AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಟೀಮ್ ಇಂಡಿಯಾ

Team India Records: ಬಾಂಗ್ಲಾದೇಶ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಟೀಮ್ ಇಂಡಿಯಾ ಹಲವು ದಾಖಲೆಗಳನ್ನು ನಿರ್ಮಿಸಿದೆ. ಈ ದಾಖಲೆಗಳಲ್ಲಿ ಒಂದು ಸರ್ವಶ್ರೇಷ್ಠ ದಾಖಲೆ ಕೂಡ ಇದು. ಸೋಮರ್​ಸೆಟ್ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದು ಟೀಮ್ ಇಂಡಿಯಾ ಈ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದೆ.

ಝಾಹಿರ್ ಯೂಸುಫ್
|

Updated on: Oct 13, 2024 | 11:54 AM

ಹೈದರಾಬಾದ್​ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಮೂರನೇ ಟಿ20 ಪಂದ್ಯದ ಮೂಲಕ ಭಾರತ ತಂಡವು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಅತೀ ಹೆಚ್ಚು ಬಾರಿ 200+ ಸ್ಕೋರ್​ಗಳಿಸುವ ಮೂಲಕ ಎಂಬುದು ವಿಶೇಷ.

ಹೈದರಾಬಾದ್​ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಮೂರನೇ ಟಿ20 ಪಂದ್ಯದ ಮೂಲಕ ಭಾರತ ತಂಡವು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಅತೀ ಹೆಚ್ಚು ಬಾರಿ 200+ ಸ್ಕೋರ್​ಗಳಿಸುವ ಮೂಲಕ ಎಂಬುದು ವಿಶೇಷ.

1 / 6
ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ 200 ಕ್ಕಿಂತ ಅಧಿಕ ಸ್ಕೋರ್​ಗಳಿಸಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ. ಬಾಂಗ್ಲಾದೇಶ್ ತಂಡದ ವಿರುದ್ಧ 20 ಓವರ್​ಗಳಲ್ಲಿ 297 ರನ್​ಗಳನ್ನು ಬಾರಿಸುವ ಮೂಲಕ ಈ ವಿಶ್ವ ದಾಖಲೆಯನ್ನು ಭಾರತ ತಂಡ ತನ್ನದಾಗಿಸಿಕೊಂಡಿದೆ.

ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ 200 ಕ್ಕಿಂತ ಅಧಿಕ ಸ್ಕೋರ್​ಗಳಿಸಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ. ಬಾಂಗ್ಲಾದೇಶ್ ತಂಡದ ವಿರುದ್ಧ 20 ಓವರ್​ಗಳಲ್ಲಿ 297 ರನ್​ಗಳನ್ನು ಬಾರಿಸುವ ಮೂಲಕ ಈ ವಿಶ್ವ ದಾಖಲೆಯನ್ನು ಭಾರತ ತಂಡ ತನ್ನದಾಗಿಸಿಕೊಂಡಿದೆ.

2 / 6
ಇದಕ್ಕೂ ಮುನ್ನ ಈ ವರ್ಲ್ಡ್​ ರೆಕಾರ್ಡ್ ಇಂಗ್ಲೆಂಡ್​ನ ಕೌಂಟಿ ತಂಡ ಸೋಮರ್‌ಸೆಟ್ ಹೆಸರಿನಲ್ಲಿತ್ತು. ಸೋಮರ್‌ಸೆಟ್ ತಂಡವು ಟಿ20 ಕ್ರಿಕೆಟ್​ನಲ್ಲಿ ಒಟ್ಟು 36 ಬಾರಿ 200 ಕ್ಕಿಂತ ಅಧಿಕ ಸ್ಕೋರ್​ಗಳಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು.

ಇದಕ್ಕೂ ಮುನ್ನ ಈ ವರ್ಲ್ಡ್​ ರೆಕಾರ್ಡ್ ಇಂಗ್ಲೆಂಡ್​ನ ಕೌಂಟಿ ತಂಡ ಸೋಮರ್‌ಸೆಟ್ ಹೆಸರಿನಲ್ಲಿತ್ತು. ಸೋಮರ್‌ಸೆಟ್ ತಂಡವು ಟಿ20 ಕ್ರಿಕೆಟ್​ನಲ್ಲಿ ಒಟ್ಟು 36 ಬಾರಿ 200 ಕ್ಕಿಂತ ಅಧಿಕ ಸ್ಕೋರ್​ಗಳಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 6
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. 238	 ಟಿ20 ಪಂದ್ಯಗಳನ್ನಾಡಿರುವ ಭಾರತ ತಂಡವು ಒಟ್ಟು 37 ಬಾರಿ 200+ ಸ್ಕೋರ್​ ಗಳಿಸಿದೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಇನ್ನೂರಕ್ಕಿಂತ ಅಧಿಕ ಸ್ಕೋರ್​ಗಳಿಸಿದ ತಂಡ ಎನಿಸಿಕೊಂಡಿದೆ.

ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. 238 ಟಿ20 ಪಂದ್ಯಗಳನ್ನಾಡಿರುವ ಭಾರತ ತಂಡವು ಒಟ್ಟು 37 ಬಾರಿ 200+ ಸ್ಕೋರ್​ ಗಳಿಸಿದೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಇನ್ನೂರಕ್ಕಿಂತ ಅಧಿಕ ಸ್ಕೋರ್​ಗಳಿಸಿದ ತಂಡ ಎನಿಸಿಕೊಂಡಿದೆ.

4 / 6
ಹಾಗೆಯೇ ಈ ಪಂದ್ಯದಲ್ಲಿ 297 ರನ್​ ಬಾರಿಸುವ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸ್ಕೋರ್​ಗಳಿಸಿದ ವಿಶ್ವದ 2ನೇ ತಂಡ ಎನಿಸಿಕೊಂಡಿದೆ. ಇದಲ್ಲದೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸ್ಕೋರ್​ಗಳಿಸಿದ ಟೆಸ್ಟ್ ಮಾನ್ಯತೆ ಹೊಂದಿರುವ ತಂಡವೆಂಬ ವಿಶ್ವ ದಾಖಲೆ ಕೂಡ ಟೀಮ್ ಇಂಡಿಯಾ ಪಾಲಾಗಿದೆ.

ಹಾಗೆಯೇ ಈ ಪಂದ್ಯದಲ್ಲಿ 297 ರನ್​ ಬಾರಿಸುವ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸ್ಕೋರ್​ಗಳಿಸಿದ ವಿಶ್ವದ 2ನೇ ತಂಡ ಎನಿಸಿಕೊಂಡಿದೆ. ಇದಲ್ಲದೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸ್ಕೋರ್​ಗಳಿಸಿದ ಟೆಸ್ಟ್ ಮಾನ್ಯತೆ ಹೊಂದಿರುವ ತಂಡವೆಂಬ ವಿಶ್ವ ದಾಖಲೆ ಕೂಡ ಟೀಮ್ ಇಂಡಿಯಾ ಪಾಲಾಗಿದೆ.

5 / 6
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 298 ರನ್​ಗಳ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 164 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 133 ರನ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿದೆ.

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 298 ರನ್​ಗಳ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 164 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 133 ರನ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿದೆ.

6 / 6
Follow us
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ