡಿದರು. ಅಂತಿಮವಾಗಿ ರೋಹಿತ್ 41 ಎಸೆತಗಳಲ್ಲಿ 7 ಬೌಂಡರಿ, 8 ಸಿಕ್ಸರ್‌ಗಳೊಂದಿಗೆ 224.38 ಸ್ಟ್ರೈಕ್ ರೇಟ್‌ನಲ್ಲಿ 92 ರನ್ ಗಳಿಸಿ ಔಟಾದರು.

5 / 6
ಇದಲ್ಲದೆ ಈ ಪಂದ್ಯದಲ್ಲಿ ಬರೋಬ್ಬರಿ 8 ಸಿಕ್ಸರ್ಗಳನ್ನು ಸಿಡಿಸಿದ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 200 ಸಿಕ್ಸರ್​ಗಳ ಗಡಿಯನ್ನೂ ದಾಟಿದರು.

ಇದಲ್ಲದೆ ಈ ಪಂದ್ಯದಲ್ಲಿ ಬರೋಬ್ಬರಿ 8 ಸಿಕ್ಸರ್ಗಳನ್ನು ಸಿಡಿಸಿದ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 200 ಸಿಕ್ಸರ್​ಗಳ ಗಡಿಯನ್ನೂ ದಾಟಿದರು.

6 / 6
Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ