AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿರಾಜ್ ಈಗ ಡಿಎಸ್​ಪಿ: ಟೀಮ್ ಇಂಡಿಯಾಗೆ ಹೇಳ್ತಾರಾ ಗುಡ್ ಬೈ?

Mohammed Siraj: 2024ರ ಟಿ20 ವಿಶ್ವಕಪ್​ನಲ್ಲಿ ಮೊಹಮ್ಮದ್ ಸಿರಾಜ್ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಅಲ್ಲದೆ ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ತೆಲಂಗಾಣದ ಏಕೈಕ ಆಟಗಾರನಾಗಿ ಗುರುತಿಸಿಕೊಂಡಿದ್ದರು. ಈ ಸಾಧನೆಗಾಗಿ ತೆಲಂಗಾಣ ಸರ್ಕಾರ ಮೊಹಮ್ಮದ್ ಸಿರಾಜ್​ಗೆ ಡಿಎಸ್​ಪಿ ಹುದ್ದೆ ನೀಡಿ ಗೌರವಿಸಿದೆ.

ಝಾಹಿರ್ ಯೂಸುಫ್
|

Updated on:Oct 12, 2024 | 10:19 AM

Share
ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ತೆಲಂಗಾಣದ ಡೆಪ್ಯೂಟಿ ಸೂಪರಿಂಟೆಂಡಂಟ್‌ ಅಫ್‌ ಪೊಲೀಸ್ (DSP) ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮಾಡಿದ ಸಾಧನೆಗಾಗಿ ತೆಲಂಗಾಣ ಸರ್ಕಾರ ಸಿರಾಜ್ ಅವರಿಗೆ ಗೌರವಾನ್ವಿತ ಡಿಎಸ್​ಪಿ ಹುದ್ದೆ ನೀಡಿದೆ.

ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ತೆಲಂಗಾಣದ ಡೆಪ್ಯೂಟಿ ಸೂಪರಿಂಟೆಂಡಂಟ್‌ ಅಫ್‌ ಪೊಲೀಸ್ (DSP) ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮಾಡಿದ ಸಾಧನೆಗಾಗಿ ತೆಲಂಗಾಣ ಸರ್ಕಾರ ಸಿರಾಜ್ ಅವರಿಗೆ ಗೌರವಾನ್ವಿತ ಡಿಎಸ್​ಪಿ ಹುದ್ದೆ ನೀಡಿದೆ.

1 / 7
2024 ರಲ್ಲಿ ಟಿ20 ವಿಶ್ವಕಪ್​ ಗೆದ್ದ ಭಾರತ ತಂಡದಲ್ಲಿ ಮೊಹಮ್ಮದ್ ಸಿರಾಜ್ ಕೂಡ ಭಾಗಿಯಾಗಿದ್ದರು. ಹೈದರಾಬಾದ್​ ಮೂಲದ ಕ್ರಿಕೆಟಿಗನ ಈ ಸಾಧನೆಗಾಗಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಸಿರಾಜ್ ಅವರಿಗೆ ಗೌರವಾನ್ವಿತ ಡಿಎಸ್​ಪಿ ಹುದ್ದೆ ನೀಡಲು ಹಾಗೂ ಜಮೀನು ಮಂಜೂರು ಮಾಡಲು ನಿರ್ದೇಶಿಸಿದ್ದರು.

2024 ರಲ್ಲಿ ಟಿ20 ವಿಶ್ವಕಪ್​ ಗೆದ್ದ ಭಾರತ ತಂಡದಲ್ಲಿ ಮೊಹಮ್ಮದ್ ಸಿರಾಜ್ ಕೂಡ ಭಾಗಿಯಾಗಿದ್ದರು. ಹೈದರಾಬಾದ್​ ಮೂಲದ ಕ್ರಿಕೆಟಿಗನ ಈ ಸಾಧನೆಗಾಗಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಸಿರಾಜ್ ಅವರಿಗೆ ಗೌರವಾನ್ವಿತ ಡಿಎಸ್​ಪಿ ಹುದ್ದೆ ನೀಡಲು ಹಾಗೂ ಜಮೀನು ಮಂಜೂರು ಮಾಡಲು ನಿರ್ದೇಶಿಸಿದ್ದರು.

2 / 7
ಅದರಂತೆ ಶುಕ್ರವಾರ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಜಿತೇಂದರ್ ಅವರಿಗೆ ವರದಿ ಮಾಡುವ ಮೂಲಕ ಮೊಹಮ್ಮದ್ ಸಿರಾಜ್ ಡಿಎಸ್​ಪಿ ಹುದ್ದೆಯನ್ನು ಅಲಂಕರಿಸಿದ್ದಾರೆ. ಈ ನೇಮಕದ ಬೆನ್ನಲ್ಲೇ ಸಿರಾಜ್ ಟೀಮ್ ಇಂಡಿಯಾವನ್ನು ತೊರೆಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಅದರಂತೆ ಶುಕ್ರವಾರ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಜಿತೇಂದರ್ ಅವರಿಗೆ ವರದಿ ಮಾಡುವ ಮೂಲಕ ಮೊಹಮ್ಮದ್ ಸಿರಾಜ್ ಡಿಎಸ್​ಪಿ ಹುದ್ದೆಯನ್ನು ಅಲಂಕರಿಸಿದ್ದಾರೆ. ಈ ನೇಮಕದ ಬೆನ್ನಲ್ಲೇ ಸಿರಾಜ್ ಟೀಮ್ ಇಂಡಿಯಾವನ್ನು ತೊರೆಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

3 / 7
ಏಕೆಂದರೆ ಸರ್ಕಾರಿ ಉದ್ಯೋಗ ಸಿಕ್ಕ ಹಿನ್ನಲೆಯಲ್ಲಿ ಸಿರಾಜ್ ಅವರಿಗೆ 1 ಲಕ್ಷ ರೂ. ಅಧಿಕ ವೇತನ ದೊರೆಯಲಿದೆ. ಆದರೆ ಅವರು ಸದ್ಯಕ್ಕಂತು ಟೀಮ್ ಇಂಡಿಯಾವನ್ನು ತೊರೆಯುವ ಸಾಧ್ಯತೆಯಿಲ್ಲ. ಏಕೆಂದರೆ ಸಿರಾಜ್​ ಅವರಿಗೆ ನೀಡಲಾಗಿರುವುದು ಗೌರವಾನ್ವಿತ ಹುದ್ದೆ. ಈ ಹುದ್ದೆಯನ್ನು ಅವರು ಯಾವಾಗ ಬೇಕಿದ್ದರೂ ಅಲಂಕರಿಸಬಹುದು. ಅಂದರೆ ಟೀಮ್ ಇಂಡಿಯಾದಿಂದ ನಿವೃತ್ತರಾದ ಬಳಿಕ ಅವರು ಡಿಎಸ್​ಪಿ ಆಗಿ ಕಾರ್ಯ ನಿರ್ವಹಿಸಬಹುದು.

ಏಕೆಂದರೆ ಸರ್ಕಾರಿ ಉದ್ಯೋಗ ಸಿಕ್ಕ ಹಿನ್ನಲೆಯಲ್ಲಿ ಸಿರಾಜ್ ಅವರಿಗೆ 1 ಲಕ್ಷ ರೂ. ಅಧಿಕ ವೇತನ ದೊರೆಯಲಿದೆ. ಆದರೆ ಅವರು ಸದ್ಯಕ್ಕಂತು ಟೀಮ್ ಇಂಡಿಯಾವನ್ನು ತೊರೆಯುವ ಸಾಧ್ಯತೆಯಿಲ್ಲ. ಏಕೆಂದರೆ ಸಿರಾಜ್​ ಅವರಿಗೆ ನೀಡಲಾಗಿರುವುದು ಗೌರವಾನ್ವಿತ ಹುದ್ದೆ. ಈ ಹುದ್ದೆಯನ್ನು ಅವರು ಯಾವಾಗ ಬೇಕಿದ್ದರೂ ಅಲಂಕರಿಸಬಹುದು. ಅಂದರೆ ಟೀಮ್ ಇಂಡಿಯಾದಿಂದ ನಿವೃತ್ತರಾದ ಬಳಿಕ ಅವರು ಡಿಎಸ್​ಪಿ ಆಗಿ ಕಾರ್ಯ ನಿರ್ವಹಿಸಬಹುದು.

4 / 7
ಹಾಗಾಗಿ ಸಿರಾಜ್ ಸದ್ಯಕ್ಕಂತು ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್​ಪಿ) ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ. ಇನ್ನು ಕ್ರಿಕೆಟ್ ನಿವೃತ್ತಿಯ ಬಳಿಕ ಅವರು ಡಿಎಸ್​ಪಿ ಹುದ್ದೆಯನ್ನು ಅಲಂಕರಿಸುವ ಮುನ್ನ 2 ವರ್ಷಗಳ ಪೊಲೀಸ್ ಟ್ರೈನಿಂಗ್ ಕೂಡ ಮುಗಿಸಬೇಕು. ಇದಾದ ಬಳಿಕವಷ್ಟೇ ಅವರು ಅಧಿಕೃತವಾಗಿ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರವಹಿಸಿಕೊಳ್ಳಬಹುದಾಗಿದೆ.

ಹಾಗಾಗಿ ಸಿರಾಜ್ ಸದ್ಯಕ್ಕಂತು ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್​ಪಿ) ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ. ಇನ್ನು ಕ್ರಿಕೆಟ್ ನಿವೃತ್ತಿಯ ಬಳಿಕ ಅವರು ಡಿಎಸ್​ಪಿ ಹುದ್ದೆಯನ್ನು ಅಲಂಕರಿಸುವ ಮುನ್ನ 2 ವರ್ಷಗಳ ಪೊಲೀಸ್ ಟ್ರೈನಿಂಗ್ ಕೂಡ ಮುಗಿಸಬೇಕು. ಇದಾದ ಬಳಿಕವಷ್ಟೇ ಅವರು ಅಧಿಕೃತವಾಗಿ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರವಹಿಸಿಕೊಳ್ಳಬಹುದಾಗಿದೆ.

5 / 7
ಅಂದಹಾಗೆ 2007ರ ಟಿ20 ವಿಶ್ವಕಪ್ ಫೈನಲ್​ ಹೀರೋ ಜೋಗಿಂದರ್ ಶರ್ಮಾ ಈಗ ಹರ್ಯಾಣದ ಡಿಎಸ್​ಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಚೊಚ್ಚಲ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದ ಜೋಗಿಂದರ್ ಶರ್ಮಾ ಅವರಿಗೆ ಹರ್ಯಾಣ ಸರ್ಕಾರ ಡಿಎಸ್​ಪಿ ಹುದ್ದೆಯೊಂದಿಗೆ 21 ಲಕ್ಷ ರೂ. ಬಹುಮಾನ ಘೋಷಿಸಿತ್ತು. ಅದರಂತೆ ಇದೀಗ ಜೋಗಿಂದರ್ ಶರ್ಮಾ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಅಂದಹಾಗೆ 2007ರ ಟಿ20 ವಿಶ್ವಕಪ್ ಫೈನಲ್​ ಹೀರೋ ಜೋಗಿಂದರ್ ಶರ್ಮಾ ಈಗ ಹರ್ಯಾಣದ ಡಿಎಸ್​ಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಚೊಚ್ಚಲ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದ ಜೋಗಿಂದರ್ ಶರ್ಮಾ ಅವರಿಗೆ ಹರ್ಯಾಣ ಸರ್ಕಾರ ಡಿಎಸ್​ಪಿ ಹುದ್ದೆಯೊಂದಿಗೆ 21 ಲಕ್ಷ ರೂ. ಬಹುಮಾನ ಘೋಷಿಸಿತ್ತು. ಅದರಂತೆ ಇದೀಗ ಜೋಗಿಂದರ್ ಶರ್ಮಾ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

6 / 7
ಹಾಗೆಯೇ ಉತ್ತರ ಪ್ರದೇಶ ಸರ್ಕಾರ ಭಾರತ ಮಹಿಳಾ ತಂಡದ ಆಟಗಾರ್ತಿ ದೀಪ್ತಿ ಶರ್ಮಾ ಅವರನ್ನು ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್‌ಪಿ) ನೇಮಿಸಿದೆ. ಟೀಮ್ ಇಂಡಿಯಾ ಪರ ಮಾಡಿದ ಸಾಧನೆಗಾಗಿ ಯುಪಿ ಸರ್ಕಾರ ಈ ಗೌರವಾನ್ವಿತ ಹುದ್ದೆಯನ್ನು ನೀಡಿದೆ. ಇದೀಗ ಡಿಎಸ್​ಪಿ ಹುದ್ದೆ ಅಲಂಕರಿಸಿದ ಕ್ರಿಕೆಟಿಗರ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ಕೂಡ ಸೇರ್ಪಡೆಯಾಗಿದ್ದಾರೆ.

ಹಾಗೆಯೇ ಉತ್ತರ ಪ್ರದೇಶ ಸರ್ಕಾರ ಭಾರತ ಮಹಿಳಾ ತಂಡದ ಆಟಗಾರ್ತಿ ದೀಪ್ತಿ ಶರ್ಮಾ ಅವರನ್ನು ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್‌ಪಿ) ನೇಮಿಸಿದೆ. ಟೀಮ್ ಇಂಡಿಯಾ ಪರ ಮಾಡಿದ ಸಾಧನೆಗಾಗಿ ಯುಪಿ ಸರ್ಕಾರ ಈ ಗೌರವಾನ್ವಿತ ಹುದ್ದೆಯನ್ನು ನೀಡಿದೆ. ಇದೀಗ ಡಿಎಸ್​ಪಿ ಹುದ್ದೆ ಅಲಂಕರಿಸಿದ ಕ್ರಿಕೆಟಿಗರ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ಕೂಡ ಸೇರ್ಪಡೆಯಾಗಿದ್ದಾರೆ.

7 / 7

Published On - 8:54 am, Sat, 12 October 24

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ