AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ellyse Perry: ಎಲ್ಲಿಸ್ ಪೆರ್ರಿಗೆ ಒಡೆದ ಗ್ಲಾಸ್ ಗಿಫ್ಟ್ ನೀಡಿದ ಟಾಟಾ

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಫೈನಲ್​ಗೆ ಪ್ರವೇಶಿಸಿದೆ. ಭಾನುವಾರ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಮೆಗ್ ಲ್ಯಾನಿಂಗ್ ಮುಂದಾಳತ್ವದ ಡೆಲ್ಲಿ ಪಡೆ ಸ್ಮೃತಿ ಮಂಧಾನ ನಾಯಕತ್ವದ ಆರ್​ಸಿಬಿ ಬಳಗವನ್ನು ಎದುರಿಸಲಿದೆ.

TV9 Web
| Edited By: |

Updated on: Mar 16, 2024 | 12:02 PM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ್ತಿ ಎಲ್ಲಿಸ್ ಪೆರ್ರಿಗೆ (Ellyse Perry) ಟಾಟಾ ಕಂಪೆನಿಯು ವಿಶೇಷ ಗಿಫ್ಟ್ ನೀಡಿದೆ. ಅದು ಕೂಡ ಒಡೆದ ಗ್ಲಾಸ್ ಎಂಬುದೇ ಇಲ್ಲಿ ವಿಶೇಷ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ್ತಿ ಎಲ್ಲಿಸ್ ಪೆರ್ರಿಗೆ (Ellyse Perry) ಟಾಟಾ ಕಂಪೆನಿಯು ವಿಶೇಷ ಗಿಫ್ಟ್ ನೀಡಿದೆ. ಅದು ಕೂಡ ಒಡೆದ ಗ್ಲಾಸ್ ಎಂಬುದೇ ಇಲ್ಲಿ ವಿಶೇಷ.

1 / 5
ಹೌದು, ಮಾರ್ಚ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಎಲ್ಲಿಸ್ ಪೆರ್ರಿ ಭರ್ಜರಿ ಸಿಕ್ಸ್​ ಸಿಡಿಸಿದ್ದರು. ಲಾಂಗ್ ಆನ್​ನತ್ತ ಬಾರಿಸಿದ್ದ ಈ ಚೆಂಡು ನೇರವಾಗಿ ಹೋಗಿ ಬಿದ್ದದ್ದು ಬೌಂಡರಿ ಲೈನ್​ ಹತ್ತಿರ ನಿಲ್ಲಿಸಲಾಗಿದ್ದ ಟಾಟಾ ಪಂಚ್ ಕಾರಿನ ಕಿಟಕಿಗೆ.

ಹೌದು, ಮಾರ್ಚ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಎಲ್ಲಿಸ್ ಪೆರ್ರಿ ಭರ್ಜರಿ ಸಿಕ್ಸ್​ ಸಿಡಿಸಿದ್ದರು. ಲಾಂಗ್ ಆನ್​ನತ್ತ ಬಾರಿಸಿದ್ದ ಈ ಚೆಂಡು ನೇರವಾಗಿ ಹೋಗಿ ಬಿದ್ದದ್ದು ಬೌಂಡರಿ ಲೈನ್​ ಹತ್ತಿರ ನಿಲ್ಲಿಸಲಾಗಿದ್ದ ಟಾಟಾ ಪಂಚ್ ಕಾರಿನ ಕಿಟಕಿಗೆ.

2 / 5
80 ಮೀಟರ್​ನ ಸಿಕ್ಸರ್​ಗೆ ಟಾಟಾ ಕಾರಿನ ವಿಂಡೋ ಗ್ಲಾಸ್ ಒಡೆದು ಹೋಗಿತ್ತು. ಇದೀಗ ಅದೇ ಗ್ಲಾಸ್ ಅನ್ನು ಫ್ರೇಮ್ ಹಾಕಿ ಎಲ್ಲಿಸ್ ಪೆರ್ರಿಗೆ ಟಾಟಾ ಕಂಪೆನಿ ಗಿಫ್ಟ್ ನೀಡಿದೆ. ಈ ಮೂಲಕ ಪೆರ್ರಿಯ ಸ್ಮರಣೀಯ ಇನಿಂಗ್ಸ್ ಅನ್ನು 'ಒಡೆದ' ಗಾಜಿನೊಂದಿಗೆ ಟಾಟಾ ಮತ್ತಷ್ಟು ಸ್ಮರಣೀಯವಾಗಿಸಿದೆ.

80 ಮೀಟರ್​ನ ಸಿಕ್ಸರ್​ಗೆ ಟಾಟಾ ಕಾರಿನ ವಿಂಡೋ ಗ್ಲಾಸ್ ಒಡೆದು ಹೋಗಿತ್ತು. ಇದೀಗ ಅದೇ ಗ್ಲಾಸ್ ಅನ್ನು ಫ್ರೇಮ್ ಹಾಕಿ ಎಲ್ಲಿಸ್ ಪೆರ್ರಿಗೆ ಟಾಟಾ ಕಂಪೆನಿ ಗಿಫ್ಟ್ ನೀಡಿದೆ. ಈ ಮೂಲಕ ಪೆರ್ರಿಯ ಸ್ಮರಣೀಯ ಇನಿಂಗ್ಸ್ ಅನ್ನು 'ಒಡೆದ' ಗಾಜಿನೊಂದಿಗೆ ಟಾಟಾ ಮತ್ತಷ್ಟು ಸ್ಮರಣೀಯವಾಗಿಸಿದೆ.

3 / 5
ಸದ್ಯ ಭರ್ಜರಿ ಫಾರ್ಮ್​ನಲ್ಲಿರುವ ಎಲ್ಲಿಸ್ ಪೆರ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫೈನಲ್​ಗೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಲೀಗ್ ಹಂತದ ಪಂದ್ಯದಲ್ಲಿ 6 ವಿಕೆಟ್ ಕಬಳಿಸಿದ್ದ ಪೆರ್ರಿ, ಎಲಿಮಿನೇಟರ್ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಆರ್​ಸಿಬಿ ತಂಡವು ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಚೊಚ್ಚಲ ಬಾರಿ ಫೈನಲ್​ಗೇರುವಂತೆ ಮಾಡಿದ್ದಾರೆ.

ಸದ್ಯ ಭರ್ಜರಿ ಫಾರ್ಮ್​ನಲ್ಲಿರುವ ಎಲ್ಲಿಸ್ ಪೆರ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫೈನಲ್​ಗೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಲೀಗ್ ಹಂತದ ಪಂದ್ಯದಲ್ಲಿ 6 ವಿಕೆಟ್ ಕಬಳಿಸಿದ್ದ ಪೆರ್ರಿ, ಎಲಿಮಿನೇಟರ್ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಆರ್​ಸಿಬಿ ತಂಡವು ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಚೊಚ್ಚಲ ಬಾರಿ ಫೈನಲ್​ಗೇರುವಂತೆ ಮಾಡಿದ್ದಾರೆ.

4 / 5
ಭಾನುವಾರ (ಮಾ.17) ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ವುಮೆನ್ಸ್ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳು ಚೊಚ್ಚಲ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದು, ಅಂತಿಮವಾಗಿ ಯಾರಿಗೆ ವಿಜಯಲಕ್ಷ್ಮಿ ಒಲಿಯಲಿದೆ ಕಾದು ನೋಡಬೇಕಿದೆ.

ಭಾನುವಾರ (ಮಾ.17) ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ವುಮೆನ್ಸ್ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳು ಚೊಚ್ಚಲ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದು, ಅಂತಿಮವಾಗಿ ಯಾರಿಗೆ ವಿಜಯಲಕ್ಷ್ಮಿ ಒಲಿಯಲಿದೆ ಕಾದು ನೋಡಬೇಕಿದೆ.

5 / 5
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ