Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮ್ ಗಂಭೀರ್ ಕೋಚ್ ಹುದ್ದೆಗೆ ಕಂಟಕ

Gautam Gambhir: ಗೌತಮ್ ಗಂಭೀರ್ ಕೋಚಿಂಗ್​ನಲ್ಲಿ ಟೀಮ್ ಇಂಡಿಯಾ 10 ಟೆಸ್ಟ್ ಪಂದ್ಯಗಳನ್ನಾಡಿದ್ದು, ಇದರಲ್ಲಿ 6 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನು ಮೂರು ಏಕದಿನ ಪಂದ್ಯಳಲ್ಲಿ 2 ಸೋಲು ಹಾಗೂ 1 ಡ್ರಾ ಸಾಧಿಸಿದೆ. ಹಾಗೆಯೇ 10 ಟಿ20 ಪಂದ್ಯಗಳಲ್ಲಿ 9 ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಅಂದರೆ ಇಲ್ಲಿ ಗಂಭೀರ್ ಗರಡಿಯಲ್ಲಿ ಭಾರತ ತಂಡವು ಏಕದಿನ ಮತ್ತು ಟೆಸ್ಟ್​ನಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ.

ಝಾಹಿರ್ ಯೂಸುಫ್
|

Updated on: Jan 15, 2025 | 12:53 PM

ಭಾರತ ತಂಡದ ಹೀನಾಯ ಪ್ರದರ್ಶನದ ಬೆನ್ನಲ್ಲೇ ಗೌತಮ್ ಗಂಭೀರ್ ಅವರ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಕಂಟಕ ಎದುರಾಗಿದೆ. ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಸರಣಿ ಸೋಲಿನ ಬಳಿಕ ಗಂಭೀರ್ ಅವರ ಕೋಚಿಂಗ್​ ಶೈಲಿ ವಿರುದ್ಧ ಪ್ರಶ್ನೆಗಳೆದ್ದಿದ್ದು, ಈ ಬಗ್ಗೆ ಬಿಸಿಸಿಐ ಪರಿಶೀಲನಾ ಸಭೆಯಲ್ಲೂ ಚರ್ಚೆ ನಡೆದಿದೆ.

ಭಾರತ ತಂಡದ ಹೀನಾಯ ಪ್ರದರ್ಶನದ ಬೆನ್ನಲ್ಲೇ ಗೌತಮ್ ಗಂಭೀರ್ ಅವರ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಕಂಟಕ ಎದುರಾಗಿದೆ. ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಸರಣಿ ಸೋಲಿನ ಬಳಿಕ ಗಂಭೀರ್ ಅವರ ಕೋಚಿಂಗ್​ ಶೈಲಿ ವಿರುದ್ಧ ಪ್ರಶ್ನೆಗಳೆದ್ದಿದ್ದು, ಈ ಬಗ್ಗೆ ಬಿಸಿಸಿಐ ಪರಿಶೀಲನಾ ಸಭೆಯಲ್ಲೂ ಚರ್ಚೆ ನಡೆದಿದೆ.

1 / 5
ಪ್ರಸ್ತುತ ಮಾಹಿತಿ ಪ್ರಕಾರ, ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿನ ಟೀಮ್ ಇಂಡಿಯಾದ ಪ್ರದರ್ಶನದ ಆಧಾರದ ಮೇಲೆ ಗೌತಮ್ ಗಂಭೀರ್ ಅವರ ಕೋಚ್ ಸ್ಥಾನವನ್ನು 'ಮರು ಮೌಲ್ಯಮಾಪನ' ಮಾಡಲಾಗುತ್ತದೆ. ಅಂದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಹೇಗೆ ಪ್ರದರ್ಶನ ನೀಡಲಿದೆ ಎಂಬುದರ ಮೇಲೆ ಗಂಭೀರ್ ಅವರ ಕೋಚ್ ಸ್ಥಾನ ನಿರ್ಧಾರವಾಗಲಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿನ ಟೀಮ್ ಇಂಡಿಯಾದ ಪ್ರದರ್ಶನದ ಆಧಾರದ ಮೇಲೆ ಗೌತಮ್ ಗಂಭೀರ್ ಅವರ ಕೋಚ್ ಸ್ಥಾನವನ್ನು 'ಮರು ಮೌಲ್ಯಮಾಪನ' ಮಾಡಲಾಗುತ್ತದೆ. ಅಂದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಹೇಗೆ ಪ್ರದರ್ಶನ ನೀಡಲಿದೆ ಎಂಬುದರ ಮೇಲೆ ಗಂಭೀರ್ ಅವರ ಕೋಚ್ ಸ್ಥಾನ ನಿರ್ಧಾರವಾಗಲಿದೆ.

2 / 5
ಚಾಂಪಿಯನ್ಸ್ ಟ್ರೋಫಿಯಲ್ಲೂ ಭಾರತ ತಂಡ ಹೀನಾಯ ಪ್ರದರ್ಶನ ನೀಡಿದರೆ, ಭಾರತ ತಂಡದ ಮುಖ್ಯ ಕೋಚ್​ ಹುದ್ದೆಯಿಂದ ಗಂಭೀರ್ ಅವರನ್ನು ಕೆಳಗಿಳಿಸುವ ಸಾಧ್ಯತೆ ಹೆಚ್ಚು. ಒಂದು ವೇಳೆ ಸೆಮಿಫೈನಲ್ ಮತ್ತು ಫೈನಲ್​ವರೆಗೆ ಉತ್ತಮ ಪ್ರದರ್ಶನ ನೀಡಿದರೆ, 2027ರ ಏಕದಿನ ವಿಶ್ವಕಪ್​ವರೆಗೆ ಅವರು ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲೂ ಭಾರತ ತಂಡ ಹೀನಾಯ ಪ್ರದರ್ಶನ ನೀಡಿದರೆ, ಭಾರತ ತಂಡದ ಮುಖ್ಯ ಕೋಚ್​ ಹುದ್ದೆಯಿಂದ ಗಂಭೀರ್ ಅವರನ್ನು ಕೆಳಗಿಳಿಸುವ ಸಾಧ್ಯತೆ ಹೆಚ್ಚು. ಒಂದು ವೇಳೆ ಸೆಮಿಫೈನಲ್ ಮತ್ತು ಫೈನಲ್​ವರೆಗೆ ಉತ್ತಮ ಪ್ರದರ್ಶನ ನೀಡಿದರೆ, 2027ರ ಏಕದಿನ ವಿಶ್ವಕಪ್​ವರೆಗೆ ಅವರು ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ.

3 / 5
ಅಂದರೆ ಗೌತಮ್ ಗಂಭೀರ್ ಪಾಲಿಗೆ ಚಾಂಪಿಯನ್ಸ್ ಟ್ರೋಫಿ ಅಗ್ನಿ ಪರೀಕ್ಷೆ ಎನ್ನಬಹುದು. ಏಕೆಂದರೆ ಗಂಭೀರ್ ಕೋಚ್ ಆದ ಬಳಿಕ ಭಾರತ ತಂಡವು ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಅದರಲ್ಲೂ ಅವರ ಗರಡಿಯಲ್ಲಿ ಭಾರತ ತಂಡ ಅತ್ಯಂತ ಹೀನಾಯ ಸೋಲಗಳನ್ನು ಅನುಭವಿ ಭಾರೀ ಮುಖಭಂಗಕ್ಕೆ ಒಳಗಾಗಿದೆ.

ಅಂದರೆ ಗೌತಮ್ ಗಂಭೀರ್ ಪಾಲಿಗೆ ಚಾಂಪಿಯನ್ಸ್ ಟ್ರೋಫಿ ಅಗ್ನಿ ಪರೀಕ್ಷೆ ಎನ್ನಬಹುದು. ಏಕೆಂದರೆ ಗಂಭೀರ್ ಕೋಚ್ ಆದ ಬಳಿಕ ಭಾರತ ತಂಡವು ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಅದರಲ್ಲೂ ಅವರ ಗರಡಿಯಲ್ಲಿ ಭಾರತ ತಂಡ ಅತ್ಯಂತ ಹೀನಾಯ ಸೋಲಗಳನ್ನು ಅನುಭವಿ ಭಾರೀ ಮುಖಭಂಗಕ್ಕೆ ಒಳಗಾಗಿದೆ.

4 / 5
ಇದರ ಜೊತೆ ಗೌತಮ್ ಗಂಭೀರ್ ಹಾಗೂ ಹಿರಿಯ ಆಟಗಾರರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿನ ಭಾರತ ತಂಡದ ಪ್ರದರ್ಶನದ ಆಧಾರದ ಮೇಲೆ ಗೌತಮ್ ಗಂಭೀರ್ ಅವರ ಕೋಚ್ ಹುದ್ದೆಯ ಭವಿಷ್ಯ ನಿರ್ಧಾರವಾಗಲಿದೆ.

ಇದರ ಜೊತೆ ಗೌತಮ್ ಗಂಭೀರ್ ಹಾಗೂ ಹಿರಿಯ ಆಟಗಾರರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿನ ಭಾರತ ತಂಡದ ಪ್ರದರ್ಶನದ ಆಧಾರದ ಮೇಲೆ ಗೌತಮ್ ಗಂಭೀರ್ ಅವರ ಕೋಚ್ ಹುದ್ದೆಯ ಭವಿಷ್ಯ ನಿರ್ಧಾರವಾಗಲಿದೆ.

5 / 5
Follow us
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್