AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿ ದಾಖಲೆ ಉಡೀಸ್: ಹೊಸ ಇತಿಹಾಸ ಬರೆದ ಶ್ರೇಯಸ್ ಅಯ್ಯರ್

Shreyas Iyer: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟಿ20 ಪಂದ್ಯದಲ್ಲೇ ಶ್ರೇಯಸ್ ಅಯ್ಯರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ (59) ಹಾಗೂ ಶ್ರೇಯಸ್ ಅಯ್ಯರ್ (68) ಅರ್ಧಶತಕ ಸಿಡಿಸಿದ್ದರು. ಈ ಹಾಫ್​ ಸೆಂಚುರಿಗಳೊಂದಿಗೆ ಟೀಮ್ ಇಂಡಿಯಾ 20 ಓವರ್​ಗಳಲ್ಲಿ  7 ವಿಕೆಟ್ ನಷ್ಟಕ್ಕೆ 189 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಆದರೆ, ದುರದೃಷ್ಟವಶಾತ್ ಭಾರತದ ಇನ್ನಿಂಗ್ಸ್ ಮುಗಿಯುತ್ತಿದ್ದಂತೆ ಭಾರಿ ಮಳೆ ಬಂದಿದ್ದರಿಂದ ಪಂದ್ಯವನ್ನು ರದ್ದುಗೊಳಿಸಲಾಯಿತು.

ಝಾಹಿರ್ ಯೂಸುಫ್
|

Updated on:Jul 02, 2026 | 9:57 AM

Share
ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಆಂಗ್ಲರ ನಾಡಿನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ನಾಯಕನಾಗಿ ಇಂಗ್ಲೆಂಡ್ ವಿರುದ್ಧ ಆಡಿದ ಮೊದಲ ಟಿ20 ಪಂದ್ಯದಲ್ಲೇ ಎಂಬುದು ವಿಶೇಷ. ಈ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿ ಅಯ್ಯರ್ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆ ಮುರಿದಿದ್ದಾರೆ. (PC: getty images)

ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಆಂಗ್ಲರ ನಾಡಿನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ನಾಯಕನಾಗಿ ಇಂಗ್ಲೆಂಡ್ ವಿರುದ್ಧ ಆಡಿದ ಮೊದಲ ಟಿ20 ಪಂದ್ಯದಲ್ಲೇ ಎಂಬುದು ವಿಶೇಷ. ಈ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿ ಅಯ್ಯರ್ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆ ಮುರಿದಿದ್ದಾರೆ. (PC: getty images)

1 / 5
ಚೆಸ್ಟರ್-ಲೆ-ಸ್ಟ್ರೀಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕೇವಲ 6 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಈ ಹಂತದಲ್ಲಿ ಕ್ರೀಸ್​ಗೆ ಆಗಮಿಸಿದ ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. (PC: getty images)

ಚೆಸ್ಟರ್-ಲೆ-ಸ್ಟ್ರೀಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕೇವಲ 6 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಈ ಹಂತದಲ್ಲಿ ಕ್ರೀಸ್​ಗೆ ಆಗಮಿಸಿದ ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. (PC: getty images)

2 / 5
ಈ ಭರ್ಜರಿ ಬ್ಯಾಟಿಂಗ್​​ನೊಂದಿಗೆ ಶ್ರೇಯಸ್ ಅಯ್ಯರ್ ಕೇವಲ  38 ಎಸೆತಗಳಲ್ಲಿ ನಾಯಕನಾಗಿ ಚೊಚ್ಚಲ ಅರ್ಧಶತಕ ಪೂರೈಸಿದರು. ಈ ಹಾಫ್ ಸೆಂಚುರಿಯೊಂದಿಗೆ ಇಂಗ್ಲೆಂಡ್​ನಲ್ಲಿ ಅರ್ಧಶತಕ ಸಿಡಿಸಿದ ಭಾರತ ಟಿ20 ತಂಡದ ಮೊದಲ ನಾಯಕನೆಂಬ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡರು. (PC: getty images)

ಈ ಭರ್ಜರಿ ಬ್ಯಾಟಿಂಗ್​​ನೊಂದಿಗೆ ಶ್ರೇಯಸ್ ಅಯ್ಯರ್ ಕೇವಲ  38 ಎಸೆತಗಳಲ್ಲಿ ನಾಯಕನಾಗಿ ಚೊಚ್ಚಲ ಅರ್ಧಶತಕ ಪೂರೈಸಿದರು. ಈ ಹಾಫ್ ಸೆಂಚುರಿಯೊಂದಿಗೆ ಇಂಗ್ಲೆಂಡ್​ನಲ್ಲಿ ಅರ್ಧಶತಕ ಸಿಡಿಸಿದ ಭಾರತ ಟಿ20 ತಂಡದ ಮೊದಲ ನಾಯಕನೆಂಬ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡರು. (PC: getty images)

3 / 5
ಅಷ್ಟೇ ಅಲ್ಲದೆ ಇಂಗ್ಲೆಂಡ್​ ವಿರುದ್ಧ ಆಂಗ್ಲರ ನಾಡಿನಲ್ಲಿ ಗರಿಷ್ಠ ಸ್ಕೋರ್​ಗಳಿಸಿದ ಕ್ಯಾಪ್ಟನ್ ಎಂಬ ದಾಖಲೆಯನ್ನು ಕೂಡ ತಮ್ಮ ಹೆಸರಿಗೆ ಸೇರಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. 2018 ರಲ್ಲಿ ಕಾರ್ಡಿಫ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ 47 ರನ್​ಗಳಿಸಿದ್ದು ಭಾರತೀಯ ನಾಯಕನ ಶ್ರೇಷ್ಠ ಸಾಧನೆಯಾಗಿತ್ತು. (PC: BCCI)

ಅಷ್ಟೇ ಅಲ್ಲದೆ ಇಂಗ್ಲೆಂಡ್​ ವಿರುದ್ಧ ಆಂಗ್ಲರ ನಾಡಿನಲ್ಲಿ ಗರಿಷ್ಠ ಸ್ಕೋರ್​ಗಳಿಸಿದ ಕ್ಯಾಪ್ಟನ್ ಎಂಬ ದಾಖಲೆಯನ್ನು ಕೂಡ ತಮ್ಮ ಹೆಸರಿಗೆ ಸೇರಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. 2018 ರಲ್ಲಿ ಕಾರ್ಡಿಫ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ 47 ರನ್​ಗಳಿಸಿದ್ದು ಭಾರತೀಯ ನಾಯಕನ ಶ್ರೇಷ್ಠ ಸಾಧನೆಯಾಗಿತ್ತು. (PC: BCCI)

4 / 5
ಆದರೆ ಆಂಗ್ಲರ ನಾಡಿನಲ್ಲಿ ನಾಯಕನಾಗಿ ಕಣಕ್ಕಿಳಿದ ಮೊದಲ ಪಂದ್ಯದಲ್ಲೇ ಅಬ್ಬರಿಸಿದ ಶ್ರೇಯಸ್ ಅಯ್ಯರ್ 47 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 68 ರನ್ ಚಚ್ಚಿದರು. ಈ ಮೂಲಕ ಇಂಗ್ಲೆಂಡ್​ನಲ್ಲಿ ಟಿ20 ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ಮೊದಲ ಭಾರತೀಯ ನಾಯಕ ಹಾಗೂ ಗರಿಷ್ಠ ವೈಯುಕ್ತಿಕ ಸ್ಕೋರ್​ ಕಲೆಹಾಕಿದ ಟೀಮ್ ಇಂಡಿಯಾ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ. (PC: getty images)

ಆದರೆ ಆಂಗ್ಲರ ನಾಡಿನಲ್ಲಿ ನಾಯಕನಾಗಿ ಕಣಕ್ಕಿಳಿದ ಮೊದಲ ಪಂದ್ಯದಲ್ಲೇ ಅಬ್ಬರಿಸಿದ ಶ್ರೇಯಸ್ ಅಯ್ಯರ್ 47 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 68 ರನ್ ಚಚ್ಚಿದರು. ಈ ಮೂಲಕ ಇಂಗ್ಲೆಂಡ್​ನಲ್ಲಿ ಟಿ20 ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ಮೊದಲ ಭಾರತೀಯ ನಾಯಕ ಹಾಗೂ ಗರಿಷ್ಠ ವೈಯುಕ್ತಿಕ ಸ್ಕೋರ್​ ಕಲೆಹಾಕಿದ ಟೀಮ್ ಇಂಡಿಯಾ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ. (PC: getty images)

5 / 5

Published On - 9:23 am, Thu, 2 July 26

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ