AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2026 T20 WC Final Prize Money: ಗೆದ್ದ ತಂಡದ ಮೇಲೆ ಹಣದ ಮಳೆ; ಸೋತ ತಂಡಕ್ಕೂ ಸಿಗಲಿದೆ ಕೋಟಿ

T20 Worl Cup 2026 Final Prize Money: 2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮಾರ್ಚ್ 8ರಂದು ಅಹಮದಾಬಾದ್‌ನಲ್ಲಿ ಸೆಣಸಲಿವೆ. ಸತತ ಎರಡನೇ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಲು ಭಾರತ ಸಜ್ಜಾಗಿದ್ದರೆ, ನ್ಯೂಜಿಲೆಂಡ್ ಚೊಚ್ಚಲ ಪ್ರಶಸ್ತಿಗಾಗಿ ಹೋರಾಡಲಿದೆ. ಐಸಿಸಿ ಕಡೆಯಿಂದ ಚಾಂಪಿಯನ್ ಮತ್ತು ರನ್ನರ್ ಅಪ್ ತಂಡಗಳಿಗೆ ಭಾರಿ ಬಹುಮಾನವೂ ಸಿಗಲಿದೆ. ಈ ಹಣದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಭಾರತ ತಂಡ ಗೆದ್ದರೆ, ಪ್ರಶಸ್ತಿ ಹಾಗೂ ಕೋಟಿಗಳ ಮಳೆ ಎರಡೂ ಸಿಗಲಿದೆ.

ಪೃಥ್ವಿಶಂಕರ
|

Updated on: Mar 06, 2026 | 4:07 PM

Share
ಫೆಬ್ರವರಿ 7 ರಿಂದ ಆರಂಭವಾಗಿದ್ದ  2026 ರ ಟಿ20 ವಿಶ್ವಕಪ್ ಈಗ ಅಂತಿಮ ಹಂತವನ್ನು ತಲುಪಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್ ಪಂದ್ಯ ಮಾರ್ಚ್ 8 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಒಂದೆಡೆ ಭಾರತ ಸತತ ಎರಡನೇ ಟ್ರೋಫಿ ಮೇಲೆ ಕಣ್ಣಿಟ್ಟಿದ್ದರೆ, ನ್ಯೂಜಿಲೆಂಡ್ ಚೊಚ್ಚಲ ಟಿ20 ವಿಶ್ವಕಪ್ ಗೆಲುವಿಗಾಗಿ ಎದುರು ನೋಡುತ್ತಿದೆ. ಇದರ ಜೊತೆಗೆ ಚಾಂಪಿಯನ್ ತಂಡದ ಮೇಲೆ ಕೋಟಿಗಳ ಮಳೆ ಸುರಿಸಲು ಐಸಿಸಿ ತಯಾರಿ ಮಾಡಿಕೊಂಡಿದೆ.

ಫೆಬ್ರವರಿ 7 ರಿಂದ ಆರಂಭವಾಗಿದ್ದ 2026 ರ ಟಿ20 ವಿಶ್ವಕಪ್ ಈಗ ಅಂತಿಮ ಹಂತವನ್ನು ತಲುಪಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್ ಪಂದ್ಯ ಮಾರ್ಚ್ 8 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಒಂದೆಡೆ ಭಾರತ ಸತತ ಎರಡನೇ ಟ್ರೋಫಿ ಮೇಲೆ ಕಣ್ಣಿಟ್ಟಿದ್ದರೆ, ನ್ಯೂಜಿಲೆಂಡ್ ಚೊಚ್ಚಲ ಟಿ20 ವಿಶ್ವಕಪ್ ಗೆಲುವಿಗಾಗಿ ಎದುರು ನೋಡುತ್ತಿದೆ. ಇದರ ಜೊತೆಗೆ ಚಾಂಪಿಯನ್ ತಂಡದ ಮೇಲೆ ಕೋಟಿಗಳ ಮಳೆ ಸುರಿಸಲು ಐಸಿಸಿ ತಯಾರಿ ಮಾಡಿಕೊಂಡಿದೆ.

1 / 5
ಹಿಂದಿನ ಒಂಬತ್ತು ಟಿ20 ವಿಶ್ವಕಪ್ ಆವೃತ್ತಿಗಳಲ್ಲಿ, ಅತಿ ಹೆಚ್ಚು ಬಹುಮಾನದ ಹಣವನ್ನು 2024 ರ ಪಂದ್ಯಾವಳಿಯಲ್ಲಿ ವಿತರಿಸಲಾಯಿತು. 2024 ರ ಟಿ20 ವಿಶ್ವಕಪ್​ನ ಬಹುಮಾನದ ಗಾತ್ರವನ್ನು ಐಸಿಸಿ 103 ಕೋಟಿ ರೂಗಳಿಗೆ ಏರಿಸಿತ್ತು. ಅದರಂತೆ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಚಾಂಪಿಯನ್ ಆಗಿದ್ದ ಟೀಂ ಇಂಡಿಯಾಕ್ಕೆ 20.42 ಕೋಟಿ ರೂಗಳ ಬಹುಮಾನ ಸಿಕ್ಕಿತ್ತು. ಹಾಗೆಯೇ ರನ್ನರ್ ಅಪ್ ಆಗಿದ್ದ ಆಫ್ರಿಕಾ ತಂಡಕ್ಕೆ 10.67 ಕೋಟಿ ರೂ. ಬಹುಮಾನ ನೀಡಲಾಗಿತ್ತು.

ಹಿಂದಿನ ಒಂಬತ್ತು ಟಿ20 ವಿಶ್ವಕಪ್ ಆವೃತ್ತಿಗಳಲ್ಲಿ, ಅತಿ ಹೆಚ್ಚು ಬಹುಮಾನದ ಹಣವನ್ನು 2024 ರ ಪಂದ್ಯಾವಳಿಯಲ್ಲಿ ವಿತರಿಸಲಾಯಿತು. 2024 ರ ಟಿ20 ವಿಶ್ವಕಪ್​ನ ಬಹುಮಾನದ ಗಾತ್ರವನ್ನು ಐಸಿಸಿ 103 ಕೋಟಿ ರೂಗಳಿಗೆ ಏರಿಸಿತ್ತು. ಅದರಂತೆ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಚಾಂಪಿಯನ್ ಆಗಿದ್ದ ಟೀಂ ಇಂಡಿಯಾಕ್ಕೆ 20.42 ಕೋಟಿ ರೂಗಳ ಬಹುಮಾನ ಸಿಕ್ಕಿತ್ತು. ಹಾಗೆಯೇ ರನ್ನರ್ ಅಪ್ ಆಗಿದ್ದ ಆಫ್ರಿಕಾ ತಂಡಕ್ಕೆ 10.67 ಕೋಟಿ ರೂ. ಬಹುಮಾನ ನೀಡಲಾಗಿತ್ತು.

2 / 5
2026 ರ ಟಿ20 ವಿಶ್ವಕಪ್‌ನ ಬಹುಮಾನದ ಹಣವನ್ನು ಐಸಿಸಿ ಇನ್ನೂ ಘೋಷಿಸಿಲ್ಲ. ಹಿಂದಿನ ಆವೃತ್ತಿಗಳನ್ನು ಪರಿಗಣಿಸಿದರೆ, ಫೈನಲ್‌ನ ಫಲಿತಾಂಶ ಏನೇ ಇರಲಿ, ಎರಡೂ ತಂಡಗಳು ಶ್ರೀಮಂತರಾಗುವುದು ಖಚಿತ. ಫೈನಲ್‌ನಲ್ಲಿ ಸೋತರೂ ಟೀಂ ಇಂಡಿಯಾ 1.28 ಮಿಲಿಯನ್ ಡಾಲರ್ (ಸುಮಾರು 12 ಕೋಟಿ ರೂ.) ಪಡೆಯುತ್ತದೆ.

2026 ರ ಟಿ20 ವಿಶ್ವಕಪ್‌ನ ಬಹುಮಾನದ ಹಣವನ್ನು ಐಸಿಸಿ ಇನ್ನೂ ಘೋಷಿಸಿಲ್ಲ. ಹಿಂದಿನ ಆವೃತ್ತಿಗಳನ್ನು ಪರಿಗಣಿಸಿದರೆ, ಫೈನಲ್‌ನ ಫಲಿತಾಂಶ ಏನೇ ಇರಲಿ, ಎರಡೂ ತಂಡಗಳು ಶ್ರೀಮಂತರಾಗುವುದು ಖಚಿತ. ಫೈನಲ್‌ನಲ್ಲಿ ಸೋತರೂ ಟೀಂ ಇಂಡಿಯಾ 1.28 ಮಿಲಿಯನ್ ಡಾಲರ್ (ಸುಮಾರು 12 ಕೋಟಿ ರೂ.) ಪಡೆಯುತ್ತದೆ.

3 / 5
2024 ರಲ್ಲಿ ಚಾಂಪಿಯನ್ ಆಗಿದ್ದ ಭಾರತ ತಂಡಕ್ಕೆ ಐಸಿಸಿ ಮಾತ್ರವಲ್ಲದೆ ಬಿಸಿಸಿಐ ಕೂಡ ಭರ್ಜರಿ ಬಹುಮಾನ ಘೋಷಿಸಿತ್ತು. ಅದರಂತೆ ರೋಹಿತ್ ಪಡೆಗೆ ಬಿಸಿಸಿಐ 125 ಕೋಟಿ ರೂಪಾಯಿಯನ್ನು ಪ್ರತ್ಯೇಕ ಬಹುಮಾನವಾಗಿ ನೀಡಿತ್ತು. ಆದ್ದರಿಂದ, 2026 ರಲ್ಲಿ ತಂಡವು ಮತ್ತೆ ಗೆದ್ದರೆ, ಈ ಬಾರಿಯೂ ದೊಡ್ಡ ಮೊತ್ತದ ಬಹುಮಾನ ಸಿಗಬಹುದು.

2024 ರಲ್ಲಿ ಚಾಂಪಿಯನ್ ಆಗಿದ್ದ ಭಾರತ ತಂಡಕ್ಕೆ ಐಸಿಸಿ ಮಾತ್ರವಲ್ಲದೆ ಬಿಸಿಸಿಐ ಕೂಡ ಭರ್ಜರಿ ಬಹುಮಾನ ಘೋಷಿಸಿತ್ತು. ಅದರಂತೆ ರೋಹಿತ್ ಪಡೆಗೆ ಬಿಸಿಸಿಐ 125 ಕೋಟಿ ರೂಪಾಯಿಯನ್ನು ಪ್ರತ್ಯೇಕ ಬಹುಮಾನವಾಗಿ ನೀಡಿತ್ತು. ಆದ್ದರಿಂದ, 2026 ರಲ್ಲಿ ತಂಡವು ಮತ್ತೆ ಗೆದ್ದರೆ, ಈ ಬಾರಿಯೂ ದೊಡ್ಡ ಮೊತ್ತದ ಬಹುಮಾನ ಸಿಗಬಹುದು.

4 / 5
ಭಾರತ ತಂಡವು ಫೈನಲ್‌ನಲ್ಲಿ ಇತಿಹಾಸ ನಿರ್ಮಿಸುವ ಗುರಿಯನ್ನು ಹೊಂದಿದೆ. ನಾಲ್ಕನೇ ಬಾರಿಗೆ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಆಡುತ್ತಿರುವ ಮೊದಲ ತಂಡ ಎನಿಸಿಕೊಂಡಿರುವ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟೂರ್ನಮೆಂಟ್ ಗೆಲ್ಲುವ ಅವಕಾಶವನ್ನು ಹೊಂದಿದೆ. ಇದುವರೆಗೆ ಯಾವುದೇ ತಂಡ ಸತತ ಎರಡನೇ ಬಾರಿಗೆ ಟ್ರೋಫಿ ಗೆದ್ದಿಲ್ಲ. ಇದಲ್ಲದೆ, ಯಾವುದೇ ತಂಡ ಕೂಡ ತವರಿನಲ್ಲಿ ಟಿ20 ವಿಶ್ವಕಪ್ ಗೆದ್ದಿಲ್ಲ. ಹೀಗಾಗಿ ಟೀಂ ಇಂಡಿಯಾ ಚಾಂಪಿಯನ್ ಪಟ್ಟಕೇರಿ ಇತಿಹಾಸ ಬದಲಿಸುವ ಇರಾದೆಯಲ್ಲಿದೆ.

ಭಾರತ ತಂಡವು ಫೈನಲ್‌ನಲ್ಲಿ ಇತಿಹಾಸ ನಿರ್ಮಿಸುವ ಗುರಿಯನ್ನು ಹೊಂದಿದೆ. ನಾಲ್ಕನೇ ಬಾರಿಗೆ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಆಡುತ್ತಿರುವ ಮೊದಲ ತಂಡ ಎನಿಸಿಕೊಂಡಿರುವ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟೂರ್ನಮೆಂಟ್ ಗೆಲ್ಲುವ ಅವಕಾಶವನ್ನು ಹೊಂದಿದೆ. ಇದುವರೆಗೆ ಯಾವುದೇ ತಂಡ ಸತತ ಎರಡನೇ ಬಾರಿಗೆ ಟ್ರೋಫಿ ಗೆದ್ದಿಲ್ಲ. ಇದಲ್ಲದೆ, ಯಾವುದೇ ತಂಡ ಕೂಡ ತವರಿನಲ್ಲಿ ಟಿ20 ವಿಶ್ವಕಪ್ ಗೆದ್ದಿಲ್ಲ. ಹೀಗಾಗಿ ಟೀಂ ಇಂಡಿಯಾ ಚಾಂಪಿಯನ್ ಪಟ್ಟಕೇರಿ ಇತಿಹಾಸ ಬದಲಿಸುವ ಇರಾದೆಯಲ್ಲಿದೆ.

5 / 5
Follow Us
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ