AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ವಿಶ್ವಕಪ್ ಆರಂಭಕ್ಕೂ ಮುನ್ನ ಭಾರತಕ್ಕೆ ಆಘಾತ; ಪಾಕ್ ವಿರುದ್ಧದ ಪಂದ್ಯಕ್ಕೆ ಸ್ಮೃತಿ ಅಲಭ್ಯ..!

Smriti Mandhana: ಫೀಲ್ಡಿಂಗ್ ವೇಳೆ ಗಾಯಗೊಂಡಿದ್ದ ಮಂಧನಾ ಆಸ್ಟ್ರೇಲಿಯಾ ವಿರುದ್ಧ ಮೂರನೇ ಕ್ರಮಾಂಕಕ್ಕೆ ಬ್ಯಾಟಿಂಗ್​ಗಿಳಿದು ಕೇವಲ ಮೂರು ಎಸೆತಗಳನ್ನು ಮಾತ್ರ ಆಡಿದ್ದರು. ಬಳಿಕ ಬಾಂಗ್ಲಾದೇಶದ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲೂ ಸ್ಮೃತಿ ಕಣಕ್ಕಿಳಿದಿರಲಿಲ್ಲ.

TV9 Web
| Edited By: |

Updated on:Feb 11, 2023 | 9:28 AM

Share
ಮಹಿಳೆಯರ ಟಿ20 ವಿಶ್ವಕಪ್‌ನಲ್ಲಿ ಭಾರತದ ಪಯಣ ಭಾನುವಾರದಿಂದ ಆರಂಭವಾಗಲಿದೆ. ಪಾಕಿಸ್ತಾನದೊಂದಿಗೆ ಮೊದಲ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೂ ಮುನ್ನ ಭಾರತ ವನಿತಾ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ಅಭ್ಯಾಸ ಪಂದ್ಯದ ವೇಳೆ ಬೆರಳಿನ ಗಾಯಕ್ಕೆ ತುತ್ತಾಗಿದ್ದ ಭಾರತದ ಉಪನಾಯಕಿ ಸ್ಮೃತಿ ಮಂಧಾನ ಅವರು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ವರದಿಯಾಗಿದೆ. ಅಲ್ಲದೆ ಭಾನುವಾರ ನಡೆಯಲ್ಲಿರುವ ಟಿ20 ಮಹಿಳಾ ವಿಶ್ವಕಪ್ ಆರಂಭಿಕ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಆಡುವುದು ಅನುಮಾನ ಎಂದು ವರದಿಯಾಗಿದೆ.

ಮಹಿಳೆಯರ ಟಿ20 ವಿಶ್ವಕಪ್‌ನಲ್ಲಿ ಭಾರತದ ಪಯಣ ಭಾನುವಾರದಿಂದ ಆರಂಭವಾಗಲಿದೆ. ಪಾಕಿಸ್ತಾನದೊಂದಿಗೆ ಮೊದಲ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೂ ಮುನ್ನ ಭಾರತ ವನಿತಾ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ಅಭ್ಯಾಸ ಪಂದ್ಯದ ವೇಳೆ ಬೆರಳಿನ ಗಾಯಕ್ಕೆ ತುತ್ತಾಗಿದ್ದ ಭಾರತದ ಉಪನಾಯಕಿ ಸ್ಮೃತಿ ಮಂಧಾನ ಅವರು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ವರದಿಯಾಗಿದೆ. ಅಲ್ಲದೆ ಭಾನುವಾರ ನಡೆಯಲ್ಲಿರುವ ಟಿ20 ಮಹಿಳಾ ವಿಶ್ವಕಪ್ ಆರಂಭಿಕ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಆಡುವುದು ಅನುಮಾನ ಎಂದು ವರದಿಯಾಗಿದೆ.

1 / 5
ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಮಂಧಾನ ಗಾಯಗೊಂಡಿದ್ದರು. ಮಂಧಾನ ಗಾಯಗೊಂಡಿದ್ದ ಬಗ್ಗೆ ಐಸಿಸಿ ಮೂಲಗಳು ಮಾಹಿತಿ ನೀಡಿದ್ದವು. ಇದೀಗ ಅವರು ಇಡೀ ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ಪಾಕಿಸ್ತಾನದ ವಿರುದ್ಧ ಸ್ಮೃತಿ ಆಡುತ್ತಿಲ್ಲ.

ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಮಂಧಾನ ಗಾಯಗೊಂಡಿದ್ದರು. ಮಂಧಾನ ಗಾಯಗೊಂಡಿದ್ದ ಬಗ್ಗೆ ಐಸಿಸಿ ಮೂಲಗಳು ಮಾಹಿತಿ ನೀಡಿದ್ದವು. ಇದೀಗ ಅವರು ಇಡೀ ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ಪಾಕಿಸ್ತಾನದ ವಿರುದ್ಧ ಸ್ಮೃತಿ ಆಡುತ್ತಿಲ್ಲ.

2 / 5
ಫೀಲ್ಡಿಂಗ್ ವೇಳೆ ಗಾಯಗೊಂಡಿದ್ದ ಮಂಧನಾ ಆಸ್ಟ್ರೇಲಿಯಾ ವಿರುದ್ಧ ಮೂರನೇ ಕ್ರಮಾಂಕಕ್ಕೆ ಬ್ಯಾಟಿಂಗ್​ಗಿಳಿದು ಕೇವಲ ಮೂರು ಎಸೆತಗಳನ್ನು ಮಾತ್ರ ಆಡಿದ್ದರು. ಬಳಿಕ ಬಾಂಗ್ಲಾದೇಶದ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲೂ ಸ್ಮೃತಿ ಕಣಕ್ಕಿಳಿದಿರಲಿಲ್ಲ. ಒಂದು ವೇಳೆ ಮಂಧಾನ ಅವರ ಗಾಯ ಮತ್ತಷ್ಟು ಗಂಭೀರವಾದರೆ ಟೀಂ ಇಂಡಿಯಾಗೆ ದೊಡ್ಡ ಹೊಡೆತ ಬೀಳುವುದಂತೂ ಖಚಿತ.

ಫೀಲ್ಡಿಂಗ್ ವೇಳೆ ಗಾಯಗೊಂಡಿದ್ದ ಮಂಧನಾ ಆಸ್ಟ್ರೇಲಿಯಾ ವಿರುದ್ಧ ಮೂರನೇ ಕ್ರಮಾಂಕಕ್ಕೆ ಬ್ಯಾಟಿಂಗ್​ಗಿಳಿದು ಕೇವಲ ಮೂರು ಎಸೆತಗಳನ್ನು ಮಾತ್ರ ಆಡಿದ್ದರು. ಬಳಿಕ ಬಾಂಗ್ಲಾದೇಶದ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲೂ ಸ್ಮೃತಿ ಕಣಕ್ಕಿಳಿದಿರಲಿಲ್ಲ. ಒಂದು ವೇಳೆ ಮಂಧಾನ ಅವರ ಗಾಯ ಮತ್ತಷ್ಟು ಗಂಭೀರವಾದರೆ ಟೀಂ ಇಂಡಿಯಾಗೆ ದೊಡ್ಡ ಹೊಡೆತ ಬೀಳುವುದಂತೂ ಖಚಿತ.

3 / 5
ಅಂದಹಾಗೆ, ಕಳೆದ ವಾರ ದಕ್ಷಿಣ ಆಫ್ರಿಕಾ ವಿರುದ್ಧದ ತ್ರಿಕೋನ ಸರಣಿಯ ಫೈನಲ್‌ನಲ್ಲಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೂಡ ಭುಜದ ಗಾಯಕ್ಕೆ ಒಳಗಾಗಿದ್ದರು. ಆದಾಗ್ಯೂ, ಅಂತಿಮ ಪಂದ್ಯದ ನಂತರ ಅವರು ವಿಶ್ರಾಂತಿಯೊಂದಿಗೆ ಚೇತರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಅಂದಹಾಗೆ, ಕಳೆದ ವಾರ ದಕ್ಷಿಣ ಆಫ್ರಿಕಾ ವಿರುದ್ಧದ ತ್ರಿಕೋನ ಸರಣಿಯ ಫೈನಲ್‌ನಲ್ಲಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೂಡ ಭುಜದ ಗಾಯಕ್ಕೆ ಒಳಗಾಗಿದ್ದರು. ಆದಾಗ್ಯೂ, ಅಂತಿಮ ಪಂದ್ಯದ ನಂತರ ಅವರು ವಿಶ್ರಾಂತಿಯೊಂದಿಗೆ ಚೇತರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

4 / 5
ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಪಾಕಿಸ್ತಾನ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ಜೊತೆಗೆ ಬಿ ಗುಂಪಿನಲ್ಲಿ ಸ್ಥಾನ ಪಡೆದಿದೆ. ಕಳೆದ ಬಾರಿ ರನ್ನರ್ ಅಪ್ ಆಗಿದ್ದ ಭಾರತ, ಈ ಬಾರಿ ಪ್ರಶಸ್ತಿ ಗೆಲ್ಲುವ ಗುರಿಯೊಂದಿಗೆ ಕಣಕ್ಕಿಳಿಯಲಿದೆ.

ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಪಾಕಿಸ್ತಾನ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ಜೊತೆಗೆ ಬಿ ಗುಂಪಿನಲ್ಲಿ ಸ್ಥಾನ ಪಡೆದಿದೆ. ಕಳೆದ ಬಾರಿ ರನ್ನರ್ ಅಪ್ ಆಗಿದ್ದ ಭಾರತ, ಈ ಬಾರಿ ಪ್ರಶಸ್ತಿ ಗೆಲ್ಲುವ ಗುರಿಯೊಂದಿಗೆ ಕಣಕ್ಕಿಳಿಯಲಿದೆ.

5 / 5

Published On - 9:28 am, Sat, 11 February 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ