AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆ ವಿಶ್ವ ದಾಖಲೆ… ಟೀಮ್ ಇಂಡಿಯಾದ ವರ್ಲ್ಡ್​ ರೆಕಾರ್ಡ್ ಚೇಸಿಂಗ್

India vs New Zealand: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ ಕೇವಲ 10 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಚೇಸಿಂಗ್​ನೊಂದಿಗೆ ಭರ್ಜರಿ ವಿಶ್ವ ದಾಖಲೆ ನಿರ್ಮಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ. 

ಝಾಹಿರ್ ಯೂಸುಫ್
|

Updated on: Jan 26, 2026 | 6:54 AM

Share
ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಕೇವಲ 10 ಓವರ್​​ಗಳ ಮೂಲಕ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಕೇವಲ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ಭಾರತ ತಂಡ ಹೊಸ ಇತಿಹಾಸ ನಿರ್ಮಿಸಿದೆ.

ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಕೇವಲ 10 ಓವರ್​​ಗಳ ಮೂಲಕ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಕೇವಲ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ಭಾರತ ತಂಡ ಹೊಸ ಇತಿಹಾಸ ನಿರ್ಮಿಸಿದೆ.

1 / 6
ಗುವಾಹಟಿಯಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿದ್ದರು.

ಗುವಾಹಟಿಯಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿದ್ದರು.

2 / 6
154 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 20 ಎಸೆತಗಳನ್ನು ಎದುರಿಸಿದ ಅಭಿಷೇಕ್ 68 ರನ್ ಬಾರಿಸಿದರೆ, ಸೂರ್ಯಕುಮಾರ್ 26 ಎಸೆತಗಳಲ್ಲಿ 57 ರನ್​ ಚಚ್ಚಿದರು.

154 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 20 ಎಸೆತಗಳನ್ನು ಎದುರಿಸಿದ ಅಭಿಷೇಕ್ 68 ರನ್ ಬಾರಿಸಿದರೆ, ಸೂರ್ಯಕುಮಾರ್ 26 ಎಸೆತಗಳಲ್ಲಿ 57 ರನ್​ ಚಚ್ಚಿದರು.

3 / 6
ಈ ಇಬ್ಬರ ಸಿಡಿಲಬ್ಬರ ಅರ್ಧಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ ಕೇವಲ 10 ಓವರ್​ಗಳಲ್ಲಿ 155 ರನ್​ ಬಾರಿಸಿ 8 ವಿಕೆಟ್​ಗಳ ವಿಜಯ ಸಾಧಿಸಿತು. ಈ ಗೆಲುವಿನೊಂದಿಗೆ ಐಸಿಸಿ ಪೂರ್ಣ ಸದಸ್ಯ ರಾಷ್ಟ್ರಗಳ ಪೈಕಿ ಅತೀ ಕಡಿಮೆ ಎಸೆತಗಳಲ್ಲಿ 150+ ರನ್​ಗಳನ್ನು ಚೇಸ್ ಮಾಡಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಯಿತು.

ಈ ಇಬ್ಬರ ಸಿಡಿಲಬ್ಬರ ಅರ್ಧಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ ಕೇವಲ 10 ಓವರ್​ಗಳಲ್ಲಿ 155 ರನ್​ ಬಾರಿಸಿ 8 ವಿಕೆಟ್​ಗಳ ವಿಜಯ ಸಾಧಿಸಿತು. ಈ ಗೆಲುವಿನೊಂದಿಗೆ ಐಸಿಸಿ ಪೂರ್ಣ ಸದಸ್ಯ ರಾಷ್ಟ್ರಗಳ ಪೈಕಿ ಅತೀ ಕಡಿಮೆ ಎಸೆತಗಳಲ್ಲಿ 150+ ರನ್​ಗಳನ್ನು ಚೇಸ್ ಮಾಡಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಯಿತು.

4 / 6
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಸೌತ್ ಆಫ್ರಿಕಾ ತಂಡದ ಹೆಸರಿನಲ್ಲಿತ್ತು. 2024 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಸೌತ್ ಆಫ್ರಿಕಾ 13.5 ಓವರ್​ಗಳಲ್ಲಿ 150+ ಸ್ಕೋರ್ ಬೆನ್ನತ್ತಿ ಗೆಲುವು ದಾಖಲಿಸಿದ್ದರು. ಈ ಮೂಲಕ 37 ಎಸೆತಗಳನ್ನು ಬಾಕಿಯಿರಿಸಿ 150 ಕ್ಕಿಂತ ಹೆಚ್ಚು ರನ್​ಗಳನ್ನು ಚೇಸ್ ಮಾಡಿದ ವಿಶ್ವ ದಾಖಲೆ ಬರೆದಿದ್ದರು.

ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಸೌತ್ ಆಫ್ರಿಕಾ ತಂಡದ ಹೆಸರಿನಲ್ಲಿತ್ತು. 2024 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಸೌತ್ ಆಫ್ರಿಕಾ 13.5 ಓವರ್​ಗಳಲ್ಲಿ 150+ ಸ್ಕೋರ್ ಬೆನ್ನತ್ತಿ ಗೆಲುವು ದಾಖಲಿಸಿದ್ದರು. ಈ ಮೂಲಕ 37 ಎಸೆತಗಳನ್ನು ಬಾಕಿಯಿರಿಸಿ 150 ಕ್ಕಿಂತ ಹೆಚ್ಚು ರನ್​ಗಳನ್ನು ಚೇಸ್ ಮಾಡಿದ ವಿಶ್ವ ದಾಖಲೆ ಬರೆದಿದ್ದರು.

5 / 6
ಇದೀಗ ಟೀಮ್ ಇಂಡಿಯಾ ಬರೋಬ್ಬರಿ 60 ಎಸೆತಗಳನ್ನು ಬಾಕಿಯಿರಿಸಿ 150+ ರನ್ ಚೇಸಿಂಗ್ ಮಾಡಿ ಗೆದ್ದಿದೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ಓವರ್​ಗಳಲ್ಲಿ 150 ಕ್ಕಿಂತ ಹೆಚ್ಚಿನ ಸ್ಕೋರ್ ಬೆನ್ನತ್ತಿ ಗೆದ್ದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ.

ಇದೀಗ ಟೀಮ್ ಇಂಡಿಯಾ ಬರೋಬ್ಬರಿ 60 ಎಸೆತಗಳನ್ನು ಬಾಕಿಯಿರಿಸಿ 150+ ರನ್ ಚೇಸಿಂಗ್ ಮಾಡಿ ಗೆದ್ದಿದೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ಓವರ್​ಗಳಲ್ಲಿ 150 ಕ್ಕಿಂತ ಹೆಚ್ಚಿನ ಸ್ಕೋರ್ ಬೆನ್ನತ್ತಿ ಗೆದ್ದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ.

6 / 6
Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ