AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಮುಖ ವೇಗಿ ಗಾಯಾಳು: ಹೊಸ ವರ್ಷದ ಮೊದಲ ಪಂದ್ಯಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಆಘಾತ

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಸರಣಿಯಲ್ಲಿ ನಾಲ್ಕು ಮ್ಯಾಚ್​ಗಳು ಮುಗಿದಿದೆ. ಈ 4 ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ 2 ಜಯ ಸಾಧಿಸಿದರೆ, ಟೀಮ್ ಇಂಡಿಯಾ ಗೆದ್ದಿರುವುದು ಒಂದು ಮ್ಯಾಚ್ ಮಾತ್ರ. ಇನ್ನು ಒಂದು ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಇದೀಗ ಉಭಯ ತಂಡಗಳು 5ನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದ್ದು, ಈ ಮ್ಯಾಚ್ ಡಿಸೆಂಬರ್ 3 ರಿಂದ ಶುರುವಾಗಲಿದೆ.

ಝಾಹಿರ್ ಯೂಸುಫ್
|

Updated on: Jan 02, 2025 | 7:52 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯವು ಜನವರಿ 3 ರಿಂದ ಶುರುವಾಗಲಿದೆ. ಸಿಡ್ನಿಯಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಮ್ಯಾಚ್​ ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಆದರೆ ಈ ಪಂದ್ಯಕ್ಕೆ ಭಾರತ ತಂಡದ ಟೀಮ್ ಪ್ರಮುಖ ವೇಗಿ ಆಕಾಶ್ ದೀಪ್ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯವು ಜನವರಿ 3 ರಿಂದ ಶುರುವಾಗಲಿದೆ. ಸಿಡ್ನಿಯಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಮ್ಯಾಚ್​ ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಆದರೆ ಈ ಪಂದ್ಯಕ್ಕೆ ಭಾರತ ತಂಡದ ಟೀಮ್ ಪ್ರಮುಖ ವೇಗಿ ಆಕಾಶ್ ದೀಪ್ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ.

1 / 6
ಏಕೆಂದರೆ ಮೆಲ್ಬೋರ್ನ್​ ಟೆಸ್ಟ್ ಪಂದ್ಯದ ವೇಳೆ ಆಕಾಶ್ ದೀಪ್ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಹೀಗಾಗಿ ಸಿಡ್ನಿ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಇದೀಗ ಆಕಾಶ್ ದೀಪ್ ಅಲಭ್ಯರಾದರೆ ಟೀಮ್ ಇಂಡಿಯಾ ಅನುಭವಿ ವೇಗಿಯ ಕೊರತೆಯನ್ನು ಎದುರಿಸಲಿದೆ.

ಏಕೆಂದರೆ ಮೆಲ್ಬೋರ್ನ್​ ಟೆಸ್ಟ್ ಪಂದ್ಯದ ವೇಳೆ ಆಕಾಶ್ ದೀಪ್ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಹೀಗಾಗಿ ಸಿಡ್ನಿ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಇದೀಗ ಆಕಾಶ್ ದೀಪ್ ಅಲಭ್ಯರಾದರೆ ಟೀಮ್ ಇಂಡಿಯಾ ಅನುಭವಿ ವೇಗಿಯ ಕೊರತೆಯನ್ನು ಎದುರಿಸಲಿದೆ.

2 / 6
ಈ ಹಿಂದಿನ ನಾಲ್ಕು ಪಂದ್ಯಗಳಲ್ಲಿ ಜಸ್​ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಉತ್ತಮ ದಾಳಿ ಸಂಘಟಿಸಿದರೂ, ಮೂರನೇ ವೇಗಿಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದಾಗ್ಯೂ ಆಕಾಶ್ ದೀಪ್ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡಿದ್ದರು. ಆದರೆ ನಿರ್ಣಾಯಕ ಪಂದ್ಯಕ್ಕೂ ಅವರು ಅಲಭ್ಯರಾದರೆ, ಟೀಮ್ ಇಂಡಿಯಾ ಮತ್ತೆ ಯುವ ವೇಗಿಯನ್ನು ಕಣಕ್ಕಿಳಿಸಬೇಕಾಗುತ್ತದೆ.

ಈ ಹಿಂದಿನ ನಾಲ್ಕು ಪಂದ್ಯಗಳಲ್ಲಿ ಜಸ್​ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಉತ್ತಮ ದಾಳಿ ಸಂಘಟಿಸಿದರೂ, ಮೂರನೇ ವೇಗಿಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದಾಗ್ಯೂ ಆಕಾಶ್ ದೀಪ್ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡಿದ್ದರು. ಆದರೆ ನಿರ್ಣಾಯಕ ಪಂದ್ಯಕ್ಕೂ ಅವರು ಅಲಭ್ಯರಾದರೆ, ಟೀಮ್ ಇಂಡಿಯಾ ಮತ್ತೆ ಯುವ ವೇಗಿಯನ್ನು ಕಣಕ್ಕಿಳಿಸಬೇಕಾಗುತ್ತದೆ.

3 / 6
ಅದರಂತೆ ಪರ್ತ್​ ಟೆಸ್ಟ್​​ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಹರ್ಷಿತ್ ರಾಣಾ ಅವರನ್ನು ಆಕಾಶ್ ದೀಪ್ ಬದಲಿಗೆ ಮತ್ತೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಸೇರ್ಪಡೆಗೊಳಿಸಬಹುದು. ಹೀಗಾಗಿ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಆಡುವ ಬಳಗದಲ್ಲಿ ಒಂದು ಬದಲಾವಣೆಯನ್ನು ನಿರೀಕ್ಷಿಸಬಹುದಾಗಿದೆ.

ಅದರಂತೆ ಪರ್ತ್​ ಟೆಸ್ಟ್​​ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಹರ್ಷಿತ್ ರಾಣಾ ಅವರನ್ನು ಆಕಾಶ್ ದೀಪ್ ಬದಲಿಗೆ ಮತ್ತೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಸೇರ್ಪಡೆಗೊಳಿಸಬಹುದು. ಹೀಗಾಗಿ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಆಡುವ ಬಳಗದಲ್ಲಿ ಒಂದು ಬದಲಾವಣೆಯನ್ನು ನಿರೀಕ್ಷಿಸಬಹುದಾಗಿದೆ.

4 / 6
ಇನ್ನು ಸಿಡ್ನಿ ಟೆಸ್ಟ್​ನಲ್ಲಿ ರಿಷಭ್ ಪಂತ್ ಅವರ ಸ್ಥಾನದಲ್ಲಿ ಯುವ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೇಲ್​ಗೆ ಚಾನ್ಸ್ ಸಿಗುವ ಸಾಧ್ಯತೆಯನ್ನು ಸಹ ತಳ್ಳಿಹಾಕುವಂತಿಲ್ಲ. ಏಕೆಂದರೆ ಕಳೆದ 4 ಪಂದ್ಯಗಳಲ್ಲೂ ಪಂತ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅದರಲ್ಲೂ ಬೇಜವಾಬ್ದಾರಿ ಬ್ಯಾಟಿಂಗ್​​ನೊಂದಿಗೆ ಪಂತ್ ಭಾರೀ ಟೀಕೆಗೆ ಒಳಗಾಗಿದ್ದಾರೆ. ಹೀಗಾಗಿ ಕೊನೆಯ ಪಂದ್ಯದಲ್ಲಿ ಪಂತ್ ಬದಲಿಗೆ ಜುರೇಲ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

ಇನ್ನು ಸಿಡ್ನಿ ಟೆಸ್ಟ್​ನಲ್ಲಿ ರಿಷಭ್ ಪಂತ್ ಅವರ ಸ್ಥಾನದಲ್ಲಿ ಯುವ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೇಲ್​ಗೆ ಚಾನ್ಸ್ ಸಿಗುವ ಸಾಧ್ಯತೆಯನ್ನು ಸಹ ತಳ್ಳಿಹಾಕುವಂತಿಲ್ಲ. ಏಕೆಂದರೆ ಕಳೆದ 4 ಪಂದ್ಯಗಳಲ್ಲೂ ಪಂತ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅದರಲ್ಲೂ ಬೇಜವಾಬ್ದಾರಿ ಬ್ಯಾಟಿಂಗ್​​ನೊಂದಿಗೆ ಪಂತ್ ಭಾರೀ ಟೀಕೆಗೆ ಒಳಗಾಗಿದ್ದಾರೆ. ಹೀಗಾಗಿ ಕೊನೆಯ ಪಂದ್ಯದಲ್ಲಿ ಪಂತ್ ಬದಲಿಗೆ ಜುರೇಲ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

5 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್, ತನುಷ್ ಕೋಟ್ಯಾನ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್, ತನುಷ್ ಕೋಟ್ಯಾನ್.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ