AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಆಟಗಾರರಿಗೆ ಗಾಯದ ಸಮಸ್ಯೆ: ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾಗೆ ಹಿನ್ನಡೆ

Team India: ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಅವರ ಪರಿಸ್ಥಿತಿ ಕೂಡ ಉತ್ತಮವಾಗಿಲ್ಲ. ಕಳೆದ ಕೆಲ ತಿಂಗಳುಗಳಿಂದ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬುಮ್ರಾ ಸದ್ಯಕ್ಕಂತು ಕಂಬ್ಯಾಕ್ ಮಾಡುವುದಿಲ್ಲ ಎಂಬುದು ಕೂಡ ಖಚಿತವಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 28, 2023 | 10:38 PM

ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ಗಾಗಿ ಬಲಿಷ್ಠ ಪಡೆಯನ್ನು ಸಜ್ಜುಗೊಳಿಸಲು ಪ್ಲ್ಯಾನ್ ರೂಪಿಸಿದ್ದ ಟೀಮ್ ಇಂಡಿಯಾಗೆ ಆರಂಭದಲ್ಲೇ ಹಿನ್ನಡೆಯುಂಟಾಗಿದೆ. ಟಿ20 ವಿಶ್ವಕಪ್ ಸೋಲಿನ ಬೆನ್ನಲ್ಲೇ ಏಕದಿನ ವಿಶ್ವಕಪ್​ಗಾಗಿ 20 ಆಟಗಾರರನ್ನು ಆಯ್ಕೆ ಮಾಡಿ ಉತ್ತಮ ತಂಡ ಕಟ್ಟುವ ಸೂಚನೆಯನ್ನು ಬಿಸಿಸಿಐ ನೀಡಿತ್ತು.

ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ಗಾಗಿ ಬಲಿಷ್ಠ ಪಡೆಯನ್ನು ಸಜ್ಜುಗೊಳಿಸಲು ಪ್ಲ್ಯಾನ್ ರೂಪಿಸಿದ್ದ ಟೀಮ್ ಇಂಡಿಯಾಗೆ ಆರಂಭದಲ್ಲೇ ಹಿನ್ನಡೆಯುಂಟಾಗಿದೆ. ಟಿ20 ವಿಶ್ವಕಪ್ ಸೋಲಿನ ಬೆನ್ನಲ್ಲೇ ಏಕದಿನ ವಿಶ್ವಕಪ್​ಗಾಗಿ 20 ಆಟಗಾರರನ್ನು ಆಯ್ಕೆ ಮಾಡಿ ಉತ್ತಮ ತಂಡ ಕಟ್ಟುವ ಸೂಚನೆಯನ್ನು ಬಿಸಿಸಿಐ ನೀಡಿತ್ತು.

1 / 9
ಆದರೆ ಇದೀಗ ಸ್ಟಾರ್ ಆಟಗಾರರ ಗಾಯದ ಸಮಸ್ಯೆ, ಪ್ರಮುಖ ಆಟಗಾರರ ಕಳಪೆ ಪ್ರದರ್ಶನದಿಂದಾಗಿ ಹೊಸ ಚಿಂತೆ ಶುರುವಾಗಿದೆ. ಏಕೆಂದರೆ ಈಗಾಗಲೇ ಭಾರತದ ಆಟಗಾರರು ಫಿಟ್​ನೆಸ್​ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಆದರೆ ಇದೀಗ ಸ್ಟಾರ್ ಆಟಗಾರರ ಗಾಯದ ಸಮಸ್ಯೆ, ಪ್ರಮುಖ ಆಟಗಾರರ ಕಳಪೆ ಪ್ರದರ್ಶನದಿಂದಾಗಿ ಹೊಸ ಚಿಂತೆ ಶುರುವಾಗಿದೆ. ಏಕೆಂದರೆ ಈಗಾಗಲೇ ಭಾರತದ ಆಟಗಾರರು ಫಿಟ್​ನೆಸ್​ ಸಮಸ್ಯೆಯಿಂದ ಬಳಲುತ್ತಿದ್ದಾರೆ.

2 / 9
ಡಿಸೆಂಬರ್​ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಿಂದಾಗಿ ರಿಷಬ್ ಪಂತ್‌ ಏಕದಿನ ವಿಶ್ವಕಪ್ ಆಡುವುದು ಅನುಮಾನ. ಪ್ರಸ್ತುತ ಮಾಹಿತಿ ಪ್ರಕಾರ, ಅವರು ಐದಾರು ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

ಡಿಸೆಂಬರ್​ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಿಂದಾಗಿ ರಿಷಬ್ ಪಂತ್‌ ಏಕದಿನ ವಿಶ್ವಕಪ್ ಆಡುವುದು ಅನುಮಾನ. ಪ್ರಸ್ತುತ ಮಾಹಿತಿ ಪ್ರಕಾರ, ಅವರು ಐದಾರು ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

3 / 9
ಮತ್ತೊಂದೆಡೆ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಅವರ ಪರಿಸ್ಥಿತಿ ಕೂಡ ಉತ್ತಮವಾಗಿಲ್ಲ.  ಕಳೆದ ಕೆಲ ತಿಂಗಳುಗಳಿಂದ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬುಮ್ರಾ ಸದ್ಯಕ್ಕಂತು ಕಂಬ್ಯಾಕ್ ಮಾಡುವುದಿಲ್ಲ ಎಂಬುದು ಕೂಡ ಖಚಿತವಾಗಿದೆ.

ಮತ್ತೊಂದೆಡೆ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಅವರ ಪರಿಸ್ಥಿತಿ ಕೂಡ ಉತ್ತಮವಾಗಿಲ್ಲ. ಕಳೆದ ಕೆಲ ತಿಂಗಳುಗಳಿಂದ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬುಮ್ರಾ ಸದ್ಯಕ್ಕಂತು ಕಂಬ್ಯಾಕ್ ಮಾಡುವುದಿಲ್ಲ ಎಂಬುದು ಕೂಡ ಖಚಿತವಾಗಿದೆ.

4 / 9
ಜಸ್​ಪ್ರೀತ್ ಬುಮ್ರಾ ತಮ್ಮ ಬೆನ್ನು ನೋವಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಶಸ್ತ್ರಚಿಕಿತ್ಸೆಯ ಮೊರೆ ಹೋಗಲಿದ್ದಾರೆ ಎಂದು ವರದಿಯಾಗಿದೆ. ಇದರಿಂದ ಅವರು 6 ತಿಂಗಳುಗಳು ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ. ಇದಾಗ್ಯೂ ಅವರು ಏಕದಿನ ವಿಶ್ವಕಪ್ ಆಡುವುದರ ಬಗ್ಗೆ ಖಚಿತತೆ ಇಲ್ಲ.

ಜಸ್​ಪ್ರೀತ್ ಬುಮ್ರಾ ತಮ್ಮ ಬೆನ್ನು ನೋವಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಶಸ್ತ್ರಚಿಕಿತ್ಸೆಯ ಮೊರೆ ಹೋಗಲಿದ್ದಾರೆ ಎಂದು ವರದಿಯಾಗಿದೆ. ಇದರಿಂದ ಅವರು 6 ತಿಂಗಳುಗಳು ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ. ಇದಾಗ್ಯೂ ಅವರು ಏಕದಿನ ವಿಶ್ವಕಪ್ ಆಡುವುದರ ಬಗ್ಗೆ ಖಚಿತತೆ ಇಲ್ಲ.

5 / 9
ಇತ್ತ ಬೆನ್ನುನೋವಿನ ಸಮಸ್ಯೆಯಿಂದ ಕಂಗೆಟ್ಟಿರುವ ಶ್ರೇಯಸ್ ಅಯ್ಯರ್ ಕೂಡ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಆದರೆ ಅವರು ಏಕದಿನ ವಿಶ್ವಕಪ್‌ನಲ್ಲಿ ಆಡಲು ಉತ್ಸುಕರಾಗಿದ್ದಾರೆ. ಅದಕ್ಕಾಗಿ ಅವರು ಬೆನ್ನಿನ ಶಸ್ತ್ರಚಿಕಿತ್ಸೆಯನ್ನು ಮುಂದೂಡುವ ಚಿಂತನೆಯಲ್ಲಿದ್ದಾರೆ ಎಂದು ವರದಿಯಾಗಿದೆ.

ಇತ್ತ ಬೆನ್ನುನೋವಿನ ಸಮಸ್ಯೆಯಿಂದ ಕಂಗೆಟ್ಟಿರುವ ಶ್ರೇಯಸ್ ಅಯ್ಯರ್ ಕೂಡ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಆದರೆ ಅವರು ಏಕದಿನ ವಿಶ್ವಕಪ್‌ನಲ್ಲಿ ಆಡಲು ಉತ್ಸುಕರಾಗಿದ್ದಾರೆ. ಅದಕ್ಕಾಗಿ ಅವರು ಬೆನ್ನಿನ ಶಸ್ತ್ರಚಿಕಿತ್ಸೆಯನ್ನು ಮುಂದೂಡುವ ಚಿಂತನೆಯಲ್ಲಿದ್ದಾರೆ ಎಂದು ವರದಿಯಾಗಿದೆ.

6 / 9
ಅಂದರೆ ಏಕದಿನ ವಿಶ್ವಕಪ್ ಆಡಲು ತಮ್ಮ ನೋವಿನ ಸಮಸ್ಯೆಯ ಶಸ್ತ್ರಚಿಕಿತ್ಸೆಯನ್ನು ಮುಂದೂಡುವ ಬಗ್ಗೆ ವೈದ್ಯರ ಜೊತೆ ಚರ್ಚಿಸಿದ್ದಾರೆ. ಒಂದು ವೇಳೆ ಅವರು ಶಸ್ತ್ರಚಿಕಿತ್ಸೆ ಮಾಡಿಸದೇ, ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಂಡ ಬಳಿಕ ಮತ್ತದೇ ಸಮಸ್ಯೆ ಎದುರಾದರೆ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಅಂದರೆ ಏಕದಿನ ವಿಶ್ವಕಪ್ ಆಡಲು ತಮ್ಮ ನೋವಿನ ಸಮಸ್ಯೆಯ ಶಸ್ತ್ರಚಿಕಿತ್ಸೆಯನ್ನು ಮುಂದೂಡುವ ಬಗ್ಗೆ ವೈದ್ಯರ ಜೊತೆ ಚರ್ಚಿಸಿದ್ದಾರೆ. ಒಂದು ವೇಳೆ ಅವರು ಶಸ್ತ್ರಚಿಕಿತ್ಸೆ ಮಾಡಿಸದೇ, ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಂಡ ಬಳಿಕ ಮತ್ತದೇ ಸಮಸ್ಯೆ ಎದುರಾದರೆ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

7 / 9
ಏಕೆಂದರೆ 2021 ರ ಟಿ20 ವಿಶ್ವಕಪ್​ನಲ್ಲಿ ಬೌಲಿಂಗ್ ಮಾಡಲು ಸಂಪೂರ್ಣವಾಗಿ ಫಿಟ್​ನೆಸ್ ಹೊಂದಿಲ್ಲದಿದ್ದರೂ ಹಾರ್ದಿಕ್ ಪಾಂಡ್ಯರನ್ನು ಆಲ್​ರೌಂಡರ್​ ಆಗಿ ಆಯ್ಕೆ ಮಾಡಲಾಗಿತ್ತು. ಆದರೆ ಅವರು ಸಂಪೂರ್ಣ ಬೌಲಿಂಗ್ ಮಾಡದ ಕಾರಣ ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯಾಗಿತ್ತು. ಇದೇ ಕಾರಣದಿಂದಾಗಿ ಶ್ರೇಯಸ್ ಅಯ್ಯರ್ ಅವರ ನಿರ್ಧಾರ ಕೂಡ ಇಲ್ಲಿ ಚರ್ಚೆಗೆ ಕಾರಣವಾಗಬಹುದು.

ಏಕೆಂದರೆ 2021 ರ ಟಿ20 ವಿಶ್ವಕಪ್​ನಲ್ಲಿ ಬೌಲಿಂಗ್ ಮಾಡಲು ಸಂಪೂರ್ಣವಾಗಿ ಫಿಟ್​ನೆಸ್ ಹೊಂದಿಲ್ಲದಿದ್ದರೂ ಹಾರ್ದಿಕ್ ಪಾಂಡ್ಯರನ್ನು ಆಲ್​ರೌಂಡರ್​ ಆಗಿ ಆಯ್ಕೆ ಮಾಡಲಾಗಿತ್ತು. ಆದರೆ ಅವರು ಸಂಪೂರ್ಣ ಬೌಲಿಂಗ್ ಮಾಡದ ಕಾರಣ ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯಾಗಿತ್ತು. ಇದೇ ಕಾರಣದಿಂದಾಗಿ ಶ್ರೇಯಸ್ ಅಯ್ಯರ್ ಅವರ ನಿರ್ಧಾರ ಕೂಡ ಇಲ್ಲಿ ಚರ್ಚೆಗೆ ಕಾರಣವಾಗಬಹುದು.

8 / 9
ಇನ್ನು ಐಪಿಎಲ್ ಕೂಡ ಆರಂಭವಾಗುತ್ತಿದ್ದು, ಈ ಜಿದ್ದಾಜಿದ್ದಿನ ಟೂರ್ನಿಯಲ್ಲಿ ಪ್ರಮುಖ ಆಟಗಾರರು ಗಾಯಗೊಂಡರೆ, ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯಾಗುವುದರಲ್ಲಿ ಸಂದೇಹವೇ ಇಲ್ಲ.

ಇನ್ನು ಐಪಿಎಲ್ ಕೂಡ ಆರಂಭವಾಗುತ್ತಿದ್ದು, ಈ ಜಿದ್ದಾಜಿದ್ದಿನ ಟೂರ್ನಿಯಲ್ಲಿ ಪ್ರಮುಖ ಆಟಗಾರರು ಗಾಯಗೊಂಡರೆ, ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯಾಗುವುದರಲ್ಲಿ ಸಂದೇಹವೇ ಇಲ್ಲ.

9 / 9
Follow us
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ