AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup Final: ವಿಶ್ವಕಪ್ ಸೋಲು: ಬಿಸಿಸಿಐಗೆ ಮೀಟಿಂಗ್​ನಲ್ಲಿ ಖಡಕ್ ಉತ್ತರ ಕೊಟ್ಟ ರಾಹುಲ್ ದ್ರಾವಿಡ್

BCCI World Cup Review Meeting: ಐಸಿಸಿ ಏಕದಿನ ವಿಶ್ವಕಪ್ 2023 ರ ಫೈನಲ್ ವರೆಗೆ ಅದ್ಭುತ ಪ್ರದರ್ಶನ ತೋರಿದ್ದ ಭಾರತ, ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿತು. ಫೈನಲ್ ಸೋಲಿನ ನಂತರ ಬಿಸಿಸಿಐ, ಕೋಚ್ ರಾಹುಲ್ ದ್ರಾವಿಡ್ ಹಾಗೂ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ವಿಶ್ವಕಪ್ ಪರಿಶೀಲನಾ ಸಭೆ ನಡೆಸಿದೆ.

Vinay Bhat
|

Updated on: Dec 03, 2023 | 10:18 AM

2023ರ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಭಾರತ ಅನುಭವಿಸಿದ ಸೋಲು ಎಲ್ಲರಿಗೂ ನೋವುಂಟು ಮಾಡಿದೆ. ಟೂರ್ನಿಯುದ್ದಕ್ಕೂ ಒಂದೇ ಒಂದು ಸೋಲು ಕಾಣದೆ ಉತ್ತಮ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ಅಂತಿಮ ಫೈನಲ್ ಪಂದ್ಯದಲ್ಲಿ ಅದೃಷ್ಟ ಕೈಹಿಡಿಯಲಿಲ್ಲ. ಟಾಸ್-ಪಂದ್ಯ ಎರಡನ್ನೂ ಸೋತಿತು.

2023ರ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಭಾರತ ಅನುಭವಿಸಿದ ಸೋಲು ಎಲ್ಲರಿಗೂ ನೋವುಂಟು ಮಾಡಿದೆ. ಟೂರ್ನಿಯುದ್ದಕ್ಕೂ ಒಂದೇ ಒಂದು ಸೋಲು ಕಾಣದೆ ಉತ್ತಮ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ಅಂತಿಮ ಫೈನಲ್ ಪಂದ್ಯದಲ್ಲಿ ಅದೃಷ್ಟ ಕೈಹಿಡಿಯಲಿಲ್ಲ. ಟಾಸ್-ಪಂದ್ಯ ಎರಡನ್ನೂ ಸೋತಿತು.

1 / 7
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇತ್ತೀಚೆಗೆ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಮತ್ತು ನಾಯಕ ರೋಹಿತ್ ಶರ್ಮಾ ಅವರೊಂದಿಗೆ ವಿಶ್ವಕಪ್ ಪರಿಶೀಲನಾ ಸಭೆ ನಡೆಸಿದ್ದು, ಇದರಲ್ಲಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ಇದರಲ್ಲಿ ಫೈನಲ್‌ ಸೋಲಿಗೆ ಕೋಚ್ ರಾಹುಲ್ ದ್ರಾವಿಡ್ ಅವರು ಕಾರಣ ತಿಳಿಸಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇತ್ತೀಚೆಗೆ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಮತ್ತು ನಾಯಕ ರೋಹಿತ್ ಶರ್ಮಾ ಅವರೊಂದಿಗೆ ವಿಶ್ವಕಪ್ ಪರಿಶೀಲನಾ ಸಭೆ ನಡೆಸಿದ್ದು, ಇದರಲ್ಲಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ಇದರಲ್ಲಿ ಫೈನಲ್‌ ಸೋಲಿಗೆ ಕೋಚ್ ರಾಹುಲ್ ದ್ರಾವಿಡ್ ಅವರು ಕಾರಣ ತಿಳಿಸಿದ್ದಾರೆ.

2 / 7
ವರದಿಯೊಂದರ ಪ್ರಕಾರ, ಫೈನಲ್ ಪಂದ್ಯದಲ್ಲಿ ಭಾರತದ ಸೋಲಿಗೆ ಪಿಚ್ ಕಾರಣ ಎಂದು ಕೋಚ್ ರಾಹುಲ್ ದ್ರಾವಿಡ್ ಬಿಸಿಸಿಐ ಮುಂದೆ ನೇರವಾಗಿ ಹೇಳಿದ್ದಾರೆ. ಫೈನಲ್‌ನಲ್ಲಿ ನಾವು ನಿರೀಕ್ಷಿಸಿದಷ್ಟು ಪಿಚ್ ಸಹಾಯ ಮಾಡಲಿಲ್ಲ. ಪಿಚ್ ಸ್ವಲ್ಪವಾದರೂ ಸಹಾಯ ಮಾಡಿದ್ದರೆ ಸ್ಪಿನ್ನರ್‌ಗಳು ಅದ್ಭುತಗಳನ್ನು ಮಾಡಬಹುದಿತ್ತು ಮತ್ತು ಟೀಮ್ ಇಂಡಿಯಾ ಪಂದ್ಯದಲ್ಲಿ ಕಮ್​ಬ್ಯಾಕ್ ಮಾಡಬಹುದಿತ್ತು ಎಂದು ಹೇಳಿದ್ದಾರೆ.

ವರದಿಯೊಂದರ ಪ್ರಕಾರ, ಫೈನಲ್ ಪಂದ್ಯದಲ್ಲಿ ಭಾರತದ ಸೋಲಿಗೆ ಪಿಚ್ ಕಾರಣ ಎಂದು ಕೋಚ್ ರಾಹುಲ್ ದ್ರಾವಿಡ್ ಬಿಸಿಸಿಐ ಮುಂದೆ ನೇರವಾಗಿ ಹೇಳಿದ್ದಾರೆ. ಫೈನಲ್‌ನಲ್ಲಿ ನಾವು ನಿರೀಕ್ಷಿಸಿದಷ್ಟು ಪಿಚ್ ಸಹಾಯ ಮಾಡಲಿಲ್ಲ. ಪಿಚ್ ಸ್ವಲ್ಪವಾದರೂ ಸಹಾಯ ಮಾಡಿದ್ದರೆ ಸ್ಪಿನ್ನರ್‌ಗಳು ಅದ್ಭುತಗಳನ್ನು ಮಾಡಬಹುದಿತ್ತು ಮತ್ತು ಟೀಮ್ ಇಂಡಿಯಾ ಪಂದ್ಯದಲ್ಲಿ ಕಮ್​ಬ್ಯಾಕ್ ಮಾಡಬಹುದಿತ್ತು ಎಂದು ಹೇಳಿದ್ದಾರೆ.

3 / 7
"ನಾವು ವಿಶ್ವಕಪ್ ಫೈನಲ್‌ನಲ್ಲಿ ಸೋತಿದ್ದೇವೆ. ಏಕೆಂದರೆ ನಮಗೆ ಪಿಚ್‌ನಿಂದ ನಿರೀಕ್ಷಿತ ತಿರುವು ಸಿಗಲಿಲ್ಲ. ಸ್ಪಿನ್ನರ್‌ಗಳಿಗೆ ಪಿಚ್ ಕೊಂಚ ತಿರುವು ಕೊಡುತ್ತಿದ್ದರೂ ನಾವು ಗೆಲ್ಲುತ್ತಿದ್ದೆವು. ನಾವು ಅದೇ ತಂತ್ರದಲ್ಲಿ ಮೊದಲ 10 ಪಂದ್ಯಗಳನ್ನು ಗೆದ್ದಿದ್ದೇವೆ. ಆದರೆ ಫೈನಲ್​ನಲ್ಲಿ ಅದು ಸಾಧ್ಯವಾಗಲಿಲ್ಲ'', ಎಂದು ಹೇಳಿ ಸೋಲಿಗೆ ಪಿಚ್ ಕಾರಣ ಎಂದಿದ್ದಾರೆ ದ್ರಾವಿಡ್.

"ನಾವು ವಿಶ್ವಕಪ್ ಫೈನಲ್‌ನಲ್ಲಿ ಸೋತಿದ್ದೇವೆ. ಏಕೆಂದರೆ ನಮಗೆ ಪಿಚ್‌ನಿಂದ ನಿರೀಕ್ಷಿತ ತಿರುವು ಸಿಗಲಿಲ್ಲ. ಸ್ಪಿನ್ನರ್‌ಗಳಿಗೆ ಪಿಚ್ ಕೊಂಚ ತಿರುವು ಕೊಡುತ್ತಿದ್ದರೂ ನಾವು ಗೆಲ್ಲುತ್ತಿದ್ದೆವು. ನಾವು ಅದೇ ತಂತ್ರದಲ್ಲಿ ಮೊದಲ 10 ಪಂದ್ಯಗಳನ್ನು ಗೆದ್ದಿದ್ದೇವೆ. ಆದರೆ ಫೈನಲ್​ನಲ್ಲಿ ಅದು ಸಾಧ್ಯವಾಗಲಿಲ್ಲ'', ಎಂದು ಹೇಳಿ ಸೋಲಿಗೆ ಪಿಚ್ ಕಾರಣ ಎಂದಿದ್ದಾರೆ ದ್ರಾವಿಡ್.

4 / 7
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್ ಪಂದ್ಯವು ಅಹಮದಾಬಾದ್‌ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಿತು. ಈ ಪಂದ್ಯವನ್ನು ಭಾರತ-ಪಾಕಿಸ್ತಾನ ಪಂದ್ಯ ನಡೆದ ಅದೇ ಪಿಚ್‌ನಲ್ಲಿ ಆಡಿಸಲಾಯಿತು. ಫೈನಲ್‌ನಂತಹ ದೊಡ್ಡ ಪಂದ್ಯಗಳಿಗೆ ಹೊಸ ಪಿಚ್ ಬಳಸುವ ಬದಲು, ಇಲ್ಲಿ ಹಳೆಯ ಪಿಚ್ ಅನ್ನು ಬಳಸಲಾಗಿದೆ. ಇದು ಟೀಮ್ ಇಂಡಿಯಾಕ್ಕೆ ಭಾರೀ ಹೊರೆಯಾಗಿ ಪರಿಣಮಿಸಿತು.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್ ಪಂದ್ಯವು ಅಹಮದಾಬಾದ್‌ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಿತು. ಈ ಪಂದ್ಯವನ್ನು ಭಾರತ-ಪಾಕಿಸ್ತಾನ ಪಂದ್ಯ ನಡೆದ ಅದೇ ಪಿಚ್‌ನಲ್ಲಿ ಆಡಿಸಲಾಯಿತು. ಫೈನಲ್‌ನಂತಹ ದೊಡ್ಡ ಪಂದ್ಯಗಳಿಗೆ ಹೊಸ ಪಿಚ್ ಬಳಸುವ ಬದಲು, ಇಲ್ಲಿ ಹಳೆಯ ಪಿಚ್ ಅನ್ನು ಬಳಸಲಾಗಿದೆ. ಇದು ಟೀಮ್ ಇಂಡಿಯಾಕ್ಕೆ ಭಾರೀ ಹೊರೆಯಾಗಿ ಪರಿಣಮಿಸಿತು.

5 / 7
ಈ ಸಭೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ವಿಶ್ವಕಪ್‌ನಲ್ಲಿ ತಂಡದ ಪ್ರದರ್ಶನವು ಸಾಕಷ್ಟು ಅತ್ಯುತ್ತಮವಾಗಿದೆ ಎಂದು ತಂಡದ ಮ್ಯಾನೇಜ್‌ಮೆಂಟ್ ಹೇಳಿದೆ. ಅದೇ ಸಭೆಯಲ್ಲಿ, ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ವರೆಗೆ ರಾಹುಲ್ ದ್ರಾವಿಡ್ ಕೋಚ್ ಆಗಿ ಮುಂದುವರೆಯುವ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಈ ಸಭೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ವಿಶ್ವಕಪ್‌ನಲ್ಲಿ ತಂಡದ ಪ್ರದರ್ಶನವು ಸಾಕಷ್ಟು ಅತ್ಯುತ್ತಮವಾಗಿದೆ ಎಂದು ತಂಡದ ಮ್ಯಾನೇಜ್‌ಮೆಂಟ್ ಹೇಳಿದೆ. ಅದೇ ಸಭೆಯಲ್ಲಿ, ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ವರೆಗೆ ರಾಹುಲ್ ದ್ರಾವಿಡ್ ಕೋಚ್ ಆಗಿ ಮುಂದುವರೆಯುವ ತೀರ್ಮಾನ ತೆಗೆದುಕೊಳ್ಳಲಾಗಿದೆ.

6 / 7
ಇದೇ ಸಭೆಯಲ್ಲಿ ಮತ್ತೊಂದು ಮಹತ್ವದ ತೀರ್ಮಾಣ ತೆಗೆದುಕೊಳ್ಳಲಾಗಿದ್ದು, ಟಿ-20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವ ವಹಿಸುವ ಬಗ್ಗೆಯೂ ನಿರ್ಧರಿಸಲಾಗಿದೆ. ಆದರೆ, ಆಘಾತಕಾರಿ ಸುದ್ದಿ ಏನೆಂದರೆ, ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಆಡುವುದು ಖಚಿತವಾಗಿಲ್ಲ. ಏಕೆಂದರೆ ಬಿಸಿಸಿಐ ಅವರ ಸ್ಟ್ರೈಕ್ ರೇಟ್‌ನಿಂದ ಸಂತೋಷವಾಗಿಲ್ಲ ಎನ್ನಲಾಗಿದೆ.

ಇದೇ ಸಭೆಯಲ್ಲಿ ಮತ್ತೊಂದು ಮಹತ್ವದ ತೀರ್ಮಾಣ ತೆಗೆದುಕೊಳ್ಳಲಾಗಿದ್ದು, ಟಿ-20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವ ವಹಿಸುವ ಬಗ್ಗೆಯೂ ನಿರ್ಧರಿಸಲಾಗಿದೆ. ಆದರೆ, ಆಘಾತಕಾರಿ ಸುದ್ದಿ ಏನೆಂದರೆ, ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಆಡುವುದು ಖಚಿತವಾಗಿಲ್ಲ. ಏಕೆಂದರೆ ಬಿಸಿಸಿಐ ಅವರ ಸ್ಟ್ರೈಕ್ ರೇಟ್‌ನಿಂದ ಸಂತೋಷವಾಗಿಲ್ಲ ಎನ್ನಲಾಗಿದೆ.

7 / 7
Follow us
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ