AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL 2024: 8 ಭರ್ಜರಿ ಸಿಕ್ಸ್, 8 ಫೋರ್: ಸ್ಪೋಟಕ ಶತಕ ಸಿಡಿಸಿದ ಯುವ ದಾಂಡಿಗ

BPL 2024: ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ಭರ್ಜರಿ ಶತಕ ಬಾರಿಸುವ ಮೂಲಕ ಯುವ ಎಡಗೈ ಬ್ಯಾಟರ್ ತಂಝಿದ್ ಹಸನ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಖುಲ್ನಾ ಟೈಗರ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ತಂಝಿದ್ ಸ್ಪೋಟಕ ಇನಿಂಗ್ಸ್ ಆಡಿದರು. ಈ ಮೂಲಕ ಶತಕ ಪೂರೈಸಿದ ಬಿಪಿಎಲ್​ನಲ್ಲಿ ಶತಕದ ಸಾಧನೆ ಮಾಡಿದ ಮೂರನೇ ಬಾಂಗ್ಲಾದೇಶ್ ಬ್ಯಾಟರ್ ಎನಿಸಿಕೊಂಡರು.

TV9 Web
| Edited By: |

Updated on: Feb 21, 2024 | 9:53 AM

Share
ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ಯುವ ಬ್ಯಾಟರ್ ತಂಝಿದ್ ಹಸನ್ ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ. ಈ ಪಂದ್ಯದಲ್ಲಿ ಚಟ್ಟೋಗ್ರಾಮ್ ಚಾಲೆಂಜರ್ಸ್ ಮತ್ತು ಖುಲ್ನಾ ಟೈಗರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡವು ಮೊದಲು ಬ್ಯಾಟ್ ಮಾಡಿತು.

ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ಯುವ ಬ್ಯಾಟರ್ ತಂಝಿದ್ ಹಸನ್ ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ. ಈ ಪಂದ್ಯದಲ್ಲಿ ಚಟ್ಟೋಗ್ರಾಮ್ ಚಾಲೆಂಜರ್ಸ್ ಮತ್ತು ಖುಲ್ನಾ ಟೈಗರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡವು ಮೊದಲು ಬ್ಯಾಟ್ ಮಾಡಿತು.

1 / 6
ಆರಂಭಿಕನಾಗಿ ಕಣಕ್ಕಿಳಿದ ತಂಝಿದ್ ಹಸನ್ ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಒಂದೆಡೆ ಮುಹಮ್ಮದ್ ವಸೀಮ್ (1), ಶೈಕತ್ ಅಲಿ (18) ವಿಕೆಟ್ ಪಡೆಯುವಲ್ಲಿ ಖುಲ್ನಾ ಟೈಗರ್ಸ್ ಬೌಲರ್​ಗಳು ಯಶಸ್ವಿಯಾದರೂ ತಂಝಿದ್ ಅಬ್ಬರವನ್ನು ತಡೆಯಲು ಮಾತ್ರ ಸಾಧ್ಯವಾಗಿರಲಿಲ್ಲ.

ಆರಂಭಿಕನಾಗಿ ಕಣಕ್ಕಿಳಿದ ತಂಝಿದ್ ಹಸನ್ ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಒಂದೆಡೆ ಮುಹಮ್ಮದ್ ವಸೀಮ್ (1), ಶೈಕತ್ ಅಲಿ (18) ವಿಕೆಟ್ ಪಡೆಯುವಲ್ಲಿ ಖುಲ್ನಾ ಟೈಗರ್ಸ್ ಬೌಲರ್​ಗಳು ಯಶಸ್ವಿಯಾದರೂ ತಂಝಿದ್ ಅಬ್ಬರವನ್ನು ತಡೆಯಲು ಮಾತ್ರ ಸಾಧ್ಯವಾಗಿರಲಿಲ್ಲ.

2 / 6
ಅದರಂತೆ ಖುಲ್ನಾ ಟೈಗರ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ತಂಝಿದ್ ಹಸನ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಪರಿಣಾಮ ಕೇವಲ 58 ಎಸೆತಗಳಲ್ಲಿ ತಂಝಿದ್ ಬ್ಯಾಟ್​ನಿಂದ ಶತಕ ಮೂಡಿಬಂತು. ಶತಕದ ಬಳಿಕ ಕೂಡ ಅಬ್ಬರ ಮುಂದುವರೆಸಿದ 23 ವರ್ಷದ ಯುವ ದಾಂಡಿಗ 65 ಎಸೆತಗಳಲ್ಲಿ 8 ಸಿಕ್ಸ್​ ಹಾಗೂ 8 ಫೋರ್​ಗಳೊಂದಿಗೆ 116 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಅದರಂತೆ ಖುಲ್ನಾ ಟೈಗರ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ತಂಝಿದ್ ಹಸನ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಪರಿಣಾಮ ಕೇವಲ 58 ಎಸೆತಗಳಲ್ಲಿ ತಂಝಿದ್ ಬ್ಯಾಟ್​ನಿಂದ ಶತಕ ಮೂಡಿಬಂತು. ಶತಕದ ಬಳಿಕ ಕೂಡ ಅಬ್ಬರ ಮುಂದುವರೆಸಿದ 23 ವರ್ಷದ ಯುವ ದಾಂಡಿಗ 65 ಎಸೆತಗಳಲ್ಲಿ 8 ಸಿಕ್ಸ್​ ಹಾಗೂ 8 ಫೋರ್​ಗಳೊಂದಿಗೆ 116 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

3 / 6
ತಂಝಿದ್ ಹಸನ್ ಅವರ ಈ ಸ್ಪೋಟಕ ಶತಕದ ನೆರವಿನಿಂದ ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 192 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಖುಲ್ನಾ ಟೈಗರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ತಂಝಿದ್ ಹಸನ್ ಅವರ ಈ ಸ್ಪೋಟಕ ಶತಕದ ನೆರವಿನಿಂದ ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 192 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಖುಲ್ನಾ ಟೈಗರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

4 / 6
ಆರಂಭಿಕ ಆಟಗಾರ ಅನಾಮುಲ್ ಹಕ್ (35) ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಶಾಯ್ ಹೋಪ್ (31) ಒಂದಷ್ಟು ಹೊತ್ತು ಕ್ರೀಸ್ ಕಚ್ಚಿ ನಿಂತದ್ದು ಬಿಟ್ಟರೆ, ಉಳಿದ ಬ್ಯಾಟರ್​ಗಳಿಗೆ ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ 19.5 ಓವರ್​ಗಳಲ್ಲಿ 127 ರನ್​ಗಳಿಸಿ ಖುಲ್ನಾ ಟೈಗರ್ಸ್ ತಂಡವು ಆಲೌಟ್ ಆಯಿತು. ಈ ಮೂಲಕ ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡ ಈ ಪಂದ್ಯವನ್ನು 65 ರನ್​ಗಳಿಂದ ಗೆದ್ದುಕೊಂಡಿದೆ.

ಆರಂಭಿಕ ಆಟಗಾರ ಅನಾಮುಲ್ ಹಕ್ (35) ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಶಾಯ್ ಹೋಪ್ (31) ಒಂದಷ್ಟು ಹೊತ್ತು ಕ್ರೀಸ್ ಕಚ್ಚಿ ನಿಂತದ್ದು ಬಿಟ್ಟರೆ, ಉಳಿದ ಬ್ಯಾಟರ್​ಗಳಿಗೆ ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ 19.5 ಓವರ್​ಗಳಲ್ಲಿ 127 ರನ್​ಗಳಿಸಿ ಖುಲ್ನಾ ಟೈಗರ್ಸ್ ತಂಡವು ಆಲೌಟ್ ಆಯಿತು. ಈ ಮೂಲಕ ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡ ಈ ಪಂದ್ಯವನ್ನು 65 ರನ್​ಗಳಿಂದ ಗೆದ್ದುಕೊಂಡಿದೆ.

5 / 6
ಇನ್ನು ಈ ಪಂದ್ಯದಲ್ಲಿ ಶತಕ ಬಾರಿಸುವುದರೊಂದಿಗೆ ತಂಝಿದ್ ಹಸನ್ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ಸೆಂಚುರಿ ಸಿಡಿಸಿದ ಮೂರನೇ ಬಾಂಗ್ಲಾ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ 116 ರನ್​ಗಳೊಂದಿಗೆ ಬಿಪಿಎಲ್​ನಲ್ಲಿ ಐದನೇ ಅತಿ ಹೆಚ್ಚು ವೈಯಕ್ತಿಕ ಸ್ಕೋರ್ ದಾಖಲಿಸಿದ ಹಿರಿಮೆಗೂ ಪಾತ್ರರಾಗಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಶತಕ ಬಾರಿಸುವುದರೊಂದಿಗೆ ತಂಝಿದ್ ಹಸನ್ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ಸೆಂಚುರಿ ಸಿಡಿಸಿದ ಮೂರನೇ ಬಾಂಗ್ಲಾ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ 116 ರನ್​ಗಳೊಂದಿಗೆ ಬಿಪಿಎಲ್​ನಲ್ಲಿ ಐದನೇ ಅತಿ ಹೆಚ್ಚು ವೈಯಕ್ತಿಕ ಸ್ಕೋರ್ ದಾಖಲಿಸಿದ ಹಿರಿಮೆಗೂ ಪಾತ್ರರಾಗಿದ್ದಾರೆ.

6 / 6
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ