WTC Final: ಫೈನಲ್​ನಿಂದ ಆಸ್ಟ್ರೇಲಿಯಾ ತಂಡವನ್ನು ಹೊರದಬ್ಬಲು ಟೀಮ್ ಇಂಡಿಯಾಗೆ ಉತ್ತಮ ಅವಕಾಶ

WTC final 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್​ ಪಂದ್ಯವು ಜೂನ್ 11 ರಿಂದ 15 ರವರಗೆ ನಡೆಯಲಿದೆ. ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ WTC ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಕಣಕ್ಕಿಳಿಯಲಿದೆ. ಪ್ರಸ್ತುತ ಅಂಕ ಪಟ್ಟಿಯಲ್ಲಿ ಸೌತ್ ಆಫ್ರಿಕಾ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ದ್ವಿತೀಯ ಸ್ಥಾನದಲ್ಲಿದೆ. ಹಾಗೆಯೇ ಟೀಮ್ ಇಂಡಿಯಾ ಮೂರನೇ ಸ್ಥಾನವನ್ನು ಅಲಂಕರಿಸಿದೆ.

ಝಾಹಿರ್ ಯೂಸುಫ್
|

Updated on: Dec 19, 2024 | 7:53 AM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಲ್ಲಿ ಮತ್ತಷ್ಟು ಪೈಪೋಟಿ ಏರ್ಪಟ್ಟಿದೆ. ಏಕೆಂದರೆ ಮುಂದಿನ ಎರಡು ಪಂದ್ಯಗಳು ಉಭಯ ತಂಡಗಳಿಗೆ ನಿರ್ಣಾಯಕ. ಈ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಿಂದ ಹೊರಬೀಳುವುದು ಖಚಿತ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಲ್ಲಿ ಮತ್ತಷ್ಟು ಪೈಪೋಟಿ ಏರ್ಪಟ್ಟಿದೆ. ಏಕೆಂದರೆ ಮುಂದಿನ ಎರಡು ಪಂದ್ಯಗಳು ಉಭಯ ತಂಡಗಳಿಗೆ ನಿರ್ಣಾಯಕ. ಈ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಿಂದ ಹೊರಬೀಳುವುದು ಖಚಿತ.

1 / 5
ಏಕೆಂದರೆ ಭಾರತ ತಂಡವು  ಮೆಲ್ಬೋರ್ನ್​ ಮತ್ತು ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ 60.52% ಶೇಕಡಾವಾರು ಅಂಕಗಳನ್ನು ಪಡೆಯಲಿದೆ. ಈ ಮೂಲಕ ಪಾಯಿಂಟ್ಸ್​ ಟೇಬಲ್​​ನಲ್ಲಿ ದ್ವಿತೀಯ ಸ್ಥಾನಕ್ಕೇರಲಿದೆ.

ಏಕೆಂದರೆ ಭಾರತ ತಂಡವು ಮೆಲ್ಬೋರ್ನ್​ ಮತ್ತು ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ 60.52% ಶೇಕಡಾವಾರು ಅಂಕಗಳನ್ನು ಪಡೆಯಲಿದೆ. ಈ ಮೂಲಕ ಪಾಯಿಂಟ್ಸ್​ ಟೇಬಲ್​​ನಲ್ಲಿ ದ್ವಿತೀಯ ಸ್ಥಾನಕ್ಕೇರಲಿದೆ.

2 / 5
ಅತ್ತ ಮುಂದಿನ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಸೋತರೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿಯಲಿದೆ. ಇದಾಗ್ಯೂ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ ಎರಡು ಪಂದ್ಯಗಳನ್ನಾಡಬೇಕಿದೆ. ಆದರೆ ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಟೀಮ್ ಇಂಡಿಯಾವನ್ನು ಅಂಕ ಪಟ್ಟಿಯಲ್ಲಿ ಹಿಂದಿಕ್ಕಲು ಸಾಧ್ಯವಾಗುವುದಿಲ್ಲ ಎಂಬುದು ವಿಶೇಷ.

ಅತ್ತ ಮುಂದಿನ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಸೋತರೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿಯಲಿದೆ. ಇದಾಗ್ಯೂ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ ಎರಡು ಪಂದ್ಯಗಳನ್ನಾಡಬೇಕಿದೆ. ಆದರೆ ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಟೀಮ್ ಇಂಡಿಯಾವನ್ನು ಅಂಕ ಪಟ್ಟಿಯಲ್ಲಿ ಹಿಂದಿಕ್ಕಲು ಸಾಧ್ಯವಾಗುವುದಿಲ್ಲ ಎಂಬುದು ವಿಶೇಷ.

3 / 5
ಏಕೆಂದರೆ ಮುಂದಿನ ಎರಡು ಪಂದ್ಯಗಳಲ್ಲಿನ ಸೋಲು ಆಸ್ಟ್ರೇಲಿಯಾ ತಂಡ ಶೇಕಡಾವಾರು ಅಂಕವನ್ನು 53ಕ್ಕೆ ಇಳಿಸಲಿದೆ. ಇದಾಗ್ಯೂ ಶ್ರೀಲಂಕಾ ವಿರುದ್ಧ 2-0 ಅಂತರದಿಂದ ಸರಣಿ ಗೆದ್ದರೂ ಒಟ್ಟು  57% ಮಾತ್ರ ಪಡೆಯಲಿದೆ. ಅತ್ತ ಟೀಮ್ ಇಂಡಿಯಾ 60% ಪಡೆಯಲಿರುವ ಕಾರಣ ಫೈನಲ್​ಗೆ ಪ್ರವೇಶಿಸುವುದು ಖಚಿತ.

ಏಕೆಂದರೆ ಮುಂದಿನ ಎರಡು ಪಂದ್ಯಗಳಲ್ಲಿನ ಸೋಲು ಆಸ್ಟ್ರೇಲಿಯಾ ತಂಡ ಶೇಕಡಾವಾರು ಅಂಕವನ್ನು 53ಕ್ಕೆ ಇಳಿಸಲಿದೆ. ಇದಾಗ್ಯೂ ಶ್ರೀಲಂಕಾ ವಿರುದ್ಧ 2-0 ಅಂತರದಿಂದ ಸರಣಿ ಗೆದ್ದರೂ ಒಟ್ಟು 57% ಮಾತ್ರ ಪಡೆಯಲಿದೆ. ಅತ್ತ ಟೀಮ್ ಇಂಡಿಯಾ 60% ಪಡೆಯಲಿರುವ ಕಾರಣ ಫೈನಲ್​ಗೆ ಪ್ರವೇಶಿಸುವುದು ಖಚಿತ.

4 / 5
ಈ ಮೂಲಕ ಆಸ್ಟ್ರೇಲಿಯಾ ತಂಡವನ್ನು ಹೊರದಬ್ಬಿ ಭಾರತ ತಂಡ ಫೈನಲ್​ಗೆ ಪ್ರವೇಶಿಸಬಹುದು. ಮತ್ತೊಂದೆಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡವು ಪಾಕಿಸ್ತಾನ್ ವಿರುದ್ಧ ಒಂದು ಪಂದ್ಯ ಗೆದ್ದರೆ ಫೈನಲ್​ಗೆ ನೇರ ಅರ್ಹತೆ ಪಡೆಯಲಿದೆ. ಹೀಗಾಗಿ ಈ ಬಾರಿ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಫೈನಲ್ ಫೈಟ್​ ಅನ್ನು ನಿರೀಕ್ಷಿಸಬಹುದು.

ಈ ಮೂಲಕ ಆಸ್ಟ್ರೇಲಿಯಾ ತಂಡವನ್ನು ಹೊರದಬ್ಬಿ ಭಾರತ ತಂಡ ಫೈನಲ್​ಗೆ ಪ್ರವೇಶಿಸಬಹುದು. ಮತ್ತೊಂದೆಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡವು ಪಾಕಿಸ್ತಾನ್ ವಿರುದ್ಧ ಒಂದು ಪಂದ್ಯ ಗೆದ್ದರೆ ಫೈನಲ್​ಗೆ ನೇರ ಅರ್ಹತೆ ಪಡೆಯಲಿದೆ. ಹೀಗಾಗಿ ಈ ಬಾರಿ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಫೈನಲ್ ಫೈಟ್​ ಅನ್ನು ನಿರೀಕ್ಷಿಸಬಹುದು.

5 / 5
Follow us
ಮನೆಯಲ್ಲಿ ಕೆಲವು ವಸ್ತುಗಳನ್ನು ಭೂಮಿ ಮೇಲೆ ಇಡಬಾರದು: ಇದೆ ಅಧ್ಯಾತ್ಮ ಕಾರಣ!
ಮನೆಯಲ್ಲಿ ಕೆಲವು ವಸ್ತುಗಳನ್ನು ಭೂಮಿ ಮೇಲೆ ಇಡಬಾರದು: ಇದೆ ಅಧ್ಯಾತ್ಮ ಕಾರಣ!
ದಿನ ಭವಿಷ್ಯ; ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲ!
ದಿನ ಭವಿಷ್ಯ; ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲ!
ಜಾಮೀನು ಸಿಕ್ಕ 6 ದಿನದ ಬಳಿಕ ಶಿವಮೊಗ್ಗ ಜೈಲಿನಿಂದ ಆರೋಪಿ ಜಗದೀಶ್ ರಿಲೀಸ್​
ಜಾಮೀನು ಸಿಕ್ಕ 6 ದಿನದ ಬಳಿಕ ಶಿವಮೊಗ್ಗ ಜೈಲಿನಿಂದ ಆರೋಪಿ ಜಗದೀಶ್ ರಿಲೀಸ್​
ಮುಖ್ಯಮಂತ್ರಿ ಮಾತಾಡುತ್ತಿದ್ದರೂ ಹೊರಗೆ ಹೋದ ವಿರೋಧಪಕ್ಷಗಳ ಶಾಸಕರು
ಮುಖ್ಯಮಂತ್ರಿ ಮಾತಾಡುತ್ತಿದ್ದರೂ ಹೊರಗೆ ಹೋದ ವಿರೋಧಪಕ್ಷಗಳ ಶಾಸಕರು
ಜಮೀರ್ ಉತ್ತರದಿಂದ ಬಿಜೆಪಿ ಸಮಾಧಾನವಾಗದಿದ್ದಾಗ ಮುಖ್ಯಮಂತ್ರಿ ಉತ್ತರ
ಜಮೀರ್ ಉತ್ತರದಿಂದ ಬಿಜೆಪಿ ಸಮಾಧಾನವಾಗದಿದ್ದಾಗ ಮುಖ್ಯಮಂತ್ರಿ ಉತ್ತರ
ಪ್ರಿನ್ಸಿಪಾಲ್​ಗೆ ಅಡುಗೆ ಮಾಡಿಕೊಡಲು 8ನೇ ಕ್ಲಾಸ್ ಹುಡುಗನಿಗೆ ಒತ್ತಾಯ
ಪ್ರಿನ್ಸಿಪಾಲ್​ಗೆ ಅಡುಗೆ ಮಾಡಿಕೊಡಲು 8ನೇ ಕ್ಲಾಸ್ ಹುಡುಗನಿಗೆ ಒತ್ತಾಯ
ಚೈತ್ರಾ ಮೋಸದಾಟ; ಮನ ಒಲಿಸಲು ಹೊಸ ಉಪಾಯ ಕಂಡುಹಿಡಿದ ರಜತ್
ಚೈತ್ರಾ ಮೋಸದಾಟ; ಮನ ಒಲಿಸಲು ಹೊಸ ಉಪಾಯ ಕಂಡುಹಿಡಿದ ರಜತ್
ಸದನದಲ್ಲಿ ಸಚಿವ ಜಮೀರ್ ಅಹ್ಮದ್ ನೆರವಿಗೆ ಧಾವಿಸಿದ ಸಿದ್ದರಾಮಯ್ಯ
ಸದನದಲ್ಲಿ ಸಚಿವ ಜಮೀರ್ ಅಹ್ಮದ್ ನೆರವಿಗೆ ಧಾವಿಸಿದ ಸಿದ್ದರಾಮಯ್ಯ
ಹೊರಡುವ ಮುನ್ನ ಸುದೀಪ್, ಉಪೇಂದ್ರಗೆ ಶುಭ ಹಾರೈಸಿದ ಶಿವಣ್ಣ
ಹೊರಡುವ ಮುನ್ನ ಸುದೀಪ್, ಉಪೇಂದ್ರಗೆ ಶುಭ ಹಾರೈಸಿದ ಶಿವಣ್ಣ
ವಿರೋಧಪಕ್ಷದವರು ಸರ್ಕಾರದ ತಪ್ಪುಗಳನ್ನು ಎತ್ತಿ ತೋರಿಸಬೇಕು: ಮುಖ್ಯಮಂತ್ರಿ
ವಿರೋಧಪಕ್ಷದವರು ಸರ್ಕಾರದ ತಪ್ಪುಗಳನ್ನು ಎತ್ತಿ ತೋರಿಸಬೇಕು: ಮುಖ್ಯಮಂತ್ರಿ