AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravindra Jadeja: ಜಡೇಜಾಗೆ ಶಸ್ತ್ರಚಿಕಿತ್ಸೆ: ಟಿ20 ವಿಶ್ವಕಪ್​ಗೆ ಡೌಟ್..?

Ravindra Jadeja: ಏಷ್ಯಾಕಪ್​ನಲ್ಲಿನ ಹಾಂಗ್ ಕಾಂಗ್ ವಿರುದ್ದದ ಪಂದ್ಯದ ವೇಳೆ ರವೀಂದ್ರ ಜಡೇಜಾ ಗಾಯಗೊಂಡಿದ್ದರು. ಹೀಗಾಗಿ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ಗಾಯವು ಗಂಭೀರವಾಗಿದ್ದ ಕಾರಣ ವೈದ್ಯರ ಸೂಚನೆಯಂತೆ ಇದೀಗ ಸರ್ಜರಿಗೆ ಒಳಗಾಗಿದ್ದಾರೆ.

TV9 Web
| Edited By: |

Updated on: Sep 06, 2022 | 11:27 PM

Share
ಏಷ್ಯಾಕಪ್ ಆರಂಭಕ್ಕೂ ಮುನ್ನ ಶುರುವಾದ ಟೀಮ್ ಇಂಡಿಯಾ ಆಟಗಾರರ ಗಾಯದ ಸಮಸ್ಯೆ ಮುಂದುವರೆದಿದೆ. ಈ ಹಿಂದೆ ಜಸ್​ಪ್ರೀತ್ ಬುಮ್ರಾ, ಹರ್ಷಲ್ ಪಟೇಲ್ ಏಷ್ಯಾಕಪ್​ನಿಂದ ಹೊರಗುಳಿದಿದ್ದರು. ಈ ಪಟ್ಟಿಗೆ ಇತ್ತೀಚಿನ ಸೇರ್ಪಡೆ ರವೀಂದ್ರ ಜಡೇಜಾ. ಹಾಂಗ್ ಕಾಂಗ್ ವಿರುದ್ದದ ಪಂದ್ಯದ ವೇಳೆ ಗಾಯಗೊಂಡಿದ್ದ ಜಡೇಜಾ ಏಷ್ಯಾಕಪ್​ನಿಂದ ಹೊರಗುಳಿದಿದ್ದರು.

ಏಷ್ಯಾಕಪ್ ಆರಂಭಕ್ಕೂ ಮುನ್ನ ಶುರುವಾದ ಟೀಮ್ ಇಂಡಿಯಾ ಆಟಗಾರರ ಗಾಯದ ಸಮಸ್ಯೆ ಮುಂದುವರೆದಿದೆ. ಈ ಹಿಂದೆ ಜಸ್​ಪ್ರೀತ್ ಬುಮ್ರಾ, ಹರ್ಷಲ್ ಪಟೇಲ್ ಏಷ್ಯಾಕಪ್​ನಿಂದ ಹೊರಗುಳಿದಿದ್ದರು. ಈ ಪಟ್ಟಿಗೆ ಇತ್ತೀಚಿನ ಸೇರ್ಪಡೆ ರವೀಂದ್ರ ಜಡೇಜಾ. ಹಾಂಗ್ ಕಾಂಗ್ ವಿರುದ್ದದ ಪಂದ್ಯದ ವೇಳೆ ಗಾಯಗೊಂಡಿದ್ದ ಜಡೇಜಾ ಏಷ್ಯಾಕಪ್​ನಿಂದ ಹೊರಗುಳಿದಿದ್ದರು.

1 / 5
ಅಲ್ಲದೆ ಯುಎಇಯಿಂದ ಭಾರತಕ್ಕೆ ಮರಳಿದ ನಂತರ ಜಡೇಜಾ ಬಲ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಇದೀಗ  ತಮ್ಮ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ  ರವೀಂದ್ರ ಜಡೇಜಾ ಬರೆದುಕೊಂಡಿದ್ದಾರೆ.

ಅಲ್ಲದೆ ಯುಎಇಯಿಂದ ಭಾರತಕ್ಕೆ ಮರಳಿದ ನಂತರ ಜಡೇಜಾ ಬಲ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಇದೀಗ ತಮ್ಮ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ರವೀಂದ್ರ ಜಡೇಜಾ ಬರೆದುಕೊಂಡಿದ್ದಾರೆ.

2 / 5
ಸದ್ಯ ವಿಶ್ರಾಂತಿಯಲ್ಲಿರುವ ಜಡೇಜಾ ಶೀಘ್ರದಲ್ಲೇ ಕಂಬ್ಯಾಕ್​ಗಾಗಿ ಸಿದ್ಧತೆಗಳನ್ನು ಆರಂಭಿಸುವುದಾಗಿ ಹೇಳಿದ್ದಾರೆ.  ನಾನು ಶೀಘ್ರದಲ್ಲೇ ನನ್ನ ಪುನರ್ಭ್ಯಾಸವನ್ನು ಪ್ರಾರಂಭಿಸುತ್ತೇನೆ ಮತ್ತು ಸಾಧ್ಯವಾದಷ್ಟು ಬೇಗ ಕ್ರಿಕೆಟ್‌ಗೆ ಮರಳುತ್ತೇನೆ.  ಪ್ರಾರ್ಥನೆಗಾಗಿ ಎಲ್ಲರಿಗೂ ಧನ್ಯವಾದಗಳು."  ಎಂದು ಜಡೇಜಾ ತಿಳಿಸಿದ್ದಾರೆ.

ಸದ್ಯ ವಿಶ್ರಾಂತಿಯಲ್ಲಿರುವ ಜಡೇಜಾ ಶೀಘ್ರದಲ್ಲೇ ಕಂಬ್ಯಾಕ್​ಗಾಗಿ ಸಿದ್ಧತೆಗಳನ್ನು ಆರಂಭಿಸುವುದಾಗಿ ಹೇಳಿದ್ದಾರೆ. ನಾನು ಶೀಘ್ರದಲ್ಲೇ ನನ್ನ ಪುನರ್ಭ್ಯಾಸವನ್ನು ಪ್ರಾರಂಭಿಸುತ್ತೇನೆ ಮತ್ತು ಸಾಧ್ಯವಾದಷ್ಟು ಬೇಗ ಕ್ರಿಕೆಟ್‌ಗೆ ಮರಳುತ್ತೇನೆ. ಪ್ರಾರ್ಥನೆಗಾಗಿ ಎಲ್ಲರಿಗೂ ಧನ್ಯವಾದಗಳು." ಎಂದು ಜಡೇಜಾ ತಿಳಿಸಿದ್ದಾರೆ.

3 / 5
ಈ ಬಾರಿಯ ಏಷ್ಯಾಕಪ್​ನ ಮೊದಲೆರಡು ಪಂದ್ಯಗಳಲ್ಲಿ ಜಡೇಜಾ ಕಾಣಿಸಿಕೊಂಡಿದ್ದರು. ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ 35 ರನ್​ಗಳ ಕಾಣಿಕೆ ನೀಡುವ ಮೂಲಕ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇನ್ನು ಹಾಂಗ್ ಕಾಂಗ್ ವಿರುದ್ದ ಅತ್ಯುತ್ತಮ ಫೀಲ್ಡಿಂಗ್ ಮೂಲಕ ಗಮನ ಸೆಳೆದ ಜಡ್ಡು, ಆ ಬಳಿಕ ಗಾಯಗೊಂಡಿದ್ದರು.

ಈ ಬಾರಿಯ ಏಷ್ಯಾಕಪ್​ನ ಮೊದಲೆರಡು ಪಂದ್ಯಗಳಲ್ಲಿ ಜಡೇಜಾ ಕಾಣಿಸಿಕೊಂಡಿದ್ದರು. ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ 35 ರನ್​ಗಳ ಕಾಣಿಕೆ ನೀಡುವ ಮೂಲಕ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇನ್ನು ಹಾಂಗ್ ಕಾಂಗ್ ವಿರುದ್ದ ಅತ್ಯುತ್ತಮ ಫೀಲ್ಡಿಂಗ್ ಮೂಲಕ ಗಮನ ಸೆಳೆದ ಜಡ್ಡು, ಆ ಬಳಿಕ ಗಾಯಗೊಂಡಿದ್ದರು.

4 / 5
ಇದೀಗ ವಿಶ್ರಾಂತಿಯಲ್ಲಿರುವ ಜಡೇಜಾ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ. ಇದೇ ತಿಂಗಳು ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗುತ್ತದೆ. ಈ ವೇಳೆ ಜಡೇಜಾ ಅವರ ಗಾಯದ ಚೇತರಿಕೆ ಬಗ್ಗೆ ಅಪ್​ಡೇಟ್​ ಪಡೆಯಲಿದ್ದು, ಗಾಯ ವಾಸಿಯಾಗಲು ಹೆಚ್ಚಿನ ಸಮಯ ತೆಗೆದುಕೊಳ್ಳುವುದಿದ್ದರೆ ತಂಡದಿಂದ ಕೈ ಬಿಡಲಾಗುವುದು ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೀಗ ವಿಶ್ರಾಂತಿಯಲ್ಲಿರುವ ಜಡೇಜಾ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ. ಇದೇ ತಿಂಗಳು ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗುತ್ತದೆ. ಈ ವೇಳೆ ಜಡೇಜಾ ಅವರ ಗಾಯದ ಚೇತರಿಕೆ ಬಗ್ಗೆ ಅಪ್​ಡೇಟ್​ ಪಡೆಯಲಿದ್ದು, ಗಾಯ ವಾಸಿಯಾಗಲು ಹೆಚ್ಚಿನ ಸಮಯ ತೆಗೆದುಕೊಳ್ಳುವುದಿದ್ದರೆ ತಂಡದಿಂದ ಕೈ ಬಿಡಲಾಗುವುದು ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

5 / 5
ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ
ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ
ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್