AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಟಿ20 ವಿಶ್ವಕಪ್​​ಗೆ ಡೇಟ್ ಫಿಕ್ಸ್​

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್​ನಲ್ಲಿ 20 ತಂಡಗಳು ಭಾಗವಹಿಸಲಿವೆ. ಈ ತಂಡಗಳ ನಡುವಣ ಕದನವು ​ಫೆಬ್ರವರಿ ಮತ್ತು ಮಾರ್ಚ್ ನಡುವೆ ನಡೆಯಲಿದ್ದು, ಇದಕ್ಕಾಗಿ ದಿನಾಂಕವನ್ನು ನಿಗದಿ ಮಾಡಲಾಗಿದೆ. ಅಲ್ಲದೆ ಶೀಘ್ರದಲ್ಲೇ ಅಧಿಕೃತ ವೇಳಾಪಟ್ಟಿ ಬಿಡುಗಡೆಯಾಗಲಿದೆ.

ಝಾಹಿರ್ ಯೂಸುಫ್
|

Updated on:Nov 10, 2025 | 8:46 AM

Share
T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್​​ಗೆ ದಿನಾಂಕ ನಿಗದಿಯಾಗಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಚುಟುಕು ಕ್ರಿಕೆಟ್ ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದ್ದು, ಮೊದಲ ಪಂದ್ಯಕ್ಕೆ ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್​​ಗೆ ದಿನಾಂಕ ನಿಗದಿಯಾಗಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಚುಟುಕು ಕ್ರಿಕೆಟ್ ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದ್ದು, ಮೊದಲ ಪಂದ್ಯಕ್ಕೆ ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

1 / 6
ಇನ್ನು ಫೈನಲ್ ಪಂದ್ಯವು ಮಾರ್ಚ್ 8 ರಂದು ನಡೆಯಲಿದೆ. ಈ ಪಂದ್ಯ ಕೂಡ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ಆಯೋಜಿಸಲಾಗುತ್ತದೆ. ಒಂದು ವೇಳೆ ಪಾಕಿಸ್ತಾನ್ ತಂಡ ಫೈನಲ್​​ಗೆ ತಲುಪಿದರೆ ಅಂತಿಮ ಪಂದ್ಯ ಕೊಲಂಬೊದ ಆರ್.​ ಪ್ರೇಮದಾಸ ಸ್ಟೇಡಿಯಂನಲ್ಲಿ ಜರುಗಲಿದೆ.

ಇನ್ನು ಫೈನಲ್ ಪಂದ್ಯವು ಮಾರ್ಚ್ 8 ರಂದು ನಡೆಯಲಿದೆ. ಈ ಪಂದ್ಯ ಕೂಡ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ಆಯೋಜಿಸಲಾಗುತ್ತದೆ. ಒಂದು ವೇಳೆ ಪಾಕಿಸ್ತಾನ್ ತಂಡ ಫೈನಲ್​​ಗೆ ತಲುಪಿದರೆ ಅಂತಿಮ ಪಂದ್ಯ ಕೊಲಂಬೊದ ಆರ್.​ ಪ್ರೇಮದಾಸ ಸ್ಟೇಡಿಯಂನಲ್ಲಿ ಜರುಗಲಿದೆ.

2 / 6
ಏಕೆಂದರೆ ಪಾಕಿಸ್ತಾನ್ ತಂಡವು ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ. ಟೀಮ್ ಇಂಡಿಯಾ ಪಾಕ್​​ನಲ್ಲಿ ಚಾಂಪಿಯನ್ಸ್ ಟ್ರೋಫಿ ಆಡಲು ನಿರಾಕರಿಸಿದ್ದರಿಂದ ಪಾಕಿಸ್ತಾನ್ ತಂಡ ಭಾರತದಲ್ಲಿ ಯಾವುದೇ ಪಂದ್ಯಾವಳಿಯಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದೆ. ಹೀಗಾಗಿ ಪಾಕ್ ತಂಡದ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಗುತ್ತದೆ.

ಏಕೆಂದರೆ ಪಾಕಿಸ್ತಾನ್ ತಂಡವು ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ. ಟೀಮ್ ಇಂಡಿಯಾ ಪಾಕ್​​ನಲ್ಲಿ ಚಾಂಪಿಯನ್ಸ್ ಟ್ರೋಫಿ ಆಡಲು ನಿರಾಕರಿಸಿದ್ದರಿಂದ ಪಾಕಿಸ್ತಾನ್ ತಂಡ ಭಾರತದಲ್ಲಿ ಯಾವುದೇ ಪಂದ್ಯಾವಳಿಯಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದೆ. ಹೀಗಾಗಿ ಪಾಕ್ ತಂಡದ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಗುತ್ತದೆ.

3 / 6
ಅದರಂತೆ ಮುಂಬರುವ ಟಿ20 ವಿಶ್ವಕಪ್​​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಶ್ರೀಲಂಕಾದಲ್ಲಿ ಮುಖಾಮುಖಿಯಾಗಲಿದೆ. ಅಲ್ಲದೆ ಪಾಕಿಸ್ತಾನ್ ತಂಡವು ಫೈನಲ್​​ಗೆ ತಲುಪಿದರೆ ಮಾರ್ಚ್ 8 ರಂದು ಕೊಲಂಬೊದಲ್ಲಿ ಫೈನಲ್​​ ಪಂದ್ಯವನ್ನು ಆಯೋಜಿಸಲಾಗುತ್ತದೆ.

ಅದರಂತೆ ಮುಂಬರುವ ಟಿ20 ವಿಶ್ವಕಪ್​​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಶ್ರೀಲಂಕಾದಲ್ಲಿ ಮುಖಾಮುಖಿಯಾಗಲಿದೆ. ಅಲ್ಲದೆ ಪಾಕಿಸ್ತಾನ್ ತಂಡವು ಫೈನಲ್​​ಗೆ ತಲುಪಿದರೆ ಮಾರ್ಚ್ 8 ರಂದು ಕೊಲಂಬೊದಲ್ಲಿ ಫೈನಲ್​​ ಪಂದ್ಯವನ್ನು ಆಯೋಜಿಸಲಾಗುತ್ತದೆ.

4 / 6
ಇನ್ನು ಒಂದು ಸೆಮಿಫೈನಲ್ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಇನ್ನೊಂದು ಪಂದ್ಯಕ್ಕೆ ಸ್ಥಳ ನಿಗದಿ ಮಾಡಲಾಗಿಲ್ಲ. ಏಕೆಂದರೆ ಪಾಕಿಸ್ತಾನ್ ತಂಡ ಸೆಮಿಫೈನಲ್​​ಗೆ ತಲುಪಿದರೆ ಆ ಪಂದ್ಯವನ್ನು ಶ್ರೀಲಂಕಾದಲ್ಲಿ ಆಯೋಜಿಸಬೇಕಾಗುತ್ತದೆ. ಅದರಂತೆ ಫೆಬ್ರವರಿ 7 ರಿಂದ ಮಾರ್ಚ್ 8 ನಡುವೆ ಮುಂಬರುವ ಟಿ20 ವಿಶ್ವಕಪ್ ಆಯೋಜಿಸಲು ಐಸಿಸಿ ಮತ್ತು ಬಿಸಿಸಿಐ ನಿರ್ಧರಿಸಿದ್ದು, ಶೀಘ್ರದಲ್ಲೇ ಅಧಿಕೃತ ವೇಳಾಪಟ್ಟಿ ಬಿಡುಗಡೆಯಾಗಲಿದೆ.

ಇನ್ನು ಒಂದು ಸೆಮಿಫೈನಲ್ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಇನ್ನೊಂದು ಪಂದ್ಯಕ್ಕೆ ಸ್ಥಳ ನಿಗದಿ ಮಾಡಲಾಗಿಲ್ಲ. ಏಕೆಂದರೆ ಪಾಕಿಸ್ತಾನ್ ತಂಡ ಸೆಮಿಫೈನಲ್​​ಗೆ ತಲುಪಿದರೆ ಆ ಪಂದ್ಯವನ್ನು ಶ್ರೀಲಂಕಾದಲ್ಲಿ ಆಯೋಜಿಸಬೇಕಾಗುತ್ತದೆ. ಅದರಂತೆ ಫೆಬ್ರವರಿ 7 ರಿಂದ ಮಾರ್ಚ್ 8 ನಡುವೆ ಮುಂಬರುವ ಟಿ20 ವಿಶ್ವಕಪ್ ಆಯೋಜಿಸಲು ಐಸಿಸಿ ಮತ್ತು ಬಿಸಿಸಿಐ ನಿರ್ಧರಿಸಿದ್ದು, ಶೀಘ್ರದಲ್ಲೇ ಅಧಿಕೃತ ವೇಳಾಪಟ್ಟಿ ಬಿಡುಗಡೆಯಾಗಲಿದೆ.

5 / 6
ಟಿ20 ವಿಶ್ವಕಪ್​​ನಲ್ಲಿ ಕಣಕ್ಕಿಳಿಯುವ ತಂಡಗಳು: ಭಾರತ, ಶ್ರೀಲಂಕಾ, ಪಾಕಿಸ್ತಾನ್, ಬಾಂಗ್ಲಾದೇಶ್, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಐರ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ, ಯುಎಸ್​ಎ, ಕೆನಡಾ, ನೆದರ್​ಲೆಂಡ್ಸ್, ಇಟಲಿ, ನಮೀಬಿಯಾ, ಝಿಂಬಾಬ್ವೆ, ನೇಪಾಳ, ಒಮಾನ್ ಮತ್ತು ಯುಎಇ.

ಟಿ20 ವಿಶ್ವಕಪ್​​ನಲ್ಲಿ ಕಣಕ್ಕಿಳಿಯುವ ತಂಡಗಳು: ಭಾರತ, ಶ್ರೀಲಂಕಾ, ಪಾಕಿಸ್ತಾನ್, ಬಾಂಗ್ಲಾದೇಶ್, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಐರ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ, ಯುಎಸ್​ಎ, ಕೆನಡಾ, ನೆದರ್​ಲೆಂಡ್ಸ್, ಇಟಲಿ, ನಮೀಬಿಯಾ, ಝಿಂಬಾಬ್ವೆ, ನೇಪಾಳ, ಒಮಾನ್ ಮತ್ತು ಯುಎಇ.

6 / 6

Published On - 7:53 am, Mon, 10 November 25

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ