AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಸಂಜು ಬದಲು ಕಿಶನ್ ವಿಕೆಟ್‌ಕೀಪರ್; ಸ್ಯಾಮ್ಸನ್ ವೃತ್ತಿಜೀವನ ಅಂತ್ಯ

Ishan Kishan Edges Sanju Samson for T20 World Cup: ಭಾರತ-ನ್ಯೂಜಿಲೆಂಡ್ ಅಂತಿಮ T20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ತವರು ನೆಲದಲ್ಲೂ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದರು, 2026 ಟಿ20 ವಿಶ್ವಕಪ್ ಸ್ಥಾನಕ್ಕೆ ಸಂಕಷ್ಟ ತಂದೊಡ್ಡಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ, ಇಶಾನ್ ಕಿಶನ್ ಅದ್ಭುತ ಶತಕ ಗಳಿಸಿ, ವಿಕೆಟ್ ಕೀಪಿಂಗ್ ಜವಾಬ್ದಾರಿ ವಹಿಸಿಕೊಂಡರು. ಇದು ಮುಂಬರುವ ವಿಶ್ವಕಪ್‌ನಲ್ಲಿ ಕಿಶನ್‌ಗೆ ವಿಕೆಟ್‌ಕೀಪರ್-ಬ್ಯಾಟರ್ ಆಗಿ ಅವಕಾಶ ಸಿಗುವ ಬಲವಾದ ಸುಳಿವು ನೀಡಿದೆ.

ಪೃಥ್ವಿಶಂಕರ
|

Updated on: Jan 31, 2026 | 9:59 PM

Share
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯವು ಸಂಜು ಸ್ಯಾಮ್ಸನ್‌ಗೆ ವಿಶೇಷವಾಗಿತ್ತು, ಏಕೆಂದರೆ ಇದು ಅವರ ತವರು ನೆಲದಲ್ಲಿ ಮೊದಲ ಅಂತರರಾಷ್ಟ್ರೀಯ ಪಂದ್ಯವಾಗಿತ್ತು. ಹೀಗಾಗಿ ಕೇರಳ ಅಭಿಮಾನಿಗಳು ಕೂಡ ಲೋಕಲ್ ಹುಡುಗನ ಆಟವನ್ನು ಕಣ್ತುಂಬಿಕೊಳ್ಳಲು ಕಾದು ಕುಳಿತಿದ್ದರು. ಆದರೆ ಸಂಜು ಆ ಸಂದರ್ಭವನ್ನು ಸ್ಮರಣೀಯವಾಗಿಸಲು ಸಾಧ್ಯವಾಗಲಿಲ್ಲ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯವು ಸಂಜು ಸ್ಯಾಮ್ಸನ್‌ಗೆ ವಿಶೇಷವಾಗಿತ್ತು, ಏಕೆಂದರೆ ಇದು ಅವರ ತವರು ನೆಲದಲ್ಲಿ ಮೊದಲ ಅಂತರರಾಷ್ಟ್ರೀಯ ಪಂದ್ಯವಾಗಿತ್ತು. ಹೀಗಾಗಿ ಕೇರಳ ಅಭಿಮಾನಿಗಳು ಕೂಡ ಲೋಕಲ್ ಹುಡುಗನ ಆಟವನ್ನು ಕಣ್ತುಂಬಿಕೊಳ್ಳಲು ಕಾದು ಕುಳಿತಿದ್ದರು. ಆದರೆ ಸಂಜು ಆ ಸಂದರ್ಭವನ್ನು ಸ್ಮರಣೀಯವಾಗಿಸಲು ಸಾಧ್ಯವಾಗಲಿಲ್ಲ.

1 / 5
ವಾಸ್ತವವಾಗಿ ಈ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸಂಜು ಸ್ಯಾಮ್ಸನ್ ಅವರ ಬ್ಯಾಟ್ ಸಂಪೂರ್ಣವಾಗಿ ಮೌನವಾಗಿತ್ತು. ಆರಂಭಿಕ ಮತ್ತು ವಿಕೆಟ್ ಕೀಪರ್ ಆಗಿ ಆಡಿದ ಸಂಜು ಐದು ಇನ್ನಿಂಗ್ಸ್‌ಗಳಲ್ಲಿ ಕೇವಲ 46 ರನ್ ಗಳಿಸಿದರು. ಈ ಸರಣಿಯಲ್ಲಿ ಅವರು ಕ್ರಮವಾಗಿ 10, 6, 0, 24, ಮತ್ತು 6 ರನ್ ಗಳಿಸಿದರು. ಸಂಜು ಅವರ ಈ ಪ್ರದರ್ಶನವು 2026 ರ ಟಿ20 ವಿಶ್ವಕಪ್‌ಗೆ ಮುಂಚಿತವಾಗಿ ಟೀಂ ಇಂಡಿಯಾಕ್ಕೆ ಪ್ರಮುಖ ಕಳವಳಕ್ಕೆ ಕಾರಣವಾಗಿದೆ.

ವಾಸ್ತವವಾಗಿ ಈ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸಂಜು ಸ್ಯಾಮ್ಸನ್ ಅವರ ಬ್ಯಾಟ್ ಸಂಪೂರ್ಣವಾಗಿ ಮೌನವಾಗಿತ್ತು. ಆರಂಭಿಕ ಮತ್ತು ವಿಕೆಟ್ ಕೀಪರ್ ಆಗಿ ಆಡಿದ ಸಂಜು ಐದು ಇನ್ನಿಂಗ್ಸ್‌ಗಳಲ್ಲಿ ಕೇವಲ 46 ರನ್ ಗಳಿಸಿದರು. ಈ ಸರಣಿಯಲ್ಲಿ ಅವರು ಕ್ರಮವಾಗಿ 10, 6, 0, 24, ಮತ್ತು 6 ರನ್ ಗಳಿಸಿದರು. ಸಂಜು ಅವರ ಈ ಪ್ರದರ್ಶನವು 2026 ರ ಟಿ20 ವಿಶ್ವಕಪ್‌ಗೆ ಮುಂಚಿತವಾಗಿ ಟೀಂ ಇಂಡಿಯಾಕ್ಕೆ ಪ್ರಮುಖ ಕಳವಳಕ್ಕೆ ಕಾರಣವಾಗಿದೆ.

2 / 5
ತವರು ನೆಲದಲ್ಲಿ ಸಂಜು 10 ಎಸೆತಗಳನ್ನು ಎದುರಿಸಿ ಕೇವಲ ಆರು ರನ್‌ಗಳಿಗೆ ಔಟಾದರು. ಇದರ ಪರಿಣಾಮವಾಗಿ ತವರಿನಲ್ಲೂ ಫಾರ್ಮ್​ ಕಂಡುಕೊಳ್ಳದ ಸಂಜುಗೆ ಆಡಳಿತ ಮಂಡಳಿ ಬಿಗ್ ಶಾಕ್ ನೀಡಿದೆ. ಈ ಸರಣಿಯ ಹಿಂದಿನ ನಾಲ್ಕು ಪಂದ್ಯಗಳಲ್ಲಿ ಸಂಜು ವಿಕೆಟ್ ಕೀಪಿಂಗ್ ಮಾಡಿದರೆ, ಕಿಶನ್ ಬ್ಯಾಟಿಂಗ್ ಮಾಡುತ್ತಿದ್ದರು. ಆದರೆ ಅಂತಿಮ ಪಂದ್ಯದಲ್ಲಿ ಸಂಜು ಬದಲಿಗೆ ಕಿಶನ್ ವಿಕೆಟ್ ಕೀಪಿಂಗ್ ಮಾಡಿದರು.

ತವರು ನೆಲದಲ್ಲಿ ಸಂಜು 10 ಎಸೆತಗಳನ್ನು ಎದುರಿಸಿ ಕೇವಲ ಆರು ರನ್‌ಗಳಿಗೆ ಔಟಾದರು. ಇದರ ಪರಿಣಾಮವಾಗಿ ತವರಿನಲ್ಲೂ ಫಾರ್ಮ್​ ಕಂಡುಕೊಳ್ಳದ ಸಂಜುಗೆ ಆಡಳಿತ ಮಂಡಳಿ ಬಿಗ್ ಶಾಕ್ ನೀಡಿದೆ. ಈ ಸರಣಿಯ ಹಿಂದಿನ ನಾಲ್ಕು ಪಂದ್ಯಗಳಲ್ಲಿ ಸಂಜು ವಿಕೆಟ್ ಕೀಪಿಂಗ್ ಮಾಡಿದರೆ, ಕಿಶನ್ ಬ್ಯಾಟಿಂಗ್ ಮಾಡುತ್ತಿದ್ದರು. ಆದರೆ ಅಂತಿಮ ಪಂದ್ಯದಲ್ಲಿ ಸಂಜು ಬದಲಿಗೆ ಕಿಶನ್ ವಿಕೆಟ್ ಕೀಪಿಂಗ್ ಮಾಡಿದರು.

3 / 5
ಸರಣಿಯಲ್ಲಿ ಇಶಾನ್ ಕಿಶನ್ ಅವರ ಪ್ರದರ್ಶನ ಅದ್ಭುತವಾಗಿದೆ. ಅವಕಾಶ ಸಿಕ್ಕಾಗಲೆಲ್ಲ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿರುವ ಕಿಶನ್ ಈ ಪಂದ್ಯದಲ್ಲಿ 43 ಎಸೆತಗಳಲ್ಲಿ 10 ಸಿಕ್ಸರ್‌ಗಳು ಸೇರಿದಂತೆ 103 ರನ್ ಗಳಿಸಿದರು. ಹೀಗಾಗಿ ಅದ್ಭುತ ಫಾರ್ಮ್​ನಲ್ಲಿರುವ ಕಿಶನ್​ಗೆ ಬರುವ ವಿಶ್ವಕಪ್​ನಲ್ಲಿ ವಿಕೆಟ್‌ಕೀಪರ್ ಬ್ಯಾಟರ್​ ಆಗಿ ಆಡುವ ಅವಕಾಶ ಸಿಗುವ ಮುನ್ಸೂಚನೆ ಈ ಪಂದ್ಯದಲ್ಲೇ ಸಿಕ್ಕಿದೆ.

ಸರಣಿಯಲ್ಲಿ ಇಶಾನ್ ಕಿಶನ್ ಅವರ ಪ್ರದರ್ಶನ ಅದ್ಭುತವಾಗಿದೆ. ಅವಕಾಶ ಸಿಕ್ಕಾಗಲೆಲ್ಲ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿರುವ ಕಿಶನ್ ಈ ಪಂದ್ಯದಲ್ಲಿ 43 ಎಸೆತಗಳಲ್ಲಿ 10 ಸಿಕ್ಸರ್‌ಗಳು ಸೇರಿದಂತೆ 103 ರನ್ ಗಳಿಸಿದರು. ಹೀಗಾಗಿ ಅದ್ಭುತ ಫಾರ್ಮ್​ನಲ್ಲಿರುವ ಕಿಶನ್​ಗೆ ಬರುವ ವಿಶ್ವಕಪ್​ನಲ್ಲಿ ವಿಕೆಟ್‌ಕೀಪರ್ ಬ್ಯಾಟರ್​ ಆಗಿ ಆಡುವ ಅವಕಾಶ ಸಿಗುವ ಮುನ್ಸೂಚನೆ ಈ ಪಂದ್ಯದಲ್ಲೇ ಸಿಕ್ಕಿದೆ.

4 / 5
ಇದಕ್ಕೆ ಪೂರಕವೆಂಬಂತೆ 2026 ರ ಟಿ20 ವಿಶ್ವಕಪ್‌ಗೆ ಇಶಾನ್ ಕಿಶನ್ ಅವರನ್ನು ಬ್ಯಾಕಪ್ ವಿಕೆಟ್‌ಕೀಪರ್ ಆಗಿ ಆಯ್ಕೆ ಮಾಡಲಾಗಿದೆ. ಸಂಜು ಸ್ಯಾಮ್ಸನ್‌ ಅವರನ್ನು ಮೊದಲ ವಿಕೆಟ್‌ಕೀಪರ್ ಬ್ಯಾಟರ್ ಆಗಿ ಆಯ್ಕೆ ಮಾಡಲಾಗಿತ್ತು. ಆದರೆ ಸಂಜು ಅವರ ಪ್ರಸ್ತುತ ಕಳಪೆ ಫಾರ್ಮ್​ನಿಂದಾಗಿ ಕಿಶನ್​ಗೆ ಅವಕಾಶ ಸಿಗುವುದು ಇಂದಿನ ಪಂದ್ಯದಲ್ಲೇ ಖಚಿತವಾಗಿದೆ.

ಇದಕ್ಕೆ ಪೂರಕವೆಂಬಂತೆ 2026 ರ ಟಿ20 ವಿಶ್ವಕಪ್‌ಗೆ ಇಶಾನ್ ಕಿಶನ್ ಅವರನ್ನು ಬ್ಯಾಕಪ್ ವಿಕೆಟ್‌ಕೀಪರ್ ಆಗಿ ಆಯ್ಕೆ ಮಾಡಲಾಗಿದೆ. ಸಂಜು ಸ್ಯಾಮ್ಸನ್‌ ಅವರನ್ನು ಮೊದಲ ವಿಕೆಟ್‌ಕೀಪರ್ ಬ್ಯಾಟರ್ ಆಗಿ ಆಯ್ಕೆ ಮಾಡಲಾಗಿತ್ತು. ಆದರೆ ಸಂಜು ಅವರ ಪ್ರಸ್ತುತ ಕಳಪೆ ಫಾರ್ಮ್​ನಿಂದಾಗಿ ಕಿಶನ್​ಗೆ ಅವಕಾಶ ಸಿಗುವುದು ಇಂದಿನ ಪಂದ್ಯದಲ್ಲೇ ಖಚಿತವಾಗಿದೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್