AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಚೆನ್ನೈ ಟೆಸ್ಟ್​ಗೆ ಸಿದ್ಧವಾಗಿರುವ ಟೀಂ ಇಂಡಿಯಾಗೆ ಸೆಪ್ಟೆಂಬರ್ ಆತಂಕ

IND vs BAN: ಚೆನ್ನೈನಲ್ಲಿ ಟೆಸ್ಟ್ ಪಂದ್ಯವನ್ನಾಡಲು ಸಜ್ಜಾಗಿರುವ ಭಾರತ ತಂಡಕ್ಕೆ ಸೆಪ್ಟೆಂಬರ್​ನ ಕರಾಳ ಇತಿಹಾಸ ದೊಡ್ಡ ಸವಾಲಾಗಿ ಪರಿಣಮಿಸಿದೆ. ಅಷ್ಟಕ್ಕೂ ಸೆಪ್ಟೆಂಬರ್ ತಿಂಗಳಿಗೂ ಚೆನ್ನೈನಲ್ಲಿ ನಡೆಯಲ್ಲಿರುವ ಟೆಸ್ಟ್ ಪಂದ್ಯಕ್ಕೂ ಹಾಗೂ ಟೀಂ ಇಂಡಿಯಾಕ್ಕೂ ಇರುವ ಸಂಬಂಧವೇನು ಎಂಬುದನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: Sep 17, 2024 | 10:30 PM

Share
ಸೆಪ್ಟೆಂಬರ್ 19 ರಿಂದ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ ಬಿಳಿ ಜೆರ್ಸಿಯಲ್ಲಿ ಮೈದಾನಕ್ಕೆ ಇಳಿಯಲಿದೆ. ಪೂರ್ಣ 6 ತಿಂಗಳ ನಂತರ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್ ಆಡಲಿದ್ದು, ಇದರೊಂದಿಗೆ ಸತತ ಮೂರನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ತಲುಪುವ ತಮ್ಮ ಅಭಿಯಾನವನ್ನು ಮುಂದುವರಿಸಲಿದೆ.

ಸೆಪ್ಟೆಂಬರ್ 19 ರಿಂದ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ ಬಿಳಿ ಜೆರ್ಸಿಯಲ್ಲಿ ಮೈದಾನಕ್ಕೆ ಇಳಿಯಲಿದೆ. ಪೂರ್ಣ 6 ತಿಂಗಳ ನಂತರ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್ ಆಡಲಿದ್ದು, ಇದರೊಂದಿಗೆ ಸತತ ಮೂರನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ತಲುಪುವ ತಮ್ಮ ಅಭಿಯಾನವನ್ನು ಮುಂದುವರಿಸಲಿದೆ.

1 / 7
ಬಹಳ ದಿನಗಳ ನಂತರ ಟೆಸ್ಟ್ ಕ್ರಿಕೆಟ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ರೋಹಿತ್ ಪಡೆಗೆ ಎದುರಾಳಿಯಾಗಿ ಬಾಂಗ್ಲಾದೇಶ ತಂಡವಿದೆ. ಈ ಮೊದಲು ಬಾಂಗ್ಲಾದೇಶ ತಂಡ, ಟೀಂ ಇಂಡಿಯಾಕ್ಕೆ ಸುಲಭ ತುತ್ತಾಗಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಇತ್ತೀಚೆಗಷ್ಟೇ ಈ ತಂಡ ಪಾಕಿಸ್ತಾನವನ್ನು ಅವರ ಮಣ್ಣಿನಲ್ಲೇ ಸೋಲಿಸಿದೆ. ಹೀಗಾಗಿ ಈ ತಂಡವನ್ನು ಕಡಿಮೆ ಅಂದಾಜು ಮಾಡುವಂತಿಲ್ಲ.

ಬಹಳ ದಿನಗಳ ನಂತರ ಟೆಸ್ಟ್ ಕ್ರಿಕೆಟ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ರೋಹಿತ್ ಪಡೆಗೆ ಎದುರಾಳಿಯಾಗಿ ಬಾಂಗ್ಲಾದೇಶ ತಂಡವಿದೆ. ಈ ಮೊದಲು ಬಾಂಗ್ಲಾದೇಶ ತಂಡ, ಟೀಂ ಇಂಡಿಯಾಕ್ಕೆ ಸುಲಭ ತುತ್ತಾಗಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಇತ್ತೀಚೆಗಷ್ಟೇ ಈ ತಂಡ ಪಾಕಿಸ್ತಾನವನ್ನು ಅವರ ಮಣ್ಣಿನಲ್ಲೇ ಸೋಲಿಸಿದೆ. ಹೀಗಾಗಿ ಈ ತಂಡವನ್ನು ಕಡಿಮೆ ಅಂದಾಜು ಮಾಡುವಂತಿಲ್ಲ.

2 / 7
ಇದೆಲ್ಲದರ ನಡುವೆ ಚೆನ್ನೈನಲ್ಲಿ ಟೆಸ್ಟ್ ಪಂದ್ಯವನ್ನಾಡಲು ಸಜ್ಜಾಗಿರುವ ಭಾರತ ತಂಡಕ್ಕೆ ಸೆಪ್ಟೆಂಬರ್​ನ ಕರಾಳ ಇತಿಹಾಸ ದೊಡ್ಡ ಸವಾಲಾಗಿ ಪರಿಣಮಿಸಿದೆ. ಅಷ್ಟಕ್ಕೂ ಸೆಪ್ಟೆಂಬರ್ ತಿಂಗಳಿಗೂ ಚೆನ್ನೈನಲ್ಲಿ ನಡೆಯಲ್ಲಿರುವ ಟೆಸ್ಟ್ ಪಂದ್ಯಕ್ಕೂ ಹಾಗೂ ಟೀಂ ಇಂಡಿಯಾಕ್ಕೂ ಇರುವ ಸಂಬಂಧವೇನು ಎಂಬುದನ್ನು ನೋಡುವುದಾದರೆ..

ಇದೆಲ್ಲದರ ನಡುವೆ ಚೆನ್ನೈನಲ್ಲಿ ಟೆಸ್ಟ್ ಪಂದ್ಯವನ್ನಾಡಲು ಸಜ್ಜಾಗಿರುವ ಭಾರತ ತಂಡಕ್ಕೆ ಸೆಪ್ಟೆಂಬರ್​ನ ಕರಾಳ ಇತಿಹಾಸ ದೊಡ್ಡ ಸವಾಲಾಗಿ ಪರಿಣಮಿಸಿದೆ. ಅಷ್ಟಕ್ಕೂ ಸೆಪ್ಟೆಂಬರ್ ತಿಂಗಳಿಗೂ ಚೆನ್ನೈನಲ್ಲಿ ನಡೆಯಲ್ಲಿರುವ ಟೆಸ್ಟ್ ಪಂದ್ಯಕ್ಕೂ ಹಾಗೂ ಟೀಂ ಇಂಡಿಯಾಕ್ಕೂ ಇರುವ ಸಂಬಂಧವೇನು ಎಂಬುದನ್ನು ನೋಡುವುದಾದರೆ..

3 / 7
ವಾಸ್ತವವಾಗಿ 1934 ರಲ್ಲಿ ಚೆನ್ನೈನಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಆಡಲಾಯಿತು. ಅಂದಿನಿಂದ ಇಲ್ಲಿಯವರೆಗೆ ಚೆನ್ನೈನಲ್ಲಿ ಒಟ್ಟು 34 ಟೆಸ್ಟ್ ಪಂದ್ಯಗಳನ್ನು ಆಡಲಾಗಿದೆ. ಇದರಲ್ಲಿ ಭಾರತ ತಂಡ 15 ಟೆಸ್ಟ್‌ಗಳಲ್ಲಿ ಗೆಲುವು ಸಾಧಿಸಿದ್ದು, 11ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ. ಉಳಿದಂತೆ 7 ಪಂದ್ಯಗಳಲ್ಲಿ ಟೀಂ ಇಂಡಿಯಾ ಸೋಲು ಕಂಡಿದೆ.

ವಾಸ್ತವವಾಗಿ 1934 ರಲ್ಲಿ ಚೆನ್ನೈನಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಆಡಲಾಯಿತು. ಅಂದಿನಿಂದ ಇಲ್ಲಿಯವರೆಗೆ ಚೆನ್ನೈನಲ್ಲಿ ಒಟ್ಟು 34 ಟೆಸ್ಟ್ ಪಂದ್ಯಗಳನ್ನು ಆಡಲಾಗಿದೆ. ಇದರಲ್ಲಿ ಭಾರತ ತಂಡ 15 ಟೆಸ್ಟ್‌ಗಳಲ್ಲಿ ಗೆಲುವು ಸಾಧಿಸಿದ್ದು, 11ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ. ಉಳಿದಂತೆ 7 ಪಂದ್ಯಗಳಲ್ಲಿ ಟೀಂ ಇಂಡಿಯಾ ಸೋಲು ಕಂಡಿದೆ.

4 / 7
ಇನ್ನು ವಿವಿದ ವರ್ಷಗಳಲ್ಲಿ ಸೆಪ್ಟೆಂಬರ್‌ ತಿಂಗಳಿನಲ್ಲೇ ಈ ಮೈದಾನದಲ್ಲಿ ಇದುವರೆಗೆ 3 ಟೆಸ್ಟ್ ಪಂದ್ಯಗಳು ಆಡಲಾಗಿದೆ. ಆದರೆ ಈ ಮೂರು ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡ ಒಂದು ಬಾರಿಯೂ ಗೆದ್ದಿಲ್ಲ. ಈ ಪೈಕಿ 2 ಪಂದ್ಯ ಡ್ರಾ ಆಗಿದ್ದರೆ, 1 ಪಂದ್ಯ ಟೈ ಆಗಿದೆ.

ಇನ್ನು ವಿವಿದ ವರ್ಷಗಳಲ್ಲಿ ಸೆಪ್ಟೆಂಬರ್‌ ತಿಂಗಳಿನಲ್ಲೇ ಈ ಮೈದಾನದಲ್ಲಿ ಇದುವರೆಗೆ 3 ಟೆಸ್ಟ್ ಪಂದ್ಯಗಳು ಆಡಲಾಗಿದೆ. ಆದರೆ ಈ ಮೂರು ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡ ಒಂದು ಬಾರಿಯೂ ಗೆದ್ದಿಲ್ಲ. ಈ ಪೈಕಿ 2 ಪಂದ್ಯ ಡ್ರಾ ಆಗಿದ್ದರೆ, 1 ಪಂದ್ಯ ಟೈ ಆಗಿದೆ.

5 / 7
ಸೆಪ್ಟೆಂಬರ್ 1979 ರಲ್ಲಿ ನಡೆದಿದ್ದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯ ಡ್ರಾ ಆಗಿತ್ತು. ನಂತರ ಸೆಪ್ಟೆಂಬರ್ 1982ರಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ಧದ ಪಂದ್ಯವೂ ಡ್ರಾ ಆಗಿತ್ತು. 1986ರಲ್ಲಿ ನಡೆದಿದ್ದ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ರೋಚಕ ಟೈನಲ್ಲಿ ಕೊನೆಗೊಂಡಿತ್ತು.

ಸೆಪ್ಟೆಂಬರ್ 1979 ರಲ್ಲಿ ನಡೆದಿದ್ದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯ ಡ್ರಾ ಆಗಿತ್ತು. ನಂತರ ಸೆಪ್ಟೆಂಬರ್ 1982ರಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ಧದ ಪಂದ್ಯವೂ ಡ್ರಾ ಆಗಿತ್ತು. 1986ರಲ್ಲಿ ನಡೆದಿದ್ದ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ರೋಚಕ ಟೈನಲ್ಲಿ ಕೊನೆಗೊಂಡಿತ್ತು.

6 / 7
ಆ ಬಳಿಕ ಅಂದರೆ 1986 ರಿಂದ ಇಲ್ಲಿಯವರೆಗೆ, ಸೆಪ್ಟೆಂಬರ್ ತಿಂಗಳಲ್ಲಿ ಚೆನ್ನೈನಲ್ಲಿ ಟೀಂ ಇಂಡಿಯಾ ಯಾವುದೇ ಟೆಸ್ಟ್ ಆಡಿಲ್ಲ. ಅಂದರೆ ಸೆಪ್ಟಂಬರ್‌ನಲ್ಲಿ ಇಲ್ಲಿಯವರೆಗೆ ಟೀಂ ಇಂಡಿಯಾ ಯಾವುದೇ ಗೆಲುವು ಪಡೆದಿಲ್ಲವಾದರೂ  ಸೋಲನ್ನು ಸಹ ಕಂಡಿಲ್ಲ. ಇದೀಗ ಈ ಇತಿಹಾಸವನ್ನು ಬದಲಿಸಲು ನಾಯಕ ರೋಹಿತ್ ಶರ್ಮಾಗೆ ಅವಕಾಶ ಸಿಕ್ಕಿದೆ.

ಆ ಬಳಿಕ ಅಂದರೆ 1986 ರಿಂದ ಇಲ್ಲಿಯವರೆಗೆ, ಸೆಪ್ಟೆಂಬರ್ ತಿಂಗಳಲ್ಲಿ ಚೆನ್ನೈನಲ್ಲಿ ಟೀಂ ಇಂಡಿಯಾ ಯಾವುದೇ ಟೆಸ್ಟ್ ಆಡಿಲ್ಲ. ಅಂದರೆ ಸೆಪ್ಟಂಬರ್‌ನಲ್ಲಿ ಇಲ್ಲಿಯವರೆಗೆ ಟೀಂ ಇಂಡಿಯಾ ಯಾವುದೇ ಗೆಲುವು ಪಡೆದಿಲ್ಲವಾದರೂ ಸೋಲನ್ನು ಸಹ ಕಂಡಿಲ್ಲ. ಇದೀಗ ಈ ಇತಿಹಾಸವನ್ನು ಬದಲಿಸಲು ನಾಯಕ ರೋಹಿತ್ ಶರ್ಮಾಗೆ ಅವಕಾಶ ಸಿಕ್ಕಿದೆ.

7 / 7
Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ