Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಟೀಮ್ ಇಂಡಿಯದಲ್ಲಿ ಸಂಚಲನ: ರೋಹಿತ್ ಬದಲು ಕ್ಯಾಪ್ಟನ್ ಸ್ಥಾನಕ್ಕೆ 3 ಆಟಗಾರರ ನಡುವೆ ಪೈಪೋಟಿ

Team India New T20 Captain: ಎಲ್ಲಾದರು ರೋಹಿತ್ ಶರ್ಮ ಅವರನ್ನು ಭಾರತ ಟಿ20 ತಂಡದ ನಾಯಕತ್ವದಿಂದ ಕೆಳಗಿಳಿಸಿದರೆ ಹೊಸ ನಾಯಕ ಯಾರು ಆಗಬಹುದು?. ಇದಕ್ಕೆ ಮೂರು ಹೆಸರುಗಳು ಜೋರಾಗಿ ಕೇಳಿಬರುತ್ತಿವೆ. ಅವರು ಯಾರು ಎಂಬುದು ಇಲ್ಲಿದೆ ನೋಡಿ.

TV9 Web
| Updated By: Vinay Bhat

Updated on: Nov 12, 2022 | 12:01 PM

ಐಸಿಸಿ ಟಿ20 ವಿಶ್ವಕಪ್ 2022 ಸೆಮಿ ಫೈನಲ್​ನಲ್ಲಿ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲು ಕಾಣುವ ಮೂಲಕ ಭಾರತ ಕ್ರಿಕೆಟ್ ತಂಡ ಟೂರ್ನಿಯಿಂದ ಹೊರಬಿದ್ದಾಗಿದೆ. ಇದರ ಬೆನ್ನಲ್ಲೇ ನಾಯಕ ರೋಹಿತ್ ಶರ್ಮಾ ನಾಯಕತ್ವದ ಬಗ್ಗೆಯೂ ದೊಡ್ಡ ಮಟ್ಟದಲ್ಲಿ ಪ್ರಶ್ನೆಗಳೆದ್ದಿವೆ. ಭಾರತ ಟಿ20 ತಂಡದ ನಾಯಕತ್ವದಿಂದ ರೋಹಿತ್ ಕೆಳಗಿಳಿಸಿ ನೂತನ ಕ್ಯಾಪ್ಟನ್ ಮಾಡುವ ಬಗ್ಗೆ ಬಿಸಿಸಿಐ ಯೋಚಿಸುತ್ತಿದೆ ಎಂದು ಕೆಲ ಖಾಸಗಿ ಮಾಧ್ಯಮಗಳು ವರದಿ ಮಾಡಿವೆ.

ಐಸಿಸಿ ಟಿ20 ವಿಶ್ವಕಪ್ 2022 ಸೆಮಿ ಫೈನಲ್​ನಲ್ಲಿ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲು ಕಾಣುವ ಮೂಲಕ ಭಾರತ ಕ್ರಿಕೆಟ್ ತಂಡ ಟೂರ್ನಿಯಿಂದ ಹೊರಬಿದ್ದಾಗಿದೆ. ಇದರ ಬೆನ್ನಲ್ಲೇ ನಾಯಕ ರೋಹಿತ್ ಶರ್ಮಾ ನಾಯಕತ್ವದ ಬಗ್ಗೆಯೂ ದೊಡ್ಡ ಮಟ್ಟದಲ್ಲಿ ಪ್ರಶ್ನೆಗಳೆದ್ದಿವೆ. ಭಾರತ ಟಿ20 ತಂಡದ ನಾಯಕತ್ವದಿಂದ ರೋಹಿತ್ ಕೆಳಗಿಳಿಸಿ ನೂತನ ಕ್ಯಾಪ್ಟನ್ ಮಾಡುವ ಬಗ್ಗೆ ಬಿಸಿಸಿಐ ಯೋಚಿಸುತ್ತಿದೆ ಎಂದು ಕೆಲ ಖಾಸಗಿ ಮಾಧ್ಯಮಗಳು ವರದಿ ಮಾಡಿವೆ.

1 / 8
ಎಲ್ಲಾದರು ರೋಹಿತ್ ಶರ್ಮ ಅವರನ್ನು ಭಾರತ ಟಿ20 ತಂಡದ ನಾಯಕತ್ವದಿಂದ ಕೆಳಗಿಳಿಸಿದರೆ ಹೊಸ ನಾಯಕ ಯಾರು ಆಗಬಹುದು?. ಇದಕ್ಕೆ ಮೂರು ಹೆಸರುಗಳು ಜೋರಾಗಿ ಕೇಳಿಬರುತ್ತಿವೆ. ಅವರು ಯಾರು ಎಂಬುದು ಇಲ್ಲಿದೆ ನೋಡಿ.

ಎಲ್ಲಾದರು ರೋಹಿತ್ ಶರ್ಮ ಅವರನ್ನು ಭಾರತ ಟಿ20 ತಂಡದ ನಾಯಕತ್ವದಿಂದ ಕೆಳಗಿಳಿಸಿದರೆ ಹೊಸ ನಾಯಕ ಯಾರು ಆಗಬಹುದು?. ಇದಕ್ಕೆ ಮೂರು ಹೆಸರುಗಳು ಜೋರಾಗಿ ಕೇಳಿಬರುತ್ತಿವೆ. ಅವರು ಯಾರು ಎಂಬುದು ಇಲ್ಲಿದೆ ನೋಡಿ.

2 / 8
ಕೆಎಲ್ ರಾಹುಲ್: ಕೆಎಲ್ ರಾಹುಲ್ ಸದ್ಯ ಭಾರತ ವೈಟ್-ಬಾಲ್ ಕ್ರಿಕೆಟ್​ನ ಉಪ ನಾಯಕರಾಗಿದ್ದಾರೆ. ಈ ಜವಾಬ್ದಾರಿ ಹೊತ್ತು ಸುಮಾರು ಒಂದು ವರ್ಷ ಅಗಿದೆ. ರಾಹುಲ್ ಅವರಿಂದ ಸತತವಾಗಿ ಉತ್ತಮ ಪ್ರದರ್ಶನ ಬರುತ್ತಿಲ್ಲ ನಿಜ. ಆದರೆ, ಫಾರ್ಮ್​ಗೆ ಬಂದರೆ ಇವರನ್ನು ಕಟ್ಟಿ ಹಾಕುವುದು ಸುಲಭವಲ್ಲ. ಹೀಗಾಗಿ ರೋಹಿತ್ ಜಾಗಕ್ಕೆ ನಾಯಕನಾಗಲು ರಾಹುಲ್ ಮೊದಲ ಆಯ್ಕೆ ಆಗಿದ್ದಾರೆ.

ಕೆಎಲ್ ರಾಹುಲ್: ಕೆಎಲ್ ರಾಹುಲ್ ಸದ್ಯ ಭಾರತ ವೈಟ್-ಬಾಲ್ ಕ್ರಿಕೆಟ್​ನ ಉಪ ನಾಯಕರಾಗಿದ್ದಾರೆ. ಈ ಜವಾಬ್ದಾರಿ ಹೊತ್ತು ಸುಮಾರು ಒಂದು ವರ್ಷ ಅಗಿದೆ. ರಾಹುಲ್ ಅವರಿಂದ ಸತತವಾಗಿ ಉತ್ತಮ ಪ್ರದರ್ಶನ ಬರುತ್ತಿಲ್ಲ ನಿಜ. ಆದರೆ, ಫಾರ್ಮ್​ಗೆ ಬಂದರೆ ಇವರನ್ನು ಕಟ್ಟಿ ಹಾಕುವುದು ಸುಲಭವಲ್ಲ. ಹೀಗಾಗಿ ರೋಹಿತ್ ಜಾಗಕ್ಕೆ ನಾಯಕನಾಗಲು ರಾಹುಲ್ ಮೊದಲ ಆಯ್ಕೆ ಆಗಿದ್ದಾರೆ.

3 / 8
ಹಾರ್ದಿಕ್ ಪಾಂಡ್ಯ: ಹಾರ್ದಿಕ್ ಟೀಮ್ ಇಂಡಿಯಾದ ಭವಿಷ್ಯ ನಾಯಕ ಎಂಬ ಸುದ್ದಿ ಕೇಳಿಬರುತ್ತಲೇ ಇದೆ. ಐಪಿಎಲ್ 2022 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಕ್ಯಾಪ್ಟನ್ ಆಗಿ ಮುನ್ನಡೆಸಿ ಚಾಂಪಿಯನ್ ಮಾಡುವ ವರೆಗೆ ಹಾರ್ದಿಕ್​ರಲ್ಲಿ ಇಂಥಹ ಅತ್ಯುತ್ತಮ ನಾಯಕತ್ವದ ಗುಣ ಇದೆ ಎಂಬ ವಿಚಾರ ತಿಳಿದಿರಲೇ ಇಲ್ಲ.

ಹಾರ್ದಿಕ್ ಪಾಂಡ್ಯ: ಹಾರ್ದಿಕ್ ಟೀಮ್ ಇಂಡಿಯಾದ ಭವಿಷ್ಯ ನಾಯಕ ಎಂಬ ಸುದ್ದಿ ಕೇಳಿಬರುತ್ತಲೇ ಇದೆ. ಐಪಿಎಲ್ 2022 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಕ್ಯಾಪ್ಟನ್ ಆಗಿ ಮುನ್ನಡೆಸಿ ಚಾಂಪಿಯನ್ ಮಾಡುವ ವರೆಗೆ ಹಾರ್ದಿಕ್​ರಲ್ಲಿ ಇಂಥಹ ಅತ್ಯುತ್ತಮ ನಾಯಕತ್ವದ ಗುಣ ಇದೆ ಎಂಬ ವಿಚಾರ ತಿಳಿದಿರಲೇ ಇಲ್ಲ.

4 / 8
ತಂಡಕ್ಕೆ ಬ್ಯಾಟಿಂಗ್-ಬೌಲಿಂಗ್-ಫೀಲ್ಡಿಂಗ್​ನಲ್ಲಿ ನೆರವಾಗುವ ಹಾರ್ದಿಕ್ ಈಗಾಗಲೇ ಭಾರತ ಟಿ20 ತಂಡಕ್ಕೆ ನಾಯಕನಾಗಿ ಕಾರ್ಯನಿರ್ವಹಿಸಿದ್ದಾರೆ. ಕಳೆದ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಇವರು ಭಾರತ ತಂಡವನ್ನು ಮುನ್ನಡೆಸಿದ್ದರು. ಅಲ್ಲದೆ ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೂ ಇವರು ಟೀಮ್ ಇಂಡಿಯಾದ ನಾಯಕನಾಗಿದ್ದಾರೆ. ಹೀಗಾಗಿ ಇವರು ಕೂಡ ರೇಸ್​ನಲ್ಲಿದ್ದಾರೆ.

ತಂಡಕ್ಕೆ ಬ್ಯಾಟಿಂಗ್-ಬೌಲಿಂಗ್-ಫೀಲ್ಡಿಂಗ್​ನಲ್ಲಿ ನೆರವಾಗುವ ಹಾರ್ದಿಕ್ ಈಗಾಗಲೇ ಭಾರತ ಟಿ20 ತಂಡಕ್ಕೆ ನಾಯಕನಾಗಿ ಕಾರ್ಯನಿರ್ವಹಿಸಿದ್ದಾರೆ. ಕಳೆದ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಇವರು ಭಾರತ ತಂಡವನ್ನು ಮುನ್ನಡೆಸಿದ್ದರು. ಅಲ್ಲದೆ ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೂ ಇವರು ಟೀಮ್ ಇಂಡಿಯಾದ ನಾಯಕನಾಗಿದ್ದಾರೆ. ಹೀಗಾಗಿ ಇವರು ಕೂಡ ರೇಸ್​ನಲ್ಲಿದ್ದಾರೆ.

5 / 8
ರಿಷಭ್ ಪಂತ್: ರಿಷಭ್ ಪಂತ್ ಈಗಾಗಲೇ ಭಾರತ ಟಿ20 ತಂಡವನ್ನು ಐದು ಬಾರಿ ನಾಯಕನಗಿ ಮುನ್ನಡೆಸಿದ್ದಾರೆ. ಐಪಿಎಲ್​ನಲ್ಲೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ಯಾಪ್ಟನ್ ಆಗಿದ್ದಾರೆ. ಜೊತೆಗೆ ಭಾರತ ಏಕದಿನ ಮತ್ತು ಟಿ20 ತಂಡದ ಉಪ ನಾಯಕನಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ. ಹೀಗಾಗಿ ಅಪಾರ ಅನುಭವ ಹೊಂದಿರುವ ಪಂತ್​ ಕೂಡ ಕ್ಯಾಪ್ಟನ್ ರೇಸ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ರಿಷಭ್ ಪಂತ್: ರಿಷಭ್ ಪಂತ್ ಈಗಾಗಲೇ ಭಾರತ ಟಿ20 ತಂಡವನ್ನು ಐದು ಬಾರಿ ನಾಯಕನಗಿ ಮುನ್ನಡೆಸಿದ್ದಾರೆ. ಐಪಿಎಲ್​ನಲ್ಲೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ಯಾಪ್ಟನ್ ಆಗಿದ್ದಾರೆ. ಜೊತೆಗೆ ಭಾರತ ಏಕದಿನ ಮತ್ತು ಟಿ20 ತಂಡದ ಉಪ ನಾಯಕನಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ. ಹೀಗಾಗಿ ಅಪಾರ ಅನುಭವ ಹೊಂದಿರುವ ಪಂತ್​ ಕೂಡ ಕ್ಯಾಪ್ಟನ್ ರೇಸ್​ನಲ್ಲಿ ಕಾಣಿಸಿಕೊಂಡಿದ್ದಾರೆ.

6 / 8
ಸದ್ಯಕ್ಕೆ ರೋಹಿತ್ ಶರ್ಮಾ ಮೂರು ಮಾದರಿಯ ಕ್ರಿಕೆಟ್​ನಲ್ಲಿ ನಾಯಕನಾಗಿ ಭಾರತವನ್ನು ಮುನ್ನಡೆಸುತ್ತಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ ಉತ್ತಮ ಅಂಕಿಆಂಶ ಹೊಂದಿರುವ ರೋಹಿತ್ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ನಿರೀಕ್ಷೆಗೆ ತಕ್ಕಂತೆ ಬ್ಯಾಟಿಂಗ್ ಕೂಡ ಮಾಡಲಿಲ್ಲ. ಜೊತೆಗೆ ನಾಯಕತ್ವದಲ್ಲೂ ಎಡವಿದ್ದರು.

ಸದ್ಯಕ್ಕೆ ರೋಹಿತ್ ಶರ್ಮಾ ಮೂರು ಮಾದರಿಯ ಕ್ರಿಕೆಟ್​ನಲ್ಲಿ ನಾಯಕನಾಗಿ ಭಾರತವನ್ನು ಮುನ್ನಡೆಸುತ್ತಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ ಉತ್ತಮ ಅಂಕಿಆಂಶ ಹೊಂದಿರುವ ರೋಹಿತ್ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ನಿರೀಕ್ಷೆಗೆ ತಕ್ಕಂತೆ ಬ್ಯಾಟಿಂಗ್ ಕೂಡ ಮಾಡಲಿಲ್ಲ. ಜೊತೆಗೆ ನಾಯಕತ್ವದಲ್ಲೂ ಎಡವಿದ್ದರು.

7 / 8
ಟಿ20 ವಿಶ್ವಕಪ್ 2022 ರಲ್ಲಿ ರೋಹಿತ್ ತೆಗೆದುಕೊಂಡ ಕೆಲ ನಿರ್ಧಾರಗಳು ತಂಡದ ಸೋಲಿಗೆ ಕೂಡ ಕಾರಣವಾಗಿದ್ದವು. ಮುಖ್ಯವಾಗಿ ಸೆಮಿ ಫೈನಲ್​ನಂತಹ ಮಹತ್ವದ ಪಂದ್ಯಕ್ಕೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಿಲ್ಲ. ಅತ್ತ ಇಂಗ್ಲೆಂಡ್ ತಂಡದ ಒಂದು ವಿಕೆಟ್ ಕೂಡ ಪಡೆಯಲು ಸಾಧ್ಯವಾಗಲಿಲ್ಲ.

ಟಿ20 ವಿಶ್ವಕಪ್ 2022 ರಲ್ಲಿ ರೋಹಿತ್ ತೆಗೆದುಕೊಂಡ ಕೆಲ ನಿರ್ಧಾರಗಳು ತಂಡದ ಸೋಲಿಗೆ ಕೂಡ ಕಾರಣವಾಗಿದ್ದವು. ಮುಖ್ಯವಾಗಿ ಸೆಮಿ ಫೈನಲ್​ನಂತಹ ಮಹತ್ವದ ಪಂದ್ಯಕ್ಕೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಿಲ್ಲ. ಅತ್ತ ಇಂಗ್ಲೆಂಡ್ ತಂಡದ ಒಂದು ವಿಕೆಟ್ ಕೂಡ ಪಡೆಯಲು ಸಾಧ್ಯವಾಗಲಿಲ್ಲ.

8 / 8
Follow us
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ