AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ellyse Perry: ಎಲ್ಲಿಸ್ ಪೆರ್ರಿಗೆ ಒಡೆದ ಗ್ಲಾಸ್ ಗಿಫ್ಟ್ ನೀಡಿದ ಟಾಟಾ

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಫೈನಲ್​ಗೆ ಪ್ರವೇಶಿಸಿದೆ. ಭಾನುವಾರ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಮೆಗ್ ಲ್ಯಾನಿಂಗ್ ಮುಂದಾಳತ್ವದ ಡೆಲ್ಲಿ ಪಡೆ ಸ್ಮೃತಿ ಮಂಧಾನ ನಾಯಕತ್ವದ ಆರ್​ಸಿಬಿ ಬಳಗವನ್ನು ಎದುರಿಸಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Mar 16, 2024 | 12:02 PM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ್ತಿ ಎಲ್ಲಿಸ್ ಪೆರ್ರಿಗೆ (Ellyse Perry) ಟಾಟಾ ಕಂಪೆನಿಯು ವಿಶೇಷ ಗಿಫ್ಟ್ ನೀಡಿದೆ. ಅದು ಕೂಡ ಒಡೆದ ಗ್ಲಾಸ್ ಎಂಬುದೇ ಇಲ್ಲಿ ವಿಶೇಷ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ್ತಿ ಎಲ್ಲಿಸ್ ಪೆರ್ರಿಗೆ (Ellyse Perry) ಟಾಟಾ ಕಂಪೆನಿಯು ವಿಶೇಷ ಗಿಫ್ಟ್ ನೀಡಿದೆ. ಅದು ಕೂಡ ಒಡೆದ ಗ್ಲಾಸ್ ಎಂಬುದೇ ಇಲ್ಲಿ ವಿಶೇಷ.

1 / 5
ಹೌದು, ಮಾರ್ಚ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಎಲ್ಲಿಸ್ ಪೆರ್ರಿ ಭರ್ಜರಿ ಸಿಕ್ಸ್​ ಸಿಡಿಸಿದ್ದರು. ಲಾಂಗ್ ಆನ್​ನತ್ತ ಬಾರಿಸಿದ್ದ ಈ ಚೆಂಡು ನೇರವಾಗಿ ಹೋಗಿ ಬಿದ್ದದ್ದು ಬೌಂಡರಿ ಲೈನ್​ ಹತ್ತಿರ ನಿಲ್ಲಿಸಲಾಗಿದ್ದ ಟಾಟಾ ಪಂಚ್ ಕಾರಿನ ಕಿಟಕಿಗೆ.

ಹೌದು, ಮಾರ್ಚ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಎಲ್ಲಿಸ್ ಪೆರ್ರಿ ಭರ್ಜರಿ ಸಿಕ್ಸ್​ ಸಿಡಿಸಿದ್ದರು. ಲಾಂಗ್ ಆನ್​ನತ್ತ ಬಾರಿಸಿದ್ದ ಈ ಚೆಂಡು ನೇರವಾಗಿ ಹೋಗಿ ಬಿದ್ದದ್ದು ಬೌಂಡರಿ ಲೈನ್​ ಹತ್ತಿರ ನಿಲ್ಲಿಸಲಾಗಿದ್ದ ಟಾಟಾ ಪಂಚ್ ಕಾರಿನ ಕಿಟಕಿಗೆ.

2 / 5
80 ಮೀಟರ್​ನ ಸಿಕ್ಸರ್​ಗೆ ಟಾಟಾ ಕಾರಿನ ವಿಂಡೋ ಗ್ಲಾಸ್ ಒಡೆದು ಹೋಗಿತ್ತು. ಇದೀಗ ಅದೇ ಗ್ಲಾಸ್ ಅನ್ನು ಫ್ರೇಮ್ ಹಾಕಿ ಎಲ್ಲಿಸ್ ಪೆರ್ರಿಗೆ ಟಾಟಾ ಕಂಪೆನಿ ಗಿಫ್ಟ್ ನೀಡಿದೆ. ಈ ಮೂಲಕ ಪೆರ್ರಿಯ ಸ್ಮರಣೀಯ ಇನಿಂಗ್ಸ್ ಅನ್ನು 'ಒಡೆದ' ಗಾಜಿನೊಂದಿಗೆ ಟಾಟಾ ಮತ್ತಷ್ಟು ಸ್ಮರಣೀಯವಾಗಿಸಿದೆ.

80 ಮೀಟರ್​ನ ಸಿಕ್ಸರ್​ಗೆ ಟಾಟಾ ಕಾರಿನ ವಿಂಡೋ ಗ್ಲಾಸ್ ಒಡೆದು ಹೋಗಿತ್ತು. ಇದೀಗ ಅದೇ ಗ್ಲಾಸ್ ಅನ್ನು ಫ್ರೇಮ್ ಹಾಕಿ ಎಲ್ಲಿಸ್ ಪೆರ್ರಿಗೆ ಟಾಟಾ ಕಂಪೆನಿ ಗಿಫ್ಟ್ ನೀಡಿದೆ. ಈ ಮೂಲಕ ಪೆರ್ರಿಯ ಸ್ಮರಣೀಯ ಇನಿಂಗ್ಸ್ ಅನ್ನು 'ಒಡೆದ' ಗಾಜಿನೊಂದಿಗೆ ಟಾಟಾ ಮತ್ತಷ್ಟು ಸ್ಮರಣೀಯವಾಗಿಸಿದೆ.

3 / 5
ಸದ್ಯ ಭರ್ಜರಿ ಫಾರ್ಮ್​ನಲ್ಲಿರುವ ಎಲ್ಲಿಸ್ ಪೆರ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫೈನಲ್​ಗೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಲೀಗ್ ಹಂತದ ಪಂದ್ಯದಲ್ಲಿ 6 ವಿಕೆಟ್ ಕಬಳಿಸಿದ್ದ ಪೆರ್ರಿ, ಎಲಿಮಿನೇಟರ್ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಆರ್​ಸಿಬಿ ತಂಡವು ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಚೊಚ್ಚಲ ಬಾರಿ ಫೈನಲ್​ಗೇರುವಂತೆ ಮಾಡಿದ್ದಾರೆ.

ಸದ್ಯ ಭರ್ಜರಿ ಫಾರ್ಮ್​ನಲ್ಲಿರುವ ಎಲ್ಲಿಸ್ ಪೆರ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫೈನಲ್​ಗೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಲೀಗ್ ಹಂತದ ಪಂದ್ಯದಲ್ಲಿ 6 ವಿಕೆಟ್ ಕಬಳಿಸಿದ್ದ ಪೆರ್ರಿ, ಎಲಿಮಿನೇಟರ್ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಆರ್​ಸಿಬಿ ತಂಡವು ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಚೊಚ್ಚಲ ಬಾರಿ ಫೈನಲ್​ಗೇರುವಂತೆ ಮಾಡಿದ್ದಾರೆ.

4 / 5
ಭಾನುವಾರ (ಮಾ.17) ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ವುಮೆನ್ಸ್ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳು ಚೊಚ್ಚಲ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದು, ಅಂತಿಮವಾಗಿ ಯಾರಿಗೆ ವಿಜಯಲಕ್ಷ್ಮಿ ಒಲಿಯಲಿದೆ ಕಾದು ನೋಡಬೇಕಿದೆ.

ಭಾನುವಾರ (ಮಾ.17) ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ವುಮೆನ್ಸ್ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳು ಚೊಚ್ಚಲ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದು, ಅಂತಿಮವಾಗಿ ಯಾರಿಗೆ ವಿಜಯಲಕ್ಷ್ಮಿ ಒಲಿಯಲಿದೆ ಕಾದು ನೋಡಬೇಕಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!