AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

17 ರನ್​ಗಳಿಂದ ಟೀಮ್ ಇಂಡಿಯಾ ಕೈ ತಪ್ಪಿದ ವಿಶ್ವ ದಾಖಲೆ

India vs Bangladesh, 3rd T20I: ಬಾಂಗ್ಲಾದೇಶ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ 297 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡ 20 ಓವರ್​ಗಳಲ್ಲಿ 164 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಭಾರತ ತಂಡವು 133 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Oct 13, 2024 | 7:17 AM

ಬಾಂಗ್ಲಾದೇಶ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಭಾರತೀಯ ಬ್ಯಾಟರ್​ಗಳು ರನ್ ಸುರಿಮಳೆಗೈದಿದ್ದಾರೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಬಾಂಗ್ಲಾದೇಶ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಭಾರತೀಯ ಬ್ಯಾಟರ್​ಗಳು ರನ್ ಸುರಿಮಳೆಗೈದಿದ್ದಾರೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

1 / 7
ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 4 ರನ್​ಗಳಿಸಿ ಔಟಾಗಿದ್ದರು. ಆದರೆ ಈ ಆರಂಭಿಕ ಆಘಾತದಿಂದ ಟೀಮ್ ಇಂಡಿಯಾ ಕೆಲವೇ ಕ್ಷಣಗಳಲ್ಲಿ ಹೊರಬಂದಿದ್ದರು. ಏಕೆಂದರೆ 2ನೇ ವಿಕೆಟ್​ಗೆ ಜೊತೆಗೂಡಿದ ಸಂಜು ಸ್ಯಾಮ್ಸನ್ ಹಾಗೂ ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 4 ರನ್​ಗಳಿಸಿ ಔಟಾಗಿದ್ದರು. ಆದರೆ ಈ ಆರಂಭಿಕ ಆಘಾತದಿಂದ ಟೀಮ್ ಇಂಡಿಯಾ ಕೆಲವೇ ಕ್ಷಣಗಳಲ್ಲಿ ಹೊರಬಂದಿದ್ದರು. ಏಕೆಂದರೆ 2ನೇ ವಿಕೆಟ್​ಗೆ ಜೊತೆಗೂಡಿದ ಸಂಜು ಸ್ಯಾಮ್ಸನ್ ಹಾಗೂ ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

2 / 7
ಬಾಂಗ್ಲಾ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಈ ಜೋಡಿಯು 2ನೇ ವಿಕೆಟ್​ಗೆ 173 ರನ್​ಗಳ ಜೊತೆಯಾಟವಾಡಿದರು. ಇದರ ನಡುವೆ ಸಂಜು ಸ್ಯಾಮ್ಸನ್ ಕೇವಲ 40 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 47 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 111 ರನ್ ಬಾರಿಸಿ ಔಟಾದರು.

ಬಾಂಗ್ಲಾ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಈ ಜೋಡಿಯು 2ನೇ ವಿಕೆಟ್​ಗೆ 173 ರನ್​ಗಳ ಜೊತೆಯಾಟವಾಡಿದರು. ಇದರ ನಡುವೆ ಸಂಜು ಸ್ಯಾಮ್ಸನ್ ಕೇವಲ 40 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 47 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 111 ರನ್ ಬಾರಿಸಿ ಔಟಾದರು.

3 / 7
ಮತ್ತೊಂದೆಡೆ ಆರ್ಭಟ ಮುಂದುವರೆಸಿದ ಸೂರ್ಯಕುಮಾರ್ ಯಾದವ್ 35 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 75 ರನ್​ ಬಾರಿಸಿದರು. ಆ ಬಳಿಕ ಬಂದ ರಿಯಾನ್ ಪರಾಗ್ 34 ರನ್​ ಕಲೆಹಾಕಿದರೆ, ಹಾರ್ದಿಕ್ ಪಾಂಡ್ಯ 18 ಎಸೆತಗಳಲ್ಲಿ 47 ರನ್ ಚಚ್ಚಿದರು.

ಮತ್ತೊಂದೆಡೆ ಆರ್ಭಟ ಮುಂದುವರೆಸಿದ ಸೂರ್ಯಕುಮಾರ್ ಯಾದವ್ 35 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 75 ರನ್​ ಬಾರಿಸಿದರು. ಆ ಬಳಿಕ ಬಂದ ರಿಯಾನ್ ಪರಾಗ್ 34 ರನ್​ ಕಲೆಹಾಕಿದರೆ, ಹಾರ್ದಿಕ್ ಪಾಂಡ್ಯ 18 ಎಸೆತಗಳಲ್ಲಿ 47 ರನ್ ಚಚ್ಚಿದರು.

4 / 7
ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 297 ರನ್ ಕಲೆಹಾಕಿತು. ಇದು ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡ ಕಲೆಹಾಕಿದ ಗರಿಷ್ಠ ಸ್ಕೋರ್ ಎಂಬುದು ವಿಶೇಷ. ಇದಾಗ್ಯೂ ವಿಶ್ವ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾದ ಕೈ ತಪ್ಪಿದೆ.

ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 297 ರನ್ ಕಲೆಹಾಕಿತು. ಇದು ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡ ಕಲೆಹಾಕಿದ ಗರಿಷ್ಠ ಸ್ಕೋರ್ ಎಂಬುದು ವಿಶೇಷ. ಇದಾಗ್ಯೂ ವಿಶ್ವ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾದ ಕೈ ತಪ್ಪಿದೆ.

5 / 7
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ನೇಪಾಳ ತಂಡದ ಹೆಸರಿನಲ್ಲಿದೆ. 2023 ರಲ್ಲಿ ಮಂಗೋಲಿಯಾ ವಿರುದ್ಧ ನೇಪಾಳ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 314 ರನ್ ಕಲೆಹಾಕಿ ಈ ವಿಶ್ವ ದಾಖಲೆ ನಿರ್ಮಿಸಿದೆ.

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ನೇಪಾಳ ತಂಡದ ಹೆಸರಿನಲ್ಲಿದೆ. 2023 ರಲ್ಲಿ ಮಂಗೋಲಿಯಾ ವಿರುದ್ಧ ನೇಪಾಳ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 314 ರನ್ ಕಲೆಹಾಕಿ ಈ ವಿಶ್ವ ದಾಖಲೆ ನಿರ್ಮಿಸಿದೆ.

6 / 7
ಈ ದಾಖಲೆಯನ್ನು ಮುರಿಯುವ ಅವಕಾಶ ಹೊಂದಿದ್ದ ಟೀಮ್ ಇಂಡಿಯಾ ಅಂತಿಮ ಓವರ್​ಗಳ ವೇಳೆ ವಿಕೆಟ್ ಕೈಚೆಲ್ಲುವ ಮೂಲಕ ತಪ್ಪು ಮಾಡಿತು. ಪರಿಣಾಮ ಕೇವಲ 17 ರನ್​ಗಳ ಅಂತರದಿಂದ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸ್ಕೋರ್​ ಗಳಿಸಿದ ವಿಶ್ವ ದಾಖಲೆ ಬರೆಯುವ ಅವಕಾಶವನ್ನು ಟೀಮ್ ಇಂಡಿಯಾದ ಕೈ ಚೆಲ್ಲಿಕೊಂಡಿತು.

ಈ ದಾಖಲೆಯನ್ನು ಮುರಿಯುವ ಅವಕಾಶ ಹೊಂದಿದ್ದ ಟೀಮ್ ಇಂಡಿಯಾ ಅಂತಿಮ ಓವರ್​ಗಳ ವೇಳೆ ವಿಕೆಟ್ ಕೈಚೆಲ್ಲುವ ಮೂಲಕ ತಪ್ಪು ಮಾಡಿತು. ಪರಿಣಾಮ ಕೇವಲ 17 ರನ್​ಗಳ ಅಂತರದಿಂದ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸ್ಕೋರ್​ ಗಳಿಸಿದ ವಿಶ್ವ ದಾಖಲೆ ಬರೆಯುವ ಅವಕಾಶವನ್ನು ಟೀಮ್ ಇಂಡಿಯಾದ ಕೈ ಚೆಲ್ಲಿಕೊಂಡಿತು.

7 / 7
Follow us
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್