AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL 2024: 8 ಭರ್ಜರಿ ಸಿಕ್ಸ್, 8 ಫೋರ್: ಸ್ಪೋಟಕ ಶತಕ ಸಿಡಿಸಿದ ಯುವ ದಾಂಡಿಗ

BPL 2024: ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ಭರ್ಜರಿ ಶತಕ ಬಾರಿಸುವ ಮೂಲಕ ಯುವ ಎಡಗೈ ಬ್ಯಾಟರ್ ತಂಝಿದ್ ಹಸನ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಖುಲ್ನಾ ಟೈಗರ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ತಂಝಿದ್ ಸ್ಪೋಟಕ ಇನಿಂಗ್ಸ್ ಆಡಿದರು. ಈ ಮೂಲಕ ಶತಕ ಪೂರೈಸಿದ ಬಿಪಿಎಲ್​ನಲ್ಲಿ ಶತಕದ ಸಾಧನೆ ಮಾಡಿದ ಮೂರನೇ ಬಾಂಗ್ಲಾದೇಶ್ ಬ್ಯಾಟರ್ ಎನಿಸಿಕೊಂಡರು.

TV9 Web
| Edited By: |

Updated on: Feb 21, 2024 | 9:53 AM

Share
ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ಯುವ ಬ್ಯಾಟರ್ ತಂಝಿದ್ ಹಸನ್ ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ. ಈ ಪಂದ್ಯದಲ್ಲಿ ಚಟ್ಟೋಗ್ರಾಮ್ ಚಾಲೆಂಜರ್ಸ್ ಮತ್ತು ಖುಲ್ನಾ ಟೈಗರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡವು ಮೊದಲು ಬ್ಯಾಟ್ ಮಾಡಿತು.

ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ಯುವ ಬ್ಯಾಟರ್ ತಂಝಿದ್ ಹಸನ್ ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ. ಈ ಪಂದ್ಯದಲ್ಲಿ ಚಟ್ಟೋಗ್ರಾಮ್ ಚಾಲೆಂಜರ್ಸ್ ಮತ್ತು ಖುಲ್ನಾ ಟೈಗರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡವು ಮೊದಲು ಬ್ಯಾಟ್ ಮಾಡಿತು.

1 / 6
ಆರಂಭಿಕನಾಗಿ ಕಣಕ್ಕಿಳಿದ ತಂಝಿದ್ ಹಸನ್ ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಒಂದೆಡೆ ಮುಹಮ್ಮದ್ ವಸೀಮ್ (1), ಶೈಕತ್ ಅಲಿ (18) ವಿಕೆಟ್ ಪಡೆಯುವಲ್ಲಿ ಖುಲ್ನಾ ಟೈಗರ್ಸ್ ಬೌಲರ್​ಗಳು ಯಶಸ್ವಿಯಾದರೂ ತಂಝಿದ್ ಅಬ್ಬರವನ್ನು ತಡೆಯಲು ಮಾತ್ರ ಸಾಧ್ಯವಾಗಿರಲಿಲ್ಲ.

ಆರಂಭಿಕನಾಗಿ ಕಣಕ್ಕಿಳಿದ ತಂಝಿದ್ ಹಸನ್ ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಒಂದೆಡೆ ಮುಹಮ್ಮದ್ ವಸೀಮ್ (1), ಶೈಕತ್ ಅಲಿ (18) ವಿಕೆಟ್ ಪಡೆಯುವಲ್ಲಿ ಖುಲ್ನಾ ಟೈಗರ್ಸ್ ಬೌಲರ್​ಗಳು ಯಶಸ್ವಿಯಾದರೂ ತಂಝಿದ್ ಅಬ್ಬರವನ್ನು ತಡೆಯಲು ಮಾತ್ರ ಸಾಧ್ಯವಾಗಿರಲಿಲ್ಲ.

2 / 6
ಅದರಂತೆ ಖುಲ್ನಾ ಟೈಗರ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ತಂಝಿದ್ ಹಸನ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಪರಿಣಾಮ ಕೇವಲ 58 ಎಸೆತಗಳಲ್ಲಿ ತಂಝಿದ್ ಬ್ಯಾಟ್​ನಿಂದ ಶತಕ ಮೂಡಿಬಂತು. ಶತಕದ ಬಳಿಕ ಕೂಡ ಅಬ್ಬರ ಮುಂದುವರೆಸಿದ 23 ವರ್ಷದ ಯುವ ದಾಂಡಿಗ 65 ಎಸೆತಗಳಲ್ಲಿ 8 ಸಿಕ್ಸ್​ ಹಾಗೂ 8 ಫೋರ್​ಗಳೊಂದಿಗೆ 116 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಅದರಂತೆ ಖುಲ್ನಾ ಟೈಗರ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ತಂಝಿದ್ ಹಸನ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಪರಿಣಾಮ ಕೇವಲ 58 ಎಸೆತಗಳಲ್ಲಿ ತಂಝಿದ್ ಬ್ಯಾಟ್​ನಿಂದ ಶತಕ ಮೂಡಿಬಂತು. ಶತಕದ ಬಳಿಕ ಕೂಡ ಅಬ್ಬರ ಮುಂದುವರೆಸಿದ 23 ವರ್ಷದ ಯುವ ದಾಂಡಿಗ 65 ಎಸೆತಗಳಲ್ಲಿ 8 ಸಿಕ್ಸ್​ ಹಾಗೂ 8 ಫೋರ್​ಗಳೊಂದಿಗೆ 116 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

3 / 6
ತಂಝಿದ್ ಹಸನ್ ಅವರ ಈ ಸ್ಪೋಟಕ ಶತಕದ ನೆರವಿನಿಂದ ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 192 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಖುಲ್ನಾ ಟೈಗರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ತಂಝಿದ್ ಹಸನ್ ಅವರ ಈ ಸ್ಪೋಟಕ ಶತಕದ ನೆರವಿನಿಂದ ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 192 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಖುಲ್ನಾ ಟೈಗರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

4 / 6
ಆರಂಭಿಕ ಆಟಗಾರ ಅನಾಮುಲ್ ಹಕ್ (35) ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಶಾಯ್ ಹೋಪ್ (31) ಒಂದಷ್ಟು ಹೊತ್ತು ಕ್ರೀಸ್ ಕಚ್ಚಿ ನಿಂತದ್ದು ಬಿಟ್ಟರೆ, ಉಳಿದ ಬ್ಯಾಟರ್​ಗಳಿಗೆ ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ 19.5 ಓವರ್​ಗಳಲ್ಲಿ 127 ರನ್​ಗಳಿಸಿ ಖುಲ್ನಾ ಟೈಗರ್ಸ್ ತಂಡವು ಆಲೌಟ್ ಆಯಿತು. ಈ ಮೂಲಕ ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡ ಈ ಪಂದ್ಯವನ್ನು 65 ರನ್​ಗಳಿಂದ ಗೆದ್ದುಕೊಂಡಿದೆ.

ಆರಂಭಿಕ ಆಟಗಾರ ಅನಾಮುಲ್ ಹಕ್ (35) ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಶಾಯ್ ಹೋಪ್ (31) ಒಂದಷ್ಟು ಹೊತ್ತು ಕ್ರೀಸ್ ಕಚ್ಚಿ ನಿಂತದ್ದು ಬಿಟ್ಟರೆ, ಉಳಿದ ಬ್ಯಾಟರ್​ಗಳಿಗೆ ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ 19.5 ಓವರ್​ಗಳಲ್ಲಿ 127 ರನ್​ಗಳಿಸಿ ಖುಲ್ನಾ ಟೈಗರ್ಸ್ ತಂಡವು ಆಲೌಟ್ ಆಯಿತು. ಈ ಮೂಲಕ ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡ ಈ ಪಂದ್ಯವನ್ನು 65 ರನ್​ಗಳಿಂದ ಗೆದ್ದುಕೊಂಡಿದೆ.

5 / 6
ಇನ್ನು ಈ ಪಂದ್ಯದಲ್ಲಿ ಶತಕ ಬಾರಿಸುವುದರೊಂದಿಗೆ ತಂಝಿದ್ ಹಸನ್ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ಸೆಂಚುರಿ ಸಿಡಿಸಿದ ಮೂರನೇ ಬಾಂಗ್ಲಾ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ 116 ರನ್​ಗಳೊಂದಿಗೆ ಬಿಪಿಎಲ್​ನಲ್ಲಿ ಐದನೇ ಅತಿ ಹೆಚ್ಚು ವೈಯಕ್ತಿಕ ಸ್ಕೋರ್ ದಾಖಲಿಸಿದ ಹಿರಿಮೆಗೂ ಪಾತ್ರರಾಗಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಶತಕ ಬಾರಿಸುವುದರೊಂದಿಗೆ ತಂಝಿದ್ ಹಸನ್ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ಸೆಂಚುರಿ ಸಿಡಿಸಿದ ಮೂರನೇ ಬಾಂಗ್ಲಾ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ 116 ರನ್​ಗಳೊಂದಿಗೆ ಬಿಪಿಎಲ್​ನಲ್ಲಿ ಐದನೇ ಅತಿ ಹೆಚ್ಚು ವೈಯಕ್ತಿಕ ಸ್ಕೋರ್ ದಾಖಲಿಸಿದ ಹಿರಿಮೆಗೂ ಪಾತ್ರರಾಗಿದ್ದಾರೆ.

6 / 6
Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!