AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Melbourne Weather: ಪಾಕ್-ಇಂಗ್ಲೆಂಡ್ ಫೈನಲ್ ಫೈಟ್​ಗೆ ಮಳೆ ಅಡ್ಡಿ?: ಮೆಲ್ಬೋರ್ನ್​ನಲ್ಲಿ ಹವಾಮಾನ ಹೇಗಿದೆ?

Pakistan vs England, T20 World Cup Final: ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ 2022 (T20 World Cup) ಟೂರ್ನಿ ಅಂತಿಮ ಹಂತಕ್ಕೆ ಬಂದು ನಿಂತಿದೆ. ಇಂದು ಐತಿಹಾಸಿಕ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ಪಾಕಿಸ್ತಾನ ಹಾಗೂ ಇಂಗ್ಲೆಂಡ್ (Pakistan vs England) ನಡುವೆ ಫೈನಲ್ ಪಂದ್ಯ ಆಯೋಜಿಸಲಾಗಿದೆ.

TV9 Web
| Updated By: Vinay Bhat|

Updated on:Nov 13, 2022 | 9:16 AM

Share
ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ 2022 (T20 World Cup) ಟೂರ್ನಿ ಅಂತಿಮ ಹಂತಕ್ಕೆ ಬಂದು ನಿಂತಿದೆ. ಇಂದು ಐತಿಹಾಸಿಕ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ಪಾಕಿಸ್ತಾನ ಹಾಗೂ ಇಂಗ್ಲೆಂಡ್ (Pakistan vs England) ನಡುವೆ ಫೈನಲ್ ಪಂದ್ಯ ಆಯೋಜಿಸಲಾಗಿದೆ.

ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ 2022 (T20 World Cup) ಟೂರ್ನಿ ಅಂತಿಮ ಹಂತಕ್ಕೆ ಬಂದು ನಿಂತಿದೆ. ಇಂದು ಐತಿಹಾಸಿಕ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ಪಾಕಿಸ್ತಾನ ಹಾಗೂ ಇಂಗ್ಲೆಂಡ್ (Pakistan vs England) ನಡುವೆ ಫೈನಲ್ ಪಂದ್ಯ ಆಯೋಜಿಸಲಾಗಿದೆ.

1 / 7
ಆದರೆ, ಈ ರೋಚಕ ಕದನಕ್ಕೆ ವರುಣ ಅಡ್ಡಿಪಡಿಸಲಿದ್ದಾನೆ. ಮೆಲ್ಬೋರ್ನ್​ನಲ್ಲಿ ನಿನ್ನೆಯಿಂದಲೇ ಮೋಡ ಕವಿದ ವಾತಾವರಣ ಹೆಚ್ಚಿದ್ದು, ಪಂದ್ಯದ ದಿನ 95 ಪ್ರತಿಶತದಷ್ಟು ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ 25 ಮಿಮೀ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆದರೆ, ಈ ರೋಚಕ ಕದನಕ್ಕೆ ವರುಣ ಅಡ್ಡಿಪಡಿಸಲಿದ್ದಾನೆ. ಮೆಲ್ಬೋರ್ನ್​ನಲ್ಲಿ ನಿನ್ನೆಯಿಂದಲೇ ಮೋಡ ಕವಿದ ವಾತಾವರಣ ಹೆಚ್ಚಿದ್ದು, ಪಂದ್ಯದ ದಿನ 95 ಪ್ರತಿಶತದಷ್ಟು ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ 25 ಮಿಮೀ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 / 7
ಹೀಗಾಗಿ ಫೈನಲ್ ಪಂದ್ಯ ನಡೆಯುವುದು ಅನುಮಾನ. ಭಾನುವಾರ ಮಳೆಯಾಗಿ ಪಂದ್ಯ ನಡೆಯದಿದ್ದರೆ ಸೋಮವಾರವನ್ನು ಮೀಸಲು ದಿನವನ್ನಾಗಿ ಇರಿಸಲಾಗಿದೆ ಆದರೆ ಆ ದಿನವೂ 5ರಿಂದ 10 ಮಿಲಿಮೀಟರ್‌ ಮಳೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ಜಂಟಿ ಚಾಂಪಿಯನ್ ಆಗುವ ನಿರೀಕ್ಷೆ ಇದೆ.

ಹೀಗಾಗಿ ಫೈನಲ್ ಪಂದ್ಯ ನಡೆಯುವುದು ಅನುಮಾನ. ಭಾನುವಾರ ಮಳೆಯಾಗಿ ಪಂದ್ಯ ನಡೆಯದಿದ್ದರೆ ಸೋಮವಾರವನ್ನು ಮೀಸಲು ದಿನವನ್ನಾಗಿ ಇರಿಸಲಾಗಿದೆ ಆದರೆ ಆ ದಿನವೂ 5ರಿಂದ 10 ಮಿಲಿಮೀಟರ್‌ ಮಳೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ಜಂಟಿ ಚಾಂಪಿಯನ್ ಆಗುವ ನಿರೀಕ್ಷೆ ಇದೆ.

3 / 7
ಐಸಿಸಿ ನಿಯಮದ ಪ್ರಕಾರ ಟಿ20 ವಿಶ್ವಕಪ್​​ನ ಸೆಮಿ ಫೈನಲ್​ ಮತ್ತು ಫೈನಲ್ ಪಂದ್ಯದಲ್ಲಿ ಫಲಿತಾಂಶ ನೀಡಲು ಎರಡೂ ಇನ್ನಿಂಗ್ಸ್​​ಗಳಲ್ಲಿ ಕನಿಷ್ಠ 10 ಓವರ್ ಆಟ ನಡೆಯಬೇಕು ಎಂದಿದೆ. ಒಂದೊಮ್ಮೆ ಭಾನುವಾರ ಪಂದ್ಯವು ಆರಂಭವಾಗಿ ಮಳೆಯಿಂದ ಅರ್ಧಕ್ಕೆ ನಿಂತರೆ ಮರುದಿವಸ ಉಳಿದ ಭಾಗವನ್ನು ಮುಂದುವರಿಸಲಾಗುವುದು.

ಐಸಿಸಿ ನಿಯಮದ ಪ್ರಕಾರ ಟಿ20 ವಿಶ್ವಕಪ್​​ನ ಸೆಮಿ ಫೈನಲ್​ ಮತ್ತು ಫೈನಲ್ ಪಂದ್ಯದಲ್ಲಿ ಫಲಿತಾಂಶ ನೀಡಲು ಎರಡೂ ಇನ್ನಿಂಗ್ಸ್​​ಗಳಲ್ಲಿ ಕನಿಷ್ಠ 10 ಓವರ್ ಆಟ ನಡೆಯಬೇಕು ಎಂದಿದೆ. ಒಂದೊಮ್ಮೆ ಭಾನುವಾರ ಪಂದ್ಯವು ಆರಂಭವಾಗಿ ಮಳೆಯಿಂದ ಅರ್ಧಕ್ಕೆ ನಿಂತರೆ ಮರುದಿವಸ ಉಳಿದ ಭಾಗವನ್ನು ಮುಂದುವರಿಸಲಾಗುವುದು.

4 / 7
ಟಿ20 ವಿಶ್ವಕಪ್ ಇತಿಹಾಸದಲ್ಲಿ ಎರಡೂ ತಂಡಗಳು ಇದುವರೆಗೂ ಒಂದೊಂದು ಬಾರಿ ಚಾಂಪಿಯನ್‌ಗಳಾಗಿವೆ. 2009ರಲ್ಲಿ ಪಾಕಿಸ್ತಾನ ತನ್ನ ಮೊದಲನೇ ಟಿ20 ವಿಶ್ವಕಪ್‌ ಜಯಿಸಿತ್ತು. ಇಂಗ್ಲೆಂಡ್ 2010ರಲ್ಲಿ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿತ್ತು. ಹೀಗಾಗಿ ಇದೀಗ ಎರಡನೇ ಬಾರಿ ಕಪ್ ಗೆಲ್ಲುವ ತಂಡ ಯಾವುದು ಎಂಬುದು ನೋಡಬೇಕಿದೆ.

ಟಿ20 ವಿಶ್ವಕಪ್ ಇತಿಹಾಸದಲ್ಲಿ ಎರಡೂ ತಂಡಗಳು ಇದುವರೆಗೂ ಒಂದೊಂದು ಬಾರಿ ಚಾಂಪಿಯನ್‌ಗಳಾಗಿವೆ. 2009ರಲ್ಲಿ ಪಾಕಿಸ್ತಾನ ತನ್ನ ಮೊದಲನೇ ಟಿ20 ವಿಶ್ವಕಪ್‌ ಜಯಿಸಿತ್ತು. ಇಂಗ್ಲೆಂಡ್ 2010ರಲ್ಲಿ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿತ್ತು. ಹೀಗಾಗಿ ಇದೀಗ ಎರಡನೇ ಬಾರಿ ಕಪ್ ಗೆಲ್ಲುವ ತಂಡ ಯಾವುದು ಎಂಬುದು ನೋಡಬೇಕಿದೆ.

5 / 7
ಪಾಕಿಸ್ತಾನ ಹಾಗೂ ಇಂಗ್ಲೆಂಡ್ ಎರಡೂ ತಂಡಗಳು ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಬಲಿಷ್ಠವಾಗಿದೆ. ಪಾಕ್ ಪಾಳಯದಲ್ಲಿ ನಾಯಕ ಬಾಬರ್ ಅಜಮ್ ಸರಿಯಾದ ಸಮಯಕ್ಕೆ ಫಾರ್ಮ್​ಗೆ ಬಂದಿರುವುದು ಖುಷಿ ತಂದಿದೆ. ಮೊಹಮ್ಮದ್ ರಿಜ್ವಾನ್ ಕೂಡ ತಂಡಕ್ಕೆ ಆಸರೆಯಾಗುತ್ತಿದ್ದಾರೆ.

ಪಾಕಿಸ್ತಾನ ಹಾಗೂ ಇಂಗ್ಲೆಂಡ್ ಎರಡೂ ತಂಡಗಳು ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಬಲಿಷ್ಠವಾಗಿದೆ. ಪಾಕ್ ಪಾಳಯದಲ್ಲಿ ನಾಯಕ ಬಾಬರ್ ಅಜಮ್ ಸರಿಯಾದ ಸಮಯಕ್ಕೆ ಫಾರ್ಮ್​ಗೆ ಬಂದಿರುವುದು ಖುಷಿ ತಂದಿದೆ. ಮೊಹಮ್ಮದ್ ರಿಜ್ವಾನ್ ಕೂಡ ತಂಡಕ್ಕೆ ಆಸರೆಯಾಗುತ್ತಿದ್ದಾರೆ.

6 / 7
ಇಂಗ್ಲೆಂಡ್ ತಂಡ ಹೆಚ್ಚಾಗಿ ಬ್ಯಾಟರ್​ಗಳ ಮೇಲೆ ಅವಲಂಬಿತವಾಗಿದೆ. 11ನೇ ಕ್ರಮಾಂಕದಲ್ಲಿ ಬರುವ ಆಟಗಾರ ಕೂಡ ಬ್ಯಾಟಿಂಗ್ ಮಾಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಮುಖ್ಯವಾಗಿ ಓಪನರ್​ಗಳಾದ ಅಲೆಕ್ಸ್ ಹೇಲ್ಸ್ ಹಾಗೂ ಜೋಸ್ ಬಟ್ಲರ್ ಕಳೆದ ಸೆಮೀಸ್ ಪಂದ್ಯದಲ್ಲಿ ಭಾರತ ವಿರುದ್ಧ ನೀಡಿದ ಪ್ರದರ್ಶನ ಪಾಕ್ ಪಡೆಯಲ್ಲಿ ಭಯ ಹುಟ್ಟಿಸಿರುವುದು ನಿಜ.

ಇಂಗ್ಲೆಂಡ್ ತಂಡ ಹೆಚ್ಚಾಗಿ ಬ್ಯಾಟರ್​ಗಳ ಮೇಲೆ ಅವಲಂಬಿತವಾಗಿದೆ. 11ನೇ ಕ್ರಮಾಂಕದಲ್ಲಿ ಬರುವ ಆಟಗಾರ ಕೂಡ ಬ್ಯಾಟಿಂಗ್ ಮಾಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಮುಖ್ಯವಾಗಿ ಓಪನರ್​ಗಳಾದ ಅಲೆಕ್ಸ್ ಹೇಲ್ಸ್ ಹಾಗೂ ಜೋಸ್ ಬಟ್ಲರ್ ಕಳೆದ ಸೆಮೀಸ್ ಪಂದ್ಯದಲ್ಲಿ ಭಾರತ ವಿರುದ್ಧ ನೀಡಿದ ಪ್ರದರ್ಶನ ಪಾಕ್ ಪಡೆಯಲ್ಲಿ ಭಯ ಹುಟ್ಟಿಸಿರುವುದು ನಿಜ.

7 / 7

Published On - 9:16 am, Sun, 13 November 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ