AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿರಾಜ್ ಈಗ ಡಿಎಸ್​ಪಿ: ಟೀಮ್ ಇಂಡಿಯಾಗೆ ಹೇಳ್ತಾರಾ ಗುಡ್ ಬೈ?

Mohammed Siraj: 2024ರ ಟಿ20 ವಿಶ್ವಕಪ್​ನಲ್ಲಿ ಮೊಹಮ್ಮದ್ ಸಿರಾಜ್ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಅಲ್ಲದೆ ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ತೆಲಂಗಾಣದ ಏಕೈಕ ಆಟಗಾರನಾಗಿ ಗುರುತಿಸಿಕೊಂಡಿದ್ದರು. ಈ ಸಾಧನೆಗಾಗಿ ತೆಲಂಗಾಣ ಸರ್ಕಾರ ಮೊಹಮ್ಮದ್ ಸಿರಾಜ್​ಗೆ ಡಿಎಸ್​ಪಿ ಹುದ್ದೆ ನೀಡಿ ಗೌರವಿಸಿದೆ.

ಝಾಹಿರ್ ಯೂಸುಫ್
|

Updated on:Oct 12, 2024 | 10:19 AM

Share
ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ತೆಲಂಗಾಣದ ಡೆಪ್ಯೂಟಿ ಸೂಪರಿಂಟೆಂಡಂಟ್‌ ಅಫ್‌ ಪೊಲೀಸ್ (DSP) ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮಾಡಿದ ಸಾಧನೆಗಾಗಿ ತೆಲಂಗಾಣ ಸರ್ಕಾರ ಸಿರಾಜ್ ಅವರಿಗೆ ಗೌರವಾನ್ವಿತ ಡಿಎಸ್​ಪಿ ಹುದ್ದೆ ನೀಡಿದೆ.

ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ತೆಲಂಗಾಣದ ಡೆಪ್ಯೂಟಿ ಸೂಪರಿಂಟೆಂಡಂಟ್‌ ಅಫ್‌ ಪೊಲೀಸ್ (DSP) ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮಾಡಿದ ಸಾಧನೆಗಾಗಿ ತೆಲಂಗಾಣ ಸರ್ಕಾರ ಸಿರಾಜ್ ಅವರಿಗೆ ಗೌರವಾನ್ವಿತ ಡಿಎಸ್​ಪಿ ಹುದ್ದೆ ನೀಡಿದೆ.

1 / 7
2024 ರಲ್ಲಿ ಟಿ20 ವಿಶ್ವಕಪ್​ ಗೆದ್ದ ಭಾರತ ತಂಡದಲ್ಲಿ ಮೊಹಮ್ಮದ್ ಸಿರಾಜ್ ಕೂಡ ಭಾಗಿಯಾಗಿದ್ದರು. ಹೈದರಾಬಾದ್​ ಮೂಲದ ಕ್ರಿಕೆಟಿಗನ ಈ ಸಾಧನೆಗಾಗಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಸಿರಾಜ್ ಅವರಿಗೆ ಗೌರವಾನ್ವಿತ ಡಿಎಸ್​ಪಿ ಹುದ್ದೆ ನೀಡಲು ಹಾಗೂ ಜಮೀನು ಮಂಜೂರು ಮಾಡಲು ನಿರ್ದೇಶಿಸಿದ್ದರು.

2024 ರಲ್ಲಿ ಟಿ20 ವಿಶ್ವಕಪ್​ ಗೆದ್ದ ಭಾರತ ತಂಡದಲ್ಲಿ ಮೊಹಮ್ಮದ್ ಸಿರಾಜ್ ಕೂಡ ಭಾಗಿಯಾಗಿದ್ದರು. ಹೈದರಾಬಾದ್​ ಮೂಲದ ಕ್ರಿಕೆಟಿಗನ ಈ ಸಾಧನೆಗಾಗಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಸಿರಾಜ್ ಅವರಿಗೆ ಗೌರವಾನ್ವಿತ ಡಿಎಸ್​ಪಿ ಹುದ್ದೆ ನೀಡಲು ಹಾಗೂ ಜಮೀನು ಮಂಜೂರು ಮಾಡಲು ನಿರ್ದೇಶಿಸಿದ್ದರು.

2 / 7
ಅದರಂತೆ ಶುಕ್ರವಾರ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಜಿತೇಂದರ್ ಅವರಿಗೆ ವರದಿ ಮಾಡುವ ಮೂಲಕ ಮೊಹಮ್ಮದ್ ಸಿರಾಜ್ ಡಿಎಸ್​ಪಿ ಹುದ್ದೆಯನ್ನು ಅಲಂಕರಿಸಿದ್ದಾರೆ. ಈ ನೇಮಕದ ಬೆನ್ನಲ್ಲೇ ಸಿರಾಜ್ ಟೀಮ್ ಇಂಡಿಯಾವನ್ನು ತೊರೆಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಅದರಂತೆ ಶುಕ್ರವಾರ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಜಿತೇಂದರ್ ಅವರಿಗೆ ವರದಿ ಮಾಡುವ ಮೂಲಕ ಮೊಹಮ್ಮದ್ ಸಿರಾಜ್ ಡಿಎಸ್​ಪಿ ಹುದ್ದೆಯನ್ನು ಅಲಂಕರಿಸಿದ್ದಾರೆ. ಈ ನೇಮಕದ ಬೆನ್ನಲ್ಲೇ ಸಿರಾಜ್ ಟೀಮ್ ಇಂಡಿಯಾವನ್ನು ತೊರೆಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

3 / 7
ಏಕೆಂದರೆ ಸರ್ಕಾರಿ ಉದ್ಯೋಗ ಸಿಕ್ಕ ಹಿನ್ನಲೆಯಲ್ಲಿ ಸಿರಾಜ್ ಅವರಿಗೆ 1 ಲಕ್ಷ ರೂ. ಅಧಿಕ ವೇತನ ದೊರೆಯಲಿದೆ. ಆದರೆ ಅವರು ಸದ್ಯಕ್ಕಂತು ಟೀಮ್ ಇಂಡಿಯಾವನ್ನು ತೊರೆಯುವ ಸಾಧ್ಯತೆಯಿಲ್ಲ. ಏಕೆಂದರೆ ಸಿರಾಜ್​ ಅವರಿಗೆ ನೀಡಲಾಗಿರುವುದು ಗೌರವಾನ್ವಿತ ಹುದ್ದೆ. ಈ ಹುದ್ದೆಯನ್ನು ಅವರು ಯಾವಾಗ ಬೇಕಿದ್ದರೂ ಅಲಂಕರಿಸಬಹುದು. ಅಂದರೆ ಟೀಮ್ ಇಂಡಿಯಾದಿಂದ ನಿವೃತ್ತರಾದ ಬಳಿಕ ಅವರು ಡಿಎಸ್​ಪಿ ಆಗಿ ಕಾರ್ಯ ನಿರ್ವಹಿಸಬಹುದು.

ಏಕೆಂದರೆ ಸರ್ಕಾರಿ ಉದ್ಯೋಗ ಸಿಕ್ಕ ಹಿನ್ನಲೆಯಲ್ಲಿ ಸಿರಾಜ್ ಅವರಿಗೆ 1 ಲಕ್ಷ ರೂ. ಅಧಿಕ ವೇತನ ದೊರೆಯಲಿದೆ. ಆದರೆ ಅವರು ಸದ್ಯಕ್ಕಂತು ಟೀಮ್ ಇಂಡಿಯಾವನ್ನು ತೊರೆಯುವ ಸಾಧ್ಯತೆಯಿಲ್ಲ. ಏಕೆಂದರೆ ಸಿರಾಜ್​ ಅವರಿಗೆ ನೀಡಲಾಗಿರುವುದು ಗೌರವಾನ್ವಿತ ಹುದ್ದೆ. ಈ ಹುದ್ದೆಯನ್ನು ಅವರು ಯಾವಾಗ ಬೇಕಿದ್ದರೂ ಅಲಂಕರಿಸಬಹುದು. ಅಂದರೆ ಟೀಮ್ ಇಂಡಿಯಾದಿಂದ ನಿವೃತ್ತರಾದ ಬಳಿಕ ಅವರು ಡಿಎಸ್​ಪಿ ಆಗಿ ಕಾರ್ಯ ನಿರ್ವಹಿಸಬಹುದು.

4 / 7
ಹಾಗಾಗಿ ಸಿರಾಜ್ ಸದ್ಯಕ್ಕಂತು ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್​ಪಿ) ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ. ಇನ್ನು ಕ್ರಿಕೆಟ್ ನಿವೃತ್ತಿಯ ಬಳಿಕ ಅವರು ಡಿಎಸ್​ಪಿ ಹುದ್ದೆಯನ್ನು ಅಲಂಕರಿಸುವ ಮುನ್ನ 2 ವರ್ಷಗಳ ಪೊಲೀಸ್ ಟ್ರೈನಿಂಗ್ ಕೂಡ ಮುಗಿಸಬೇಕು. ಇದಾದ ಬಳಿಕವಷ್ಟೇ ಅವರು ಅಧಿಕೃತವಾಗಿ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರವಹಿಸಿಕೊಳ್ಳಬಹುದಾಗಿದೆ.

ಹಾಗಾಗಿ ಸಿರಾಜ್ ಸದ್ಯಕ್ಕಂತು ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್​ಪಿ) ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ. ಇನ್ನು ಕ್ರಿಕೆಟ್ ನಿವೃತ್ತಿಯ ಬಳಿಕ ಅವರು ಡಿಎಸ್​ಪಿ ಹುದ್ದೆಯನ್ನು ಅಲಂಕರಿಸುವ ಮುನ್ನ 2 ವರ್ಷಗಳ ಪೊಲೀಸ್ ಟ್ರೈನಿಂಗ್ ಕೂಡ ಮುಗಿಸಬೇಕು. ಇದಾದ ಬಳಿಕವಷ್ಟೇ ಅವರು ಅಧಿಕೃತವಾಗಿ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರವಹಿಸಿಕೊಳ್ಳಬಹುದಾಗಿದೆ.

5 / 7
ಅಂದಹಾಗೆ 2007ರ ಟಿ20 ವಿಶ್ವಕಪ್ ಫೈನಲ್​ ಹೀರೋ ಜೋಗಿಂದರ್ ಶರ್ಮಾ ಈಗ ಹರ್ಯಾಣದ ಡಿಎಸ್​ಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಚೊಚ್ಚಲ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದ ಜೋಗಿಂದರ್ ಶರ್ಮಾ ಅವರಿಗೆ ಹರ್ಯಾಣ ಸರ್ಕಾರ ಡಿಎಸ್​ಪಿ ಹುದ್ದೆಯೊಂದಿಗೆ 21 ಲಕ್ಷ ರೂ. ಬಹುಮಾನ ಘೋಷಿಸಿತ್ತು. ಅದರಂತೆ ಇದೀಗ ಜೋಗಿಂದರ್ ಶರ್ಮಾ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಅಂದಹಾಗೆ 2007ರ ಟಿ20 ವಿಶ್ವಕಪ್ ಫೈನಲ್​ ಹೀರೋ ಜೋಗಿಂದರ್ ಶರ್ಮಾ ಈಗ ಹರ್ಯಾಣದ ಡಿಎಸ್​ಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಚೊಚ್ಚಲ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದ ಜೋಗಿಂದರ್ ಶರ್ಮಾ ಅವರಿಗೆ ಹರ್ಯಾಣ ಸರ್ಕಾರ ಡಿಎಸ್​ಪಿ ಹುದ್ದೆಯೊಂದಿಗೆ 21 ಲಕ್ಷ ರೂ. ಬಹುಮಾನ ಘೋಷಿಸಿತ್ತು. ಅದರಂತೆ ಇದೀಗ ಜೋಗಿಂದರ್ ಶರ್ಮಾ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

6 / 7
ಹಾಗೆಯೇ ಉತ್ತರ ಪ್ರದೇಶ ಸರ್ಕಾರ ಭಾರತ ಮಹಿಳಾ ತಂಡದ ಆಟಗಾರ್ತಿ ದೀಪ್ತಿ ಶರ್ಮಾ ಅವರನ್ನು ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್‌ಪಿ) ನೇಮಿಸಿದೆ. ಟೀಮ್ ಇಂಡಿಯಾ ಪರ ಮಾಡಿದ ಸಾಧನೆಗಾಗಿ ಯುಪಿ ಸರ್ಕಾರ ಈ ಗೌರವಾನ್ವಿತ ಹುದ್ದೆಯನ್ನು ನೀಡಿದೆ. ಇದೀಗ ಡಿಎಸ್​ಪಿ ಹುದ್ದೆ ಅಲಂಕರಿಸಿದ ಕ್ರಿಕೆಟಿಗರ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ಕೂಡ ಸೇರ್ಪಡೆಯಾಗಿದ್ದಾರೆ.

ಹಾಗೆಯೇ ಉತ್ತರ ಪ್ರದೇಶ ಸರ್ಕಾರ ಭಾರತ ಮಹಿಳಾ ತಂಡದ ಆಟಗಾರ್ತಿ ದೀಪ್ತಿ ಶರ್ಮಾ ಅವರನ್ನು ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್‌ಪಿ) ನೇಮಿಸಿದೆ. ಟೀಮ್ ಇಂಡಿಯಾ ಪರ ಮಾಡಿದ ಸಾಧನೆಗಾಗಿ ಯುಪಿ ಸರ್ಕಾರ ಈ ಗೌರವಾನ್ವಿತ ಹುದ್ದೆಯನ್ನು ನೀಡಿದೆ. ಇದೀಗ ಡಿಎಸ್​ಪಿ ಹುದ್ದೆ ಅಲಂಕರಿಸಿದ ಕ್ರಿಕೆಟಿಗರ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ಕೂಡ ಸೇರ್ಪಡೆಯಾಗಿದ್ದಾರೆ.

7 / 7

Published On - 8:54 am, Sat, 12 October 24

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್