AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ಗೆ ಹಾರ್ದಿಕ್ ನಾಯಕ! ಖಚಿತ ಪಡಿಸಿದ ಸ್ಟಾರ್ ಸ್ಪೋರ್ಟ್ಸ್​ ಪೋಸ್ಟರ್

T20 World Cup 2024: ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಸಂಬಂಧಿಸಿದಂತೆ ಎರಡೂ ತಂಡಗಳ ನಾಯಕರನ್ನು ಒಳಗೊಂಡ ಪೋಸ್ಟರ್ ಅನ್ನು ಸ್ಟಾರ್ ಸ್ಪೋರ್ಟ್ಸ್ ಹಂಚಿಕೊಂಡಿದೆ. ಅದರಲ್ಲಿ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ಭಾರತ ತಂಡದ ನಾಯಕರನ್ನಾಗಿ ತೋರಿಸಲಾಗಿದೆ.

ಪೃಥ್ವಿಶಂಕರ
|

Updated on:Jan 06, 2024 | 4:39 PM

Share
ಐಸಿಸಿ ನಿನ್ನೆಯಷ್ಟೇ ಅಂದರೆ ಜನವರಿ 5 ರಂದು ಮುಂಬರುವ ಟಿ20 ವಿಶ್ವಕಪ್​ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರೊಂದಿಗೆ ಯಾವ ತಂಡದ ಪಂದ್ಯ ಯಾವ ದಿನ, ಯಾವ ತಂಡದೊಂದಿಗೆ ನಡೆಯಲಿದೆ ಎಂಬುದು ಸ್ಪಷ್ಟವಾಗಿದೆ.

ಐಸಿಸಿ ನಿನ್ನೆಯಷ್ಟೇ ಅಂದರೆ ಜನವರಿ 5 ರಂದು ಮುಂಬರುವ ಟಿ20 ವಿಶ್ವಕಪ್​ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರೊಂದಿಗೆ ಯಾವ ತಂಡದ ಪಂದ್ಯ ಯಾವ ದಿನ, ಯಾವ ತಂಡದೊಂದಿಗೆ ನಡೆಯಲಿದೆ ಎಂಬುದು ಸ್ಪಷ್ಟವಾಗಿದೆ.

1 / 7
ವೇಳಾಪಟ್ಟಿಯ ಪ್ರಕಾರ ಜೂನ್ 1 ರಿಂದ 2024 ರ ಟಿ20 ವಿಶ್ವಕಪ್‌ ಆರಂಭವಾಗಲಿದೆ. ಆ ಬಳಿಕ ಟೀಂ ಇಂಡಿಯಾದ ಮೊದಲ ಪಂದ್ಯವು ಜೂನ್ 5 ರಂದು ಐರ್ಲೆಂಡ್‌ ವಿರುದ್ಧ ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

ವೇಳಾಪಟ್ಟಿಯ ಪ್ರಕಾರ ಜೂನ್ 1 ರಿಂದ 2024 ರ ಟಿ20 ವಿಶ್ವಕಪ್‌ ಆರಂಭವಾಗಲಿದೆ. ಆ ಬಳಿಕ ಟೀಂ ಇಂಡಿಯಾದ ಮೊದಲ ಪಂದ್ಯವು ಜೂನ್ 5 ರಂದು ಐರ್ಲೆಂಡ್‌ ವಿರುದ್ಧ ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

2 / 7
ಆ ಬಳಿಕ ಭಾರತ ತಂಡದ ಮುಂದಿನ ಪಂದ್ಯ ಜೂನ್ 9 ರಂದು ಪಾಕಿಸ್ತಾನದೊಂದಿಗೆ ನಡೆಯಲಿದೆ. ಇದೀಗ ಸ್ಟಾರ್ ಸ್ಪೋರ್ಟ್ಸ್ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಮ್ಯಾಚ್ ಪೋಸ್ಟ್ ಅನ್ನು ಬಿಡುಗಡೆ ಮಾಡಿದೆ. ಎರಡೂ ತಂಡಗಳ ನಾಯಕರನ್ನು ಈ ಪೋಸ್ಟ್‌ನಲ್ಲಿ ತೋರಿಸಲಾಗಿದೆ. ಇದರೊಂದಿಗೆ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾದ ನಾಯಕ ಯಾರು ಎಂಬ ಪ್ರಶ್ನೆಗೆ ಉತ್ತರ ಕೂಡ ಸಿಕ್ಕಂತ್ತಾಗಿದೆ.

ಆ ಬಳಿಕ ಭಾರತ ತಂಡದ ಮುಂದಿನ ಪಂದ್ಯ ಜೂನ್ 9 ರಂದು ಪಾಕಿಸ್ತಾನದೊಂದಿಗೆ ನಡೆಯಲಿದೆ. ಇದೀಗ ಸ್ಟಾರ್ ಸ್ಪೋರ್ಟ್ಸ್ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಮ್ಯಾಚ್ ಪೋಸ್ಟ್ ಅನ್ನು ಬಿಡುಗಡೆ ಮಾಡಿದೆ. ಎರಡೂ ತಂಡಗಳ ನಾಯಕರನ್ನು ಈ ಪೋಸ್ಟ್‌ನಲ್ಲಿ ತೋರಿಸಲಾಗಿದೆ. ಇದರೊಂದಿಗೆ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾದ ನಾಯಕ ಯಾರು ಎಂಬ ಪ್ರಶ್ನೆಗೆ ಉತ್ತರ ಕೂಡ ಸಿಕ್ಕಂತ್ತಾಗಿದೆ.

3 / 7
ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಸಂಬಂಧಿಸಿದಂತೆ ಎರಡೂ ತಂಡಗಳ ನಾಯಕರನ್ನು ಒಳಗೊಂಡ ಪೋಸ್ಟರ್ ಅನ್ನು ಸ್ಟಾರ್ ಸ್ಪೋರ್ಟ್ಸ್ ಹಂಚಿಕೊಂಡಿದೆ. ಅದರಲ್ಲಿ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ಭಾರತ ತಂಡದ ನಾಯಕರನ್ನಾಗಿ ತೋರಿಸಲಾಗಿದೆ.

ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಸಂಬಂಧಿಸಿದಂತೆ ಎರಡೂ ತಂಡಗಳ ನಾಯಕರನ್ನು ಒಳಗೊಂಡ ಪೋಸ್ಟರ್ ಅನ್ನು ಸ್ಟಾರ್ ಸ್ಪೋರ್ಟ್ಸ್ ಹಂಚಿಕೊಂಡಿದೆ. ಅದರಲ್ಲಿ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ಭಾರತ ತಂಡದ ನಾಯಕರನ್ನಾಗಿ ತೋರಿಸಲಾಗಿದೆ.

4 / 7
ಈ ಪೋಸ್ಟ್ ಹೊರಬಿದ್ದ ಬಳಿಕ 2024 ರ ಟಿ20 ವಿಶ್ವಕಪ್‌ನಲ್ಲಿ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಆದರೆ ಹಲವು ನೆಟ್ಟಿಗರು ಹಾರ್ದಿಕ್ ನಾಯಕತ್ವಕ್ಕೆ ಅಪಸ್ವರ ಎತ್ತಿದ್ದು, ರೋಹಿತ್​ಗೆ ನಾಯಕತ್ವ ನೀಡಬೇಕು ಎಂದಿದ್ದಾರೆ.

ಈ ಪೋಸ್ಟ್ ಹೊರಬಿದ್ದ ಬಳಿಕ 2024 ರ ಟಿ20 ವಿಶ್ವಕಪ್‌ನಲ್ಲಿ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಆದರೆ ಹಲವು ನೆಟ್ಟಿಗರು ಹಾರ್ದಿಕ್ ನಾಯಕತ್ವಕ್ಕೆ ಅಪಸ್ವರ ಎತ್ತಿದ್ದು, ರೋಹಿತ್​ಗೆ ನಾಯಕತ್ವ ನೀಡಬೇಕು ಎಂದಿದ್ದಾರೆ.

5 / 7
ಮತ್ತೊಂದೆಡೆ, ಹಾರ್ದಿಕ್ ಪಾಂಡ್ಯ ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ ಮತ್ತು ತಂಡಕ್ಕೆ ಮರಳುವ ಬಗ್ಗೆ ಯಾವುದೇ ನವೀಕರಣವಿಲ್ಲ. ಕಳೆದ ಒಂದು ವರ್ಷದಿಂದ ಹಾರ್ದಿಕ್ ಪಾಂಡ್ಯ ಟಿ20 ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ನಾಯಕತ್ವ ವಹಿಸಿದ್ದರು. ಆದರೆ ಇದೀಗ ಹಾರ್ದಿಕ್ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದು, ಜನವರಿ 11 ರಿಂದ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ನಾಯಕರಾಗುವ ನಿರೀಕ್ಷೆಯಿದೆ.

ಮತ್ತೊಂದೆಡೆ, ಹಾರ್ದಿಕ್ ಪಾಂಡ್ಯ ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ ಮತ್ತು ತಂಡಕ್ಕೆ ಮರಳುವ ಬಗ್ಗೆ ಯಾವುದೇ ನವೀಕರಣವಿಲ್ಲ. ಕಳೆದ ಒಂದು ವರ್ಷದಿಂದ ಹಾರ್ದಿಕ್ ಪಾಂಡ್ಯ ಟಿ20 ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ನಾಯಕತ್ವ ವಹಿಸಿದ್ದರು. ಆದರೆ ಇದೀಗ ಹಾರ್ದಿಕ್ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದು, ಜನವರಿ 11 ರಿಂದ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ನಾಯಕರಾಗುವ ನಿರೀಕ್ಷೆಯಿದೆ.

6 / 7
ಈ ಬಾರಿ 2024ರ ಟಿ20 ವಿಶ್ವಕಪ್‌ಗೆ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಆತಿಥ್ಯ ವಹಿಸಲಿವೆ. 2024ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಮೊದಲ ಗುಂಪಿನಲ್ಲಿ ಭಾರತ ತಂಡದೊಂದಿಗೆ ಪಾಕಿಸ್ತಾನ, ಐರ್ಲೆಂಡ್, ಯುಎಸ್ಎ ಮತ್ತು ಕೆನಡಾ ತಂಡಗಳು ಸ್ಥಾನ ಪಡೆದಿವೆ.

ಈ ಬಾರಿ 2024ರ ಟಿ20 ವಿಶ್ವಕಪ್‌ಗೆ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಆತಿಥ್ಯ ವಹಿಸಲಿವೆ. 2024ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಮೊದಲ ಗುಂಪಿನಲ್ಲಿ ಭಾರತ ತಂಡದೊಂದಿಗೆ ಪಾಕಿಸ್ತಾನ, ಐರ್ಲೆಂಡ್, ಯುಎಸ್ಎ ಮತ್ತು ಕೆನಡಾ ತಂಡಗಳು ಸ್ಥಾನ ಪಡೆದಿವೆ.

7 / 7

Published On - 4:39 pm, Sat, 6 January 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ