T20 World Cup 2024: ಅಭ್ಯಾಸ ಪಂದ್ಯಕ್ಕೆ ಕೊಹ್ಲಿ ಗೈರು! ತಂಡ ಸೇರಿಕೊಳ್ಳುವುದು ಯಾವಾಗ?

T20 World Cup 2024: ಮಾಧ್ಯಮ ವರದಿಗಳ ಪ್ರಕಾರ, ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಿಂದ ಆರ್‌ಸಿಬಿ ಹೊರಬಿದ್ದ ನಂತರ ವಿರಾಟ್ ಕೊಹ್ಲಿ ಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಕೊಹ್ಲಿ ತಮ್ಮ ವಿರಾಮವನ್ನು ವಿಸ್ತರಿಸಲು ಬಿಸಿಸಿಐಗೆ ಮನವಿ ಮಾಡಿದ್ದರು. ಬಿಸಿಸಿಐ ಕೂಡ ವಿರಾಟ್ ನಿರ್ಧಾರವನ್ನು ಗೌರವಿಸಿದ್ದು, ಕೊಹ್ಲಿ ಅಮೆರಿಕಕ್ಕೆ ತೆರಳುವ ದಿನಾಂಕವನ್ನು ವಿಸ್ತರಿಸಿದೆ ಎಂದು ವರದಿಯಾಗಿದೆ.

|

Updated on: May 26, 2024 | 10:02 PM

2024ರ ಟಿ20 ವಿಶ್ವಕಪ್‌ಗಾಗಿ ಟೀಂ ಇಂಡಿಯಾದ ಮೊದಲ ಬ್ಯಾಚ್ ಅಮೆರಿಕಕ್ಕೆ ಹಾರಿದೆ. ಮೊದಲ ಬ್ಯಾಚ್​ನಲ್ಲಿ ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಜಸ್ಪ್ರೀತ್ ಬುಮ್ರಾ, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್ ಅವರಂತಹ ಆಟಗಾರರು ವಿಮಾನ ಹತ್ತಿದ್ದರು.

2024ರ ಟಿ20 ವಿಶ್ವಕಪ್‌ಗಾಗಿ ಟೀಂ ಇಂಡಿಯಾದ ಮೊದಲ ಬ್ಯಾಚ್ ಅಮೆರಿಕಕ್ಕೆ ಹಾರಿದೆ. ಮೊದಲ ಬ್ಯಾಚ್​ನಲ್ಲಿ ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಜಸ್ಪ್ರೀತ್ ಬುಮ್ರಾ, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್ ಅವರಂತಹ ಆಟಗಾರರು ವಿಮಾನ ಹತ್ತಿದ್ದರು.

1 / 6
ಉಳಿದ ಆಟಗಾರರು ಎರಡನೇ ಬ್ಯಾಚ್​ನಲ್ಲಿ ಅಮೆರಿಕಕ್ಕೆ ತೆರಳಲಿದ್ದಾರೆ. ಆದರೆ ವಿರಾಟ್ ಕೊಹ್ಲಿ ಮಾತ್ರ ಈ ಎರಡೂ ಬ್ಯಾಚ್​ಗಳಲ್ಲಿ ಅಮೆರಿಕಕ್ಕೆ ತೆರಳುವುದು ಅನುಮಾನ ಎಂದು ಹೇಳಲಾಗುತ್ತಿದೆ. ವಾಸ್ತವವಾಗಿ ಕೊಹ್ಲಿ ಕೂಡ ಮೊದಲ ಬ್ಯಾಚ್​ನಲ್ಲಿ ಅಮೆರಿಕಕ್ಕೆ ಹೋಗಬೇಕಿತ್ತು. ಆದರೆ ಸ್ವಲ್ಪ ತಡವಾಗಿ ಕೊಹ್ಲಿ ತಂಡ ಸೇರಿಕೊಳ್ಳಲ್ಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಉಳಿದ ಆಟಗಾರರು ಎರಡನೇ ಬ್ಯಾಚ್​ನಲ್ಲಿ ಅಮೆರಿಕಕ್ಕೆ ತೆರಳಲಿದ್ದಾರೆ. ಆದರೆ ವಿರಾಟ್ ಕೊಹ್ಲಿ ಮಾತ್ರ ಈ ಎರಡೂ ಬ್ಯಾಚ್​ಗಳಲ್ಲಿ ಅಮೆರಿಕಕ್ಕೆ ತೆರಳುವುದು ಅನುಮಾನ ಎಂದು ಹೇಳಲಾಗುತ್ತಿದೆ. ವಾಸ್ತವವಾಗಿ ಕೊಹ್ಲಿ ಕೂಡ ಮೊದಲ ಬ್ಯಾಚ್​ನಲ್ಲಿ ಅಮೆರಿಕಕ್ಕೆ ಹೋಗಬೇಕಿತ್ತು. ಆದರೆ ಸ್ವಲ್ಪ ತಡವಾಗಿ ಕೊಹ್ಲಿ ತಂಡ ಸೇರಿಕೊಳ್ಳಲ್ಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

2 / 6
ಮಾಧ್ಯಮ ವರದಿಗಳ ಪ್ರಕಾರ, ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಿಂದ ಆರ್‌ಸಿಬಿ ಹೊರಬಿದ್ದ ನಂತರ ವಿರಾಟ್ ಕೊಹ್ಲಿ ಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಕೊಹ್ಲಿ ತಮ್ಮ ವಿರಾಮವನ್ನು ವಿಸ್ತರಿಸಲು ಬಿಸಿಸಿಐಗೆ ಮನವಿ ಮಾಡಿದ್ದರು. ಬಿಸಿಸಿಐ ಕೂಡ ವಿರಾಟ್ ನಿರ್ಧಾರವನ್ನು ಗೌರವಿಸಿದ್ದು, ಕೊಹ್ಲಿ ಅಮೆರಿಕಕ್ಕೆ ತೆರಳುವ ದಿನಾಂಕವನ್ನು ವಿಸ್ತರಿಸಿದೆ ಎಂದು ವರದಿಯಾಗಿದೆ.

ಮಾಧ್ಯಮ ವರದಿಗಳ ಪ್ರಕಾರ, ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಿಂದ ಆರ್‌ಸಿಬಿ ಹೊರಬಿದ್ದ ನಂತರ ವಿರಾಟ್ ಕೊಹ್ಲಿ ಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಕೊಹ್ಲಿ ತಮ್ಮ ವಿರಾಮವನ್ನು ವಿಸ್ತರಿಸಲು ಬಿಸಿಸಿಐಗೆ ಮನವಿ ಮಾಡಿದ್ದರು. ಬಿಸಿಸಿಐ ಕೂಡ ವಿರಾಟ್ ನಿರ್ಧಾರವನ್ನು ಗೌರವಿಸಿದ್ದು, ಕೊಹ್ಲಿ ಅಮೆರಿಕಕ್ಕೆ ತೆರಳುವ ದಿನಾಂಕವನ್ನು ವಿಸ್ತರಿಸಿದೆ ಎಂದು ವರದಿಯಾಗಿದೆ.

3 / 6
ಈ ಬಗ್ಗೆ ಬಿಸಿಸಿಐ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದು, ಕೊಹ್ಲಿ ಅವರು ಸ್ವಲ್ಪ ತಡವಾಗಿ ತಂಡವನ್ನು ಸೇರಿಕೊಳ್ಳುವುದಾಗಿ ಹೇಳಿದ್ದಾರೆ. ಬಿಸಿಸಿಐ ಅವರ ಮನವಿಯನ್ನು ಗೌರವಿಸಿದೆ. ಆದ್ದರಿಂದ, ಅವರ ವೀಸಾ ನೇಮಕಾತಿಯ ದಿನಾಂಕವನ್ನು ಸಹ ವಿಸ್ತರಿಸಲಾಗಿದೆ ಎಂದಿದ್ದಾರೆ.

ಈ ಬಗ್ಗೆ ಬಿಸಿಸಿಐ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದು, ಕೊಹ್ಲಿ ಅವರು ಸ್ವಲ್ಪ ತಡವಾಗಿ ತಂಡವನ್ನು ಸೇರಿಕೊಳ್ಳುವುದಾಗಿ ಹೇಳಿದ್ದಾರೆ. ಬಿಸಿಸಿಐ ಅವರ ಮನವಿಯನ್ನು ಗೌರವಿಸಿದೆ. ಆದ್ದರಿಂದ, ಅವರ ವೀಸಾ ನೇಮಕಾತಿಯ ದಿನಾಂಕವನ್ನು ಸಹ ವಿಸ್ತರಿಸಲಾಗಿದೆ ಎಂದಿದ್ದಾರೆ.

4 / 6
ಬಿಸಿಸಿಐ ಅಧಿಕಾರಿಯನ್ನು ಉಲ್ಲೇಖಿಸಿ ವರದಿಯಲ್ಲಿ ಬರೆಯಲಾದ ಪ್ರಕಾರ, ಮೇ 30 ರೊಳಗೆ ವಿರಾಟ್ ನ್ಯೂಯಾರ್ಕ್‌ಗೆ ತೆರಳಬಹುದು ಎಂದು ಹೇಳಲಾಗುತ್ತಿದೆ. ಇದರರ್ಥ ವಿರಾಟ್ ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯವನ್ನು ಆಡುವುದಿಲ್ಲ ಎಂಬುದು ಖಚಿತವಾಗಿದೆ.

ಬಿಸಿಸಿಐ ಅಧಿಕಾರಿಯನ್ನು ಉಲ್ಲೇಖಿಸಿ ವರದಿಯಲ್ಲಿ ಬರೆಯಲಾದ ಪ್ರಕಾರ, ಮೇ 30 ರೊಳಗೆ ವಿರಾಟ್ ನ್ಯೂಯಾರ್ಕ್‌ಗೆ ತೆರಳಬಹುದು ಎಂದು ಹೇಳಲಾಗುತ್ತಿದೆ. ಇದರರ್ಥ ವಿರಾಟ್ ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯವನ್ನು ಆಡುವುದಿಲ್ಲ ಎಂಬುದು ಖಚಿತವಾಗಿದೆ.

5 / 6
2024ರ ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ತನ್ನ ಏಕೈಕ ಅಭ್ಯಾಸ ಪಂದ್ಯವನ್ನು ಬಾಂಗ್ಲಾದೇಶ ವಿರುದ್ಧ ಜೂನ್ 1ರಂದು ಆಡಬೇಕಿದೆ. ಆದರೆ, ಮೇ 30 ರಂದು ವಿರಾಟ್ ನ್ಯೂಯಾರ್ಕ್‌ಗೆ ತೆರಳುವ ಸಾಧ್ಯತೆಗಳಿವೆ. ಹೀಗಾಗಿ ಕೊಹ್ಲಿ ಅಭ್ಯಾಸ ಪಂದ್ಯದಲ್ಲಿ ಆಡುವ ಸಾಧ್ಯತೆಗಳು ಕಡಿಮೆ ಇದ್ದು, ಜೂನ್ 5 ರಂದು ಐರ್ಲೆಂಡ್ ವಿರುದ್ಧ ನಡೆಯಲ್ಲಿರುವ ಪಂದ್ಯದಲ್ಲಿ ಕೊಹ್ಲಿ ಆಡುವುದನ್ನು ಕಾಣಬಹುದಾಗಿದೆ.

2024ರ ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ತನ್ನ ಏಕೈಕ ಅಭ್ಯಾಸ ಪಂದ್ಯವನ್ನು ಬಾಂಗ್ಲಾದೇಶ ವಿರುದ್ಧ ಜೂನ್ 1ರಂದು ಆಡಬೇಕಿದೆ. ಆದರೆ, ಮೇ 30 ರಂದು ವಿರಾಟ್ ನ್ಯೂಯಾರ್ಕ್‌ಗೆ ತೆರಳುವ ಸಾಧ್ಯತೆಗಳಿವೆ. ಹೀಗಾಗಿ ಕೊಹ್ಲಿ ಅಭ್ಯಾಸ ಪಂದ್ಯದಲ್ಲಿ ಆಡುವ ಸಾಧ್ಯತೆಗಳು ಕಡಿಮೆ ಇದ್ದು, ಜೂನ್ 5 ರಂದು ಐರ್ಲೆಂಡ್ ವಿರುದ್ಧ ನಡೆಯಲ್ಲಿರುವ ಪಂದ್ಯದಲ್ಲಿ ಕೊಹ್ಲಿ ಆಡುವುದನ್ನು ಕಾಣಬಹುದಾಗಿದೆ.

6 / 6
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್