AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ರಿಷಭ್ ಪಂತ್ ಬೇಗ ಗುಣಮುಖರಾಗಲೆಂದು ಟೀಮ್ ಇಂಡಿಯಾ ಆಟಗಾರರಿಂದ ಪ್ರಾರ್ಥನೆ: ಫೋಟೋ

India vs New Zealand ODI: ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಮಧ್ಯಪ್ರದೇಶದ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಸ್ಥಾನಕ್ಕೆ ಭೇಟಿ ನೀಡಿ ರಿಷಭ್ ಪಂತ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.

TV9 Web
| Edited By: |

Updated on: Jan 23, 2023 | 11:04 AM

Share
ಭಾರತ ಕ್ರಿಕೆಟ್ ತಂಡ ಸದ್ಯ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಆಡುತ್ತಿದೆ. ಈಗಾಗಲೇ ನಡೆದಿರುವ ಎರಡೂ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ಕೊನೆಯ ಅಂತಿಮ ಏಕದಿನ ಪಂದ್ಯ ಜನವರಿ 24 ಮಂಗಳವಾರದಂದು ಇಂದೋರ್​ನಲ್ಲಿ ಆಯೋಜಿಸಲಾಗಿದೆ.

ಭಾರತ ಕ್ರಿಕೆಟ್ ತಂಡ ಸದ್ಯ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಆಡುತ್ತಿದೆ. ಈಗಾಗಲೇ ನಡೆದಿರುವ ಎರಡೂ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ಕೊನೆಯ ಅಂತಿಮ ಏಕದಿನ ಪಂದ್ಯ ಜನವರಿ 24 ಮಂಗಳವಾರದಂದು ಇಂದೋರ್​ನಲ್ಲಿ ಆಯೋಜಿಸಲಾಗಿದೆ.

1 / 9
ಮೂರನೇ ಮತ್ತು ಅಂತಿಮ ಏಕದಿನ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಮಧ್ಯಪ್ರದೇಶದ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಸ್ಥಾನಕ್ಕೆ ಭೇಟಿ ನೀಡಿ ರಿಷಭ್ ಪಂತ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. (ಫೋಟೋ ಕೃಪೆ: ANI)

ಮೂರನೇ ಮತ್ತು ಅಂತಿಮ ಏಕದಿನ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಮಧ್ಯಪ್ರದೇಶದ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಸ್ಥಾನಕ್ಕೆ ಭೇಟಿ ನೀಡಿ ರಿಷಭ್ ಪಂತ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. (ಫೋಟೋ ಕೃಪೆ: ANI)

2 / 9
ಪ್ರಾರ್ಥನೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸೂರ್ಯಕುಮಾರ್ ಯಾದವ್, ಪಂತ್ ಅವರು ತಂಡದ ಪ್ರಮುಖ ಸದಸ್ಯರಾಗಿದ್ದಾರೆ ಮತ್ತು ಅವರು ತಂಡಕ್ಕೆ ಕಮ್​ಬ್ಯಾಕ್ ಮಾಡುವುದು ಮುಖ್ಯವಾಗಿದೆ ಎಂದು ಹೇಳಿದರು. (ಫೋಟೋ ಕೃಪೆ: ANI)

ಪ್ರಾರ್ಥನೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸೂರ್ಯಕುಮಾರ್ ಯಾದವ್, ಪಂತ್ ಅವರು ತಂಡದ ಪ್ರಮುಖ ಸದಸ್ಯರಾಗಿದ್ದಾರೆ ಮತ್ತು ಅವರು ತಂಡಕ್ಕೆ ಕಮ್​ಬ್ಯಾಕ್ ಮಾಡುವುದು ಮುಖ್ಯವಾಗಿದೆ ಎಂದು ಹೇಳಿದರು. (ಫೋಟೋ ಕೃಪೆ: ANI)

3 / 9
ನಾವು ರಿಷಬ್ ಪಂತ್ ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸಿದ್ದೇವೆ. ಅವರ ಪುನರಾಗಮನ ನಮಗೆ ಬಹಳ ಮುಖ್ಯ. ನಾವು ಈಗಾಗಲೇ ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು ಗೆದ್ದಿದ್ದೇವೆ, ಅಂತಿಮ ಪಂದ್ಯವನ್ನು ಎದುರು ನೋಡುತ್ತಿದ್ದೇವೆ ಎಂದು ಸೂರ್ಯಕುಮಾರ್ ಹೇಳಿದ್ದಾರೆ. (ಫೋಟೋ ಕೃಪೆ: ANI)

ನಾವು ರಿಷಬ್ ಪಂತ್ ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸಿದ್ದೇವೆ. ಅವರ ಪುನರಾಗಮನ ನಮಗೆ ಬಹಳ ಮುಖ್ಯ. ನಾವು ಈಗಾಗಲೇ ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು ಗೆದ್ದಿದ್ದೇವೆ, ಅಂತಿಮ ಪಂದ್ಯವನ್ನು ಎದುರು ನೋಡುತ್ತಿದ್ದೇವೆ ಎಂದು ಸೂರ್ಯಕುಮಾರ್ ಹೇಳಿದ್ದಾರೆ. (ಫೋಟೋ ಕೃಪೆ: ANI)

4 / 9
ಪೂಜೆ ಸಲ್ಲಿಸುತ್ತಿರುವ ಸೂರ್ಯಕುಮಾರ್ ಯಾದವ್. (ಫೋಟೋ ಕೃಪೆ: ANI)

ಪೂಜೆ ಸಲ್ಲಿಸುತ್ತಿರುವ ಸೂರ್ಯಕುಮಾರ್ ಯಾದವ್. (ಫೋಟೋ ಕೃಪೆ: ANI)

5 / 9
ಪ್ರಾರ್ಥಿಸುತ್ತಿರುವ ಟೀಮ್ ಇಂಡಿಯಾ ಪ್ರಮುಖ ಸ್ಪಿನ್ನರ್ ಕುಲ್ದೀಪ್ ಯಾದವ್. (ಫೋಟೋ ಕೃಪೆ: ANI)

ಪ್ರಾರ್ಥಿಸುತ್ತಿರುವ ಟೀಮ್ ಇಂಡಿಯಾ ಪ್ರಮುಖ ಸ್ಪಿನ್ನರ್ ಕುಲ್ದೀಪ್ ಯಾದವ್. (ಫೋಟೋ ಕೃಪೆ: ANI)

6 / 9
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ತೃತೀಯ ಏಕದಿನ ಪಂದ್ಯ ಜನವರಿ 24 ಮಂಗಳವಾರದಂದು ಆಯೋಜಿಸಲಾಗಿದೆ. ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ತೃತೀಯ ಏಕದಿನ ಪಂದ್ಯ ಜನವರಿ 24 ಮಂಗಳವಾರದಂದು ಆಯೋಜಿಸಲಾಗಿದೆ. ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ.

7 / 9
ಮಧ್ಯಾಹ್ನ 1:30ಕ್ಕೆ ಮ್ಯಾಚ್ ಆರಂಭವಾಗಲಿದ್ದು, 1 ಗಂಟೆಗೆ ಟಾಸ್ ಪ್ರಕ್ರಿಯೆ ಏರ್ಪಡಿಸಲಾಗಿದೆ. ರೋಹಿತ್ ಪಡೆ ಈ ಕೊನೆಯ ಪಂದ್ಯವನ್ನೂ ಗೆದ್ದು ಸರಣಿ ಕ್ಲೀನ್​ಸ್ವೀಪ್ ಮಾಡುವ ಗುರಿ ಹೊಂದಿದ್ದರೆ, ಇತ್ತ ಕಿವೀಸ್ ಪಡೆ ಕನಿಷ್ಠ ಒಂದು ಪಂದ್ಯವನ್ನಾದರೂ ಜಯಿಸಿ ಮಾನ ಉಳಿಸಿಕೊಳ್ಳಲು ಹೋರಾಟ ನಡೆಸಬೇಕಿದೆ.

ಮಧ್ಯಾಹ್ನ 1:30ಕ್ಕೆ ಮ್ಯಾಚ್ ಆರಂಭವಾಗಲಿದ್ದು, 1 ಗಂಟೆಗೆ ಟಾಸ್ ಪ್ರಕ್ರಿಯೆ ಏರ್ಪಡಿಸಲಾಗಿದೆ. ರೋಹಿತ್ ಪಡೆ ಈ ಕೊನೆಯ ಪಂದ್ಯವನ್ನೂ ಗೆದ್ದು ಸರಣಿ ಕ್ಲೀನ್​ಸ್ವೀಪ್ ಮಾಡುವ ಗುರಿ ಹೊಂದಿದ್ದರೆ, ಇತ್ತ ಕಿವೀಸ್ ಪಡೆ ಕನಿಷ್ಠ ಒಂದು ಪಂದ್ಯವನ್ನಾದರೂ ಜಯಿಸಿ ಮಾನ ಉಳಿಸಿಕೊಳ್ಳಲು ಹೋರಾಟ ನಡೆಸಬೇಕಿದೆ.

8 / 9
ಈಗಾಗಲೇ ಸರಣಿ ವಶಪಡಿಸಿಕೊಂಡಿರುವ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಕೆಲವು ಪ್ರಮುಖ ಬದಲಾವಣೆ ನಿರೀಕ್ಷಿಸಲಾಗಿದೆ. ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

ಈಗಾಗಲೇ ಸರಣಿ ವಶಪಡಿಸಿಕೊಂಡಿರುವ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಕೆಲವು ಪ್ರಮುಖ ಬದಲಾವಣೆ ನಿರೀಕ್ಷಿಸಲಾಗಿದೆ. ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

9 / 9
Follow Us
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?